Homeಮುಖಪುಟಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ - ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ ಸುವೇಂದು ಅಧಿಕಾರಿಯವರ ಭದ್ರಕೋಟೆಯಾಗಿದ್ದ ಕಂಠಿ ಪುರಸಭೆಯನ್ನು ಟಿಎಂಸಿ ಗೆದ್ದುಕೊಂಡಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆದ ನಗರ ಸ್ಥಳೀಯ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಚುನಾವಣೆ ನಡೆದ 107 ಪುರಸಭೆಗಳ ಪೈಕಿ 103 ಪುರಸಭೆಗಳನ್ನು ಟಿಎಂಸಿ ಗೆದ್ದುಕೊಂಡಿದೆ. ಈ ಮೂಲಕ ವಿಪಕ್ಷಗಳಿಗೆ ಮಣ್ಣು ಮುಕ್ಕಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ ಸುವೇಂದು ಅಧಿಕಾರಿಯವರ ಭದ್ರಕೋಟೆಯಾಗಿದ್ದ ಕಂಠಿ ಪುರಸಭೆಯನ್ನು ಟಿಎಂಸಿ ಗೆದ್ದುಕೊಂಡಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಇದೆಲ್ಲದರ ನಡುವೆ, ಇತ್ತೀಚೆಗಷ್ಟೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಪಕ್ಷವು ಡಾರ್ಜಿಲಿಂಗ್ ಪುರಸಭೆಯನ್ನು ಗೆದ್ದುಕೊಂಡಿದ್ದು, ಅಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಮಣಿಸಿದೆ. ಡಾರ್ಜಿಲಿಂಗ್ ಮುನ್ಸಿಪಾಲಿಟಿಯ ಒಟ್ಟು 32 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಜಿಜೆಎಂ ಗೆದ್ದುಕೊಂಡು ಅಧಿಕಾರ ಹಿಡಿದಿದೆ.

ಕೆಲವು ಪಟ್ಟಣಗಳಲ್ಲಿ ಕೆಲವು ವಾರ್ಡ್‌ಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ಗೆದ್ದಿದ್ದರೂ ಯಾವುದೇ ಪುರಸಭೆಯಲ್ಲಿ ಅಧಿಕಾರ ಹಿಡಿಯುವಷ್ಟ ಸ್ಥಾನಗಳನ್ನು ಗೆಲ್ಲಲಾಗಿಲ್ಲ.

ಸಿಪಿಐ (ಎಂ) ನೇತೃತ್ವದ ಎಡರಂಗವು ನಾಡಿಯಾ ಜಿಲ್ಲೆಯ ತಾಹೆರ್ಪುರ ಪುರಸಭೆಯಲ್ಲಿ ಗೆಲುವು ಸಾಧಿಸಿದೆ. ಅದು 27 ಪುರಸಭೆಗಳಲ್ಲಿ ಟಿಎಂಸಿ ಎಲ್ಲಾ ವಾರ್ಡ್‌ಗಳನ್ನು ಗೆದ್ದುಕೊಂಡಿದ್ದು, ಆ ಪುರಸಭೆಗಳಲ್ಲಿ ಪ್ರತಿಪಕ್ಷವೇ ಇಲ್ಲದಂತಾಗಿದೆ.

ಮುರ್ಷಿದಾಬಾದ್‌ನ ಬೆಲ್ದಂಗಾ, ಪುರುಲಿಯಾದಲ್ಲಿ ಝಲ್ಡಾ, ಹೂಗ್ಲಿಯ ಚಂಪ್ದಾನಿ ಪುರಸಭೆಗಳಲ್ಲಿ ಯಾವುದೇ ಪಕ್ಷವು ಸ್ಪಷ್ಟ ಬಹುಮತವನ್ನು ಗಳಿಸಲು ಸಾಧ್ಯವಾಗಿಲ್ಲ. ಈ ಪುರಸಭೆಗಳಲ್ಲಿ ಅತ್ರಂತ್ರ ಸ್ಥಿತಿ ನಿರ್ಮಾಣವಾಗಿದೆ. ಸ್ವತಂತ್ರ ಅಭ್ಯರ್ಥಿಗಳು ಈ ಪುರಸಭೆಗಳಲ್ಲಿ ಅಡಳಿತ ರಚಿಸುವ ಪಕ್ಷಗಳಿಗೆ ಕೀಲಿ ಕೈ ಆಗಲಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಸುವೇಂಧು ಅಧಿಕಾರಿ ಕುಟುಂಬದ ತೆಕ್ಕೆಯಲ್ಲಿದ್ದ ಕಂಠಿ ಪುರಸಭೆಯನ್ನು ಟಿಎಂಸಿ ಕಿತ್ತುಕೊಂಡಿದೆ. ಈ ಪುರಸಭೆಯಲ್ಲಿ ಸುವೇಂದು ಅಧಿಕಾರಿ ಅವರ ತಂದೆ ಸಿಸಿರ್ ಅಧಿಕಾರಿ ಅವರು 1981-86 ರಿಂದ ಐದು ವರ್ಷಗಳನ್ನು ಹೊರತುಪಡಿಸಿ, 1971- 2009 ರವರೆಗೆ 25 ವರ್ಷಗಳ ಕಾಲ ಪುರಸಭೆಯ ಅಧ್ಯಕ್ಷರಾಗಿದ್ದರು. ನಂತರ, ಅವರು ಸಂಸದರಾಗಿ ಆಯ್ಕೆಯಾದರು. ಬಳಿಕ, ಕಂಠಿ ಪುರಸಭೆಯ ಅಧಿಕಾರ ಸಿಶಿರ್ ಅವರ ಕಿರಿಯ ಪುತ್ರ ದಿಬ್ಯೇಂದು ಅಧಿಕಾರಿ ವಹಿಸಿಕೊಂಡಿದ್ದರು. ಆ ನಂತರ, 2016 ರಲ್ಲಿ ಸಿಶಿರ್ ಅವರ ಮೂರನೇ ಮಗ ಸೌಮೇಂದು ಅಧಿಕಾರಿ ಅವರು ಕಂಠಿ ಪುರಸಭೆಯ ಅಧ್ಯಕ್ಷರಾಗಿದ್ದರು. ಇದೀಗ, ಸುವೇಂದು ಅಧಿಕಾರಿ ಕುಟುಂಬದ ಭದ್ರಕೋಟಿಯನ್ನು ಟಿಎಂಸಿ ಬೇಧಿಸಿದೆ.

ಉಳಿದಂತೆ, ಕೂಚ್ಬೆಹಾರ್ ಜಿಲ್ಲೆಯ ದಿನ್ಹತಾ ಪುರಸಭೆಯನ್ನು ಟಿಎಂಸಿ ಅವಿರೋಧವಾಗಿ ಗೆದ್ದುಕೊಂಡಿದೆ. ಇಲ್ಲಿ ಮತದಾನ ನಡೆದಿಲ್ಲ.


ಇದನ್ನೂ ಓದಿ; ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...