Homeಮುಖಪುಟಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

ಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

25ನೇ ವಯಸ್ಸಿನಲ್ಲಿಯೇ ಕಾಂಗ್ರೆಸ್‌ ಶಾಸಕರಾಗಿದ್ದ ಸುಬ್ರತ ಮುಖರ್ಜಿಯವರು ಪಶ್ಚಿಮ ಬಂಗಾಳದ ನಾಡಿ ಮಿಡಿತವನ್ನು ಬಲ್ಲವರಾಗಿದ್ದರು. ಐದು ದಶಕಗಳ ಕಾಲ ರಾಜಕೀಯ ಜೀವನದಲ್ಲಿದ್ದ ಮುಖರ್ಜಿಯವರು ಮಮತಾ ಬ್ಯಾನರ್ಜಿಯವರ ರಾಜಕೀಯ ಮಾರ್ಗದರ್ಶಿಯೂ ಹೌದು.

- Advertisement -
- Advertisement -

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಟಿಎಂಸಿ ನಾಯಕ, ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಸುಬ್ರತ ಮುಖರ್ಜಿ (75) ಅವರು ಗುರುವಾರ ನಿಧನರಾಗಿದ್ದಾರೆ.

ಮಮತಾ ಬ್ಯಾನರ್ಜಿಯವರು ಕೊಲ್ಕತ್ತದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ವಿಷಯವನ್ನು ತಿಳಿಸಿದ್ದಾರೆ. “ಸುಬ್ರತಾ ಮುಖರ್ಜಿಯವರು ನಮ್ಮೊಂದಿಗೆ ಇನ್ನಿರುವುದಿಲ್ಲ ಎಂಬುದನ್ನು ನಂಬಲೂ ಆಗುತ್ತಿಲ್ಲ. ಪಕ್ಷಕ್ಕಾಗಿ ದುಡಿದ ಮಹಾನ್ ನಾಯಕ. ಇದು ನನಗಾದ ವೈಯಕ್ತಿಕ ನಷ್ಟ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ವಾರ ಐಸಿಯುಗೆ ದಾಖಲಿಸಲಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸುಬ್ರತ ಮುಖರ್ಜಿ

1946ರಲ್ಲಿ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಜನಿಸಿದ ಮುಖರ್ಜಿ ಸುಬ್ರತ ಅವರು ಐವರು ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದರು. ಬಂಗಾಳದ ರಾಜಕೀಯದಲ್ಲಿ ನಿಷ್ಠಾವಂತರಾಗಿದ್ದರು. ಅವರ ರಾಜಕೀಯ ಜೀವನ ವಿದ್ಯಾರ್ಥಿ ದಿಸೆಯಲ್ಲಿಯೇ ಆರಂಭವಾಯಿತು. 1960ರ ದಶಕದಲ್ಲಿ ಆರಂಭವಾಗಿ ಐದು ದಶಕಗಳಿಗೂ ಹೆಚ್ಚು ಕಾಲ ಅವರು ರಾಜಕೀಯದಲ್ಲಿದ್ದರು.

ಇದನ್ನೂ ಓದಿರಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

1967ರಲ್ಲಿ ಬಂಗಬಾಸಿ ಕಾಲೇಜಿನ ವಿದ್ಯಾರ್ಥಿ ನಾಯಕರಾಗಿ ರಾಜಕೀಯಕ್ಕೆ ಕಾಲಿಟ್ಟರು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖರ್ಜಿ ಅವರು ತಮ್ಮ ಸಂಘಟನಾ ಕೌಶಲ ಮತ್ತು ಪ್ರಖರ ಭಾಷಣಗಳಿಂದ ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರಾಗಿ ಹೊಮ್ಮಿದರು. ಕೇಂದ್ರ ಸಚಿವರಾಗಿದ್ದ ಪ್ರಿಯಾ ರಂಜನ್ ದಾಸ್ಮುನ್ಸಿ ಮತ್ತು ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋಮೆನ್ ಮಿತ್ರ ಅವರೊಂದಿಗೆ ಮುಖರ್ಜಿಯವರ ಹೆಸರು ಪ್ರವರ್ಧಮಾನಕ್ಕೆ ಬಂತು. ದಾಸ್ಮುನ್ಸಿ ಮತ್ತು ಮಿತ್ರಾ ಕ್ರಮವಾಗಿ 2017 ಮತ್ತು 2020ರಲ್ಲಿ ನಿಧನರಾಗಿದ್ದಾರೆ.

