Homeಮುಖಪುಟಸೈನಿಕರು ಹತ್ಯೆಯಾಗಿದ್ದರೆ, ಮೋದಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆಯಲ್ಲಿದ್ದರು: ಟಿಎಂಸಿ ವಾಗ್ಧಾಳಿ

ಸೈನಿಕರು ಹತ್ಯೆಯಾಗಿದ್ದರೆ, ಮೋದಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆಯಲ್ಲಿದ್ದರು: ಟಿಎಂಸಿ ವಾಗ್ಧಾಳಿ

- Advertisement -
- Advertisement -

ಜಮ್ಮು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಸೈನಿಕರು ಹುತಾತ್ಮರಾಗಿರುವಾಗ ದೇಶದೆಲ್ಲೆಡೆ ಜನರು ಶೋಕವನ್ನು ಆಚರಿಸುತ್ತಿದ್ದಾರೆ ಆದರೆ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದ್ದೂರಿ ಸ್ವಾಗತ ಸ್ವೀಕರಿಸಿ ಸಂಭ್ರಮದಲ್ಲಿದ್ದರು ಎಂದು ಟಿಎಂಸಿ ಟೀಕಿಸಿದೆ.

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಭಾರತೀಯ ವೀರಯೋಧರಿಗೆ ದೇಶವೇ ಶೋಕ ವ್ಯಕ್ತಪಡಿಸುತ್ತಿದೆ. ದೇಶಕ್ಕಾಗಿ ಪ್ರಾಣ ತೆತ್ತ ವೀರ ಯೋಧರಿಗೆ ಇಡೀ ದೇಶವೇ ನಮನ ಸಲ್ಲಿಸುತ್ತಿದೆ. ಅನಂತನಾಗ್‌ನ ಕೋಕರ್‌ನಾಗ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಓರ್ವ ಕರ್ನಲ್ ಮತ್ತು ಸೇನೆಯ ಓರ್ವ ಮೇಜರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಹುತಾತ್ಮರಾಗಿದ್ದಾರೆ. ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ ದಿನದಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ ಎಂದು ಟಿಎಂಸಿ ಟೀಕಿಸಿದೆ.

ಅನಂತ್‌ನಾಗ್‌ನ ಕೋಕರ್‌ನಾಗ್ ಪ್ರದೇಶದಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದೆ. ಆರಂಭದಲ್ಲಿ  ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿತ್ತು. ಈ ವೇಳೆ  ಉಗ್ರರು ಗುಂಡಿನ ದಾಳಿ ನಡೆಸಿದ್ದು ಭದ್ರತಾ ಪಡೆಗಳು ಸಹ ಪ್ರತಿದಾಳಿ ನಡೆಸಿದೆ. ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ.

ಭಾರತೀಯ ಸೇನೆಯ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಡಿಎಸ್‌ಪಿ ಹುಮಾಯೂನ್ ಭಟ್ ಅವರು ಭಯೋತ್ಪಾದಕರ ಜೊತೆಗಿನ ಗುಂಡಿನ  ಚಕಮಕಿ ವೇಳೆ ಮೃತಪಟ್ಟಿದ್ದಾರೆ.

ಭದ್ರತಾ ಸಿಬ್ಬಂದಿಯ ಸಾವಿಗೆ ಇಡೀ ದೇಶವೇ ಸಂತಾಪ ಸೂಚಿಸಿದೆ. ದೆಹಲಿಯಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿ20 ಸಭೆಯ ಅಧ್ಯಕ್ಷತೆ ವಹಿಸಿದ ಬಳಿಕ ಬಿಜೆಪಿ ಕಚೇರಿಗೆ ಮೊದಲ ಬಾರಿಗೆ ಭೇಟಿ ಕೊಟ್ಟಾಗ ಅದ್ಧೂರಿ ಸ್ವಾಗತ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರಿನ ಮೇಲೆ ಹೂವಿನ ದಳಗಳನ್ನು ಸುರಿಸಲಾಗಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಪ್ರಧಾನಿಗೆ ಗುಲಾಬಿ ಹೂವುಗಳನ್ನು ನೀಡಿದರು ಎಂದು ಟಿಎಂಸಿ ಟೀಕಿಸಿದೆ.

ರಾಜ್ಯಸಭಾ ಸಂಸದ ಮತ್ತು ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಅವರು ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, 2023ರ ಅತ್ಯಂತ ದುರಂತ ಎನ್‌ಕೌಂಟರ್‌ಗೆ ದೇಶ ಸಾಕ್ಷಿಯಾಗಿದೆ. ನಮ್ಮ ಕೆಚ್ಚೆದೆಯ ಸೈನಿಕರಾದ ಮೇಜರ್ ಆಶಿಶ್ ಧೋನಾಕ್ ಮತ್ತು ಕರ್ನಲ್ ಮನ್ಪ್ರೀತ್ ಸಿಂಗ್ ಮತ್ತು ಡಿವೈ ಎಸ್ಪಿ ಹುಮಾಯನ್ ಭಟ್ ಹುತಾತ್ಮರಾಗಿರುವಾಗ ಮೋದಿ ನಾಚಿಕೆಯಿಲ್ಲದೆ ಬಿಜೆಪಿ ಕಚೇರಿಯಲ್ಲಿಅದ್ದೂರಿ ಸ್ವಾಗತ ಸ್ವೀಕರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

ಸೈನಿಕರ ಶೌರ್ಯಕ್ಕಾಗಿ ರಾಷ್ಟ್ರವು ಅವರಿಗೆ ಶಾಶ್ವತವಾಗಿ ಋಣಿಯಾಗಿದೆ ಮತ್ತು ಕುಟುಂಬದ ಪರವಾಗಿ ನಿಲ್ಲುವುದಾಗಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ನಿನ್ನೆ ಬಿಜೆಪಿ ಕಚೇರಿಯಲ್ಲಿ ಜಿ 20 ಬಳಿಕ ಸಂಭ್ರಮಾಚರಣೆಗೆ ಆಯ್ಕೆ ಮಾಡಿಕೊಂಡಿರುವುದು ಸಂಪೂರ್ಣ ಆಘಾತಕಾರಿ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮವನ್ನು ಮುಂದೂಡಬೇಕಿತ್ತು. ಮೋದಿಯವರು ಕೇವಲ 1 ದಿನಕ್ಕೆ ತಮ್ಮ ಸ್ವಯಂ ಕಾರ್ಯಕ್ರಮ ಮುಂದೂಡಲು ಸಾಧ್ಯವಾಗಲಿಲ್ಲವೇ? ಇಂತಹ ದುರಂತ ಸಂಭವಿಸಿದಾಗ ಬಿಜೆಪಿ ಮೋದಿಯನ್ನು ಈ ರೀತಿ ಸಂಭ್ರಮಾಚರಣೆ ಮಾಡಿ ವೈಭವೀಕರಿಸಬೇಕಿತ್ತೇ? ಎಂದು ಟೀಕಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸ್ಥಳೀಯರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...