Homeಕರ್ನಾಟಕಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

- Advertisement -
- Advertisement -

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಲೋಕಸಭೆಯ ಹಲವಾರು ವಿರೋಧ ಪಕ್ಷದ ಸದಸ್ಯರು ಕೋರಿರುವ ಅವಿಶ್ವಾಸ ನಿರ್ಣಯಕ್ಕೆ ಪಕ್ಷವು ಸದಾ ಸಮ್ಮತಿ ನೀಡಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಪಕ್ಷಪಾತಿಯಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇಲೆ ಓಂ ಬಿರ್ಲಾ ಅವರನ್ನು ಕೆಳಮನೆಯ ಸ್ಪೀಕರ್ ಸ್ಥಾನದಿಂದ ತೆಗೆದುಹಾಕುವ ನಿರ್ಣಯವನ್ನು ಮಂಡಿಸಲು ಕನಿಷ್ಠ 118 ವಿರೋಧ ಪಕ್ಷದ ಸಂಸದರು ನೋಟಿಸ್ ಸಲ್ಲಿಸಿದ್ದಾರೆ. ಟಿಎಂಸಿ ಸಂಸದರು ಈ ಹಿಂದೆ ನೋಟಿಸ್‌ಗೆ ಸಹಿ ಹಾಕಿರಲಿಲ್ಲ.

“ನಾವು ಅವಿಶ್ವಾಸ ನಿರ್ಣಯಕ್ಕೆ ಸದಾ ಬೆಂಬಲ ನೀಡುತ್ತಿದ್ದೆವು. ಅದನ್ನು ಆತುರದಿಂದ ಮಾಡಬೇಕೆಂದು ನಾವು ಬಯಸಲಿಲ್ಲ, ಅದಕ್ಕಾಗಿಯೇ ಬಜೆಟ್ ಅಧಿವೇಶನದ ಕೊನೆಯ ಭಾಗದಲ್ಲಿ, ಮೂರು ದಿನಗಳ ನಂತರ ಅರ್ಜಿ ಸಲ್ಲಿಸಲು ನಾವು ಹೇಳಿದ್ದೇವೆ” ಎಂದು ಟಿಎಂಸಿ ನಾಯಕಿಯೊಬ್ಬರು ತಿಳಿಸಿದ್ದಾರೆ.

ಟಿಎಂಸಿ ನಾಯಕರು ಈ ವಿಷಯದ ಬಗ್ಗೆ ಇಂಡಿಯಾ ಬ್ಲಾಕ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ.

ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಯಿಂದ ಪದಚ್ಯುತಗೊಳಿಸುವ ನಿರ್ಣಯವನ್ನು ಮಂಡಿಸಲು ವಿರೋಧ ಪಕ್ಷದ ಸದಸ್ಯರು ಮಾರ್ಚ್ 9 ರಂದು ನೋಟಿಸ್ ಅನ್ನು ಮಂಡಿಸಲು ಲೋಕಸಭೆ ಪಟ್ಟಿ ಮಾಡಿದೆ. ಈ ನಿರ್ಣಯವು ದಿನದ ವ್ಯವಹಾರವಾಗಿ ಪಟ್ಟಿ ಮಾಡಲಾದ ಏಕೈಕ ವಿಷಯವಾಗಿದೆ.

ಸೋಮವಾರ ಅಧ್ಯಕ್ಷರು ಸದನವನ್ನು ಕರೆದಾಗ ಕೆಳಮನೆಯ 50 ಸದಸ್ಯರು ಎದ್ದುನಿಂತ ನಂತರ, ನೋಟಿಸ್ ಅನ್ನು ಅಂಗೀಕರಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ನಂತರ ನಿರ್ಣಯವನ್ನು ಚರ್ಚಿಸಿ, ಮತ ಚಲಾಯಿಸಲಾಗುತ್ತದೆ. 50 ಸದಸ್ಯರು ನೋಟಿಸ್‌ಗೆ ಬೆಂಬಲ ನೀಡದಿದ್ದರೆ, ನಿರ್ಣಯವನ್ನು ಮಂಡಿಸಲು ಸಾಧ್ಯವಿಲ್ಲ.

ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಎರಡೂ ತಮ್ಮ ಲೋಕಸಭಾ ಸಂಸದರಿಗೆ ಈ ವಿಷಯ ಪರಿಗಣನೆಗೆ ಬಂದಾಗ ಸದನದಲ್ಲಿ ಹಾಜರಿರುವಂತೆ ವಿಪ್ ಜಾರಿ ಮಾಡಿವೆ. ಸರ್ಕಾರದ ಪರವಾಗಿ ಸಂಖ್ಯೆಗಳು ಹೆಚ್ಚಾಗಿದ್ದು, ನಿರ್ಣಯವನ್ನು ಸೋಲಾಗುವ ನಿರೀಕ್ಷೆಯಿದೆ.

ಈ ಸಂದರ್ಭದಲ್ಲಿ ಸದನದಲ್ಲಿ ಹಾಜರಿರಲು ಸ್ಪೀಕರ್ ಓಂಬಿರ್ಲಾ ಅವರಿಗೆ ಸಂವಿಧಾನ ಅನುಮತಿಸುತ್ತದೆ. ಅವರು ತಮ್ಮನ್ನು ತಾವು ಸಮರ್ಥಿಸಿಕೊಳ್ಳಬಹುದು, ನಿರ್ಣಯದ ಮೇಲೆ ಮತ ಚಲಾಯಿಸಬಹುದು. ಆದರೆ ವಿಷಯ ಚರ್ಚೆಯಲ್ಲಿರುವಾಗ ಕಲಾಪಗಳ ಅಧ್ಯಕ್ಷತೆ ವಹಿಸಲು ಸಾಧ್ಯವಿಲ್ಲ.

ಬಿರ್ಲಾ ವಿರುದ್ಧದ ಪ್ರಸ್ತಾವಿತ ನಿರ್ಣಯವು ವಿರೋಧ ಪಕ್ಷದ ನಾಯಕ ಮತ್ತು ಇತರ ವಿರೋಧ ಪಕ್ಷದ ನಾಯಕರನ್ನು ಮಾತನಾಡಲು ಅನುಮತಿಸದ ಸ್ಪೀಕರ್ ಅವರ ನಡವಳಿಕೆ ಜೊತೆಗೆ ವಿರೋಧ ಪಕ್ಷಕ್ಕೆ ಸೇರಿದ ಮಹಿಳಾ ಸಂಸದರ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುವ ಬಗ್ಗೆ ಪ್ರಶ್ನಿಸಿದೆ.

“ಸಾರ್ವಜನಿಕ ಕಾಳಜಿಯ” ವಿಷಯಗಳನ್ನು ಎತ್ತಿದ್ದಕ್ಕಾಗಿ ಮತ್ತು ಮಾಜಿ ಪ್ರಧಾನಿಗಳ ವಿರುದ್ಧ ಸಂಪೂರ್ಣವಾಗಿ ಆಕ್ಷೇಪಾರ್ಹ, ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಆಡಳಿತ ಪಕ್ಷದ ಸದಸ್ಯರನ್ನು ಖಂಡಿಸದಿದ್ದಕ್ಕಾಗಿ ವಿರೋಧ ಪಕ್ಷದ ಸಂಸದರನ್ನು ಇಡೀ ಅಧಿವೇಶನಕ್ಕೆ ಅಮಾನತುಗೊಳಿಸಿದ್ದನ್ನೂ ಇದು ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...