Homeಮುಖಪುಟಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಾಳಗಂ (ಎಐಎಡಿಎಂಕೆ) ಒಳಗಿನ ಒಳ ಜಗಳದ ನಡುವೆ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್‌) ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಆಯ್ಕೆ ಘೋಷಣೆಯಾದ ಕೂಡಲೇ ಕಾರ್ಯಕಾರಿ ಮಂಡಳಿ ಸದಸ್ಯರು ನಿರ್ಣಯವನ್ನು ಅಂಗೀಕರಿಸಿ ಓ ಪನ್ನರ್‌ಸೆಲ್ವಂ (ಒಪಿಎಸ್‌) ಮತ್ತು ಅವರ ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಐಎಡಿಎಂಕೆಯ ಟ್ವಿಟ್ಟರ್‌ ಪ್ರೊಫೈಲ್‌‌ ಚಿತ್ರವಾಗಿ ಪಳನಿಸ್ವಾಮಿ ಫೋಟೋವನ್ನು ಹಾಕಿಕೊಳ್ಳಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯನ್ನು ಬೆಳಗ್ಗೆ 9 ಗಂಟೆಗೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಓ ಪನ್ನೀರ ಸೆಲ್ವಂ ಮನವಿಯನ್ನು ಕೋರ್ಟ್ ತಿರಸ್ಕರಿಸಿ‌ತು. ಬಹುಮತದವರ ಇಚ್ಛೆ ಮೇಲುಗೈ ಸಾಧಿಸಬೇಕು. ಹೀಗಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ನಾಯಕತ್ವ ತಿಕ್ಕಾಟದಿಂದಾಗಿ ಎಐಎಡಿಎಂಕೆಯ ಎರಡು ಬಣಗಳ ನಡುವಿನ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಪ್ರಧಾನ ಕಚೇರಿಯ ಹೊರಗೆ ಅಹಿತಕರ ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಂಯೋಜಕ ಓ ಪನ್ನೀರಸೆಲ್ವಂ ಬೆಂಬಲಿಗರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ್ದರು. ಜನರಲ್ ಕೌನ್ಸಿಲ್ ಸಭೆ ನಡೆಯಲಿರುವ ನಗರದ ಮದುವೆ ಮಂಟಪಕ್ಕೆ ಇಪಿಎಸ್ ಅವರು ತೆರಳುತ್ತಿದ್ದರು.

ಇಬ್ಬರು ನಾಯಕರ ಬೆಂಬಲಿಗರೆಂದು ಶಂಕಿಸಲಾದ ಮತ್ತು ಎಐಎಡಿಎಂಕೆ ಧ್ವಜಗಳನ್ನು ಹೊತ್ತ ಎರಡು ಗುಂಪುಗಳು ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದವು. ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದನ್ನು, ಹತ್ತಿರದಲ್ಲಿ ನಿಲ್ಲಿಸಿದ ಕೆಲವು ವಾಹನಗಳು ಹಾನಿಗೊಳಿಸಿರುವುದನ್ನು ಸೆರೆಯಾದ ದೃಶ್ಯಗಳಲ್ಲಿ ಕಾಣಬಹುದಾಗಿದೆ. ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದೇ ವೇಳೆ ಕೆಲವರು ಪಕ್ಷದ ಕಚೇರಿಯ ಬಾಗಿಲು ಮುರಿದು ಬಲವಂತವಾಗಿ ಒಳಗೆ ನುಗ್ಗಿದ್ದು ಕಂಡುಬಂದಿದೆ. ಪಕ್ಷದ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಘರ್ಷಣೆಯ ಕುರಿತು ಮಾತನಾಡಿದ ಪಳನಿಸ್ವಾಮಿ, “ಸಮಾಜ ವಿರೋಧಿಗಳು ಪಕ್ಷದ ಮುಖ್ಯ ಕಚೇರಿಗೆ ಪ್ರವೇಶಿಸಬಹುದು ಎಂದು ನಮ್ಮ ಪಕ್ಷದ ಕಾರ್ಯಕರ್ತರು ರಾಯಪೆಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರಕ್ಷಣೆ ನೀಡುವಂತೆ ಕೋರಿದ್ದರು. ನಮ್ಮ ಮಾಹಿತಿ ನಿಜವೆಂದು ಸಾಬೀತಾಗಿದೆ” ಎಂದಿದ್ದಾರೆ.

ಪಕ್ಷದ ಕೇಂದ್ರ ಕಚೇರಿಗೆ ಸೂಕ್ತ ಭದ್ರತೆ ಒದಗಿಸಲು ರಾಯಪೆಟ್ಟಾ ಪೊಲೀಸರು ಮತ್ತು ಆಯುಕ್ತರ ಕಚೇರಿ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪುಷ್ಪ ನಮನ

ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎಂಜಿಆರ್ ಹಾಗೂ ಜಯಲಲಿತಾ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

‘ವೈಯಕ್ತಿಕ ಹಿತಾಸಕ್ತಿಯಿಂದ ಜನರಲ್ ಕೌನ್ಸಿಲ್ ಸಭೆ ನಡೆಸಲಾಗಿದೆ’: ವಿಕೆ ಶಶಿಕಲಾ

‘ವೈಯಕ್ತಿಕ ಹಿತಾಸಕ್ತಿಗಾಗಿ ಸೋಮವಾರದ ಸಾಮಾನ್ಯ ಸಭೆ ನಡೆಸಲಾಗಿದೆ’ ಎಂದು ಹೇಳಿದ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ, ‘ಹೈಕೋರ್ಟ್‌ನಲ್ಲಿ ನಾನು ಹೂಡಿರುವ ಪ್ರಕರಣ ಬಾಕಿ ಇರುವಾಗ ಇಂತಹ ಕಾರ್ಯಕ್ರಮಗಳನ್ನು ನಡೆಸಬಾರದು. ಇಂದು ನಡೆದ ಸಾಮಾನ್ಯ ಮಂಡಳಿ ಸಭೆ ಖಂಡಿತವಾಗಿಯೂ ಅಸಿಂಧು” ಎಂದಿದ್ದಾರೆ.

“ತಮಿಳುನಾಡಿನ ಮಾಜಿ ಸಿಎಂ ಎಂಜಿಆರ್ ಅವರು ಡಿಎಂಕೆಯಲ್ಲಿನ ತಪ್ಪುಗಳನ್ನು ಖಂಡಿಸಿ ಪ್ರತ್ಯೇಕ ಪಕ್ಷವನ್ನು ಪ್ರಾರಂಭಿಸಿದರು. ಅವರು ಪ್ರಾರಂಭಿಸಿದ ಪಕ್ಷದಲ್ಲಿ ಯಾರಿಗೂ ಈ ಪರಿಸ್ಥಿತಿ ಬರಬಾರದು. ಪ್ರಧಾನ ಕಾರ್ಯದರ್ಶಿಯನ್ನು ತಳಮಟ್ಟದ ಕಾರ್ಯಕರ್ತರಿಂದ ಆಯ್ಕೆ ಮಾಡಬೇಕಾದ ವ್ಯವಸ್ಥೆಯನ್ನು ಎಂಜಿಆರ್‌‌ ಸೃಷ್ಟಿಸಿದ್ದರು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...