Homeಮುಖಪುಟಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

ಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

25ನೇ ವಯಸ್ಸಿನಲ್ಲಿಯೇ ಕಾಂಗ್ರೆಸ್‌ ಶಾಸಕರಾಗಿದ್ದ ಸುಬ್ರತ ಮುಖರ್ಜಿಯವರು ಪಶ್ಚಿಮ ಬಂಗಾಳದ ನಾಡಿ ಮಿಡಿತವನ್ನು ಬಲ್ಲವರಾಗಿದ್ದರು. ಐದು ದಶಕಗಳ ಕಾಲ ರಾಜಕೀಯ ಜೀವನದಲ್ಲಿದ್ದ ಮುಖರ್ಜಿಯವರು ಮಮತಾ ಬ್ಯಾನರ್ಜಿಯವರ ರಾಜಕೀಯ ಮಾರ್ಗದರ್ಶಿಯೂ ಹೌದು.

- Advertisement -
- Advertisement -

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಟಿಎಂಸಿ ನಾಯಕ, ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಸುಬ್ರತ ಮುಖರ್ಜಿ (75) ಅವರು ಗುರುವಾರ ನಿಧನರಾಗಿದ್ದಾರೆ.

ಮಮತಾ ಬ್ಯಾನರ್ಜಿಯವರು ಕೊಲ್ಕತ್ತದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ವಿಷಯವನ್ನು ತಿಳಿಸಿದ್ದಾರೆ. “ಸುಬ್ರತಾ ಮುಖರ್ಜಿಯವರು ನಮ್ಮೊಂದಿಗೆ ಇನ್ನಿರುವುದಿಲ್ಲ ಎಂಬುದನ್ನು ನಂಬಲೂ ಆಗುತ್ತಿಲ್ಲ. ಪಕ್ಷಕ್ಕಾಗಿ ದುಡಿದ ಮಹಾನ್ ನಾಯಕ. ಇದು ನನಗಾದ ವೈಯಕ್ತಿಕ ನಷ್ಟ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ವಾರ ಐಸಿಯುಗೆ ದಾಖಲಿಸಲಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸುಬ್ರತ ಮುಖರ್ಜಿ

1946ರಲ್ಲಿ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಜನಿಸಿದ ಮುಖರ್ಜಿ ಸುಬ್ರತ ಅವರು ಐವರು ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದರು. ಬಂಗಾಳದ ರಾಜಕೀಯದಲ್ಲಿ ನಿಷ್ಠಾವಂತರಾಗಿದ್ದರು. ಅವರ ರಾಜಕೀಯ ಜೀವನ ವಿದ್ಯಾರ್ಥಿ ದಿಸೆಯಲ್ಲಿಯೇ ಆರಂಭವಾಯಿತು. 1960ರ ದಶಕದಲ್ಲಿ ಆರಂಭವಾಗಿ ಐದು ದಶಕಗಳಿಗೂ ಹೆಚ್ಚು ಕಾಲ ಅವರು ರಾಜಕೀಯದಲ್ಲಿದ್ದರು.

ಇದನ್ನೂ ಓದಿರಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

1967ರಲ್ಲಿ ಬಂಗಬಾಸಿ ಕಾಲೇಜಿನ ವಿದ್ಯಾರ್ಥಿ ನಾಯಕರಾಗಿ ರಾಜಕೀಯಕ್ಕೆ ಕಾಲಿಟ್ಟರು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖರ್ಜಿ ಅವರು ತಮ್ಮ ಸಂಘಟನಾ ಕೌಶಲ ಮತ್ತು ಪ್ರಖರ ಭಾಷಣಗಳಿಂದ ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರಾಗಿ ಹೊಮ್ಮಿದರು. ಕೇಂದ್ರ ಸಚಿವರಾಗಿದ್ದ ಪ್ರಿಯಾ ರಂಜನ್ ದಾಸ್ಮುನ್ಸಿ ಮತ್ತು ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋಮೆನ್ ಮಿತ್ರ ಅವರೊಂದಿಗೆ ಮುಖರ್ಜಿಯವರ ಹೆಸರು ಪ್ರವರ್ಧಮಾನಕ್ಕೆ ಬಂತು. ದಾಸ್ಮುನ್ಸಿ ಮತ್ತು ಮಿತ್ರಾ ಕ್ರಮವಾಗಿ 2017 ಮತ್ತು 2020ರಲ್ಲಿ ನಿಧನರಾಗಿದ್ದಾರೆ.

