Homeಮುಖಪುಟಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

ಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

25ನೇ ವಯಸ್ಸಿನಲ್ಲಿಯೇ ಕಾಂಗ್ರೆಸ್‌ ಶಾಸಕರಾಗಿದ್ದ ಸುಬ್ರತ ಮುಖರ್ಜಿಯವರು ಪಶ್ಚಿಮ ಬಂಗಾಳದ ನಾಡಿ ಮಿಡಿತವನ್ನು ಬಲ್ಲವರಾಗಿದ್ದರು. ಐದು ದಶಕಗಳ ಕಾಲ ರಾಜಕೀಯ ಜೀವನದಲ್ಲಿದ್ದ ಮುಖರ್ಜಿಯವರು ಮಮತಾ ಬ್ಯಾನರ್ಜಿಯವರ ರಾಜಕೀಯ ಮಾರ್ಗದರ್ಶಿಯೂ ಹೌದು.

- Advertisement -
- Advertisement -

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಟಿಎಂಸಿ ನಾಯಕ, ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಸುಬ್ರತ ಮುಖರ್ಜಿ (75) ಅವರು ಗುರುವಾರ ನಿಧನರಾಗಿದ್ದಾರೆ.

ಮಮತಾ ಬ್ಯಾನರ್ಜಿಯವರು ಕೊಲ್ಕತ್ತದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ವಿಷಯವನ್ನು ತಿಳಿಸಿದ್ದಾರೆ. “ಸುಬ್ರತಾ ಮುಖರ್ಜಿಯವರು ನಮ್ಮೊಂದಿಗೆ ಇನ್ನಿರುವುದಿಲ್ಲ ಎಂಬುದನ್ನು ನಂಬಲೂ ಆಗುತ್ತಿಲ್ಲ. ಪಕ್ಷಕ್ಕಾಗಿ ದುಡಿದ ಮಹಾನ್ ನಾಯಕ. ಇದು ನನಗಾದ ವೈಯಕ್ತಿಕ ನಷ್ಟ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ವಾರ ಐಸಿಯುಗೆ ದಾಖಲಿಸಲಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸುಬ್ರತ ಮುಖರ್ಜಿ

1946ರಲ್ಲಿ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಜನಿಸಿದ ಮುಖರ್ಜಿ ಸುಬ್ರತ ಅವರು ಐವರು ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದರು. ಬಂಗಾಳದ ರಾಜಕೀಯದಲ್ಲಿ ನಿಷ್ಠಾವಂತರಾಗಿದ್ದರು. ಅವರ ರಾಜಕೀಯ ಜೀವನ ವಿದ್ಯಾರ್ಥಿ ದಿಸೆಯಲ್ಲಿಯೇ ಆರಂಭವಾಯಿತು. 1960ರ ದಶಕದಲ್ಲಿ ಆರಂಭವಾಗಿ ಐದು ದಶಕಗಳಿಗೂ ಹೆಚ್ಚು ಕಾಲ ಅವರು ರಾಜಕೀಯದಲ್ಲಿದ್ದರು.

ಇದನ್ನೂ ಓದಿರಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

1967ರಲ್ಲಿ ಬಂಗಬಾಸಿ ಕಾಲೇಜಿನ ವಿದ್ಯಾರ್ಥಿ ನಾಯಕರಾಗಿ ರಾಜಕೀಯಕ್ಕೆ ಕಾಲಿಟ್ಟರು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖರ್ಜಿ ಅವರು ತಮ್ಮ ಸಂಘಟನಾ ಕೌಶಲ ಮತ್ತು ಪ್ರಖರ ಭಾಷಣಗಳಿಂದ ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರಾಗಿ ಹೊಮ್ಮಿದರು. ಕೇಂದ್ರ ಸಚಿವರಾಗಿದ್ದ ಪ್ರಿಯಾ ರಂಜನ್ ದಾಸ್ಮುನ್ಸಿ ಮತ್ತು ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋಮೆನ್ ಮಿತ್ರ ಅವರೊಂದಿಗೆ ಮುಖರ್ಜಿಯವರ ಹೆಸರು ಪ್ರವರ್ಧಮಾನಕ್ಕೆ ಬಂತು. ದಾಸ್ಮುನ್ಸಿ ಮತ್ತು ಮಿತ್ರಾ ಕ್ರಮವಾಗಿ 2017 ಮತ್ತು 2020ರಲ್ಲಿ ನಿಧನರಾಗಿದ್ದಾರೆ.

