Homeಮುಖಪುಟಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

ಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

25ನೇ ವಯಸ್ಸಿನಲ್ಲಿಯೇ ಕಾಂಗ್ರೆಸ್‌ ಶಾಸಕರಾಗಿದ್ದ ಸುಬ್ರತ ಮುಖರ್ಜಿಯವರು ಪಶ್ಚಿಮ ಬಂಗಾಳದ ನಾಡಿ ಮಿಡಿತವನ್ನು ಬಲ್ಲವರಾಗಿದ್ದರು. ಐದು ದಶಕಗಳ ಕಾಲ ರಾಜಕೀಯ ಜೀವನದಲ್ಲಿದ್ದ ಮುಖರ್ಜಿಯವರು ಮಮತಾ ಬ್ಯಾನರ್ಜಿಯವರ ರಾಜಕೀಯ ಮಾರ್ಗದರ್ಶಿಯೂ ಹೌದು.

- Advertisement -
- Advertisement -

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಟಿಎಂಸಿ ನಾಯಕ, ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಸುಬ್ರತ ಮುಖರ್ಜಿ (75) ಅವರು ಗುರುವಾರ ನಿಧನರಾಗಿದ್ದಾರೆ.

ಮಮತಾ ಬ್ಯಾನರ್ಜಿಯವರು ಕೊಲ್ಕತ್ತದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ವಿಷಯವನ್ನು ತಿಳಿಸಿದ್ದಾರೆ. “ಸುಬ್ರತಾ ಮುಖರ್ಜಿಯವರು ನಮ್ಮೊಂದಿಗೆ ಇನ್ನಿರುವುದಿಲ್ಲ ಎಂಬುದನ್ನು ನಂಬಲೂ ಆಗುತ್ತಿಲ್ಲ. ಪಕ್ಷಕ್ಕಾಗಿ ದುಡಿದ ಮಹಾನ್ ನಾಯಕ. ಇದು ನನಗಾದ ವೈಯಕ್ತಿಕ ನಷ್ಟ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ವಾರ ಐಸಿಯುಗೆ ದಾಖಲಿಸಲಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸುಬ್ರತ ಮುಖರ್ಜಿ

1946ರಲ್ಲಿ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಜನಿಸಿದ ಮುಖರ್ಜಿ ಸುಬ್ರತ ಅವರು ಐವರು ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದರು. ಬಂಗಾಳದ ರಾಜಕೀಯದಲ್ಲಿ ನಿಷ್ಠಾವಂತರಾಗಿದ್ದರು. ಅವರ ರಾಜಕೀಯ ಜೀವನ ವಿದ್ಯಾರ್ಥಿ ದಿಸೆಯಲ್ಲಿಯೇ ಆರಂಭವಾಯಿತು. 1960ರ ದಶಕದಲ್ಲಿ ಆರಂಭವಾಗಿ ಐದು ದಶಕಗಳಿಗೂ ಹೆಚ್ಚು ಕಾಲ ಅವರು ರಾಜಕೀಯದಲ್ಲಿದ್ದರು.

ಇದನ್ನೂ ಓದಿರಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

1967ರಲ್ಲಿ ಬಂಗಬಾಸಿ ಕಾಲೇಜಿನ ವಿದ್ಯಾರ್ಥಿ ನಾಯಕರಾಗಿ ರಾಜಕೀಯಕ್ಕೆ ಕಾಲಿಟ್ಟರು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖರ್ಜಿ ಅವರು ತಮ್ಮ ಸಂಘಟನಾ ಕೌಶಲ ಮತ್ತು ಪ್ರಖರ ಭಾಷಣಗಳಿಂದ ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರಾಗಿ ಹೊಮ್ಮಿದರು. ಕೇಂದ್ರ ಸಚಿವರಾಗಿದ್ದ ಪ್ರಿಯಾ ರಂಜನ್ ದಾಸ್ಮುನ್ಸಿ ಮತ್ತು ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋಮೆನ್ ಮಿತ್ರ ಅವರೊಂದಿಗೆ ಮುಖರ್ಜಿಯವರ ಹೆಸರು ಪ್ರವರ್ಧಮಾನಕ್ಕೆ ಬಂತು. ದಾಸ್ಮುನ್ಸಿ ಮತ್ತು ಮಿತ್ರಾ ಕ್ರಮವಾಗಿ 2017 ಮತ್ತು 2020ರಲ್ಲಿ ನಿಧನರಾಗಿದ್ದಾರೆ.

