Homeಮುಖಪುಟಬಿಜೆಪಿ ಪಕ್ಷ ಸಂಘಟನೆಗೆ ತಡೆ: ವೆಟ್ರಿವೇಲ್ ಯಾತ್ರೆ ಆರಂಭಿಸಿದ ಬಿಜೆಪಿ ಮುಖಂಡ ಸೇರಿ 100 ಕಾರ್ಯಕರ್ತರ...

ಬಿಜೆಪಿ ಪಕ್ಷ ಸಂಘಟನೆಗೆ ತಡೆ: ವೆಟ್ರಿವೇಲ್ ಯಾತ್ರೆ ಆರಂಭಿಸಿದ ಬಿಜೆಪಿ ಮುಖಂಡ ಸೇರಿ 100 ಕಾರ್ಯಕರ್ತರ ಬಂಧನ

ತಮಿಳುನಾಡಿನಲ್ಲಿ ಮಿತ್ರ ಪಕ್ಷಗಳಾಗಿದ್ದ AIADMK ಮತ್ತು ಬಿಜೆಪಿ ನಡುವೆ ಬಿರುಕು ಆರಂಭವಾಗಿದೆ. ಬಿಜೆಪಿ ಪಕ್ಷ ಸಂಘಟನೆ ತಡೆಯಲು ಈ ರ್ಯಾಲಿಗೆ ಅನುಮತಿ ನೀಡಿಲ್ಲ ಎನ್ನಲಾಗುತ್ತಿದೆ.

- Advertisement -
- Advertisement -

ತಮಿಳಿನಾಡಿನಲ್ಲಿ ಪೊಲೀಸ್ ಅನುಮತಿಯಿಲ್ಲದೆ “ವೆಟ್ರಿವೇಲ್ ಯಾತ್ರೆ” ಪ್ರಾರಂಭಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಮುಖ್ಯಸ್ಥ ಎಲ್.ಮುರುಗನ್ ಮತ್ತು ಸುಮಾರು 100 ಮಂದಿ ಬಿಜೆಪಿ ಕಾರ್ಯಕರ್ತರನ್ನು ತಿರುತ್ತಾನಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯನ್ನು ತಡೆಯುವ ಆಡಳಿತರೂಢ AIADMK ಸರ್ಕಾರದ ಕ್ರಮ ಎನ್ನಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ AIADMK ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದವು.

ತಮಿಳುನಾಡಿನಲ್ಲಿ ನಡೆಯುವ ವೆಟ್ರಿವೇಲ್ ಯಾತ್ರೆಯನ್ನು ನಡೆಸಲು ಅನುಮತಿ ಕೋರಿ ರಾಜ್ಯ ಬಿಜೆಪಿ ಘಟಕವು ಮನವಿ ಸಲ್ಲಿಸಿತ್ತು. ಆದರೆ ಇದನ್ನು ತಿರಸ್ಕರಿಸಿದ ರಾಜ್ಯ ಸರ್ಕಾರ ಕೊರೊನಾ ಕಾರಣವನ್ನು ನೀಡಿತ್ತು. ಆದರೂ, ಬಿಜೆಪಿ ಚೆನ್ನೈನ ಪಕ್ಕದಲ್ಲಿರುವ ತಿರುವಳ್ಳೂರು ಜಿಲ್ಲೆಯ ತಿರುತ್ತಾನಿ ಮುರುಗನ್ ದೇವಸ್ಥಾನದಿಂದ ಯಾತ್ರೆ  ನಡೆಸಲು ಪ್ರಾರಂಭಿಸಿತ್ತು.

2021 ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢಿಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಯಾತ್ರೆಯನ್ನು ಆಯೋಜಿಸಿದೆ. ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ರ್‍ಯಾಲಿಯಾಗಿದ್ದು, ಮುರುಗನ್ ದೇವರ ಹೆಸರಲ್ಲಿ ರಥಯಾತ್ರೆಯ ಮಾದರಿಯಲ್ಲಿ ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಮಿಳುನಾಡಿನ ಉತ್ತರದ ತಿರುತ್ತಾನಿ ದೇವಸ್ಥಾನದಿಂದ ತಿರುಚೆಂದೂರು ದೇವಸ್ಥಾನದವರೆಗೆ ನಡೆಸಲು ಯೋಜಿಸಲಾಗಿತ್ತು.

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ಕೊರೊನಾವೈರಸ್ ಸಾಂಕ್ರಾಮಿಕ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ನಿಗದಿಯಾದ ಯಾತ್ರೆ ಅಥವಾ ಪ್ರಯಾಣವನ್ನು ಅನುಮತಿಸಲು ‘ಕಾನೂನುಬದ್ಧವಾಗಿ’ ಸಾಧ್ಯವಿಲ್ಲ ಎಂದು ಎಐಎಡಿಎಂಕೆ ಸರ್ಕಾರದ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಹೇಳಿದರು.

“ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಹಕ್ಕು ನನಗೆ ಇದೆ. ಪೂಜಿಸುವುದು ನನ್ನ ಸಾಂವಿಧಾನಿಕ ಹಕ್ಕು” ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಮುರುಗನ್ ನಿನ್ನೆ ಹೇಳಿದ್ದರು.

ವೆಟ್ರಿವೇಲ್ ಯಾತ್ರೆ ಮುಗಿಯಬೇಕಿದ್ದ ಡಿಸೆಂಬರ್ 6, 1992 ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನದ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ. ಈ ದುರಂತ ರಾಷ್ಟ್ರವ್ಯಾಪಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ನೇತೃತ್ವದಲ್ಲಿ ಆಯೋಜಿಸಿದ ರಥಯಾತ್ರೆಯ ಕೊನೆಯ ದಿನ ನಡೆದಿತ್ತು.

ಬಿಜೆಪಿಯ ವೆಟ್ರಿವೇಲ್ ಯಾತ್ರೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು ನವೆಂಬರ್ 15 ರವರೆಗೆ ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಸಭೆಗಳನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಉಲ್ಲೇಖಿಸಿ ಅರ್ಜಿ ಸಲ್ಲಿಸಿದ್ದಾರೆ.

ಮೆರವಣಿಗೆಗಳು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುವುದರ ಜೊತೆಗೆ ಕೊರೊನಾ ಹರಡುವಿಕೆಯನ್ನು ಹೆಚ್ಚಿಸುವ ಅಪಾಯವನ್ನುಂಟುಮಾಡುತ್ತದೆ ಎಂದು ಅನೇಕರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಎಐಎಡಿಎಂಕೆ ಪಕ್ಷದ ನಡುವೆ ಮುಂದಿನ ವರ್ಷದ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಇಬ್ಬರ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರಲು ಶತಪ್ರಯತ್ನ ಮಾಡುತ್ತಿದ್ದು, ಹಲವರನ್ನು ತನ್ನತ್ತ ಸೆಳೆಯುತ್ತಿದೆ. ಇದಕ್ಕೆ ಉದಾಹರಣೆಯಾಗಿ, ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮತ್ತು ಕಾಂಗ್ರೆಸ್ ತೊರೆದು ನಟಿ ಖುಷ್ಬೂ ಕೂಡ ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

1992 ರಲ್ಲಿ ರಥಯಾತ್ರೆ ಆರಂಭಿಸಿ ದೇಶಾದ್ಯಂತ ಯಾತ್ರೆ ಕೈಗೊಂಡು ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಭಧ್ರ ಬುನಾದಿಗೆ ನಾಂದಿ ಹಾಡಿದ ಭಾರತೀಯ ಜನತಾ ಪಾರ್ಟಿ, ತಮಿಳುನಾಡಿನಲ್ಲಿಯೂ ವೆಟ್ರಿವೇಲ್ ಯಾತ್ರೆ ಮೂಲಕ ಮತ್ತೊಮ್ಮೆ ಅದೇ ಸಾಹಸಕ್ಕೆ ಕೈಹಾಕಲು ಹೊರಟಿದೆ. ಆದರೆ ಇದಕ್ಕೆ ಸೆಡ್ಡು ಹೊಡೆದು ತಮಿಳುನಾಡು ಸರ್ಕಾರ ಯಾತ್ರೆಗೆ ಅನುಮತಿ ನಿರಾಕರಿಸಿದೆ.

ಇಷ್ಟೇ ಅಲ್ಲದೆ  ಬಿಜೆಪಿ ತಾನು ನೇಮಕ ಮಾಡಿದ ರಾಜ್ಯಪಾಲರನ್ನು ಇಟ್ಟುಕೊಂಡು ಕೂಡ ತಮಿಳುನಾಡಿನಲ್ಲಿ ಹಲವು ಬಾರಿ ಆಡಳಿತದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆ. ಆದರೆ ತಮಿಳುನಾಡು ಸರ್ಕಾರ ಮಾತ್ರ ಇದ್ಯಾವುದಕ್ಕೂ ಬಗ್ಗದೆ ತನ್ನ ಕೆಲಸ ಮಾಡುತ್ತಿದೆ. ನೆಟ್ ತೇರ್ಗಡೆ ಹೊಂದಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ ನೀಡುವ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರು ವಿಳಂಬಮಾಡಿದಾಗಲೂ, ತಮಿಳುನಾಡು ಸರ್ಕಾರ ಅದನ್ನು ಆದೇಶ ಮಾಡಿ ಹೊರಡಿಸಿತು.


ಇದನ್ನೂ ಓದಿ:  ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿಯ ಸಹವಾಸದಿಂದ AIADMKಗೆ ನಶ್ಟವೇ ಹೊರತು ಲಾಬ ಆಗುವುದಿಲ್ಲವಾದ್ದರಿಂದ ಅಣ್ಣಾ ಡಿಎಂಕೆ ಬಿಜೆಪಿಯ ಸಹವಾಸದಿಂದ ಹೊರಬರುವುದು ಒಳಿತು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...