ದಾಸ್ಮುನ್ಸಿ ಅವರೊಂದಿಗೆ ಪಕ್ಷವನ್ನು ಕಟ್ಟಿದ ಮುಖರ್ಜಿಯವರು ಪಶ್ಚಿಮ ಬಂಗಾಳದ ಆಳ ಅಗಲವನ್ನು ಅರಿತವರಾಗಿದ್ದರು. ಸೈದ್ಧಾಂತಿಕ ವಿರೋಧಿಗಳಾಗಿದ್ದ ನಕ್ಸಲ್‌ ಹಾಗೂ ಎಡಪಂಥೀಯ  ವಿಚಾರಧಾರೆವರೊಂದಿಗೆ ಸೆಣಸಾಡಿಸಿದರು. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರೂ ಮುಖರ್ಜಿಯವರ ಸಂಘಟನಾ ಕೌಶಲವನ್ನು ಹಾಡಿ ಹೊಗಳಿದರು.

1971ರಲ್ಲಿ 25ನೇ ವಯಸ್ಸಿನಲ್ಲಿಯೇ ಬ್ಯಾಲಿಗುಂಜ್ ಕ್ಷೇತ್ರದಿಂದ ಸ್ಪರ್ಧಿಸಿದ ಬ್ಯಾನರ್ಜಿಯವರು ಪಶ್ಚಿಮ ಬಂಗಾಳ ವಿಧಾನಸಭೆಗೆ ಆಯ್ಕೆಯಾದರು. ಅತ್ಯಂತ ಕಿರಿಯ ಶಾಸಕ ಎಂದೂ ಖ್ಯಾತರಾದರು. 1972ರಲ್ಲಿ ಸಚಿವರಾಗುವ ಮೂಲಕ ಮುಖರ್ಜಿಯವರ ರಾಜಕೀಯ ಜೀವನ ಮತ್ತೊಂದು ಘಟ್ಟವನ್ನು ಮುಟ್ಟಿತು.

ಸಿದ್ಧಾರ್ಥ ಶಂಕರ್‌ ರಾಯ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತ್ತು. ಕ್ಯಾಬಿನೇಟ್‌‌ ಸಚಿವರಾಗುವ ಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲೇ ಸಚಿರಾದ ಹೆಗ್ಗಳಿಕೆಗೆ ಸುಬ್ರತ ಪಾತ್ರರಾದರು. ಮಾಹಿತಿ ಮತ್ತು ಸಂಸ್ಕೃತಿ ಸಚಿವರಾಗಿ ಗಮನ ಸೆಳೆದರು. 1975-77ರ ಕಾಲಘಟ್ಟದಲ್ಲಿ ತುರ್ತುಪರಿಸ್ಥಿತಿ ಜಾರಿಯಾಗಿ ಪತ್ರಿಕಾ ಸ್ವತಂತ್ರವನ್ನು ಕಿತ್ತುಕೊಂಡಾಗ ತನ್ನದೇ ಪಕ್ಷವನ್ನು ಟೀಕಿಸಿದ್ದರು.

