Homeಮುಖಪುಟಸೈನಿಕರು ಹತ್ಯೆಯಾಗಿದ್ದರೆ, ಮೋದಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆಯಲ್ಲಿದ್ದರು: ಟಿಎಂಸಿ ವಾಗ್ಧಾಳಿ

ಸೈನಿಕರು ಹತ್ಯೆಯಾಗಿದ್ದರೆ, ಮೋದಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆಯಲ್ಲಿದ್ದರು: ಟಿಎಂಸಿ ವಾಗ್ಧಾಳಿ

- Advertisement -
- Advertisement -

ಜಮ್ಮು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಸೈನಿಕರು ಹುತಾತ್ಮರಾಗಿರುವಾಗ ದೇಶದೆಲ್ಲೆಡೆ ಜನರು ಶೋಕವನ್ನು ಆಚರಿಸುತ್ತಿದ್ದಾರೆ ಆದರೆ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದ್ದೂರಿ ಸ್ವಾಗತ ಸ್ವೀಕರಿಸಿ ಸಂಭ್ರಮದಲ್ಲಿದ್ದರು ಎಂದು ಟಿಎಂಸಿ ಟೀಕಿಸಿದೆ.

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಭಾರತೀಯ ವೀರಯೋಧರಿಗೆ ದೇಶವೇ ಶೋಕ ವ್ಯಕ್ತಪಡಿಸುತ್ತಿದೆ. ದೇಶಕ್ಕಾಗಿ ಪ್ರಾಣ ತೆತ್ತ ವೀರ ಯೋಧರಿಗೆ ಇಡೀ ದೇಶವೇ ನಮನ ಸಲ್ಲಿಸುತ್ತಿದೆ. ಅನಂತನಾಗ್‌ನ ಕೋಕರ್‌ನಾಗ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಓರ್ವ ಕರ್ನಲ್ ಮತ್ತು ಸೇನೆಯ ಓರ್ವ ಮೇಜರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಹುತಾತ್ಮರಾಗಿದ್ದಾರೆ. ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ ದಿನದಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ ಎಂದು ಟಿಎಂಸಿ ಟೀಕಿಸಿದೆ.

ಅನಂತ್‌ನಾಗ್‌ನ ಕೋಕರ್‌ನಾಗ್ ಪ್ರದೇಶದಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದೆ. ಆರಂಭದಲ್ಲಿ  ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿತ್ತು. ಈ ವೇಳೆ  ಉಗ್ರರು ಗುಂಡಿನ ದಾಳಿ ನಡೆಸಿದ್ದು ಭದ್ರತಾ ಪಡೆಗಳು ಸಹ ಪ್ರತಿದಾಳಿ ನಡೆಸಿದೆ. ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ.

ಭಾರತೀಯ ಸೇನೆಯ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಡಿಎಸ್‌ಪಿ ಹುಮಾಯೂನ್ ಭಟ್ ಅವರು ಭಯೋತ್ಪಾದಕರ ಜೊತೆಗಿನ ಗುಂಡಿನ  ಚಕಮಕಿ ವೇಳೆ ಮೃತಪಟ್ಟಿದ್ದಾರೆ.

ಭದ್ರತಾ ಸಿಬ್ಬಂದಿಯ ಸಾವಿಗೆ ಇಡೀ ದೇಶವೇ ಸಂತಾಪ ಸೂಚಿಸಿದೆ. ದೆಹಲಿಯಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿ20 ಸಭೆಯ ಅಧ್ಯಕ್ಷತೆ ವಹಿಸಿದ ಬಳಿಕ ಬಿಜೆಪಿ ಕಚೇರಿಗೆ ಮೊದಲ ಬಾರಿಗೆ ಭೇಟಿ ಕೊಟ್ಟಾಗ ಅದ್ಧೂರಿ ಸ್ವಾಗತ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರಿನ ಮೇಲೆ ಹೂವಿನ ದಳಗಳನ್ನು ಸುರಿಸಲಾಗಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಪ್ರಧಾನಿಗೆ ಗುಲಾಬಿ ಹೂವುಗಳನ್ನು ನೀಡಿದರು ಎಂದು ಟಿಎಂಸಿ ಟೀಕಿಸಿದೆ.

ರಾಜ್ಯಸಭಾ ಸಂಸದ ಮತ್ತು ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಅವರು ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, 2023ರ ಅತ್ಯಂತ ದುರಂತ ಎನ್‌ಕೌಂಟರ್‌ಗೆ ದೇಶ ಸಾಕ್ಷಿಯಾಗಿದೆ. ನಮ್ಮ ಕೆಚ್ಚೆದೆಯ ಸೈನಿಕರಾದ ಮೇಜರ್ ಆಶಿಶ್ ಧೋನಾಕ್ ಮತ್ತು ಕರ್ನಲ್ ಮನ್ಪ್ರೀತ್ ಸಿಂಗ್ ಮತ್ತು ಡಿವೈ ಎಸ್ಪಿ ಹುಮಾಯನ್ ಭಟ್ ಹುತಾತ್ಮರಾಗಿರುವಾಗ ಮೋದಿ ನಾಚಿಕೆಯಿಲ್ಲದೆ ಬಿಜೆಪಿ ಕಚೇರಿಯಲ್ಲಿಅದ್ದೂರಿ ಸ್ವಾಗತ ಸ್ವೀಕರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

ಸೈನಿಕರ ಶೌರ್ಯಕ್ಕಾಗಿ ರಾಷ್ಟ್ರವು ಅವರಿಗೆ ಶಾಶ್ವತವಾಗಿ ಋಣಿಯಾಗಿದೆ ಮತ್ತು ಕುಟುಂಬದ ಪರವಾಗಿ ನಿಲ್ಲುವುದಾಗಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ನಿನ್ನೆ ಬಿಜೆಪಿ ಕಚೇರಿಯಲ್ಲಿ ಜಿ 20 ಬಳಿಕ ಸಂಭ್ರಮಾಚರಣೆಗೆ ಆಯ್ಕೆ ಮಾಡಿಕೊಂಡಿರುವುದು ಸಂಪೂರ್ಣ ಆಘಾತಕಾರಿ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮವನ್ನು ಮುಂದೂಡಬೇಕಿತ್ತು. ಮೋದಿಯವರು ಕೇವಲ 1 ದಿನಕ್ಕೆ ತಮ್ಮ ಸ್ವಯಂ ಕಾರ್ಯಕ್ರಮ ಮುಂದೂಡಲು ಸಾಧ್ಯವಾಗಲಿಲ್ಲವೇ? ಇಂತಹ ದುರಂತ ಸಂಭವಿಸಿದಾಗ ಬಿಜೆಪಿ ಮೋದಿಯನ್ನು ಈ ರೀತಿ ಸಂಭ್ರಮಾಚರಣೆ ಮಾಡಿ ವೈಭವೀಕರಿಸಬೇಕಿತ್ತೇ? ಎಂದು ಟೀಕಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸ್ಥಳೀಯರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...