Homeಮುಖಪುಟತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

ತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

- Advertisement -
- Advertisement -

ತಮಿಳುನಾಡು ಸರ್ಕಾರದ ಅರಣ್ಯ ಸಚಿವ ಕೆ. ಪೊನ್ಮುಡಿ ಮತ್ತು ವಿದ್ಯುತ್ ಹಾಗೂ ಅಬಕಾರಿ ಇಲಾಖೆ ಸಚಿವ ವಿ. ಸೆಂಥಿಲ್‌ ಬಾಲಾಜಿ ಭಾನುವಾರ (ಏಪ್ರಿಲ್ 27, 2025) ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಭವನದ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಇಬ್ಬರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಲು ಮತ್ತು ಮಾಜಿ ಸಚಿವ ಮನೋ ತಂಗರಾಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಶಿಫಾರಸು ಮಾಡಿದ್ದಾರೆ. ಏಪ್ರಿಲ್ 28ರಂದು ರಾಜಭವನದಲ್ಲಿ ನೂತನ ಸಚಿವ ತಂಗರಾಜನ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ರಾಜೀನಾಮೆ ಬಳಿಕ ಪೊನ್ಮುಡಿ ಅವರ ಖಾತೆಯನ್ನು ಹೈನುಗಾರಿಕೆ ಅಭಿವೃದ್ಧಿ ಸಚಿವ ಆರ್.ಎಸ್. ರಾಜಕನ್ನಪ್ಪನ್ ಅವರಿಗೆ ನೀಡಲಾಗಿದೆ. ಸಾರಿಗೆ ಸಚಿವ ಎಸ್.ಎಸ್. ಶಿವಶಂಕರ್ ವಿದ್ಯುತ್ ಖಾತೆಯನ್ನು ವಹಿಸಿಕೊಂಡಿದ್ದಾರೆ. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್. ಮುತ್ತುಸಾಮಿ ಅವರು ಸೆಂಥಿಲ್‌ಬಾಲಾಜಿ ಅವರು ಹೊಂದಿದ್ದ ಅಬಕಾರಿ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಸಚಿವರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ ಅವರು ತಮ್ಮ ಹುದ್ದೆಗಳಲ್ಲಿ ಮುಂದುವರಿಯುವುದು ಸರಿಯಲ್ಲ ಎಂಬ ತೀರ್ಮಾನಕ್ಕೆ ಬಂಧಿದ್ದಾರೆ ಎನ್ನಲಾಗಿದೆ.

ಉದ್ಯೋಗಕ್ಕಾಗಿ ಹಣ ಪಡೆದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಸಂಪುಟಕ್ಕೆ ಮರು ಸೇರ್ಪಡೆಗೊಂಡ ಸೆಂಥಿಲ್ ಬಾಲಾಜಿ ಅವರಿಗೆ ಸುಪ್ರೀಂಕೋರ್ಟ್ ಎರಡು ಆಯ್ಕೆಗಳನ್ನು ನೀಡಿತ್ತು.ಒಂದಾ ತಕ್ಷಣ ಸಚಿವ ಸ್ಥಾನ ತೊರೆದು ಸ್ವಾತಂತ್ರ್ಯ ಅನುಭವಿಸಿ, ಇಲ್ಲ ಮತ್ತೆ ಸಚಿವರಾಗಿ ಜೈಲು ಸೇರಿ ಎಂದು ಖಾರವಾಗಿ ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವ ಸ್ಥಾನದಿಂದ ಕೆಳಗಿಳಿಯುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಜೂನ್ 2023ರಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಅವರು ಖಾತೆ ಇಲ್ಲದ ಸಚಿವರಾಗಿ ಮುಂದುವರಿದಿದ್ದರು. ನಂತರ ಫೆಬ್ರವರಿ 12, 2024ರಂದು ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 26, 2024 ರಂದು ಸುಪ್ರೀಂ ಕೋರ್ಟ್ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ನೀಡಿದ ನಂತರ ಮತ್ತೆ ಸಂಪುಟ ಸೇರಿದ್ದರು.