1977ರಲ್ಲಿ ಚುನಾವಣೆಯಲ್ಲಿ ಸೋತರೂ ಪಕ್ಷದಲ್ಲಿ ಅವರ ಕ್ಷಿಪ್ರ ಬೆಳವಣಿಗೆಯನ್

ನು ತಡೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ. 1982ರ ಚುನಾವಣೆಯಲ್ಲಿ ಜೋರಬಗನ್ ಕ್ಷೇತ್ರದಿಂದ ಅವರು ಮತ್ತೆ ವಿಧಾನಸಭೆಗೆ ಆಯ್ಕೆಯಾದರು. ತಮ್ಮ ಜೀವನದ ಕೊನೆಯ ದಿನದವರೆಗೂ ಬ್ಯಾಲಿಗುಂಗೆ ಕ್ಷೇತ್ರವನ್ನು ಅವರು ಪ್ರತಿನಿಧಿಸಿದರು.

ಇದನ್ನೂ ಓದಿರಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ರಾಜ್ಯದ ಹಿರಿಯ ರಾಜಕಾರಣಿಗಳ ಪ್ರಕಾರ, ಮುಖರ್ಜಿಯವರು 1970ರ ದಶಕದ ಉತ್ತರಾರ್ಧದಲ್ಲಿ ಮತ್ತು 1960ರ ದಶಕದ ಆರಂಭದಲ್ಲಿ ಛಾತ್ರ ಪರಿಷತ್ತಿನಲ್ಲಿ ಮಮತಾ ಬ್ಯಾನರ್ಜಿಯ ರಾಜಕೀಯ ಮಾರ್ಗದರ್ಶಕರಾಗಿದ್ದರು.

ಮುಖರ್ಜಿ ಅವರು 1984ರ ಸಂಸತ್ತಿನ ಚುನಾವಣೆಯಲ್ಲಿ ಜಾದವ್‌ಪುರ ಲೋಕಸಭಾ ಕ್ಷೇತ್ರದಿಂದ ಆಗಿನ ಸಿಪಿಐ(ಎಂ) ನಾಯಕ ಸೋಮನಾಥ್ ಚಟರ್ಜಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಬ್ಯಾನರ್ಜಿ ಹೆಸರನ್ನು ಪ್ರಸ್ತಾಪಿಸಿದ್ದರು. ಬ್ಯಾನರ್ಜಿಯವರು ಚಟರ್ಜಿಯನ್ನು ಸೋಲಿಸಿ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯಾಗಿ ಹೊಮ್ಮಿದರು.

1999ರಲ್ಲಿ ಹೊಸದಾಗಿ ರೂಪುಗೊಂಡ ಟಿಎಂಸಿಗೆ ಮುಖರ್ಜಿ ಬಂದರು. ಆದರೆ ಅವರು ಚೌರಂಗೀ ಕ್ಷೇತ್ರದಿಂದ ಕಾಂಗ್ರೆಸ್‌ನ ಶಾಸಕರಾಗಿದ್ದರು. 2005ರಲ್ಲಿ, ಬ್ಯಾನರ್ಜಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಅವರು ಟಿಎಂಸಿ ತೊರೆದು ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರು. ಮುಖರ್ಜಿಯವರ ನಿರ್ಗಮನವು ಟಿಎಂಸಿಗೆ ಭಾರೀ ಹೊಡೆತವನ್ನು ನೀಡಿತು. ಇದು 2005ರ ಕೆಎಂಸಿ ಚುನಾವಣೆಯಲ್ಲಿ ಸೋಲಿಗೆ ಕಾರಣವಾಯಿತು. ಮಮತಾ ಬ್ಯಾನರ್ಜಿಯವರು ಮುಖರ್ಜಿಯವರನ್ನು ‘ಕಲ್ಲಂಗಡಿ’ ಎಂದು ಅಡ್ಡ ಹೆಸರು ಇಟ್ಟು ಟೀಕಿಸಿದರು.

