Homeಮುಖಪುಟಉತ್ತರಾಖಂಡದಲ್ಲಿ ಸಿಎಂ ರಾಜೀನಾಮೆ: ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ನಡೆಯಲಿದೆ ಎಂದ ಟಿಎಂಸಿ

ಉತ್ತರಾಖಂಡದಲ್ಲಿ ಸಿಎಂ ರಾಜೀನಾಮೆ: ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ನಡೆಯಲಿದೆ ಎಂದ ಟಿಎಂಸಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಕಡಿಮೆ ಕೋವಿಡ್ ಸೋಂಕಿನ ಪ್ರಕರಣಗಳನ್ನು ಉಲ್ಲೇಖಿಸಿರುವ ತೃಣಮೂಲ ಕಾಂಗ್ರೆಸ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಶಾಸಕರಾಗಿ ಆಯ್ಕೆ ಮಾಡುವ ಭಬನಿಪುರ್‌ ಉಪಚುನಾವಣೆ ನವೆಂಬರ್ 5 ರ ಮೊದಲು ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಉತ್ತರಾಖಂಡದಲ್ಲಿ ಮಾಜಿ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಶಾಸಕರಾಗಿ ಆಯ್ಕೆಯಾಗದಿರುವುದು ಮತ್ತು ಕೊರೊನಾ ಕಾರಣಗಳಿಂದ ಅವರಿಂದ ರಾಜೀನಾಮೆ ಪಡೆದ ಬಿಜೆಪಿ, ಹೊಸ ಮುಖ್ಯಮಂತ್ರಿಯಾಗಿ ಪುಷ್ಕರ್‌ ಸಿಂಗ್ ಧಾಮಿ ಅವರಿಗೆ ಅಧಿಕಾರ ಹಸ್ತಾಂತರಿಸಿದೆ.

ಇದೇ ನೆಪ ಮಾಡಿಕೊಂಡು ಪಶ್ಚಿಮ ಬಂಗಾಳದಲ್ಲೂ ಉಪ ಚುನಾವಣೆ ನಡೆಸದೇ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ರಾಜೀನಾಮೆ ಕೊಡುವಂತೆ ಒತ್ತಡ ಹೇರಬಹುದು ಎಂಬ ಹಿನ್ನೆಲೆಯಲ್ಲಿ ಟಿಎಂಸಿ, ಉಪ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ, ಮಾಜಿ ಟಿಎಂಸಿ ನಾಯಕ ಮತ್ತು ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಶಾಸಕರಾಗಿ ಆಯ್ಕೆಯಾಗದೆ ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ, ಉಪ ಚುನಾವಣೆಯಲ್ಲಿ ಭಬನಿಪುರ್‌ನಿಂದ ಸ್ಪರ್ಧಿಸಲಿದ್ದಾರೆ.

ಜನರ ಪ್ರಾತಿನಿಧ್ಯ ಕಾಯ್ದೆಯಡಿ, ಮುಖ್ಯಮಂತ್ರಿ ಅಥವಾ ಸಚಿವರು ಪ್ರಮಾಣವಚನ ಸ್ವೀಕರಿಸಿದ ಆರು ತಿಂಗಳೊಳಗೆ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಬೇಕಾಗಿದೆ.

ತಿರತ್ ​​ಸಿಂಗ್ ರಾವತ್ ಉತ್ತರಾಖಂಡದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಎಲ್ಲರ ಕಣ್ಣುಗಳು ಪಶ್ಚಿಮ ಬಂಗಾಳದತ್ತ ಇವೆ. ಬಿಜೆಪಿ ಸಂಸದ ತಿರತ್ ​​ಸಿಂಗ್ ರಾವತ್ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಮಾರ್ಚ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸೆಪ್ಟಂಬರ್ 10ರ ಒಳಗೆ, ಅವರು ಶಾಸಕರಾಗಿ ಆಯ್ಕೆಯಾಗಬೇಕಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಅವರಿಮದ ರಾಜಿನಾಮೆ ಪಡೆದು ಉಪಚುನಾವಣೆ ನಡೆಸದೆ, ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದೆ.

ಕೋಲ್ಕತ್ತಾದ ತೃಣಮೂಲ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಟಿಎಂಸಿ ಸಂಸದ ಸುಖೇಂದು ಶೇಖರ್ ರಾಯ್, “ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತಿರತ್ ​​ಸಿಂಗ್ ರಾವತ್ ಅವರು ಮಾರ್ಚ್‌ನಲ್ಲಿ ಆಯ್ಕೆಯಾಗಿದ್ದರು, ಸೆಪ್ಟೆಂಬರ್‌ನಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಸಮಯವಿತ್ತು. ಬಹುಶಃ, ಕೋವಿಡ್ ಕಾರಣದಿಂದಾಗಿ ಅವರು ಉತ್ತರಾಖಂಡದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ರಾಜೀನಾಮೆ ನೀಡಿರಬಹುದು. ಆದರೆ ಬಂಗಾಳದಲ್ಲಿ ನಾವು ಉಪಚುನಾವಣೆ ನಡೆಸಬಹುದು. ಬಂಗಾಳದಲ್ಲಿ ಉಪಚುನಾವಣೆ ನಡೆಯುವುದಿಲ್ಲ ಎಂಬ ಆತಂಕ ನಮಗಿಲ್ಲ. ಇಂದಿನಿಂದಲೇ ಚುನಾವಣಾ ಆಯೋಗವು ಯಾವುದೇ ದಿನ ಉಪಚುನಾವಣೆ ನಡೆಸಬಹುದು” ಎಂದಿದ್ದಾರೆ.

ರಾಜ್ಯ ಸಬೆಯ ಎರಡು ಸ್ಥಾನಗಳಿಗೆ ಮಾತ್ರವಲ್ಲ, ವಿಧಾನಸಭೆಯ ಏಳು ಸ್ಥಾನಗಳಿಗೂ ಉಪಚುನಾವಣೆ ನಡೆಸುವಂತೆ ಟಿಎಂಸಿ ನೇತೃತ್ವದ ಸರ್ಕಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.


ಇದನ್ನೂ ಓದಿ: ಉತ್ತರಾಖಂಡ: ಆರು ತಿಂಗಳಲ್ಲಿ ಮೂರು ಮುಖ್ಯಮಂತ್ರಿ; ಪುಷ್ಕರ್‌ ಸಿಂಗ್ ಧಾಮಿ ಮುಂದಿನ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...