ದಾಸ್ಮುನ್ಸಿ ಅವರೊಂದಿಗೆ ಪಕ್ಷವನ್ನು ಕಟ್ಟಿದ ಮುಖರ್ಜಿಯವರು ಪಶ್ಚಿಮ ಬಂಗಾಳದ ಆಳ ಅಗಲವನ್ನು ಅರಿತವರಾಗಿದ್ದರು. ಸೈದ್ಧಾಂತಿಕ ವಿರೋಧಿಗಳಾಗಿದ್ದ ನಕ್ಸಲ್‌ ಹಾಗೂ ಎಡಪಂಥೀಯ  ವಿಚಾರಧಾರೆವರೊಂದಿಗೆ ಸೆಣಸಾಡಿಸಿದರು. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರೂ ಮುಖರ್ಜಿಯವರ ಸಂಘಟನಾ ಕೌಶಲವನ್ನು ಹಾಡಿ ಹೊಗಳಿದರು.

1971ರಲ್ಲಿ 25ನೇ ವಯಸ್ಸಿನಲ್ಲಿಯೇ ಬ್ಯಾಲಿಗುಂಜ್ ಕ್ಷೇತ್ರದಿಂದ ಸ್ಪರ್ಧಿಸಿದ ಬ್ಯಾನರ್ಜಿಯವರು ಪಶ್ಚಿಮ ಬಂಗಾಳ ವಿಧಾನಸಭೆಗೆ ಆಯ್ಕೆಯಾದರು. ಅತ್ಯಂತ ಕಿರಿಯ ಶಾಸಕ ಎಂದೂ ಖ್ಯಾತರಾದರು. 1972ರಲ್ಲಿ ಸಚಿವರಾಗುವ ಮೂಲಕ ಮುಖರ್ಜಿಯವರ ರಾಜಕೀಯ ಜೀವನ ಮತ್ತೊಂದು ಘಟ್ಟವನ್ನು ಮುಟ್ಟಿತು.

ಸಿದ್ಧಾರ್ಥ ಶಂಕರ್‌ ರಾಯ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತ್ತು. ಕ್ಯಾಬಿನೇಟ್‌‌ ಸಚಿವರಾಗುವ ಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲೇ ಸಚಿರಾದ ಹೆಗ್ಗಳಿಕೆಗೆ ಸುಬ್ರತ ಪಾತ್ರರಾದರು. ಮಾಹಿತಿ ಮತ್ತು ಸಂಸ್ಕೃತಿ ಸಚಿವರಾಗಿ ಗಮನ ಸೆಳೆದರು. 1975-77ರ ಕಾಲಘಟ್ಟದಲ್ಲಿ ತುರ್ತುಪರಿಸ್ಥಿತಿ ಜಾರಿಯಾಗಿ ಪತ್ರಿಕಾ ಸ್ವತಂತ್ರವನ್ನು ಕಿತ್ತುಕೊಂಡಾಗ ತನ್ನದೇ ಪಕ್ಷವನ್ನು ಟೀಕಿಸಿದ್ದರು.

