Homeಮುಖಪುಟಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಾಳಗಂ (ಎಐಎಡಿಎಂಕೆ) ಒಳಗಿನ ಒಳ ಜಗಳದ ನಡುವೆ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್‌) ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಆಯ್ಕೆ ಘೋಷಣೆಯಾದ ಕೂಡಲೇ ಕಾರ್ಯಕಾರಿ ಮಂಡಳಿ ಸದಸ್ಯರು ನಿರ್ಣಯವನ್ನು ಅಂಗೀಕರಿಸಿ ಓ ಪನ್ನರ್‌ಸೆಲ್ವಂ (ಒಪಿಎಸ್‌) ಮತ್ತು ಅವರ ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಐಎಡಿಎಂಕೆಯ ಟ್ವಿಟ್ಟರ್‌ ಪ್ರೊಫೈಲ್‌‌ ಚಿತ್ರವಾಗಿ ಪಳನಿಸ್ವಾಮಿ ಫೋಟೋವನ್ನು ಹಾಕಿಕೊಳ್ಳಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯನ್ನು ಬೆಳಗ್ಗೆ 9 ಗಂಟೆಗೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಓ ಪನ್ನೀರ ಸೆಲ್ವಂ ಮನವಿಯನ್ನು ಕೋರ್ಟ್ ತಿರಸ್ಕರಿಸಿ‌ತು. ಬಹುಮತದವರ ಇಚ್ಛೆ ಮೇಲುಗೈ ಸಾಧಿಸಬೇಕು. ಹೀಗಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ನಾಯಕತ್ವ ತಿಕ್ಕಾಟದಿಂದಾಗಿ ಎಐಎಡಿಎಂಕೆಯ ಎರಡು ಬಣಗಳ ನಡುವಿನ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಪ್ರಧಾನ ಕಚೇರಿಯ ಹೊರಗೆ ಅಹಿತಕರ ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಂಯೋಜಕ ಓ ಪನ್ನೀರಸೆಲ್ವಂ ಬೆಂಬಲಿಗರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ್ದರು. ಜನರಲ್ ಕೌನ್ಸಿಲ್ ಸಭೆ ನಡೆಯಲಿರುವ ನಗರದ ಮದುವೆ ಮಂಟಪಕ್ಕೆ ಇಪಿಎಸ್ ಅವರು ತೆರಳುತ್ತಿದ್ದರು.

ಇಬ್ಬರು ನಾಯಕರ ಬೆಂಬಲಿಗರೆಂದು ಶಂಕಿಸಲಾದ ಮತ್ತು ಎಐಎಡಿಎಂಕೆ ಧ್ವಜಗಳನ್ನು ಹೊತ್ತ ಎರಡು ಗುಂಪುಗಳು ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದವು. ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದನ್ನು, ಹತ್ತಿರದಲ್ಲಿ ನಿಲ್ಲಿಸಿದ ಕೆಲವು ವಾಹನಗಳು ಹಾನಿಗೊಳಿಸಿರುವುದನ್ನು ಸೆರೆಯಾದ ದೃಶ್ಯಗಳಲ್ಲಿ ಕಾಣಬಹುದಾಗಿದೆ. ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದೇ ವೇಳೆ ಕೆಲವರು ಪಕ್ಷದ ಕಚೇರಿಯ ಬಾಗಿಲು ಮುರಿದು ಬಲವಂತವಾಗಿ ಒಳಗೆ ನುಗ್ಗಿದ್ದು ಕಂಡುಬಂದಿದೆ. ಪಕ್ಷದ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಘರ್ಷಣೆಯ ಕುರಿತು ಮಾತನಾಡಿದ ಪಳನಿಸ್ವಾಮಿ, “ಸಮಾಜ ವಿರೋಧಿಗಳು ಪಕ್ಷದ ಮುಖ್ಯ ಕಚೇರಿಗೆ ಪ್ರವೇಶಿಸಬಹುದು ಎಂದು ನಮ್ಮ ಪಕ್ಷದ ಕಾರ್ಯಕರ್ತರು ರಾಯಪೆಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರಕ್ಷಣೆ ನೀಡುವಂತೆ ಕೋರಿದ್ದರು. ನಮ್ಮ ಮಾಹಿತಿ ನಿಜವೆಂದು ಸಾಬೀತಾಗಿದೆ” ಎಂದಿದ್ದಾರೆ.

ಪಕ್ಷದ ಕೇಂದ್ರ ಕಚೇರಿಗೆ ಸೂಕ್ತ ಭದ್ರತೆ ಒದಗಿಸಲು ರಾಯಪೆಟ್ಟಾ ಪೊಲೀಸರು ಮತ್ತು ಆಯುಕ್ತರ ಕಚೇರಿ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪುಷ್ಪ ನಮನ

ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎಂಜಿಆರ್ ಹಾಗೂ ಜಯಲಲಿತಾ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

‘ವೈಯಕ್ತಿಕ ಹಿತಾಸಕ್ತಿಯಿಂದ ಜನರಲ್ ಕೌನ್ಸಿಲ್ ಸಭೆ ನಡೆಸಲಾಗಿದೆ’: ವಿಕೆ ಶಶಿಕಲಾ

‘ವೈಯಕ್ತಿಕ ಹಿತಾಸಕ್ತಿಗಾಗಿ ಸೋಮವಾರದ ಸಾಮಾನ್ಯ ಸಭೆ ನಡೆಸಲಾಗಿದೆ’ ಎಂದು ಹೇಳಿದ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ, ‘ಹೈಕೋರ್ಟ್‌ನಲ್ಲಿ ನಾನು ಹೂಡಿರುವ ಪ್ರಕರಣ ಬಾಕಿ ಇರುವಾಗ ಇಂತಹ ಕಾರ್ಯಕ್ರಮಗಳನ್ನು ನಡೆಸಬಾರದು. ಇಂದು ನಡೆದ ಸಾಮಾನ್ಯ ಮಂಡಳಿ ಸಭೆ ಖಂಡಿತವಾಗಿಯೂ ಅಸಿಂಧು” ಎಂದಿದ್ದಾರೆ.

“ತಮಿಳುನಾಡಿನ ಮಾಜಿ ಸಿಎಂ ಎಂಜಿಆರ್ ಅವರು ಡಿಎಂಕೆಯಲ್ಲಿನ ತಪ್ಪುಗಳನ್ನು ಖಂಡಿಸಿ ಪ್ರತ್ಯೇಕ ಪಕ್ಷವನ್ನು ಪ್ರಾರಂಭಿಸಿದರು. ಅವರು ಪ್ರಾರಂಭಿಸಿದ ಪಕ್ಷದಲ್ಲಿ ಯಾರಿಗೂ ಈ ಪರಿಸ್ಥಿತಿ ಬರಬಾರದು. ಪ್ರಧಾನ ಕಾರ್ಯದರ್ಶಿಯನ್ನು ತಳಮಟ್ಟದ ಕಾರ್ಯಕರ್ತರಿಂದ ಆಯ್ಕೆ ಮಾಡಬೇಕಾದ ವ್ಯವಸ್ಥೆಯನ್ನು ಎಂಜಿಆರ್‌‌ ಸೃಷ್ಟಿಸಿದ್ದರು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...