ದಾಸ್ಮುನ್ಸಿ ಅವರೊಂದಿಗೆ ಪಕ್ಷವನ್ನು ಕಟ್ಟಿದ ಮುಖರ್ಜಿಯವರು ಪಶ್ಚಿಮ ಬಂಗಾಳದ ಆಳ ಅಗಲವನ್ನು ಅರಿತವರಾಗಿದ್ದರು. ಸೈದ್ಧಾಂತಿಕ ವಿರೋಧಿಗಳಾಗಿದ್ದ ನಕ್ಸಲ್‌ ಹಾಗೂ ಎಡಪಂಥೀಯ  ವಿಚಾರಧಾರೆವರೊಂದಿಗೆ ಸೆಣಸಾಡಿಸಿದರು. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರೂ ಮುಖರ್ಜಿಯವರ ಸಂಘಟನಾ ಕೌಶಲವನ್ನು ಹಾಡಿ ಹೊಗಳಿದರು.

1971ರಲ್ಲಿ 25ನೇ ವಯಸ್ಸಿನಲ್ಲಿಯೇ ಬ್ಯಾಲಿಗುಂಜ್ ಕ್ಷೇತ್ರದಿಂದ ಸ್ಪರ್ಧಿಸಿದ ಬ್ಯಾನರ್ಜಿಯವರು ಪಶ್ಚಿಮ ಬಂಗಾಳ ವಿಧಾನಸಭೆಗೆ ಆಯ್ಕೆಯಾದರು. ಅತ್ಯಂತ ಕಿರಿಯ ಶಾಸಕ ಎಂದೂ ಖ್ಯಾತರಾದರು. 1972ರಲ್ಲಿ ಸಚಿವರಾಗುವ ಮೂಲಕ ಮುಖರ್ಜಿಯವರ ರಾಜಕೀಯ ಜೀವನ ಮತ್ತೊಂದು ಘಟ್ಟವನ್ನು ಮುಟ್ಟಿತು.

ಸಿದ್ಧಾರ್ಥ ಶಂಕರ್‌ ರಾಯ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತ್ತು. ಕ್ಯಾಬಿನೇಟ್‌‌ ಸಚಿವರಾಗುವ ಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲೇ ಸಚಿರಾದ ಹೆಗ್ಗಳಿಕೆಗೆ ಸುಬ್ರತ ಪಾತ್ರರಾದರು. ಮಾಹಿತಿ ಮತ್ತು ಸಂಸ್ಕೃತಿ ಸಚಿವರಾಗಿ ಗಮನ ಸೆಳೆದರು. 1975-77ರ ಕಾಲಘಟ್ಟದಲ್ಲಿ ತುರ್ತುಪರಿಸ್ಥಿತಿ ಜಾರಿಯಾಗಿ ಪತ್ರಿಕಾ ಸ್ವತಂತ್ರವನ್ನು ಕಿತ್ತುಕೊಂಡಾಗ ತನ್ನದೇ ಪಕ್ಷವನ್ನು ಟೀಕಿಸಿದ್ದರು.

