Homeಮುಖಪುಟಪ.ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಜಯಭೇರಿ: 2,552 ಗ್ರಾಮ ಪಂಚಾಯತ್‌ಗಳಲ್ಲಿ ಗೆಲುವು

ಪ.ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಜಯಭೇರಿ: 2,552 ಗ್ರಾಮ ಪಂಚಾಯತ್‌ಗಳಲ್ಲಿ ಗೆಲುವು

- Advertisement -
- Advertisement -

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 3,317 ಗ್ರಾಮ ಪಂಚಾಯತ್‌ಗಳ ಪೈಕಿ 2,552 ರಲ್ಲಿ ಗೆಲುವು ಸಾಧಿಸಿದೆ ಎಂದು NDTV ವರದಿ ಮಾಡಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು 341 ಪಂಚಾಯತ್ ಸಮಿತಿಗಳಿಗೆ ನಡೆದ ಚುನುವಾಣೆಗಳಲ್ಲಿ 232 ಮತ್ತು 20 ಜಿಲ್ಲಾ ಪರಿಷತ್‌ಗಳಲ್ಲಿ 12ನ್ನು ಗೆದ್ದಿದೆ.

ಬಿಜೆಪಿಯು ಕೇವಲ 212 ಗ್ರಾಮ ಪಂಚಾಯತಿಗಳು, ಏಳು ಪಂಚಾಯತಿ ಸಮಿತಿಗಳು ಗೆದ್ದಿದೆ. ಇನ್ನು ಯಾವುದೇ ಜಿಲ್ಲಾ ಪರಿಷತ್ತುಗಳನ್ನು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಎಡರಂಗವು 15 ಗ್ರಾಮ ಪಂಚಾಯತ್ ಮತ್ತು ಒಂದು ಜಿಲ್ಲಾ ಪರಿಷತ್ ಅನ್ನು ಗೆದ್ದಿದೆ. ಕಾಂಗ್ರೆಸ್ 26 ಗ್ರಾಮ ಪಂಚಾಯತಿಗಳನ್ನು ಪಡೆದುಕೊಂಡಿದೆ ಆದರೆ ಪಂಚಾಯತಿ ಸಮಿತಿಗಳು ಮತ್ತು ಜಿಲ್ಲಾ ಪರಿಷತ್‌ಗಳಲ್ಲಿ ಯಾವುದರಲ್ಲಿಯೂ ಗೆಲುವು ಕಂಡಿಲ್ಲ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಪಶ್ಚಿಮ ಬಂಗಾಳದ ಮೂರು ಹಂತದ ಪಂಚಾಯತ್ ವ್ಯವಸ್ಥೆಯ 73,887 ಸ್ಥಾನಗಳಿಗೆ ಜುಲೈ 8ರಂದು ಚುನಾವಣೆ ನಡೆಯಿತು. ಮತ ಎಣಿಕೆ ಮಂಗಳವಾರ ಆರಂಭಿಸಲಾಗಿತ್ತು.. ಚುನಾವಣೆಯ ಸಂದರ್ಭದಲ್ಲಿ ಹಿಂಸಾಚಾರದ ಘಟನೆಗಳು ನಡೆದವು. ಈ ಹಿಂಸಾಚಾರದಲ್ಲಿ ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ. ಈ ಹಿಂಸಾಚಾರದಲ್ಲಿ ಮತಪೆಟ್ಟಿಗೆಗಳನ್ನು ಧ್ವಂಸ ಮಾಡಲಾಗಿದೆ ಎನ್ನುವ ವರದಿಗಳು ಬಂದಿವೆ. ಹಿಂಸಾಚಾರದಿಂದಾಗಿ ಸೋಮವಾರ 696 ಬೂತ್‌ಗಳಲ್ಲಿ ಮರುಮತದಾನ ನಡೆಸಲಾಯಿತು. ಮಂಗಳವಾರವೂ ರಾಜ್ಯದ ವಿವಿಧೆಡೆ ಹಿಂಸಾಚಾರ ವರದಿಯಾಗಿದೆ.

ಟಿಎಂಸಿ ಪಕ್ಷದ ಅಭ್ಯರ್ಥಿಗಳು ಅತಿಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿರುವುದರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದರು. ”ತಮ್ಮ ಪಕ್ಷವು ಜನರ ಹೃದಯದಲ್ಲಿ ನೆಲೆಸಿದೆ” ಎಂದು ಹೇಳಿದ್ದಾರೆ.

”ರಾಜ್ಯದಲ್ಲಿ ವಿರೋಧ ಪಕ್ಷಗಳು ತೃಣಮೂಲ ಕಾಂಗ್ರೆಸ್ ವಿರುದ್ಧ ದುರುದ್ದೇಶಪೂರಿತ ಪ್ರಚಾರಗಳನ್ನು ಮಾಡಿದವು ಆದರೆ, ಅವರು ಮತದಾರರನ್ನು ಓಲೈಸಲು ಸಾಧ್ಯವಾಗಲಿಲ್ಲ” ಎಂದು ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

”ಪ್ರತಿಪಕ್ಷಗಳ ‘ನೋ ವೋಟ್ ಟು ಮಮತಾ’ ಅಭಿಯಾನವನ್ನು ನಡೆಸಿದರು ಆದರೆ ಮತದಾರರು ಮಾತ್ರ ಅದನ್ನು ‘ಮಮತಾಗೆ ಮತ ನೀಡಿ’ ಎಂದು ಪರಿವರ್ತಿಸಿದ್ದಾರೆ. ಆವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಟಿಎಂಸಿ ಅಚಲ ಬೆಂಬಲದೊಂದಿಗೆ ಲೋಕಸಭಾ ಚುನಾವಣೆಯಲ್ಲಿ ನಾವು ಖಂಡಿತವಾಗಿಯೂ ಘರ್ಜಿಸುವ ಜನಾದೇಶವನ್ನು ಹೊಂದುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

 

ಇದನ್ನೂ ಓದಿ: ಪ.ಬಂಗಾಳ: ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....