Homeಮುಖಪುಟ'ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ' : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

- Advertisement -
- Advertisement -

“ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು ಪ್ರಾರಂಭಿಸಿದೆವು. ನಾನು ಅವರ ಪಕ್ಷವನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದೇನೆ”, ಇದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಂಡಾಯ ಬಣದ ಅಧ್ಯಕ್ಷರಾಗಿರುವ ಹೌರಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಅರೂಪ್ ರಾಯ್ ಅವರ ಮಾತು.

ಇಂಡಿಯನ್‌ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಅರೂಪ್ ರಾಯ್, “ನಾನು ಯಾವುದೇ ಬಂಡಾಯ ಬಣವನ್ನು ರೂಪಿಸಿಲ್ಲ. ಇತರರು ಅದನ್ನು ಮಾಡಿದರು. ನಾನು ಹೆಚ್ಚು ಸಂಖ್ಯೆಯಿದ್ದ ಪಕ್ಷದ ಪರವಾಗಿ ನಿಂತೆ. ವಿರೋಧ ಪಕ್ಷದ ನಾಯಕರ ರಿತಬ್ರತಾ ಬ್ಯಾನರ್ಜಿ ಕಡೆಯಿಂದ ನನಗೆ ಆಹ್ವಾನ ಬಂದಿದ್ದರಿಂದ ನಾನು ಅವರ ಸಭೆಯಲ್ಲಿ ಭಾಗವಹಿಸಿದೆ ಎಂದು ಹೇಳಿದ್ದಾರೆ.

ಟಿಎಂಸಿಯ ಬಂಡಾಯ ಬಣವು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಅರೂಪ್ ರಾಯ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಸಭೆಯ ನಡಾವಳಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ.

ಚುನಾವಣಾ ಸೋಲಿನ ಬಳಿಕ ಮೊದಲ ಸಭೆಯು ಮಮತಾ ಬ್ಯಾನರ್ಜಿ ಅವರ ಮನೆಯಲ್ಲೇ ನಡೆದಿತ್ತು. ಆ ವೇಳೆ ಶೋವನ್ದೇವ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಗೆ ನಾನು ಸಹಿ ಮಾಡಿದ್ದೆ ಎಂದು ಅರೂಪ್ ರಾಯ್ ತಿಳಿಸಿದ್ದಾರೆ.

ಪಕ್ಷವು ವಿಧಾನಸಭಾಧ್ಯಕ್ಷರ ಕಚೇರಿಗೆ ಸಲ್ಲಿಸಿದ್ದ ಕೆಲವು ಸಹಿಗಳು ನಕಲಿಯಾಗಿವೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅರೂಪ್ ರಾಯ್, “ಪೊಲೀಸರು ನನಗೆ ತೋರಿಸಿದ ದಾಖಲೆಗಳಲ್ಲಿ ಇದ್ದ ಸಹಿ ನನ್ನದಲ್ಲ” ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿಯ ಮುಖ್ಯ ಸಲಹೆಗಾರರನ್ನಾಗಿ ಮಾಡಲು ಬಯಸುವುದಾಗಿ ವಿರೋಧ ಪಕ್ಷದ ನಾಯಕ ರಿತಬ್ರತಾ ಬ್ಯಾನರ್ಜಿ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅರೂಪ್ ರಾಯ್, ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾನು ಅದನ್ನು ಹೇಳುತ್ತಿಲ್ಲ. ನಾನು ಏನು ಹೇಳಬೇಕೆಂದು ಬಯಸಿದ್ದೆನೋ, ಅದನ್ನು ಈಗಾಗಲೇ ಮಾಡಿದ್ದೇನೆ ಎಂದಿದ್ದಾರೆ.

