Homeಮುಖಪುಟಬಿಜೆಪಿ ಪಕ್ಷ ಸಂಘಟನೆಗೆ ತಡೆ: ವೆಟ್ರಿವೇಲ್ ಯಾತ್ರೆ ಆರಂಭಿಸಿದ ಬಿಜೆಪಿ ಮುಖಂಡ ಸೇರಿ 100 ಕಾರ್ಯಕರ್ತರ...

ಬಿಜೆಪಿ ಪಕ್ಷ ಸಂಘಟನೆಗೆ ತಡೆ: ವೆಟ್ರಿವೇಲ್ ಯಾತ್ರೆ ಆರಂಭಿಸಿದ ಬಿಜೆಪಿ ಮುಖಂಡ ಸೇರಿ 100 ಕಾರ್ಯಕರ್ತರ ಬಂಧನ

ತಮಿಳುನಾಡಿನಲ್ಲಿ ಮಿತ್ರ ಪಕ್ಷಗಳಾಗಿದ್ದ AIADMK ಮತ್ತು ಬಿಜೆಪಿ ನಡುವೆ ಬಿರುಕು ಆರಂಭವಾಗಿದೆ. ಬಿಜೆಪಿ ಪಕ್ಷ ಸಂಘಟನೆ ತಡೆಯಲು ಈ ರ್ಯಾಲಿಗೆ ಅನುಮತಿ ನೀಡಿಲ್ಲ ಎನ್ನಲಾಗುತ್ತಿದೆ.

- Advertisement -
- Advertisement -

ತಮಿಳಿನಾಡಿನಲ್ಲಿ ಪೊಲೀಸ್ ಅನುಮತಿಯಿಲ್ಲದೆ “ವೆಟ್ರಿವೇಲ್ ಯಾತ್ರೆ” ಪ್ರಾರಂಭಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಮುಖ್ಯಸ್ಥ ಎಲ್.ಮುರುಗನ್ ಮತ್ತು ಸುಮಾರು 100 ಮಂದಿ ಬಿಜೆಪಿ ಕಾರ್ಯಕರ್ತರನ್ನು ತಿರುತ್ತಾನಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯನ್ನು ತಡೆಯುವ ಆಡಳಿತರೂಢ AIADMK ಸರ್ಕಾರದ ಕ್ರಮ ಎನ್ನಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ AIADMK ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದವು.

ತಮಿಳುನಾಡಿನಲ್ಲಿ ನಡೆಯುವ ವೆಟ್ರಿವೇಲ್ ಯಾತ್ರೆಯನ್ನು ನಡೆಸಲು ಅನುಮತಿ ಕೋರಿ ರಾಜ್ಯ ಬಿಜೆಪಿ ಘಟಕವು ಮನವಿ ಸಲ್ಲಿಸಿತ್ತು. ಆದರೆ ಇದನ್ನು ತಿರಸ್ಕರಿಸಿದ ರಾಜ್ಯ ಸರ್ಕಾರ ಕೊರೊನಾ ಕಾರಣವನ್ನು ನೀಡಿತ್ತು. ಆದರೂ, ಬಿಜೆಪಿ ಚೆನ್ನೈನ ಪಕ್ಕದಲ್ಲಿರುವ ತಿರುವಳ್ಳೂರು ಜಿಲ್ಲೆಯ ತಿರುತ್ತಾನಿ ಮುರುಗನ್ ದೇವಸ್ಥಾನದಿಂದ ಯಾತ್ರೆ  ನಡೆಸಲು ಪ್ರಾರಂಭಿಸಿತ್ತು.

2021 ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢಿಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಯಾತ್ರೆಯನ್ನು ಆಯೋಜಿಸಿದೆ. ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ರ್‍ಯಾಲಿಯಾಗಿದ್ದು, ಮುರುಗನ್ ದೇವರ ಹೆಸರಲ್ಲಿ ರಥಯಾತ್ರೆಯ ಮಾದರಿಯಲ್ಲಿ ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಮಿಳುನಾಡಿನ ಉತ್ತರದ ತಿರುತ್ತಾನಿ ದೇವಸ್ಥಾನದಿಂದ ತಿರುಚೆಂದೂರು ದೇವಸ್ಥಾನದವರೆಗೆ ನಡೆಸಲು ಯೋಜಿಸಲಾಗಿತ್ತು.

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ಕೊರೊನಾವೈರಸ್ ಸಾಂಕ್ರಾಮಿಕ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ನಿಗದಿಯಾದ ಯಾತ್ರೆ ಅಥವಾ ಪ್ರಯಾಣವನ್ನು ಅನುಮತಿಸಲು ‘ಕಾನೂನುಬದ್ಧವಾಗಿ’ ಸಾಧ್ಯವಿಲ್ಲ ಎಂದು ಎಐಎಡಿಎಂಕೆ ಸರ್ಕಾರದ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಹೇಳಿದರು.

“ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಹಕ್ಕು ನನಗೆ ಇದೆ. ಪೂಜಿಸುವುದು ನನ್ನ ಸಾಂವಿಧಾನಿಕ ಹಕ್ಕು” ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಮುರುಗನ್ ನಿನ್ನೆ ಹೇಳಿದ್ದರು.

ವೆಟ್ರಿವೇಲ್ ಯಾತ್ರೆ ಮುಗಿಯಬೇಕಿದ್ದ ಡಿಸೆಂಬರ್ 6, 1992 ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನದ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ. ಈ ದುರಂತ ರಾಷ್ಟ್ರವ್ಯಾಪಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ನೇತೃತ್ವದಲ್ಲಿ ಆಯೋಜಿಸಿದ ರಥಯಾತ್ರೆಯ ಕೊನೆಯ ದಿನ ನಡೆದಿತ್ತು.

ಬಿಜೆಪಿಯ ವೆಟ್ರಿವೇಲ್ ಯಾತ್ರೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು ನವೆಂಬರ್ 15 ರವರೆಗೆ ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಸಭೆಗಳನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಉಲ್ಲೇಖಿಸಿ ಅರ್ಜಿ ಸಲ್ಲಿಸಿದ್ದಾರೆ.

ಮೆರವಣಿಗೆಗಳು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುವುದರ ಜೊತೆಗೆ ಕೊರೊನಾ ಹರಡುವಿಕೆಯನ್ನು ಹೆಚ್ಚಿಸುವ ಅಪಾಯವನ್ನುಂಟುಮಾಡುತ್ತದೆ ಎಂದು ಅನೇಕರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಎಐಎಡಿಎಂಕೆ ಪಕ್ಷದ ನಡುವೆ ಮುಂದಿನ ವರ್ಷದ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಇಬ್ಬರ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರಲು ಶತಪ್ರಯತ್ನ ಮಾಡುತ್ತಿದ್ದು, ಹಲವರನ್ನು ತನ್ನತ್ತ ಸೆಳೆಯುತ್ತಿದೆ. ಇದಕ್ಕೆ ಉದಾಹರಣೆಯಾಗಿ, ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮತ್ತು ಕಾಂಗ್ರೆಸ್ ತೊರೆದು ನಟಿ ಖುಷ್ಬೂ ಕೂಡ ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

1992 ರಲ್ಲಿ ರಥಯಾತ್ರೆ ಆರಂಭಿಸಿ ದೇಶಾದ್ಯಂತ ಯಾತ್ರೆ ಕೈಗೊಂಡು ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಭಧ್ರ ಬುನಾದಿಗೆ ನಾಂದಿ ಹಾಡಿದ ಭಾರತೀಯ ಜನತಾ ಪಾರ್ಟಿ, ತಮಿಳುನಾಡಿನಲ್ಲಿಯೂ ವೆಟ್ರಿವೇಲ್ ಯಾತ್ರೆ ಮೂಲಕ ಮತ್ತೊಮ್ಮೆ ಅದೇ ಸಾಹಸಕ್ಕೆ ಕೈಹಾಕಲು ಹೊರಟಿದೆ. ಆದರೆ ಇದಕ್ಕೆ ಸೆಡ್ಡು ಹೊಡೆದು ತಮಿಳುನಾಡು ಸರ್ಕಾರ ಯಾತ್ರೆಗೆ ಅನುಮತಿ ನಿರಾಕರಿಸಿದೆ.

ಇಷ್ಟೇ ಅಲ್ಲದೆ  ಬಿಜೆಪಿ ತಾನು ನೇಮಕ ಮಾಡಿದ ರಾಜ್ಯಪಾಲರನ್ನು ಇಟ್ಟುಕೊಂಡು ಕೂಡ ತಮಿಳುನಾಡಿನಲ್ಲಿ ಹಲವು ಬಾರಿ ಆಡಳಿತದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆ. ಆದರೆ ತಮಿಳುನಾಡು ಸರ್ಕಾರ ಮಾತ್ರ ಇದ್ಯಾವುದಕ್ಕೂ ಬಗ್ಗದೆ ತನ್ನ ಕೆಲಸ ಮಾಡುತ್ತಿದೆ. ನೆಟ್ ತೇರ್ಗಡೆ ಹೊಂದಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ ನೀಡುವ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರು ವಿಳಂಬಮಾಡಿದಾಗಲೂ, ತಮಿಳುನಾಡು ಸರ್ಕಾರ ಅದನ್ನು ಆದೇಶ ಮಾಡಿ ಹೊರಡಿಸಿತು.


ಇದನ್ನೂ ಓದಿ:  ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿಯ ಸಹವಾಸದಿಂದ AIADMKಗೆ ನಶ್ಟವೇ ಹೊರತು ಲಾಬ ಆಗುವುದಿಲ್ಲವಾದ್ದರಿಂದ ಅಣ್ಣಾ ಡಿಎಂಕೆ ಬಿಜೆಪಿಯ ಸಹವಾಸದಿಂದ ಹೊರಬರುವುದು ಒಳಿತು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...