Homeಮುಖಪುಟಬಿಜೆಪಿ ಪಕ್ಷ ಸಂಘಟನೆಗೆ ತಡೆ: ವೆಟ್ರಿವೇಲ್ ಯಾತ್ರೆ ಆರಂಭಿಸಿದ ಬಿಜೆಪಿ ಮುಖಂಡ ಸೇರಿ 100 ಕಾರ್ಯಕರ್ತರ...

ಬಿಜೆಪಿ ಪಕ್ಷ ಸಂಘಟನೆಗೆ ತಡೆ: ವೆಟ್ರಿವೇಲ್ ಯಾತ್ರೆ ಆರಂಭಿಸಿದ ಬಿಜೆಪಿ ಮುಖಂಡ ಸೇರಿ 100 ಕಾರ್ಯಕರ್ತರ ಬಂಧನ

ತಮಿಳುನಾಡಿನಲ್ಲಿ ಮಿತ್ರ ಪಕ್ಷಗಳಾಗಿದ್ದ AIADMK ಮತ್ತು ಬಿಜೆಪಿ ನಡುವೆ ಬಿರುಕು ಆರಂಭವಾಗಿದೆ. ಬಿಜೆಪಿ ಪಕ್ಷ ಸಂಘಟನೆ ತಡೆಯಲು ಈ ರ್ಯಾಲಿಗೆ ಅನುಮತಿ ನೀಡಿಲ್ಲ ಎನ್ನಲಾಗುತ್ತಿದೆ.

- Advertisement -
- Advertisement -

ತಮಿಳಿನಾಡಿನಲ್ಲಿ ಪೊಲೀಸ್ ಅನುಮತಿಯಿಲ್ಲದೆ “ವೆಟ್ರಿವೇಲ್ ಯಾತ್ರೆ” ಪ್ರಾರಂಭಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಮುಖ್ಯಸ್ಥ ಎಲ್.ಮುರುಗನ್ ಮತ್ತು ಸುಮಾರು 100 ಮಂದಿ ಬಿಜೆಪಿ ಕಾರ್ಯಕರ್ತರನ್ನು ತಿರುತ್ತಾನಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯನ್ನು ತಡೆಯುವ ಆಡಳಿತರೂಢ AIADMK ಸರ್ಕಾರದ ಕ್ರಮ ಎನ್ನಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ AIADMK ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದವು.

ತಮಿಳುನಾಡಿನಲ್ಲಿ ನಡೆಯುವ ವೆಟ್ರಿವೇಲ್ ಯಾತ್ರೆಯನ್ನು ನಡೆಸಲು ಅನುಮತಿ ಕೋರಿ ರಾಜ್ಯ ಬಿಜೆಪಿ ಘಟಕವು ಮನವಿ ಸಲ್ಲಿಸಿತ್ತು. ಆದರೆ ಇದನ್ನು ತಿರಸ್ಕರಿಸಿದ ರಾಜ್ಯ ಸರ್ಕಾರ ಕೊರೊನಾ ಕಾರಣವನ್ನು ನೀಡಿತ್ತು. ಆದರೂ, ಬಿಜೆಪಿ ಚೆನ್ನೈನ ಪಕ್ಕದಲ್ಲಿರುವ ತಿರುವಳ್ಳೂರು ಜಿಲ್ಲೆಯ ತಿರುತ್ತಾನಿ ಮುರುಗನ್ ದೇವಸ್ಥಾನದಿಂದ ಯಾತ್ರೆ  ನಡೆಸಲು ಪ್ರಾರಂಭಿಸಿತ್ತು.

2021 ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢಿಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಯಾತ್ರೆಯನ್ನು ಆಯೋಜಿಸಿದೆ. ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ರ್‍ಯಾಲಿಯಾಗಿದ್ದು, ಮುರುಗನ್ ದೇವರ ಹೆಸರಲ್ಲಿ ರಥಯಾತ್ರೆಯ ಮಾದರಿಯಲ್ಲಿ ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಮಿಳುನಾಡಿನ ಉತ್ತರದ ತಿರುತ್ತಾನಿ ದೇವಸ್ಥಾನದಿಂದ ತಿರುಚೆಂದೂರು ದೇವಸ್ಥಾನದವರೆಗೆ ನಡೆಸಲು ಯೋಜಿಸಲಾಗಿತ್ತು.

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ಕೊರೊನಾವೈರಸ್ ಸಾಂಕ್ರಾಮಿಕ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ನಿಗದಿಯಾದ ಯಾತ್ರೆ ಅಥವಾ ಪ್ರಯಾಣವನ್ನು ಅನುಮತಿಸಲು ‘ಕಾನೂನುಬದ್ಧವಾಗಿ’ ಸಾಧ್ಯವಿಲ್ಲ ಎಂದು ಎಐಎಡಿಎಂಕೆ ಸರ್ಕಾರದ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಹೇಳಿದರು.

“ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಹಕ್ಕು ನನಗೆ ಇದೆ. ಪೂಜಿಸುವುದು ನನ್ನ ಸಾಂವಿಧಾನಿಕ ಹಕ್ಕು” ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಮುರುಗನ್ ನಿನ್ನೆ ಹೇಳಿದ್ದರು.

ವೆಟ್ರಿವೇಲ್ ಯಾತ್ರೆ ಮುಗಿಯಬೇಕಿದ್ದ ಡಿಸೆಂಬರ್ 6, 1992 ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನದ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ. ಈ ದುರಂತ ರಾಷ್ಟ್ರವ್ಯಾಪಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ನೇತೃತ್ವದಲ್ಲಿ ಆಯೋಜಿಸಿದ ರಥಯಾತ್ರೆಯ ಕೊನೆಯ ದಿನ ನಡೆದಿತ್ತು.

ಬಿಜೆಪಿಯ ವೆಟ್ರಿವೇಲ್ ಯಾತ್ರೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು ನವೆಂಬರ್ 15 ರವರೆಗೆ ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಸಭೆಗಳನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಉಲ್ಲೇಖಿಸಿ ಅರ್ಜಿ ಸಲ್ಲಿಸಿದ್ದಾರೆ.

ಮೆರವಣಿಗೆಗಳು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುವುದರ ಜೊತೆಗೆ ಕೊರೊನಾ ಹರಡುವಿಕೆಯನ್ನು ಹೆಚ್ಚಿಸುವ ಅಪಾಯವನ್ನುಂಟುಮಾಡುತ್ತದೆ ಎಂದು ಅನೇಕರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಎಐಎಡಿಎಂಕೆ ಪಕ್ಷದ ನಡುವೆ ಮುಂದಿನ ವರ್ಷದ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಇಬ್ಬರ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರಲು ಶತಪ್ರಯತ್ನ ಮಾಡುತ್ತಿದ್ದು, ಹಲವರನ್ನು ತನ್ನತ್ತ ಸೆಳೆಯುತ್ತಿದೆ. ಇದಕ್ಕೆ ಉದಾಹರಣೆಯಾಗಿ, ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮತ್ತು ಕಾಂಗ್ರೆಸ್ ತೊರೆದು ನಟಿ ಖುಷ್ಬೂ ಕೂಡ ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

1992 ರಲ್ಲಿ ರಥಯಾತ್ರೆ ಆರಂಭಿಸಿ ದೇಶಾದ್ಯಂತ ಯಾತ್ರೆ ಕೈಗೊಂಡು ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಭಧ್ರ ಬುನಾದಿಗೆ ನಾಂದಿ ಹಾಡಿದ ಭಾರತೀಯ ಜನತಾ ಪಾರ್ಟಿ, ತಮಿಳುನಾಡಿನಲ್ಲಿಯೂ ವೆಟ್ರಿವೇಲ್ ಯಾತ್ರೆ ಮೂಲಕ ಮತ್ತೊಮ್ಮೆ ಅದೇ ಸಾಹಸಕ್ಕೆ ಕೈಹಾಕಲು ಹೊರಟಿದೆ. ಆದರೆ ಇದಕ್ಕೆ ಸೆಡ್ಡು ಹೊಡೆದು ತಮಿಳುನಾಡು ಸರ್ಕಾರ ಯಾತ್ರೆಗೆ ಅನುಮತಿ ನಿರಾಕರಿಸಿದೆ.

ಇಷ್ಟೇ ಅಲ್ಲದೆ  ಬಿಜೆಪಿ ತಾನು ನೇಮಕ ಮಾಡಿದ ರಾಜ್ಯಪಾಲರನ್ನು ಇಟ್ಟುಕೊಂಡು ಕೂಡ ತಮಿಳುನಾಡಿನಲ್ಲಿ ಹಲವು ಬಾರಿ ಆಡಳಿತದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆ. ಆದರೆ ತಮಿಳುನಾಡು ಸರ್ಕಾರ ಮಾತ್ರ ಇದ್ಯಾವುದಕ್ಕೂ ಬಗ್ಗದೆ ತನ್ನ ಕೆಲಸ ಮಾಡುತ್ತಿದೆ. ನೆಟ್ ತೇರ್ಗಡೆ ಹೊಂದಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ ನೀಡುವ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರು ವಿಳಂಬಮಾಡಿದಾಗಲೂ, ತಮಿಳುನಾಡು ಸರ್ಕಾರ ಅದನ್ನು ಆದೇಶ ಮಾಡಿ ಹೊರಡಿಸಿತು.


ಇದನ್ನೂ ಓದಿ:  ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿಯ ಸಹವಾಸದಿಂದ AIADMKಗೆ ನಶ್ಟವೇ ಹೊರತು ಲಾಬ ಆಗುವುದಿಲ್ಲವಾದ್ದರಿಂದ ಅಣ್ಣಾ ಡಿಎಂಕೆ ಬಿಜೆಪಿಯ ಸಹವಾಸದಿಂದ ಹೊರಬರುವುದು ಒಳಿತು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...