ದಾಸ್ಮುನ್ಸಿ ಅವರೊಂದಿಗೆ ಪಕ್ಷವನ್ನು ಕಟ್ಟಿದ ಮುಖರ್ಜಿಯವರು ಪಶ್ಚಿಮ ಬಂಗಾಳದ ಆಳ ಅಗಲವನ್ನು ಅರಿತವರಾಗಿದ್ದರು. ಸೈದ್ಧಾಂತಿಕ ವಿರೋಧಿಗಳಾಗಿದ್ದ ನಕ್ಸಲ್‌ ಹಾಗೂ ಎಡಪಂಥೀಯ  ವಿಚಾರಧಾರೆವರೊಂದಿಗೆ ಸೆಣಸಾಡಿಸಿದರು. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರೂ ಮುಖರ್ಜಿಯವರ ಸಂಘಟನಾ ಕೌಶಲವನ್ನು ಹಾಡಿ ಹೊಗಳಿದರು.

1971ರಲ್ಲಿ 25ನೇ ವಯಸ್ಸಿನಲ್ಲಿಯೇ ಬ್ಯಾಲಿಗುಂಜ್ ಕ್ಷೇತ್ರದಿಂದ ಸ್ಪರ್ಧಿಸಿದ ಬ್ಯಾನರ್ಜಿಯವರು ಪಶ್ಚಿಮ ಬಂಗಾಳ ವಿಧಾನಸಭೆಗೆ ಆಯ್ಕೆಯಾದರು. ಅತ್ಯಂತ ಕಿರಿಯ ಶಾಸಕ ಎಂದೂ ಖ್ಯಾತರಾದರು. 1972ರಲ್ಲಿ ಸಚಿವರಾಗುವ ಮೂಲಕ ಮುಖರ್ಜಿಯವರ ರಾಜಕೀಯ ಜೀವನ ಮತ್ತೊಂದು ಘಟ್ಟವನ್ನು ಮುಟ್ಟಿತು.

ಸಿದ್ಧಾರ್ಥ ಶಂಕರ್‌ ರಾಯ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತ್ತು. ಕ್ಯಾಬಿನೇಟ್‌‌ ಸಚಿವರಾಗುವ ಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲೇ ಸಚಿರಾದ ಹೆಗ್ಗಳಿಕೆಗೆ ಸುಬ್ರತ ಪಾತ್ರರಾದರು. ಮಾಹಿತಿ ಮತ್ತು ಸಂಸ್ಕೃತಿ ಸಚಿವರಾಗಿ ಗಮನ ಸೆಳೆದರು. 1975-77ರ ಕಾಲಘಟ್ಟದಲ್ಲಿ ತುರ್ತುಪರಿಸ್ಥಿತಿ ಜಾರಿಯಾಗಿ ಪತ್ರಿಕಾ ಸ್ವತಂತ್ರವನ್ನು ಕಿತ್ತುಕೊಂಡಾಗ ತನ್ನದೇ ಪಕ್ಷವನ್ನು ಟೀಕಿಸಿದ್ದರು.