ಆದರೆ, ಸುಪ್ರೀಂ ಕೋರ್ಟ್ ಸೆಂಥಿಲ್ ಬಾಲಾಜಿ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿತ್ತು. ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸೆಂಥಿಲ್‌ಬಾಲಾಜಿ ಸಚಿವರಾಗಿ ಮುಂದುವರಿಯುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಮತ್ತು ಅವರು ವಿಚಾರಣೆಯ ಹಳಿ ತಪ್ಪಿಸಬಹುದು ಎಂದು ಏಪ್ರಿಲ್ 23 ರಂದು ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವರಾಗಿ ಮುಂದುವರಿದಲ್ಲಿ ಜಾಮೀನು ಆದೇಶವನ್ನು ಹಿಂಪಡೆಯುತ್ತೇವೆ. ಅವರಿಗೆ ಜಾಮೀನು ನೀಡಿದ ಕ್ರಮ ನಮ್ಮ ಪ್ರಮಾದ ಎಂದು ಒಪ್ಪಿಕೊಳ್ಳಬೇಕಾಗುತ್ತದೆ. ಅವರಿಗೆ ಅರ್ಹತೆಯ ಮೇಲೆ ಜಾಮೀನು ನೀಡಿಲ್ಲ. ಸಂವಿಧಾನದ 21ನೇ ವಿಧಿಯ ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಪರವಾಗಿ ನ್ಯಾಯಾಲಯ ನಿಂತಿದ್ದರಿಂದ ಜಾಮೀನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಎ ಎಸ್‌.ಓಕಾ ಹೇಳಿದ್ದರು.

ಆಕ್ಷೇಪಾರ್ಹ ಹೇಳಿಕೆ

ಶೈವರು, ವೈಷ್ಣವರು ಮತ್ತು ಮಹಿಳೆಯರ ವಿರುದ್ಧ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತನ್ನ ರಿಜಿಸ್ಟ್ರಿಗೆ ಸೂಚಿಸಿದ ನಂತರ ಪೊನ್ಮುಡಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಪೊನ್ಮುಡಿ ಅವರ ಅಪರಾಧ ಮತ್ತು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದ ಸ್ವಾತಂತ್ರ್ಯವನ್ನು ಅವರು ಪ್ರಾಥಮಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್. ಆನಂದ್ ವೆಂಕಟೇಶ್ ಅವರು, ಪೊನ್ಮುಡಿ ವಿರುದ್ಧ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿದ್ದರು.

ಆಕ್ಷೇಪಾರ್ಹ ಹೇಳಿಕೆ ನೀಡಿದ ಪೊನ್ಮುಡಿ ಅವರನ್ನು ಎಲ್ಲಾ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸುವಂತೆ ಕೋರಿ ವಕೀಲರು ಸಲ್ಲಿಸಿದ್ದ ಪಿಐಎಲ್‌ ಸಂಬಂಧ ಪ್ರತಿಕ್ರಿಯಿಸಲು ತಮಿಳುನಾಡು ಸರ್ಕಾರ ಮತ್ತು ಪೊನ್ಮುಡಿ ಅವರಿಗೆ ಜೂನ್ 5ರವರೆಗೆ ನ್ಯಾಯಾಲಯ ಸಮಯ ನೀಡಿತ್ತು.

ಮುಖ್ಯ ನ್ಯಾಯಮೂರ್ತಿ ಕೆ.ಆರ್. ಶ್ರೀರಾಮ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಫೀಕ್ ಅವರು ರಾಜ್ಯ ಸರ್ಕಾರಿ ವಕೀಲರಿಗೆ ಗೃಹ ಕಾರ್ಯದರ್ಶಿ ಪರವಾಗಿ ನೋಟಿಸ್ ನೀಡುವಂತೆ ನಿರ್ದೇಶಿಸಿದ್ದರು. ಜೂನ್ 5ರೊಳಗೆ ನೋಟಿಸ್‌ಗೆ ಪ್ರತಿಕ್ರಿಯೆ ನೀಡುವಂತೆ ಪೊನ್ಮುಡಿ ಅವರಿಗೂ ಆದೇಶಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಜೂನ್ 19 ರಂದು ಮತ್ತೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದ್ದರು. ಈ ನಡುವೆ ಪೊನ್ಮುಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...