Homeಮುಖಪುಟ'ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ' : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

- Advertisement -
- Advertisement -

“ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು ಪ್ರಾರಂಭಿಸಿದೆವು. ನಾನು ಅವರ ಪಕ್ಷವನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದೇನೆ”, ಇದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಂಡಾಯ ಬಣದ ಅಧ್ಯಕ್ಷರಾಗಿರುವ ಹೌರಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಅರೂಪ್ ರಾಯ್ ಅವರ ಮಾತು.

ಇಂಡಿಯನ್‌ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಅರೂಪ್ ರಾಯ್, “ನಾನು ಯಾವುದೇ ಬಂಡಾಯ ಬಣವನ್ನು ರೂಪಿಸಿಲ್ಲ. ಇತರರು ಅದನ್ನು ಮಾಡಿದರು. ನಾನು ಹೆಚ್ಚು ಸಂಖ್ಯೆಯಿದ್ದ ಪಕ್ಷದ ಪರವಾಗಿ ನಿಂತೆ. ವಿರೋಧ ಪಕ್ಷದ ನಾಯಕರ ರಿತಬ್ರತಾ ಬ್ಯಾನರ್ಜಿ ಕಡೆಯಿಂದ ನನಗೆ ಆಹ್ವಾನ ಬಂದಿದ್ದರಿಂದ ನಾನು ಅವರ ಸಭೆಯಲ್ಲಿ ಭಾಗವಹಿಸಿದೆ ಎಂದು ಹೇಳಿದ್ದಾರೆ.

ಟಿಎಂಸಿಯ ಬಂಡಾಯ ಬಣವು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಅರೂಪ್ ರಾಯ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಸಭೆಯ ನಡಾವಳಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ.

ಚುನಾವಣಾ ಸೋಲಿನ ಬಳಿಕ ಮೊದಲ ಸಭೆಯು ಮಮತಾ ಬ್ಯಾನರ್ಜಿ ಅವರ ಮನೆಯಲ್ಲೇ ನಡೆದಿತ್ತು. ಆ ವೇಳೆ ಶೋವನ್ದೇವ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಗೆ ನಾನು ಸಹಿ ಮಾಡಿದ್ದೆ ಎಂದು ಅರೂಪ್ ರಾಯ್ ತಿಳಿಸಿದ್ದಾರೆ.

ಪಕ್ಷವು ವಿಧಾನಸಭಾಧ್ಯಕ್ಷರ ಕಚೇರಿಗೆ ಸಲ್ಲಿಸಿದ್ದ ಕೆಲವು ಸಹಿಗಳು ನಕಲಿಯಾಗಿವೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅರೂಪ್ ರಾಯ್, “ಪೊಲೀಸರು ನನಗೆ ತೋರಿಸಿದ ದಾಖಲೆಗಳಲ್ಲಿ ಇದ್ದ ಸಹಿ ನನ್ನದಲ್ಲ” ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿಯ ಮುಖ್ಯ ಸಲಹೆಗಾರರನ್ನಾಗಿ ಮಾಡಲು ಬಯಸುವುದಾಗಿ ವಿರೋಧ ಪಕ್ಷದ ನಾಯಕ ರಿತಬ್ರತಾ ಬ್ಯಾನರ್ಜಿ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅರೂಪ್ ರಾಯ್, ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾನು ಅದನ್ನು ಹೇಳುತ್ತಿಲ್ಲ. ನಾನು ಏನು ಹೇಳಬೇಕೆಂದು ಬಯಸಿದ್ದೆನೋ, ಅದನ್ನು ಈಗಾಗಲೇ ಮಾಡಿದ್ದೇನೆ ಎಂದಿದ್ದಾರೆ.