ವಿಧಾನಸಭೆ ಅಧಿವೇಶನವನ್ನು ಹೇಗೆ ಎದುರಿಸುತ್ತೀರಿ..ನಿಮ್ಮ ತಂತ್ರವೇನು ಎಂಬ ಪ್ರಶ್ನೆಗೆ ಉತ್ತಿರಿಸಿರುವ ಅರೂಪ್‌ ರಾಯ್, “ನಾವು ರಚನಾತ್ಮಕ ಟೀಕೆಯನ್ನು ಮಾಡುತ್ತೇವೆ. ನಾವು ಬಿಜೆಪಿಯ ತಪ್ಪುಗಳನ್ನು ಎತ್ತಿ ತೋರಿಸುತ್ತೇವೆ ಮತ್ತು ಅವರ ನೀತಿಗಳನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

ಚುನಾವಣೆ ಸೋಲಿನ ನಂತರ ಹಲ್ಲೆಗೊಳಗಾದ ಟಿಎಂಸಿ ಕಾರ್ಯಕರ್ತರ ಬಗ್ಗೆ ಏನು ಹೇಳುತ್ತೀರಿ? ಎಂಬ ಪ್ರಶ್ನೆಗೆ ಉತ್ತರಿಸಿದ ರಾಯ್, “ನಾವು ನಮ್ಮ ಕಾರ್ಯಕರ್ತರ ಪರವಾಗಿ ನಿಲ್ಲಬೇಕು. ಆ ಸಭೆಯಲ್ಲೂ ನಾನು ಇದನ್ನೇ ಹೇಳಿದ್ದೆ. ಅಪರಾಧಗಳನ್ನು ಮಾಡಿ ಕಾನೂನು ಮೊಕದ್ದಮೆಗಳನ್ನು ಎದುರಿಸುತ್ತಿರುವವರ ವಿಷಯವೇ ಬೇರೆ. ಆದರೆ ಯಾವ ಕಾರ್ಯಕರ್ತರು ಮತ್ತು ನಾಯಕರು ನಿರಪರಾಧಿಗಳಾಗಿದ್ದಾರೋ, ನಾವು ಅವರ ಪರವಾಗಿ ನಿಲ್ಲಬೇಕು. ಅವರ ಪರವಾಗಿ ನಿಲ್ಲುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಬಂಡಾಯ ಬಣದ ಹೆಚ್ಚಿನ ಸಂಸದರು ಮತ್ತು ಶಾಸಕರು ಅಭಿಷೇಕ್ ಬ್ಯಾನರ್ಜಿ ಅವರ ನಾಯಕತ್ವವನ್ನು ಪ್ರಶ್ನಿಸಿದ್ದಾರೆ. ನೀವು ಅವರೊಂದಿಗೆ ಸಹಮತ ಹೊಂದಿದ್ದೀರಾ? ಎಂಬ ಉತ್ತರಿಸಿದ ರಾಯ್, “ಸಂಸದರು ಮತ್ತು ಶಾಸಕರ ಅಭಿಪ್ರಾಯಗಳು ವಿಭಿನ್ನವಾಗಿವೆ. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಶಾಸಕರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ. ನನಗೆ ಯಾರ ಮೇಲೂ ಯಾವುದೇ ಆರೋಪಗಳಿಲ್ಲ” ಎಂದು ತಿಳಿಸಿದ್ದಾರೆ.

ಮುಂದೆ ಟಿಎಂಸಿ ಪಕ್ಷದ ಧ್ವಜ, ಚಿಹ್ನೆ ಮತ್ತು ಬ್ಯಾಂಕ್‌ ಖಾತೆಗಳನ್ನು ವಶಕ್ಕೆ ಪಡೆಯುತ್ತೀರಾ? ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅರೂಪ್ ರಾಯ್, “ಪಕ್ಷದ ಚಿಹ್ನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಆಯೋಗಕ್ಕೆ ಅಧಿಕೃತ ಪತ್ರವನ್ನು ನೀಡಿದ್ದೇವೆ. ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಯಾವುದೇ ನಿರ್ಣಯವನ್ನು ಅಂಗೀಕರಿಸಿಲ್ಲ. ಆದರೆ, ಖಾತೆ ಪರಿಶೀಲಿಸಲು ಒಬ್ಬ ಆಡಿಟರ್ (ಲೆಕ್ಕ ಪರಿಶೋಧಕ) ಅನ್ನು ನೇಮಿಸಲಾಗುವುದು ಎಂದು ವಿಪಕ್ಷ ನಾಯಕ ರಿತಬ್ರತಾ ಬ್ಯಾನರ್ಜಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Courtesy : indianexpress.com





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...