ಸಾರ್ವಜನಿಕವಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಮುಖರ್ಜಿಯವರು, ಸಿಪಿಐ(ಎಂ) ಜೊತೆ ಕೈಜೋಡಿಸಿದ್ದರು. ಎಡರಂಗದ ಆಡಳಿತದ ತೀವ್ರ ವಿಮರ್ಶಕರಲ್ಲಿ ಒಬ್ಬರಾಗಿದ್ದರೂ ಮುಖರ್ಜಿ ಅವರು ಆಗಿನ ಮುಖ್ಯಮಂತ್ರಿ ಜ್ಯೋತಿ ಬಸು ಸೇರಿದಂತೆ ಸಿಪಿಐ(ಎಂ) ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು. ನಂತರ ಅವರು 2005ರಲ್ಲಿ ಕಾಂಗ್ರೆಸ್‌ಗೆ ಮರಳಿದರು. 2010ರ ಕೆಎಂಸಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಟಿಎಂಸಿಗೆ ಸೇರಿದರು.

“ಸುಬ್ರತಾ ಮುಖರ್ಜಿ ಅವರು ಸಮರ್ಥ ಸಂಘಟಕರು ಮತ್ತು ನಿರ್ವಾಹಕರು ಮಾತ್ರವಲ್ಲದೆ ತಳಮಟ್ಟದ ಕಾರ್ಯಕರ್ತರೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದರು. ಬಹುಶಃ, ಅವರು ಯಾವಾಗಲೂ ಗೆಲ್ಲುವ ಕಡೆ ಇರಲು ಇದೇ ಕಾರಣವಾಗಿರಬಹುದು” ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಪ್ರದೀಪ್ ಭಟ್ಟಾಚಾರ್ಯ ಹೇಳಿದ್ದಾರೆ.

2011ರಲ್ಲಿ ಮುಖರ್ಜಿಯವರು ಟಿಎಂಸಿ ಅಭ್ಯರ್ಥಿಯಾಗಿ ಬ್ಯಾಲಿಗುಂಗೆ ಕ್ಷೇತ್ರದಿಂದ ಆಯ್ಕೆಯಾದರು. ಅವರಿಗೆ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಉಸ್ತುವಾರಿ ನೀಡಲಾಯಿತು. ಅವರ ಅಧಿಕಾರಾವಧಿಯಲ್ಲಿ, ಪಶ್ಚಿಮ ಬಂಗಾಳವು MGNREGA ಯೋಜನೆಯ ಅನುಷ್ಠಾನದಲ್ಲಿ ಉನ್ನತ-ಕಾರ್ಯನಿರ್ವಹಣೆಯ ರಾಜ್ಯಗಳಲ್ಲಿ ಒಂದಾಗಿ ಪ್ರಶಸ್ತಿಗಳನ್ನು ಗಳಿಸಿತು.

2016ರ ಅಸೆಂಬ್ಲಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ, ಮುಖರ್ಜಿಯವರ ಹೆಸರು ನಾರದ ಸ್ಟಿಂಗ್ ಟೇಪ್ ಪ್ರಕರಣದಲ್ಲಿ ಇತರ ಕೆಲವು ಟಿಎಂಸಿ ನಾಯಕರೊಂದಿಗೆ ಕೇಳಿ ಬಂದಿತು. ತಮ್ಮ ಮೇಲಿನ ಆರೋಪವನ್ನು ಮುಖರ್ಜಿ ನಿರಾಕರಿಸಿದರು. ಈ ಆರೋಪ “ರಾಜಕೀಯ ಪಿತೂರಿ” ಎಂದು ಕರೆದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮೂರು ಭಾರಿ ಸೋಲನ್ನೂ ಸುಬ್ರತ ಮುಖರ್ಜಿ ಕಂಡಿದ್ದರು. ವಾಯುವ್ಯ ಕಲ್ಕತ್ತ ಕ್ಷೇತ್ರದಲ್ಲಿ 2004ರಲ್ಲಿ, ಬಂಕುರ ಕ್ಷೇತ್ರದಲ್ಲಿ 2009 ಮತ್ತು 2019ರಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು.


ಇದನ್ನೂ ಓದಿರಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...