Homeಮುಖಪುಟಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

- Advertisement -
- Advertisement -

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. “ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾಪವನ್ನು ಯಾವುದೇ ಹಂತದಲ್ಲೂ ಚರ್ಚಿಸಿಲ್ಲ” ಎಂದು ಟಿಎಂಸಿ ಸ್ಪಷ್ಟಪಡಿಸಿದೆ. ರಾಜ್ಯ ಮಟ್ಟದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ಒಕ್ಕೂಟದ (ಇಂಡಿಯಾ ಕೂಟ) ಮಿತ್ರಪಕ್ಷಗಳು ಒಟ್ಟಾಗಿ ಮತ್ತು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವತ್ತ ಮಾತ್ರ ಗಮನ ಹರಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಉಂಟಾಗಿರುವ ಬೆನ್ನಲ್ಲೇ ಟಿಎಂಸಿ ಈ ಸ್ಪಷ್ಟನೆ ನೀಡಿದೆ. ಸೋಮವಾರವಷ್ಟೇ ಸುಖೇಂದು ರಾಯ್ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಬುಧವಾರ (ಇಂದು) ಮತ್ತೊಬ್ಬ ಪ್ರಮುಖ ನಾಯಕಿ ಸುಶ್ಮಿತಾ ದೇವ್ ಅವರು ತಮ್ಮ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್-ಟಿಎಂಸಿ ವಿಲೀನದ ಮಾತುಕತೆಯ ಭಾಗವಾಗಿ ಸೋನಿಯಾ ಗಾಂಧಿ ಅವರು ಮಮತಾ ಬ್ಯಾನರ್ಜಿಗೆ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನವನ್ನು ಹಾಗೂ ಅಭಿಷೇಕ್ ಬ್ಯಾನರ್ಜಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ನೀಡಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ (ಮುಖ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ) ವರದಿಯಾಗಿತ್ತು. ಆದರೆ, ಟಿಎಂಸಿ ಮೂಲಗಳು ಈ ವರದಿಗಳನ್ನು ಸುಳ್ಳು ಎಂದು ಹೇಳಿವೆ.

ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಮಮತಾ ಬ್ಯಾನರ್ಜಿ

ವಿರೋಧ ಪಕ್ಷಗಳ ‘ಇಂಡಿಯಾ’ (INDIA) ಒಕ್ಕೂಟದ ಸಭೆಯಲ್ಲಿ ಒಗ್ಗಟ್ಟು ಮತ್ತು ಉತ್ತಮ ಸಮನ್ವಯಕ್ಕೆ ಒತ್ತು ನೀಡಿದ ಮರುದಿನವೇ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಅವರ ‘ಜನಪಥ್’ ನಿವಾಸದಲ್ಲಿ ಭೇಟಿಯಾದರು. “ಇಂಡಿಯಾ ಒಕ್ಕೂಟವು ಒಗ್ಗಟ್ಟಿನಿಂದ ಮತ್ತು ಬಲವಾಗಿ ಒಟ್ಟಿಗೆ ಕೆಲಸ ಮಾಡಲಿದೆ,” ಎಂದು ಮಮತಾ ಅವರು ಸೋನಿಯಾ ಗಾಂಧಿ ಅವರಿಗೆ ತಿಳಿಸಿದರು.

ಇತ್ತೀಚಿನ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಎದುರು ಟಿಎಂಸಿ ಸೋಲು ಕಂಡ ನಂತರ, ಪಕ್ಷದ ಹಲವು ನಾಯಕರು ಪಕ್ಷವನ್ನು ತೊರೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತು ವಿರೋಧ ಪಕ್ಷಗಳ ಒಕ್ಕೂಟದ ಸಭೆಯ ನಂತರ, ಎರಡೂ ಪಕ್ಷಗಳ ಮುಂದಿನ ಕಾರ್ಯತಂತ್ರದ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಪಿಟಿಐ (PTI) ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಸಭೆ ನಡೆಸಿದರು. ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಮನ್ವಯವನ್ನು ಬಲಪಡಿಸಲು ಮತ್ತು ಒಗ್ಗಟ್ಟನ್ನು ಕಾಯ್ದುಕೊಳ್ಳಲು ಈ ಸಭೆ ನಡೆಯಿತು. ಮಮತಾ ಬ್ಯಾನರ್ಜಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಮರುದಿನವೇ ’10 ಜನಪಥ್’ನಲ್ಲಿ ಈ ಸಭೆ ನಡೆದಿದೆ. ರಾಹುಲ್ ಮತ್ತು ಅಭಿಷೇಕ್ ಬ್ಯಾನರ್ಜಿ ನಡುವಿನ ಈ ಭೇಟಿಯನ್ನು ಕಾಂಗ್ರೆಸ್ ಮತ್ತು ಟಿಎಂಸಿ ನಡುವಿನ ನಿರಂತರ ಸಮಾಲೋಚನೆಯ ಭಾಗವಾಗಿ ನೋಡಲಾಗುತ್ತಿದೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಟಿಎಂಸಿ ಒಳಗಡೆ ಆಂತರಿಕ ಬಂಡಾಯ ಕಾಣಿಸಿಕೊಂಡಿರುವ ಸಮಯದಲ್ಲಿಯೇ ಈ ಸಭೆ ನಡೆದಿದೆ. ಸೋಮವಾರ ನಡೆದ ಇಂಡಿಯಾ ಒಕ್ಕೂಟದ ಸಭೆಯಲ್ಲಿ, ಬಿಜೆಪಿಯನ್ನು ಎದುರಿಸಲು ಮಿತ್ರಪಕ್ಷಗಳ ನಡುವೆ ಹೆಚ್ಚಿನ ಸಮನ್ವಯ ಮತ್ತು ಒಗ್ಗಟ್ಟಿನ ಅಗತ್ಯವಿದೆ ಎಂದು ವಿರೋಧ ಪಕ್ಷದ ನಾಯಕರು ಒತ್ತಿಹೇಳಿದ್ದರು.

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಅವರು ಬುಧವಾರ (ಇಂದು) ಪಕ್ಷ ಮತ್ತು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ಇದು ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಸುಶ್ಮಿತಾ ದೇವ್ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರು ಅಂಗೀಕರಿಸಿದ್ದಾರೆ.

“ರಾಜ್ಯಸಭೆಯಲ್ಲಿ ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸುತ್ತಿದ್ದ ಚುನಾಯಿತ ಸದಸ್ಯೆ ಸುಶ್ಮಿತಾ ದೇವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಜ್ಯಸಭೆಯ ಅಧ್ಯಕ್ಷರು ಜೂನ್ 10, 2026 ರಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ,” ಎಂದು ರಾಜ್ಯಸಭಾ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

2021 ರಲ್ಲಿ ಕಾಂಗ್ರೆಸ್ ತೊರೆದು ಟಿಎಂಸಿ ಸೇರಿದ್ದ ಸುಶ್ಮಿತಾ ದೇವ್, ರಾಜೀನಾಮೆ ನೀಡಿದ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿಯಾಗಿದ್ದು, ಅವರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಬಗ್ಗೆ ಅಥವಾ ತಮ್ಮ ಮುಂದಿನ ರಾಜಕೀಯ ಯೋಜನೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ದೇವ್, “ನಾನು ಎಂತಹ ರಾಜಕೀಯ ಮಾಡಬೇಕು ಮತ್ತು ನನ್ನ ನಾಯಕ ಯಾರಾಗಬೇಕು ಎಂಬುದು ನನ್ನ ವೈಯಕ್ತಿಕ ನಿರ್ಧಾರ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...