Homeಮುಖಪುಟಬಿಜೆಪಿ ಪಕ್ಷ ಸಂಘಟನೆಗೆ ತಡೆ: ವೆಟ್ರಿವೇಲ್ ಯಾತ್ರೆ ಆರಂಭಿಸಿದ ಬಿಜೆಪಿ ಮುಖಂಡ ಸೇರಿ 100 ಕಾರ್ಯಕರ್ತರ...

ಬಿಜೆಪಿ ಪಕ್ಷ ಸಂಘಟನೆಗೆ ತಡೆ: ವೆಟ್ರಿವೇಲ್ ಯಾತ್ರೆ ಆರಂಭಿಸಿದ ಬಿಜೆಪಿ ಮುಖಂಡ ಸೇರಿ 100 ಕಾರ್ಯಕರ್ತರ ಬಂಧನ

ತಮಿಳುನಾಡಿನಲ್ಲಿ ಮಿತ್ರ ಪಕ್ಷಗಳಾಗಿದ್ದ AIADMK ಮತ್ತು ಬಿಜೆಪಿ ನಡುವೆ ಬಿರುಕು ಆರಂಭವಾಗಿದೆ. ಬಿಜೆಪಿ ಪಕ್ಷ ಸಂಘಟನೆ ತಡೆಯಲು ಈ ರ್ಯಾಲಿಗೆ ಅನುಮತಿ ನೀಡಿಲ್ಲ ಎನ್ನಲಾಗುತ್ತಿದೆ.

- Advertisement -
- Advertisement -

ತಮಿಳಿನಾಡಿನಲ್ಲಿ ಪೊಲೀಸ್ ಅನುಮತಿಯಿಲ್ಲದೆ “ವೆಟ್ರಿವೇಲ್ ಯಾತ್ರೆ” ಪ್ರಾರಂಭಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಮುಖ್ಯಸ್ಥ ಎಲ್.ಮುರುಗನ್ ಮತ್ತು ಸುಮಾರು 100 ಮಂದಿ ಬಿಜೆಪಿ ಕಾರ್ಯಕರ್ತರನ್ನು ತಿರುತ್ತಾನಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯನ್ನು ತಡೆಯುವ ಆಡಳಿತರೂಢ AIADMK ಸರ್ಕಾರದ ಕ್ರಮ ಎನ್ನಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ AIADMK ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದವು.

ತಮಿಳುನಾಡಿನಲ್ಲಿ ನಡೆಯುವ ವೆಟ್ರಿವೇಲ್ ಯಾತ್ರೆಯನ್ನು ನಡೆಸಲು ಅನುಮತಿ ಕೋರಿ ರಾಜ್ಯ ಬಿಜೆಪಿ ಘಟಕವು ಮನವಿ ಸಲ್ಲಿಸಿತ್ತು. ಆದರೆ ಇದನ್ನು ತಿರಸ್ಕರಿಸಿದ ರಾಜ್ಯ ಸರ್ಕಾರ ಕೊರೊನಾ ಕಾರಣವನ್ನು ನೀಡಿತ್ತು. ಆದರೂ, ಬಿಜೆಪಿ ಚೆನ್ನೈನ ಪಕ್ಕದಲ್ಲಿರುವ ತಿರುವಳ್ಳೂರು ಜಿಲ್ಲೆಯ ತಿರುತ್ತಾನಿ ಮುರುಗನ್ ದೇವಸ್ಥಾನದಿಂದ ಯಾತ್ರೆ  ನಡೆಸಲು ಪ್ರಾರಂಭಿಸಿತ್ತು.

2021 ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢಿಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಯಾತ್ರೆಯನ್ನು ಆಯೋಜಿಸಿದೆ. ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ರ್‍ಯಾಲಿಯಾಗಿದ್ದು, ಮುರುಗನ್ ದೇವರ ಹೆಸರಲ್ಲಿ ರಥಯಾತ್ರೆಯ ಮಾದರಿಯಲ್ಲಿ ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಮಿಳುನಾಡಿನ ಉತ್ತರದ ತಿರುತ್ತಾನಿ ದೇವಸ್ಥಾನದಿಂದ ತಿರುಚೆಂದೂರು ದೇವಸ್ಥಾನದವರೆಗೆ ನಡೆಸಲು ಯೋಜಿಸಲಾಗಿತ್ತು.

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ಕೊರೊನಾವೈರಸ್ ಸಾಂಕ್ರಾಮಿಕ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ನಿಗದಿಯಾದ ಯಾತ್ರೆ ಅಥವಾ ಪ್ರಯಾಣವನ್ನು ಅನುಮತಿಸಲು ‘ಕಾನೂನುಬದ್ಧವಾಗಿ’ ಸಾಧ್ಯವಿಲ್ಲ ಎಂದು ಎಐಎಡಿಎಂಕೆ ಸರ್ಕಾರದ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಹೇಳಿದರು.

“ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಹಕ್ಕು ನನಗೆ ಇದೆ. ಪೂಜಿಸುವುದು ನನ್ನ ಸಾಂವಿಧಾನಿಕ ಹಕ್ಕು” ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಮುರುಗನ್ ನಿನ್ನೆ ಹೇಳಿದ್ದರು.

ವೆಟ್ರಿವೇಲ್ ಯಾತ್ರೆ ಮುಗಿಯಬೇಕಿದ್ದ ಡಿಸೆಂಬರ್ 6, 1992 ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನದ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ. ಈ ದುರಂತ ರಾಷ್ಟ್ರವ್ಯಾಪಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ನೇತೃತ್ವದಲ್ಲಿ ಆಯೋಜಿಸಿದ ರಥಯಾತ್ರೆಯ ಕೊನೆಯ ದಿನ ನಡೆದಿತ್ತು.

ಬಿಜೆಪಿಯ ವೆಟ್ರಿವೇಲ್ ಯಾತ್ರೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು ನವೆಂಬರ್ 15 ರವರೆಗೆ ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಸಭೆಗಳನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಉಲ್ಲೇಖಿಸಿ ಅರ್ಜಿ ಸಲ್ಲಿಸಿದ್ದಾರೆ.

ಮೆರವಣಿಗೆಗಳು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುವುದರ ಜೊತೆಗೆ ಕೊರೊನಾ ಹರಡುವಿಕೆಯನ್ನು ಹೆಚ್ಚಿಸುವ ಅಪಾಯವನ್ನುಂಟುಮಾಡುತ್ತದೆ ಎಂದು ಅನೇಕರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಎಐಎಡಿಎಂಕೆ ಪಕ್ಷದ ನಡುವೆ ಮುಂದಿನ ವರ್ಷದ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಇಬ್ಬರ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರಲು ಶತಪ್ರಯತ್ನ ಮಾಡುತ್ತಿದ್ದು, ಹಲವರನ್ನು ತನ್ನತ್ತ ಸೆಳೆಯುತ್ತಿದೆ. ಇದಕ್ಕೆ ಉದಾಹರಣೆಯಾಗಿ, ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮತ್ತು ಕಾಂಗ್ರೆಸ್ ತೊರೆದು ನಟಿ ಖುಷ್ಬೂ ಕೂಡ ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

1992 ರಲ್ಲಿ ರಥಯಾತ್ರೆ ಆರಂಭಿಸಿ ದೇಶಾದ್ಯಂತ ಯಾತ್ರೆ ಕೈಗೊಂಡು ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಭಧ್ರ ಬುನಾದಿಗೆ ನಾಂದಿ ಹಾಡಿದ ಭಾರತೀಯ ಜನತಾ ಪಾರ್ಟಿ, ತಮಿಳುನಾಡಿನಲ್ಲಿಯೂ ವೆಟ್ರಿವೇಲ್ ಯಾತ್ರೆ ಮೂಲಕ ಮತ್ತೊಮ್ಮೆ ಅದೇ ಸಾಹಸಕ್ಕೆ ಕೈಹಾಕಲು ಹೊರಟಿದೆ. ಆದರೆ ಇದಕ್ಕೆ ಸೆಡ್ಡು ಹೊಡೆದು ತಮಿಳುನಾಡು ಸರ್ಕಾರ ಯಾತ್ರೆಗೆ ಅನುಮತಿ ನಿರಾಕರಿಸಿದೆ.

ಇಷ್ಟೇ ಅಲ್ಲದೆ  ಬಿಜೆಪಿ ತಾನು ನೇಮಕ ಮಾಡಿದ ರಾಜ್ಯಪಾಲರನ್ನು ಇಟ್ಟುಕೊಂಡು ಕೂಡ ತಮಿಳುನಾಡಿನಲ್ಲಿ ಹಲವು ಬಾರಿ ಆಡಳಿತದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆ. ಆದರೆ ತಮಿಳುನಾಡು ಸರ್ಕಾರ ಮಾತ್ರ ಇದ್ಯಾವುದಕ್ಕೂ ಬಗ್ಗದೆ ತನ್ನ ಕೆಲಸ ಮಾಡುತ್ತಿದೆ. ನೆಟ್ ತೇರ್ಗಡೆ ಹೊಂದಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ ನೀಡುವ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರು ವಿಳಂಬಮಾಡಿದಾಗಲೂ, ತಮಿಳುನಾಡು ಸರ್ಕಾರ ಅದನ್ನು ಆದೇಶ ಮಾಡಿ ಹೊರಡಿಸಿತು.


ಇದನ್ನೂ ಓದಿ:  ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿಯ ಸಹವಾಸದಿಂದ AIADMKಗೆ ನಶ್ಟವೇ ಹೊರತು ಲಾಬ ಆಗುವುದಿಲ್ಲವಾದ್ದರಿಂದ ಅಣ್ಣಾ ಡಿಎಂಕೆ ಬಿಜೆಪಿಯ ಸಹವಾಸದಿಂದ ಹೊರಬರುವುದು ಒಳಿತು.

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...