Homeಮುಖಪುಟಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ - ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ ಸುವೇಂದು ಅಧಿಕಾರಿಯವರ ಭದ್ರಕೋಟೆಯಾಗಿದ್ದ ಕಂಠಿ ಪುರಸಭೆಯನ್ನು ಟಿಎಂಸಿ ಗೆದ್ದುಕೊಂಡಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆದ ನಗರ ಸ್ಥಳೀಯ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಚುನಾವಣೆ ನಡೆದ 107 ಪುರಸಭೆಗಳ ಪೈಕಿ 103 ಪುರಸಭೆಗಳನ್ನು ಟಿಎಂಸಿ ಗೆದ್ದುಕೊಂಡಿದೆ. ಈ ಮೂಲಕ ವಿಪಕ್ಷಗಳಿಗೆ ಮಣ್ಣು ಮುಕ್ಕಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ ಸುವೇಂದು ಅಧಿಕಾರಿಯವರ ಭದ್ರಕೋಟೆಯಾಗಿದ್ದ ಕಂಠಿ ಪುರಸಭೆಯನ್ನು ಟಿಎಂಸಿ ಗೆದ್ದುಕೊಂಡಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಇದೆಲ್ಲದರ ನಡುವೆ, ಇತ್ತೀಚೆಗಷ್ಟೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಪಕ್ಷವು ಡಾರ್ಜಿಲಿಂಗ್ ಪುರಸಭೆಯನ್ನು ಗೆದ್ದುಕೊಂಡಿದ್ದು, ಅಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಮಣಿಸಿದೆ. ಡಾರ್ಜಿಲಿಂಗ್ ಮುನ್ಸಿಪಾಲಿಟಿಯ ಒಟ್ಟು 32 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಜಿಜೆಎಂ ಗೆದ್ದುಕೊಂಡು ಅಧಿಕಾರ ಹಿಡಿದಿದೆ.

ಕೆಲವು ಪಟ್ಟಣಗಳಲ್ಲಿ ಕೆಲವು ವಾರ್ಡ್‌ಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ಗೆದ್ದಿದ್ದರೂ ಯಾವುದೇ ಪುರಸಭೆಯಲ್ಲಿ ಅಧಿಕಾರ ಹಿಡಿಯುವಷ್ಟ ಸ್ಥಾನಗಳನ್ನು ಗೆಲ್ಲಲಾಗಿಲ್ಲ.

ಸಿಪಿಐ (ಎಂ) ನೇತೃತ್ವದ ಎಡರಂಗವು ನಾಡಿಯಾ ಜಿಲ್ಲೆಯ ತಾಹೆರ್ಪುರ ಪುರಸಭೆಯಲ್ಲಿ ಗೆಲುವು ಸಾಧಿಸಿದೆ. ಅದು 27 ಪುರಸಭೆಗಳಲ್ಲಿ ಟಿಎಂಸಿ ಎಲ್ಲಾ ವಾರ್ಡ್‌ಗಳನ್ನು ಗೆದ್ದುಕೊಂಡಿದ್ದು, ಆ ಪುರಸಭೆಗಳಲ್ಲಿ ಪ್ರತಿಪಕ್ಷವೇ ಇಲ್ಲದಂತಾಗಿದೆ.

ಮುರ್ಷಿದಾಬಾದ್‌ನ ಬೆಲ್ದಂಗಾ, ಪುರುಲಿಯಾದಲ್ಲಿ ಝಲ್ಡಾ, ಹೂಗ್ಲಿಯ ಚಂಪ್ದಾನಿ ಪುರಸಭೆಗಳಲ್ಲಿ ಯಾವುದೇ ಪಕ್ಷವು ಸ್ಪಷ್ಟ ಬಹುಮತವನ್ನು ಗಳಿಸಲು ಸಾಧ್ಯವಾಗಿಲ್ಲ. ಈ ಪುರಸಭೆಗಳಲ್ಲಿ ಅತ್ರಂತ್ರ ಸ್ಥಿತಿ ನಿರ್ಮಾಣವಾಗಿದೆ. ಸ್ವತಂತ್ರ ಅಭ್ಯರ್ಥಿಗಳು ಈ ಪುರಸಭೆಗಳಲ್ಲಿ ಅಡಳಿತ ರಚಿಸುವ ಪಕ್ಷಗಳಿಗೆ ಕೀಲಿ ಕೈ ಆಗಲಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಸುವೇಂಧು ಅಧಿಕಾರಿ ಕುಟುಂಬದ ತೆಕ್ಕೆಯಲ್ಲಿದ್ದ ಕಂಠಿ ಪುರಸಭೆಯನ್ನು ಟಿಎಂಸಿ ಕಿತ್ತುಕೊಂಡಿದೆ. ಈ ಪುರಸಭೆಯಲ್ಲಿ ಸುವೇಂದು ಅಧಿಕಾರಿ ಅವರ ತಂದೆ ಸಿಸಿರ್ ಅಧಿಕಾರಿ ಅವರು 1981-86 ರಿಂದ ಐದು ವರ್ಷಗಳನ್ನು ಹೊರತುಪಡಿಸಿ, 1971- 2009 ರವರೆಗೆ 25 ವರ್ಷಗಳ ಕಾಲ ಪುರಸಭೆಯ ಅಧ್ಯಕ್ಷರಾಗಿದ್ದರು. ನಂತರ, ಅವರು ಸಂಸದರಾಗಿ ಆಯ್ಕೆಯಾದರು. ಬಳಿಕ, ಕಂಠಿ ಪುರಸಭೆಯ ಅಧಿಕಾರ ಸಿಶಿರ್ ಅವರ ಕಿರಿಯ ಪುತ್ರ ದಿಬ್ಯೇಂದು ಅಧಿಕಾರಿ ವಹಿಸಿಕೊಂಡಿದ್ದರು. ಆ ನಂತರ, 2016 ರಲ್ಲಿ ಸಿಶಿರ್ ಅವರ ಮೂರನೇ ಮಗ ಸೌಮೇಂದು ಅಧಿಕಾರಿ ಅವರು ಕಂಠಿ ಪುರಸಭೆಯ ಅಧ್ಯಕ್ಷರಾಗಿದ್ದರು. ಇದೀಗ, ಸುವೇಂದು ಅಧಿಕಾರಿ ಕುಟುಂಬದ ಭದ್ರಕೋಟಿಯನ್ನು ಟಿಎಂಸಿ ಬೇಧಿಸಿದೆ.

ಉಳಿದಂತೆ, ಕೂಚ್ಬೆಹಾರ್ ಜಿಲ್ಲೆಯ ದಿನ್ಹತಾ ಪುರಸಭೆಯನ್ನು ಟಿಎಂಸಿ ಅವಿರೋಧವಾಗಿ ಗೆದ್ದುಕೊಂಡಿದೆ. ಇಲ್ಲಿ ಮತದಾನ ನಡೆದಿಲ್ಲ.


ಇದನ್ನೂ ಓದಿ; ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...