Homeಮುಖಪುಟಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಾಳಗಂ (ಎಐಎಡಿಎಂಕೆ) ಒಳಗಿನ ಒಳ ಜಗಳದ ನಡುವೆ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್‌) ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಆಯ್ಕೆ ಘೋಷಣೆಯಾದ ಕೂಡಲೇ ಕಾರ್ಯಕಾರಿ ಮಂಡಳಿ ಸದಸ್ಯರು ನಿರ್ಣಯವನ್ನು ಅಂಗೀಕರಿಸಿ ಓ ಪನ್ನರ್‌ಸೆಲ್ವಂ (ಒಪಿಎಸ್‌) ಮತ್ತು ಅವರ ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಐಎಡಿಎಂಕೆಯ ಟ್ವಿಟ್ಟರ್‌ ಪ್ರೊಫೈಲ್‌‌ ಚಿತ್ರವಾಗಿ ಪಳನಿಸ್ವಾಮಿ ಫೋಟೋವನ್ನು ಹಾಕಿಕೊಳ್ಳಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯನ್ನು ಬೆಳಗ್ಗೆ 9 ಗಂಟೆಗೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಓ ಪನ್ನೀರ ಸೆಲ್ವಂ ಮನವಿಯನ್ನು ಕೋರ್ಟ್ ತಿರಸ್ಕರಿಸಿ‌ತು. ಬಹುಮತದವರ ಇಚ್ಛೆ ಮೇಲುಗೈ ಸಾಧಿಸಬೇಕು. ಹೀಗಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ನಾಯಕತ್ವ ತಿಕ್ಕಾಟದಿಂದಾಗಿ ಎಐಎಡಿಎಂಕೆಯ ಎರಡು ಬಣಗಳ ನಡುವಿನ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಪ್ರಧಾನ ಕಚೇರಿಯ ಹೊರಗೆ ಅಹಿತಕರ ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಂಯೋಜಕ ಓ ಪನ್ನೀರಸೆಲ್ವಂ ಬೆಂಬಲಿಗರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ್ದರು. ಜನರಲ್ ಕೌನ್ಸಿಲ್ ಸಭೆ ನಡೆಯಲಿರುವ ನಗರದ ಮದುವೆ ಮಂಟಪಕ್ಕೆ ಇಪಿಎಸ್ ಅವರು ತೆರಳುತ್ತಿದ್ದರು.

ಇಬ್ಬರು ನಾಯಕರ ಬೆಂಬಲಿಗರೆಂದು ಶಂಕಿಸಲಾದ ಮತ್ತು ಎಐಎಡಿಎಂಕೆ ಧ್ವಜಗಳನ್ನು ಹೊತ್ತ ಎರಡು ಗುಂಪುಗಳು ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದವು. ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದನ್ನು, ಹತ್ತಿರದಲ್ಲಿ ನಿಲ್ಲಿಸಿದ ಕೆಲವು ವಾಹನಗಳು ಹಾನಿಗೊಳಿಸಿರುವುದನ್ನು ಸೆರೆಯಾದ ದೃಶ್ಯಗಳಲ್ಲಿ ಕಾಣಬಹುದಾಗಿದೆ. ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದೇ ವೇಳೆ ಕೆಲವರು ಪಕ್ಷದ ಕಚೇರಿಯ ಬಾಗಿಲು ಮುರಿದು ಬಲವಂತವಾಗಿ ಒಳಗೆ ನುಗ್ಗಿದ್ದು ಕಂಡುಬಂದಿದೆ. ಪಕ್ಷದ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಘರ್ಷಣೆಯ ಕುರಿತು ಮಾತನಾಡಿದ ಪಳನಿಸ್ವಾಮಿ, “ಸಮಾಜ ವಿರೋಧಿಗಳು ಪಕ್ಷದ ಮುಖ್ಯ ಕಚೇರಿಗೆ ಪ್ರವೇಶಿಸಬಹುದು ಎಂದು ನಮ್ಮ ಪಕ್ಷದ ಕಾರ್ಯಕರ್ತರು ರಾಯಪೆಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರಕ್ಷಣೆ ನೀಡುವಂತೆ ಕೋರಿದ್ದರು. ನಮ್ಮ ಮಾಹಿತಿ ನಿಜವೆಂದು ಸಾಬೀತಾಗಿದೆ” ಎಂದಿದ್ದಾರೆ.

ಪಕ್ಷದ ಕೇಂದ್ರ ಕಚೇರಿಗೆ ಸೂಕ್ತ ಭದ್ರತೆ ಒದಗಿಸಲು ರಾಯಪೆಟ್ಟಾ ಪೊಲೀಸರು ಮತ್ತು ಆಯುಕ್ತರ ಕಚೇರಿ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪುಷ್ಪ ನಮನ

ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎಂಜಿಆರ್ ಹಾಗೂ ಜಯಲಲಿತಾ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

‘ವೈಯಕ್ತಿಕ ಹಿತಾಸಕ್ತಿಯಿಂದ ಜನರಲ್ ಕೌನ್ಸಿಲ್ ಸಭೆ ನಡೆಸಲಾಗಿದೆ’: ವಿಕೆ ಶಶಿಕಲಾ

‘ವೈಯಕ್ತಿಕ ಹಿತಾಸಕ್ತಿಗಾಗಿ ಸೋಮವಾರದ ಸಾಮಾನ್ಯ ಸಭೆ ನಡೆಸಲಾಗಿದೆ’ ಎಂದು ಹೇಳಿದ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ, ‘ಹೈಕೋರ್ಟ್‌ನಲ್ಲಿ ನಾನು ಹೂಡಿರುವ ಪ್ರಕರಣ ಬಾಕಿ ಇರುವಾಗ ಇಂತಹ ಕಾರ್ಯಕ್ರಮಗಳನ್ನು ನಡೆಸಬಾರದು. ಇಂದು ನಡೆದ ಸಾಮಾನ್ಯ ಮಂಡಳಿ ಸಭೆ ಖಂಡಿತವಾಗಿಯೂ ಅಸಿಂಧು” ಎಂದಿದ್ದಾರೆ.

“ತಮಿಳುನಾಡಿನ ಮಾಜಿ ಸಿಎಂ ಎಂಜಿಆರ್ ಅವರು ಡಿಎಂಕೆಯಲ್ಲಿನ ತಪ್ಪುಗಳನ್ನು ಖಂಡಿಸಿ ಪ್ರತ್ಯೇಕ ಪಕ್ಷವನ್ನು ಪ್ರಾರಂಭಿಸಿದರು. ಅವರು ಪ್ರಾರಂಭಿಸಿದ ಪಕ್ಷದಲ್ಲಿ ಯಾರಿಗೂ ಈ ಪರಿಸ್ಥಿತಿ ಬರಬಾರದು. ಪ್ರಧಾನ ಕಾರ್ಯದರ್ಶಿಯನ್ನು ತಳಮಟ್ಟದ ಕಾರ್ಯಕರ್ತರಿಂದ ಆಯ್ಕೆ ಮಾಡಬೇಕಾದ ವ್ಯವಸ್ಥೆಯನ್ನು ಎಂಜಿಆರ್‌‌ ಸೃಷ್ಟಿಸಿದ್ದರು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...