1977ರಲ್ಲಿ ಚುನಾವಣೆಯಲ್ಲಿ ಸೋತರೂ ಪಕ್ಷದಲ್ಲಿ ಅವರ ಕ್ಷಿಪ್ರ ಬೆಳವಣಿಗೆಯನ್

ನು ತಡೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ. 1982ರ ಚುನಾವಣೆಯಲ್ಲಿ ಜೋರಬಗನ್ ಕ್ಷೇತ್ರದಿಂದ ಅವರು ಮತ್ತೆ ವಿಧಾನಸಭೆಗೆ ಆಯ್ಕೆಯಾದರು. ತಮ್ಮ ಜೀವನದ ಕೊನೆಯ ದಿನದವರೆಗೂ ಬ್ಯಾಲಿಗುಂಗೆ ಕ್ಷೇತ್ರವನ್ನು ಅವರು ಪ್ರತಿನಿಧಿಸಿದರು.

ಇದನ್ನೂ ಓದಿರಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ರಾಜ್ಯದ ಹಿರಿಯ ರಾಜಕಾರಣಿಗಳ ಪ್ರಕಾರ, ಮುಖರ್ಜಿಯವರು 1970ರ ದಶಕದ ಉತ್ತರಾರ್ಧದಲ್ಲಿ ಮತ್ತು 1960ರ ದಶಕದ ಆರಂಭದಲ್ಲಿ ಛಾತ್ರ ಪರಿಷತ್ತಿನಲ್ಲಿ ಮಮತಾ ಬ್ಯಾನರ್ಜಿಯ ರಾಜಕೀಯ ಮಾರ್ಗದರ್ಶಕರಾಗಿದ್ದರು.

ಮುಖರ್ಜಿ ಅವರು 1984ರ ಸಂಸತ್ತಿನ ಚುನಾವಣೆಯಲ್ಲಿ ಜಾದವ್‌ಪುರ ಲೋಕಸಭಾ ಕ್ಷೇತ್ರದಿಂದ ಆಗಿನ ಸಿಪಿಐ(ಎಂ) ನಾಯಕ ಸೋಮನಾಥ್ ಚಟರ್ಜಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಬ್ಯಾನರ್ಜಿ ಹೆಸರನ್ನು ಪ್ರಸ್ತಾಪಿಸಿದ್ದರು. ಬ್ಯಾನರ್ಜಿಯವರು ಚಟರ್ಜಿಯನ್ನು ಸೋಲಿಸಿ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯಾಗಿ ಹೊಮ್ಮಿದರು.

1999ರಲ್ಲಿ ಹೊಸದಾಗಿ ರೂಪುಗೊಂಡ ಟಿಎಂಸಿಗೆ ಮುಖರ್ಜಿ ಬಂದರು. ಆದರೆ ಅವರು ಚೌರಂಗೀ ಕ್ಷೇತ್ರದಿಂದ ಕಾಂಗ್ರೆಸ್‌ನ ಶಾಸಕರಾಗಿದ್ದರು. 2005ರಲ್ಲಿ, ಬ್ಯಾನರ್ಜಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಅವರು ಟಿಎಂಸಿ ತೊರೆದು ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರು. ಮುಖರ್ಜಿಯವರ ನಿರ್ಗಮನವು ಟಿಎಂಸಿಗೆ ಭಾರೀ ಹೊಡೆತವನ್ನು ನೀಡಿತು. ಇದು 2005ರ ಕೆಎಂಸಿ ಚುನಾವಣೆಯಲ್ಲಿ ಸೋಲಿಗೆ ಕಾರಣವಾಯಿತು. ಮಮತಾ ಬ್ಯಾನರ್ಜಿಯವರು ಮುಖರ್ಜಿಯವರನ್ನು ‘ಕಲ್ಲಂಗಡಿ’ ಎಂದು ಅಡ್ಡ ಹೆಸರು ಇಟ್ಟು ಟೀಕಿಸಿದರು.