1977ರಲ್ಲಿ ಚುನಾವಣೆಯಲ್ಲಿ ಸೋತರೂ ಪಕ್ಷದಲ್ಲಿ ಅವರ ಕ್ಷಿಪ್ರ ಬೆಳವಣಿಗೆಯನ್

ನು ತಡೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ. 1982ರ ಚುನಾವಣೆಯಲ್ಲಿ ಜೋರಬಗನ್ ಕ್ಷೇತ್ರದಿಂದ ಅವರು ಮತ್ತೆ ವಿಧಾನಸಭೆಗೆ ಆಯ್ಕೆಯಾದರು. ತಮ್ಮ ಜೀವನದ ಕೊನೆಯ ದಿನದವರೆಗೂ ಬ್ಯಾಲಿಗುಂಗೆ ಕ್ಷೇತ್ರವನ್ನು ಅವರು ಪ್ರತಿನಿಧಿಸಿದರು.

ಇದನ್ನೂ ಓದಿರಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ರಾಜ್ಯದ ಹಿರಿಯ ರಾಜಕಾರಣಿಗಳ ಪ್ರಕಾರ, ಮುಖರ್ಜಿಯವರು 1970ರ ದಶಕದ ಉತ್ತರಾರ್ಧದಲ್ಲಿ ಮತ್ತು 1960ರ ದಶಕದ ಆರಂಭದಲ್ಲಿ ಛಾತ್ರ ಪರಿಷತ್ತಿನಲ್ಲಿ ಮಮತಾ ಬ್ಯಾನರ್ಜಿಯ ರಾಜಕೀಯ ಮಾರ್ಗದರ್ಶಕರಾಗಿದ್ದರು.

ಮುಖರ್ಜಿ ಅವರು 1984ರ ಸಂಸತ್ತಿನ ಚುನಾವಣೆಯಲ್ಲಿ ಜಾದವ್‌ಪುರ ಲೋಕಸಭಾ ಕ್ಷೇತ್ರದಿಂದ ಆಗಿನ ಸಿಪಿಐ(ಎಂ) ನಾಯಕ ಸೋಮನಾಥ್ ಚಟರ್ಜಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಬ್ಯಾನರ್ಜಿ ಹೆಸರನ್ನು ಪ್ರಸ್ತಾಪಿಸಿದ್ದರು. ಬ್ಯಾನರ್ಜಿಯವರು ಚಟರ್ಜಿಯನ್ನು ಸೋಲಿಸಿ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯಾಗಿ ಹೊಮ್ಮಿದರು.

1999ರಲ್ಲಿ ಹೊಸದಾಗಿ ರೂಪುಗೊಂಡ ಟಿಎಂಸಿಗೆ ಮುಖರ್ಜಿ ಬಂದರು. ಆದರೆ ಅವರು ಚೌರಂಗೀ ಕ್ಷೇತ್ರದಿಂದ ಕಾಂಗ್ರೆಸ್‌ನ ಶಾಸಕರಾಗಿದ್ದರು. 2005ರಲ್ಲಿ, ಬ್ಯಾನರ್ಜಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಅವರು ಟಿಎಂಸಿ ತೊರೆದು ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರು. ಮುಖರ್ಜಿಯವರ ನಿರ್ಗಮನವು ಟಿಎಂಸಿಗೆ ಭಾರೀ ಹೊಡೆತವನ್ನು ನೀಡಿತು. ಇದು 2005ರ ಕೆಎಂಸಿ ಚುನಾವಣೆಯಲ್ಲಿ ಸೋಲಿಗೆ ಕಾರಣವಾಯಿತು. ಮಮತಾ ಬ್ಯಾನರ್ಜಿಯವರು ಮುಖರ್ಜಿಯವರನ್ನು ‘ಕಲ್ಲಂಗಡಿ’ ಎಂದು ಅಡ್ಡ ಹೆಸರು ಇಟ್ಟು ಟೀಕಿಸಿದರು.