ವಿಧಾನಸಭೆ ಅಧಿವೇಶನವನ್ನು ಹೇಗೆ ಎದುರಿಸುತ್ತೀರಿ..ನಿಮ್ಮ ತಂತ್ರವೇನು ಎಂಬ ಪ್ರಶ್ನೆಗೆ ಉತ್ತಿರಿಸಿರುವ ಅರೂಪ್‌ ರಾಯ್, “ನಾವು ರಚನಾತ್ಮಕ ಟೀಕೆಯನ್ನು ಮಾಡುತ್ತೇವೆ. ನಾವು ಬಿಜೆಪಿಯ ತಪ್ಪುಗಳನ್ನು ಎತ್ತಿ ತೋರಿಸುತ್ತೇವೆ ಮತ್ತು ಅವರ ನೀತಿಗಳನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

ಚುನಾವಣೆ ಸೋಲಿನ ನಂತರ ಹಲ್ಲೆಗೊಳಗಾದ ಟಿಎಂಸಿ ಕಾರ್ಯಕರ್ತರ ಬಗ್ಗೆ ಏನು ಹೇಳುತ್ತೀರಿ? ಎಂಬ ಪ್ರಶ್ನೆಗೆ ಉತ್ತರಿಸಿದ ರಾಯ್, “ನಾವು ನಮ್ಮ ಕಾರ್ಯಕರ್ತರ ಪರವಾಗಿ ನಿಲ್ಲಬೇಕು. ಆ ಸಭೆಯಲ್ಲೂ ನಾನು ಇದನ್ನೇ ಹೇಳಿದ್ದೆ. ಅಪರಾಧಗಳನ್ನು ಮಾಡಿ ಕಾನೂನು ಮೊಕದ್ದಮೆಗಳನ್ನು ಎದುರಿಸುತ್ತಿರುವವರ ವಿಷಯವೇ ಬೇರೆ. ಆದರೆ ಯಾವ ಕಾರ್ಯಕರ್ತರು ಮತ್ತು ನಾಯಕರು ನಿರಪರಾಧಿಗಳಾಗಿದ್ದಾರೋ, ನಾವು ಅವರ ಪರವಾಗಿ ನಿಲ್ಲಬೇಕು. ಅವರ ಪರವಾಗಿ ನಿಲ್ಲುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಬಂಡಾಯ ಬಣದ ಹೆಚ್ಚಿನ ಸಂಸದರು ಮತ್ತು ಶಾಸಕರು ಅಭಿಷೇಕ್ ಬ್ಯಾನರ್ಜಿ ಅವರ ನಾಯಕತ್ವವನ್ನು ಪ್ರಶ್ನಿಸಿದ್ದಾರೆ. ನೀವು ಅವರೊಂದಿಗೆ ಸಹಮತ ಹೊಂದಿದ್ದೀರಾ? ಎಂಬ ಉತ್ತರಿಸಿದ ರಾಯ್, “ಸಂಸದರು ಮತ್ತು ಶಾಸಕರ ಅಭಿಪ್ರಾಯಗಳು ವಿಭಿನ್ನವಾಗಿವೆ. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಶಾಸಕರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ. ನನಗೆ ಯಾರ ಮೇಲೂ ಯಾವುದೇ ಆರೋಪಗಳಿಲ್ಲ” ಎಂದು ತಿಳಿಸಿದ್ದಾರೆ.

ಮುಂದೆ ಟಿಎಂಸಿ ಪಕ್ಷದ ಧ್ವಜ, ಚಿಹ್ನೆ ಮತ್ತು ಬ್ಯಾಂಕ್‌ ಖಾತೆಗಳನ್ನು ವಶಕ್ಕೆ ಪಡೆಯುತ್ತೀರಾ? ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅರೂಪ್ ರಾಯ್, “ಪಕ್ಷದ ಚಿಹ್ನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಆಯೋಗಕ್ಕೆ ಅಧಿಕೃತ ಪತ್ರವನ್ನು ನೀಡಿದ್ದೇವೆ. ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಯಾವುದೇ ನಿರ್ಣಯವನ್ನು ಅಂಗೀಕರಿಸಿಲ್ಲ. ಆದರೆ, ಖಾತೆ ಪರಿಶೀಲಿಸಲು ಒಬ್ಬ ಆಡಿಟರ್ (ಲೆಕ್ಕ ಪರಿಶೋಧಕ) ಅನ್ನು ನೇಮಿಸಲಾಗುವುದು ಎಂದು ವಿಪಕ್ಷ ನಾಯಕ ರಿತಬ್ರತಾ ಬ್ಯಾನರ್ಜಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Courtesy : indianexpress.com





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...