ಸಾರ್ವಜನಿಕವಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಮುಖರ್ಜಿಯವರು, ಸಿಪಿಐ(ಎಂ) ಜೊತೆ ಕೈಜೋಡಿಸಿದ್ದರು. ಎಡರಂಗದ ಆಡಳಿತದ ತೀವ್ರ ವಿಮರ್ಶಕರಲ್ಲಿ ಒಬ್ಬರಾಗಿದ್ದರೂ ಮುಖರ್ಜಿ ಅವರು ಆಗಿನ ಮುಖ್ಯಮಂತ್ರಿ ಜ್ಯೋತಿ ಬಸು ಸೇರಿದಂತೆ ಸಿಪಿಐ(ಎಂ) ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು. ನಂತರ ಅವರು 2005ರಲ್ಲಿ ಕಾಂಗ್ರೆಸ್‌ಗೆ ಮರಳಿದರು. 2010ರ ಕೆಎಂಸಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಟಿಎಂಸಿಗೆ ಸೇರಿದರು.

“ಸುಬ್ರತಾ ಮುಖರ್ಜಿ ಅವರು ಸಮರ್ಥ ಸಂಘಟಕರು ಮತ್ತು ನಿರ್ವಾಹಕರು ಮಾತ್ರವಲ್ಲದೆ ತಳಮಟ್ಟದ ಕಾರ್ಯಕರ್ತರೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದರು. ಬಹುಶಃ, ಅವರು ಯಾವಾಗಲೂ ಗೆಲ್ಲುವ ಕಡೆ ಇರಲು ಇದೇ ಕಾರಣವಾಗಿರಬಹುದು” ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಪ್ರದೀಪ್ ಭಟ್ಟಾಚಾರ್ಯ ಹೇಳಿದ್ದಾರೆ.

2011ರಲ್ಲಿ ಮುಖರ್ಜಿಯವರು ಟಿಎಂಸಿ ಅಭ್ಯರ್ಥಿಯಾಗಿ ಬ್ಯಾಲಿಗುಂಗೆ ಕ್ಷೇತ್ರದಿಂದ ಆಯ್ಕೆಯಾದರು. ಅವರಿಗೆ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಉಸ್ತುವಾರಿ ನೀಡಲಾಯಿತು. ಅವರ ಅಧಿಕಾರಾವಧಿಯಲ್ಲಿ, ಪಶ್ಚಿಮ ಬಂಗಾಳವು MGNREGA ಯೋಜನೆಯ ಅನುಷ್ಠಾನದಲ್ಲಿ ಉನ್ನತ-ಕಾರ್ಯನಿರ್ವಹಣೆಯ ರಾಜ್ಯಗಳಲ್ಲಿ ಒಂದಾಗಿ ಪ್ರಶಸ್ತಿಗಳನ್ನು ಗಳಿಸಿತು.

2016ರ ಅಸೆಂಬ್ಲಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ, ಮುಖರ್ಜಿಯವರ ಹೆಸರು ನಾರದ ಸ್ಟಿಂಗ್ ಟೇಪ್ ಪ್ರಕರಣದಲ್ಲಿ ಇತರ ಕೆಲವು ಟಿಎಂಸಿ ನಾಯಕರೊಂದಿಗೆ ಕೇಳಿ ಬಂದಿತು. ತಮ್ಮ ಮೇಲಿನ ಆರೋಪವನ್ನು ಮುಖರ್ಜಿ ನಿರಾಕರಿಸಿದರು. ಈ ಆರೋಪ “ರಾಜಕೀಯ ಪಿತೂರಿ” ಎಂದು ಕರೆದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮೂರು ಭಾರಿ ಸೋಲನ್ನೂ ಸುಬ್ರತ ಮುಖರ್ಜಿ ಕಂಡಿದ್ದರು. ವಾಯುವ್ಯ ಕಲ್ಕತ್ತ ಕ್ಷೇತ್ರದಲ್ಲಿ 2004ರಲ್ಲಿ, ಬಂಕುರ ಕ್ಷೇತ್ರದಲ್ಲಿ 2009 ಮತ್ತು 2019ರಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು.


ಇದನ್ನೂ ಓದಿರಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...