Homeಮುಖಪುಟಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಾಳಗಂ (ಎಐಎಡಿಎಂಕೆ) ಒಳಗಿನ ಒಳ ಜಗಳದ ನಡುವೆ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್‌) ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಆಯ್ಕೆ ಘೋಷಣೆಯಾದ ಕೂಡಲೇ ಕಾರ್ಯಕಾರಿ ಮಂಡಳಿ ಸದಸ್ಯರು ನಿರ್ಣಯವನ್ನು ಅಂಗೀಕರಿಸಿ ಓ ಪನ್ನರ್‌ಸೆಲ್ವಂ (ಒಪಿಎಸ್‌) ಮತ್ತು ಅವರ ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಐಎಡಿಎಂಕೆಯ ಟ್ವಿಟ್ಟರ್‌ ಪ್ರೊಫೈಲ್‌‌ ಚಿತ್ರವಾಗಿ ಪಳನಿಸ್ವಾಮಿ ಫೋಟೋವನ್ನು ಹಾಕಿಕೊಳ್ಳಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯನ್ನು ಬೆಳಗ್ಗೆ 9 ಗಂಟೆಗೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಓ ಪನ್ನೀರ ಸೆಲ್ವಂ ಮನವಿಯನ್ನು ಕೋರ್ಟ್ ತಿರಸ್ಕರಿಸಿ‌ತು. ಬಹುಮತದವರ ಇಚ್ಛೆ ಮೇಲುಗೈ ಸಾಧಿಸಬೇಕು. ಹೀಗಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ನಾಯಕತ್ವ ತಿಕ್ಕಾಟದಿಂದಾಗಿ ಎಐಎಡಿಎಂಕೆಯ ಎರಡು ಬಣಗಳ ನಡುವಿನ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಪ್ರಧಾನ ಕಚೇರಿಯ ಹೊರಗೆ ಅಹಿತಕರ ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಂಯೋಜಕ ಓ ಪನ್ನೀರಸೆಲ್ವಂ ಬೆಂಬಲಿಗರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ್ದರು. ಜನರಲ್ ಕೌನ್ಸಿಲ್ ಸಭೆ ನಡೆಯಲಿರುವ ನಗರದ ಮದುವೆ ಮಂಟಪಕ್ಕೆ ಇಪಿಎಸ್ ಅವರು ತೆರಳುತ್ತಿದ್ದರು.

ಇಬ್ಬರು ನಾಯಕರ ಬೆಂಬಲಿಗರೆಂದು ಶಂಕಿಸಲಾದ ಮತ್ತು ಎಐಎಡಿಎಂಕೆ ಧ್ವಜಗಳನ್ನು ಹೊತ್ತ ಎರಡು ಗುಂಪುಗಳು ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದವು. ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದನ್ನು, ಹತ್ತಿರದಲ್ಲಿ ನಿಲ್ಲಿಸಿದ ಕೆಲವು ವಾಹನಗಳು ಹಾನಿಗೊಳಿಸಿರುವುದನ್ನು ಸೆರೆಯಾದ ದೃಶ್ಯಗಳಲ್ಲಿ ಕಾಣಬಹುದಾಗಿದೆ. ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದೇ ವೇಳೆ ಕೆಲವರು ಪಕ್ಷದ ಕಚೇರಿಯ ಬಾಗಿಲು ಮುರಿದು ಬಲವಂತವಾಗಿ ಒಳಗೆ ನುಗ್ಗಿದ್ದು ಕಂಡುಬಂದಿದೆ. ಪಕ್ಷದ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಘರ್ಷಣೆಯ ಕುರಿತು ಮಾತನಾಡಿದ ಪಳನಿಸ್ವಾಮಿ, “ಸಮಾಜ ವಿರೋಧಿಗಳು ಪಕ್ಷದ ಮುಖ್ಯ ಕಚೇರಿಗೆ ಪ್ರವೇಶಿಸಬಹುದು ಎಂದು ನಮ್ಮ ಪಕ್ಷದ ಕಾರ್ಯಕರ್ತರು ರಾಯಪೆಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರಕ್ಷಣೆ ನೀಡುವಂತೆ ಕೋರಿದ್ದರು. ನಮ್ಮ ಮಾಹಿತಿ ನಿಜವೆಂದು ಸಾಬೀತಾಗಿದೆ” ಎಂದಿದ್ದಾರೆ.

ಪಕ್ಷದ ಕೇಂದ್ರ ಕಚೇರಿಗೆ ಸೂಕ್ತ ಭದ್ರತೆ ಒದಗಿಸಲು ರಾಯಪೆಟ್ಟಾ ಪೊಲೀಸರು ಮತ್ತು ಆಯುಕ್ತರ ಕಚೇರಿ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪುಷ್ಪ ನಮನ

ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎಂಜಿಆರ್ ಹಾಗೂ ಜಯಲಲಿತಾ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

‘ವೈಯಕ್ತಿಕ ಹಿತಾಸಕ್ತಿಯಿಂದ ಜನರಲ್ ಕೌನ್ಸಿಲ್ ಸಭೆ ನಡೆಸಲಾಗಿದೆ’: ವಿಕೆ ಶಶಿಕಲಾ

‘ವೈಯಕ್ತಿಕ ಹಿತಾಸಕ್ತಿಗಾಗಿ ಸೋಮವಾರದ ಸಾಮಾನ್ಯ ಸಭೆ ನಡೆಸಲಾಗಿದೆ’ ಎಂದು ಹೇಳಿದ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ, ‘ಹೈಕೋರ್ಟ್‌ನಲ್ಲಿ ನಾನು ಹೂಡಿರುವ ಪ್ರಕರಣ ಬಾಕಿ ಇರುವಾಗ ಇಂತಹ ಕಾರ್ಯಕ್ರಮಗಳನ್ನು ನಡೆಸಬಾರದು. ಇಂದು ನಡೆದ ಸಾಮಾನ್ಯ ಮಂಡಳಿ ಸಭೆ ಖಂಡಿತವಾಗಿಯೂ ಅಸಿಂಧು” ಎಂದಿದ್ದಾರೆ.

“ತಮಿಳುನಾಡಿನ ಮಾಜಿ ಸಿಎಂ ಎಂಜಿಆರ್ ಅವರು ಡಿಎಂಕೆಯಲ್ಲಿನ ತಪ್ಪುಗಳನ್ನು ಖಂಡಿಸಿ ಪ್ರತ್ಯೇಕ ಪಕ್ಷವನ್ನು ಪ್ರಾರಂಭಿಸಿದರು. ಅವರು ಪ್ರಾರಂಭಿಸಿದ ಪಕ್ಷದಲ್ಲಿ ಯಾರಿಗೂ ಈ ಪರಿಸ್ಥಿತಿ ಬರಬಾರದು. ಪ್ರಧಾನ ಕಾರ್ಯದರ್ಶಿಯನ್ನು ತಳಮಟ್ಟದ ಕಾರ್ಯಕರ್ತರಿಂದ ಆಯ್ಕೆ ಮಾಡಬೇಕಾದ ವ್ಯವಸ್ಥೆಯನ್ನು ಎಂಜಿಆರ್‌‌ ಸೃಷ್ಟಿಸಿದ್ದರು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...