1977ರಲ್ಲಿ ಚುನಾವಣೆಯಲ್ಲಿ ಸೋತರೂ ಪಕ್ಷದಲ್ಲಿ ಅವರ ಕ್ಷಿಪ್ರ ಬೆಳವಣಿಗೆಯನ್

ನು ತಡೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ. 1982ರ ಚುನಾವಣೆಯಲ್ಲಿ ಜೋರಬಗನ್ ಕ್ಷೇತ್ರದಿಂದ ಅವರು ಮತ್ತೆ ವಿಧಾನಸಭೆಗೆ ಆಯ್ಕೆಯಾದರು. ತಮ್ಮ ಜೀವನದ ಕೊನೆಯ ದಿನದವರೆಗೂ ಬ್ಯಾಲಿಗುಂಗೆ ಕ್ಷೇತ್ರವನ್ನು ಅವರು ಪ್ರತಿನಿಧಿಸಿದರು.

ಇದನ್ನೂ ಓದಿರಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ರಾಜ್ಯದ ಹಿರಿಯ ರಾಜಕಾರಣಿಗಳ ಪ್ರಕಾರ, ಮುಖರ್ಜಿಯವರು 1970ರ ದಶಕದ ಉತ್ತರಾರ್ಧದಲ್ಲಿ ಮತ್ತು 1960ರ ದಶಕದ ಆರಂಭದಲ್ಲಿ ಛಾತ್ರ ಪರಿಷತ್ತಿನಲ್ಲಿ ಮಮತಾ ಬ್ಯಾನರ್ಜಿಯ ರಾಜಕೀಯ ಮಾರ್ಗದರ್ಶಕರಾಗಿದ್ದರು.

ಮುಖರ್ಜಿ ಅವರು 1984ರ ಸಂಸತ್ತಿನ ಚುನಾವಣೆಯಲ್ಲಿ ಜಾದವ್‌ಪುರ ಲೋಕಸಭಾ ಕ್ಷೇತ್ರದಿಂದ ಆಗಿನ ಸಿಪಿಐ(ಎಂ) ನಾಯಕ ಸೋಮನಾಥ್ ಚಟರ್ಜಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಬ್ಯಾನರ್ಜಿ ಹೆಸರನ್ನು ಪ್ರಸ್ತಾಪಿಸಿದ್ದರು. ಬ್ಯಾನರ್ಜಿಯವರು ಚಟರ್ಜಿಯನ್ನು ಸೋಲಿಸಿ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯಾಗಿ ಹೊಮ್ಮಿದರು.

1999ರಲ್ಲಿ ಹೊಸದಾಗಿ ರೂಪುಗೊಂಡ ಟಿಎಂಸಿಗೆ ಮುಖರ್ಜಿ ಬಂದರು. ಆದರೆ ಅವರು ಚೌರಂಗೀ ಕ್ಷೇತ್ರದಿಂದ ಕಾಂಗ್ರೆಸ್‌ನ ಶಾಸಕರಾಗಿದ್ದರು. 2005ರಲ್ಲಿ, ಬ್ಯಾನರ್ಜಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಅವರು ಟಿಎಂಸಿ ತೊರೆದು ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರು. ಮುಖರ್ಜಿಯವರ ನಿರ್ಗಮನವು ಟಿಎಂಸಿಗೆ ಭಾರೀ ಹೊಡೆತವನ್ನು ನೀಡಿತು. ಇದು 2005ರ ಕೆಎಂಸಿ ಚುನಾವಣೆಯಲ್ಲಿ ಸೋಲಿಗೆ ಕಾರಣವಾಯಿತು. ಮಮತಾ ಬ್ಯಾನರ್ಜಿಯವರು ಮುಖರ್ಜಿಯವರನ್ನು ‘ಕಲ್ಲಂಗಡಿ’ ಎಂದು ಅಡ್ಡ ಹೆಸರು ಇಟ್ಟು ಟೀಕಿಸಿದರು.