ಸಾರ್ವಜನಿಕವಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಮುಖರ್ಜಿಯವರು, ಸಿಪಿಐ(ಎಂ) ಜೊತೆ ಕೈಜೋಡಿಸಿದ್ದರು. ಎಡರಂಗದ ಆಡಳಿತದ ತೀವ್ರ ವಿಮರ್ಶಕರಲ್ಲಿ ಒಬ್ಬರಾಗಿದ್ದರೂ ಮುಖರ್ಜಿ ಅವರು ಆಗಿನ ಮುಖ್ಯಮಂತ್ರಿ ಜ್ಯೋತಿ ಬಸು ಸೇರಿದಂತೆ ಸಿಪಿಐ(ಎಂ) ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು. ನಂತರ ಅವರು 2005ರಲ್ಲಿ ಕಾಂಗ್ರೆಸ್‌ಗೆ ಮರಳಿದರು. 2010ರ ಕೆಎಂಸಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಟಿಎಂಸಿಗೆ ಸೇರಿದರು.

“ಸುಬ್ರತಾ ಮುಖರ್ಜಿ ಅವರು ಸಮರ್ಥ ಸಂಘಟಕರು ಮತ್ತು ನಿರ್ವಾಹಕರು ಮಾತ್ರವಲ್ಲದೆ ತಳಮಟ್ಟದ ಕಾರ್ಯಕರ್ತರೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದರು. ಬಹುಶಃ, ಅವರು ಯಾವಾಗಲೂ ಗೆಲ್ಲುವ ಕಡೆ ಇರಲು ಇದೇ ಕಾರಣವಾಗಿರಬಹುದು” ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಪ್ರದೀಪ್ ಭಟ್ಟಾಚಾರ್ಯ ಹೇಳಿದ್ದಾರೆ.

2011ರಲ್ಲಿ ಮುಖರ್ಜಿಯವರು ಟಿಎಂಸಿ ಅಭ್ಯರ್ಥಿಯಾಗಿ ಬ್ಯಾಲಿಗುಂಗೆ ಕ್ಷೇತ್ರದಿಂದ ಆಯ್ಕೆಯಾದರು. ಅವರಿಗೆ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಉಸ್ತುವಾರಿ ನೀಡಲಾಯಿತು. ಅವರ ಅಧಿಕಾರಾವಧಿಯಲ್ಲಿ, ಪಶ್ಚಿಮ ಬಂಗಾಳವು MGNREGA ಯೋಜನೆಯ ಅನುಷ್ಠಾನದಲ್ಲಿ ಉನ್ನತ-ಕಾರ್ಯನಿರ್ವಹಣೆಯ ರಾಜ್ಯಗಳಲ್ಲಿ ಒಂದಾಗಿ ಪ್ರಶಸ್ತಿಗಳನ್ನು ಗಳಿಸಿತು.

2016ರ ಅಸೆಂಬ್ಲಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ, ಮುಖರ್ಜಿಯವರ ಹೆಸರು ನಾರದ ಸ್ಟಿಂಗ್ ಟೇಪ್ ಪ್ರಕರಣದಲ್ಲಿ ಇತರ ಕೆಲವು ಟಿಎಂಸಿ ನಾಯಕರೊಂದಿಗೆ ಕೇಳಿ ಬಂದಿತು. ತಮ್ಮ ಮೇಲಿನ ಆರೋಪವನ್ನು ಮುಖರ್ಜಿ ನಿರಾಕರಿಸಿದರು. ಈ ಆರೋಪ “ರಾಜಕೀಯ ಪಿತೂರಿ” ಎಂದು ಕರೆದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮೂರು ಭಾರಿ ಸೋಲನ್ನೂ ಸುಬ್ರತ ಮುಖರ್ಜಿ ಕಂಡಿದ್ದರು. ವಾಯುವ್ಯ ಕಲ್ಕತ್ತ ಕ್ಷೇತ್ರದಲ್ಲಿ 2004ರಲ್ಲಿ, ಬಂಕುರ ಕ್ಷೇತ್ರದಲ್ಲಿ 2009 ಮತ್ತು 2019ರಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು.


ಇದನ್ನೂ ಓದಿರಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...