Homeಮುಖಪುಟಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಾಳಗಂ (ಎಐಎಡಿಎಂಕೆ) ಒಳಗಿನ ಒಳ ಜಗಳದ ನಡುವೆ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್‌) ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಆಯ್ಕೆ ಘೋಷಣೆಯಾದ ಕೂಡಲೇ ಕಾರ್ಯಕಾರಿ ಮಂಡಳಿ ಸದಸ್ಯರು ನಿರ್ಣಯವನ್ನು ಅಂಗೀಕರಿಸಿ ಓ ಪನ್ನರ್‌ಸೆಲ್ವಂ (ಒಪಿಎಸ್‌) ಮತ್ತು ಅವರ ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಐಎಡಿಎಂಕೆಯ ಟ್ವಿಟ್ಟರ್‌ ಪ್ರೊಫೈಲ್‌‌ ಚಿತ್ರವಾಗಿ ಪಳನಿಸ್ವಾಮಿ ಫೋಟೋವನ್ನು ಹಾಕಿಕೊಳ್ಳಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯನ್ನು ಬೆಳಗ್ಗೆ 9 ಗಂಟೆಗೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಓ ಪನ್ನೀರ ಸೆಲ್ವಂ ಮನವಿಯನ್ನು ಕೋರ್ಟ್ ತಿರಸ್ಕರಿಸಿ‌ತು. ಬಹುಮತದವರ ಇಚ್ಛೆ ಮೇಲುಗೈ ಸಾಧಿಸಬೇಕು. ಹೀಗಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ನಾಯಕತ್ವ ತಿಕ್ಕಾಟದಿಂದಾಗಿ ಎಐಎಡಿಎಂಕೆಯ ಎರಡು ಬಣಗಳ ನಡುವಿನ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಪ್ರಧಾನ ಕಚೇರಿಯ ಹೊರಗೆ ಅಹಿತಕರ ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಂಯೋಜಕ ಓ ಪನ್ನೀರಸೆಲ್ವಂ ಬೆಂಬಲಿಗರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ್ದರು. ಜನರಲ್ ಕೌನ್ಸಿಲ್ ಸಭೆ ನಡೆಯಲಿರುವ ನಗರದ ಮದುವೆ ಮಂಟಪಕ್ಕೆ ಇಪಿಎಸ್ ಅವರು ತೆರಳುತ್ತಿದ್ದರು.

ಇಬ್ಬರು ನಾಯಕರ ಬೆಂಬಲಿಗರೆಂದು ಶಂಕಿಸಲಾದ ಮತ್ತು ಎಐಎಡಿಎಂಕೆ ಧ್ವಜಗಳನ್ನು ಹೊತ್ತ ಎರಡು ಗುಂಪುಗಳು ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದವು. ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದನ್ನು, ಹತ್ತಿರದಲ್ಲಿ ನಿಲ್ಲಿಸಿದ ಕೆಲವು ವಾಹನಗಳು ಹಾನಿಗೊಳಿಸಿರುವುದನ್ನು ಸೆರೆಯಾದ ದೃಶ್ಯಗಳಲ್ಲಿ ಕಾಣಬಹುದಾಗಿದೆ. ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದೇ ವೇಳೆ ಕೆಲವರು ಪಕ್ಷದ ಕಚೇರಿಯ ಬಾಗಿಲು ಮುರಿದು ಬಲವಂತವಾಗಿ ಒಳಗೆ ನುಗ್ಗಿದ್ದು ಕಂಡುಬಂದಿದೆ. ಪಕ್ಷದ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಘರ್ಷಣೆಯ ಕುರಿತು ಮಾತನಾಡಿದ ಪಳನಿಸ್ವಾಮಿ, “ಸಮಾಜ ವಿರೋಧಿಗಳು ಪಕ್ಷದ ಮುಖ್ಯ ಕಚೇರಿಗೆ ಪ್ರವೇಶಿಸಬಹುದು ಎಂದು ನಮ್ಮ ಪಕ್ಷದ ಕಾರ್ಯಕರ್ತರು ರಾಯಪೆಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರಕ್ಷಣೆ ನೀಡುವಂತೆ ಕೋರಿದ್ದರು. ನಮ್ಮ ಮಾಹಿತಿ ನಿಜವೆಂದು ಸಾಬೀತಾಗಿದೆ” ಎಂದಿದ್ದಾರೆ.

ಪಕ್ಷದ ಕೇಂದ್ರ ಕಚೇರಿಗೆ ಸೂಕ್ತ ಭದ್ರತೆ ಒದಗಿಸಲು ರಾಯಪೆಟ್ಟಾ ಪೊಲೀಸರು ಮತ್ತು ಆಯುಕ್ತರ ಕಚೇರಿ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪುಷ್ಪ ನಮನ

ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎಂಜಿಆರ್ ಹಾಗೂ ಜಯಲಲಿತಾ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

‘ವೈಯಕ್ತಿಕ ಹಿತಾಸಕ್ತಿಯಿಂದ ಜನರಲ್ ಕೌನ್ಸಿಲ್ ಸಭೆ ನಡೆಸಲಾಗಿದೆ’: ವಿಕೆ ಶಶಿಕಲಾ

‘ವೈಯಕ್ತಿಕ ಹಿತಾಸಕ್ತಿಗಾಗಿ ಸೋಮವಾರದ ಸಾಮಾನ್ಯ ಸಭೆ ನಡೆಸಲಾಗಿದೆ’ ಎಂದು ಹೇಳಿದ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ, ‘ಹೈಕೋರ್ಟ್‌ನಲ್ಲಿ ನಾನು ಹೂಡಿರುವ ಪ್ರಕರಣ ಬಾಕಿ ಇರುವಾಗ ಇಂತಹ ಕಾರ್ಯಕ್ರಮಗಳನ್ನು ನಡೆಸಬಾರದು. ಇಂದು ನಡೆದ ಸಾಮಾನ್ಯ ಮಂಡಳಿ ಸಭೆ ಖಂಡಿತವಾಗಿಯೂ ಅಸಿಂಧು” ಎಂದಿದ್ದಾರೆ.

“ತಮಿಳುನಾಡಿನ ಮಾಜಿ ಸಿಎಂ ಎಂಜಿಆರ್ ಅವರು ಡಿಎಂಕೆಯಲ್ಲಿನ ತಪ್ಪುಗಳನ್ನು ಖಂಡಿಸಿ ಪ್ರತ್ಯೇಕ ಪಕ್ಷವನ್ನು ಪ್ರಾರಂಭಿಸಿದರು. ಅವರು ಪ್ರಾರಂಭಿಸಿದ ಪಕ್ಷದಲ್ಲಿ ಯಾರಿಗೂ ಈ ಪರಿಸ್ಥಿತಿ ಬರಬಾರದು. ಪ್ರಧಾನ ಕಾರ್ಯದರ್ಶಿಯನ್ನು ತಳಮಟ್ಟದ ಕಾರ್ಯಕರ್ತರಿಂದ ಆಯ್ಕೆ ಮಾಡಬೇಕಾದ ವ್ಯವಸ್ಥೆಯನ್ನು ಎಂಜಿಆರ್‌‌ ಸೃಷ್ಟಿಸಿದ್ದರು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...