ಸಾರ್ವಜನಿಕವಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಮುಖರ್ಜಿಯವರು, ಸಿಪಿಐ(ಎಂ) ಜೊತೆ ಕೈಜೋಡಿಸಿದ್ದರು. ಎಡರಂಗದ ಆಡಳಿತದ ತೀವ್ರ ವಿಮರ್ಶಕರಲ್ಲಿ ಒಬ್ಬರಾಗಿದ್ದರೂ ಮುಖರ್ಜಿ ಅವರು ಆಗಿನ ಮುಖ್ಯಮಂತ್ರಿ ಜ್ಯೋತಿ ಬಸು ಸೇರಿದಂತೆ ಸಿಪಿಐ(ಎಂ) ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು. ನಂತರ ಅವರು 2005ರಲ್ಲಿ ಕಾಂಗ್ರೆಸ್‌ಗೆ ಮರಳಿದರು. 2010ರ ಕೆಎಂಸಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಟಿಎಂಸಿಗೆ ಸೇರಿದರು.

“ಸುಬ್ರತಾ ಮುಖರ್ಜಿ ಅವರು ಸಮರ್ಥ ಸಂಘಟಕರು ಮತ್ತು ನಿರ್ವಾಹಕರು ಮಾತ್ರವಲ್ಲದೆ ತಳಮಟ್ಟದ ಕಾರ್ಯಕರ್ತರೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದರು. ಬಹುಶಃ, ಅವರು ಯಾವಾಗಲೂ ಗೆಲ್ಲುವ ಕಡೆ ಇರಲು ಇದೇ ಕಾರಣವಾಗಿರಬಹುದು” ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಪ್ರದೀಪ್ ಭಟ್ಟಾಚಾರ್ಯ ಹೇಳಿದ್ದಾರೆ.

2011ರಲ್ಲಿ ಮುಖರ್ಜಿಯವರು ಟಿಎಂಸಿ ಅಭ್ಯರ್ಥಿಯಾಗಿ ಬ್ಯಾಲಿಗುಂಗೆ ಕ್ಷೇತ್ರದಿಂದ ಆಯ್ಕೆಯಾದರು. ಅವರಿಗೆ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಉಸ್ತುವಾರಿ ನೀಡಲಾಯಿತು. ಅವರ ಅಧಿಕಾರಾವಧಿಯಲ್ಲಿ, ಪಶ್ಚಿಮ ಬಂಗಾಳವು MGNREGA ಯೋಜನೆಯ ಅನುಷ್ಠಾನದಲ್ಲಿ ಉನ್ನತ-ಕಾರ್ಯನಿರ್ವಹಣೆಯ ರಾಜ್ಯಗಳಲ್ಲಿ ಒಂದಾಗಿ ಪ್ರಶಸ್ತಿಗಳನ್ನು ಗಳಿಸಿತು.

2016ರ ಅಸೆಂಬ್ಲಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ, ಮುಖರ್ಜಿಯವರ ಹೆಸರು ನಾರದ ಸ್ಟಿಂಗ್ ಟೇಪ್ ಪ್ರಕರಣದಲ್ಲಿ ಇತರ ಕೆಲವು ಟಿಎಂಸಿ ನಾಯಕರೊಂದಿಗೆ ಕೇಳಿ ಬಂದಿತು. ತಮ್ಮ ಮೇಲಿನ ಆರೋಪವನ್ನು ಮುಖರ್ಜಿ ನಿರಾಕರಿಸಿದರು. ಈ ಆರೋಪ “ರಾಜಕೀಯ ಪಿತೂರಿ” ಎಂದು ಕರೆದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮೂರು ಭಾರಿ ಸೋಲನ್ನೂ ಸುಬ್ರತ ಮುಖರ್ಜಿ ಕಂಡಿದ್ದರು. ವಾಯುವ್ಯ ಕಲ್ಕತ್ತ ಕ್ಷೇತ್ರದಲ್ಲಿ 2004ರಲ್ಲಿ, ಬಂಕುರ ಕ್ಷೇತ್ರದಲ್ಲಿ 2009 ಮತ್ತು 2019ರಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು.


ಇದನ್ನೂ ಓದಿರಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...