Homeಮುಖಪುಟತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

ತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

- Advertisement -
- Advertisement -

ತಮಿಳುನಾಡು ಸರ್ಕಾರದ ಅರಣ್ಯ ಸಚಿವ ಕೆ. ಪೊನ್ಮುಡಿ ಮತ್ತು ವಿದ್ಯುತ್ ಹಾಗೂ ಅಬಕಾರಿ ಇಲಾಖೆ ಸಚಿವ ವಿ. ಸೆಂಥಿಲ್‌ ಬಾಲಾಜಿ ಭಾನುವಾರ (ಏಪ್ರಿಲ್ 27, 2025) ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಭವನದ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಇಬ್ಬರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಲು ಮತ್ತು ಮಾಜಿ ಸಚಿವ ಮನೋ ತಂಗರಾಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಶಿಫಾರಸು ಮಾಡಿದ್ದಾರೆ. ಏಪ್ರಿಲ್ 28ರಂದು ರಾಜಭವನದಲ್ಲಿ ನೂತನ ಸಚಿವ ತಂಗರಾಜನ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ರಾಜೀನಾಮೆ ಬಳಿಕ ಪೊನ್ಮುಡಿ ಅವರ ಖಾತೆಯನ್ನು ಹೈನುಗಾರಿಕೆ ಅಭಿವೃದ್ಧಿ ಸಚಿವ ಆರ್.ಎಸ್. ರಾಜಕನ್ನಪ್ಪನ್ ಅವರಿಗೆ ನೀಡಲಾಗಿದೆ. ಸಾರಿಗೆ ಸಚಿವ ಎಸ್.ಎಸ್. ಶಿವಶಂಕರ್ ವಿದ್ಯುತ್ ಖಾತೆಯನ್ನು ವಹಿಸಿಕೊಂಡಿದ್ದಾರೆ. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್. ಮುತ್ತುಸಾಮಿ ಅವರು ಸೆಂಥಿಲ್‌ಬಾಲಾಜಿ ಅವರು ಹೊಂದಿದ್ದ ಅಬಕಾರಿ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಸಚಿವರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ ಅವರು ತಮ್ಮ ಹುದ್ದೆಗಳಲ್ಲಿ ಮುಂದುವರಿಯುವುದು ಸರಿಯಲ್ಲ ಎಂಬ ತೀರ್ಮಾನಕ್ಕೆ ಬಂಧಿದ್ದಾರೆ ಎನ್ನಲಾಗಿದೆ.

ಉದ್ಯೋಗಕ್ಕಾಗಿ ಹಣ ಪಡೆದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಸಂಪುಟಕ್ಕೆ ಮರು ಸೇರ್ಪಡೆಗೊಂಡ ಸೆಂಥಿಲ್ ಬಾಲಾಜಿ ಅವರಿಗೆ ಸುಪ್ರೀಂಕೋರ್ಟ್ ಎರಡು ಆಯ್ಕೆಗಳನ್ನು ನೀಡಿತ್ತು.ಒಂದಾ ತಕ್ಷಣ ಸಚಿವ ಸ್ಥಾನ ತೊರೆದು ಸ್ವಾತಂತ್ರ್ಯ ಅನುಭವಿಸಿ, ಇಲ್ಲ ಮತ್ತೆ ಸಚಿವರಾಗಿ ಜೈಲು ಸೇರಿ ಎಂದು ಖಾರವಾಗಿ ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವ ಸ್ಥಾನದಿಂದ ಕೆಳಗಿಳಿಯುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಜೂನ್ 2023ರಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಅವರು ಖಾತೆ ಇಲ್ಲದ ಸಚಿವರಾಗಿ ಮುಂದುವರಿದಿದ್ದರು. ನಂತರ ಫೆಬ್ರವರಿ 12, 2024ರಂದು ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 26, 2024 ರಂದು ಸುಪ್ರೀಂ ಕೋರ್ಟ್ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ನೀಡಿದ ನಂತರ ಮತ್ತೆ ಸಂಪುಟ ಸೇರಿದ್ದರು.

ಆದರೆ, ಸುಪ್ರೀಂ ಕೋರ್ಟ್ ಸೆಂಥಿಲ್ ಬಾಲಾಜಿ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿತ್ತು. ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸೆಂಥಿಲ್‌ಬಾಲಾಜಿ ಸಚಿವರಾಗಿ ಮುಂದುವರಿಯುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಮತ್ತು ಅವರು ವಿಚಾರಣೆಯ ಹಳಿ ತಪ್ಪಿಸಬಹುದು ಎಂದು ಏಪ್ರಿಲ್ 23 ರಂದು ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವರಾಗಿ ಮುಂದುವರಿದಲ್ಲಿ ಜಾಮೀನು ಆದೇಶವನ್ನು ಹಿಂಪಡೆಯುತ್ತೇವೆ. ಅವರಿಗೆ ಜಾಮೀನು ನೀಡಿದ ಕ್ರಮ ನಮ್ಮ ಪ್ರಮಾದ ಎಂದು ಒಪ್ಪಿಕೊಳ್ಳಬೇಕಾಗುತ್ತದೆ. ಅವರಿಗೆ ಅರ್ಹತೆಯ ಮೇಲೆ ಜಾಮೀನು ನೀಡಿಲ್ಲ. ಸಂವಿಧಾನದ 21ನೇ ವಿಧಿಯ ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಪರವಾಗಿ ನ್ಯಾಯಾಲಯ ನಿಂತಿದ್ದರಿಂದ ಜಾಮೀನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಎ ಎಸ್‌.ಓಕಾ ಹೇಳಿದ್ದರು.

ಆಕ್ಷೇಪಾರ್ಹ ಹೇಳಿಕೆ

ಶೈವರು, ವೈಷ್ಣವರು ಮತ್ತು ಮಹಿಳೆಯರ ವಿರುದ್ಧ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತನ್ನ ರಿಜಿಸ್ಟ್ರಿಗೆ ಸೂಚಿಸಿದ ನಂತರ ಪೊನ್ಮುಡಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಪೊನ್ಮುಡಿ ಅವರ ಅಪರಾಧ ಮತ್ತು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದ ಸ್ವಾತಂತ್ರ್ಯವನ್ನು ಅವರು ಪ್ರಾಥಮಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್. ಆನಂದ್ ವೆಂಕಟೇಶ್ ಅವರು, ಪೊನ್ಮುಡಿ ವಿರುದ್ಧ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿದ್ದರು.

ಆಕ್ಷೇಪಾರ್ಹ ಹೇಳಿಕೆ ನೀಡಿದ ಪೊನ್ಮುಡಿ ಅವರನ್ನು ಎಲ್ಲಾ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸುವಂತೆ ಕೋರಿ ವಕೀಲರು ಸಲ್ಲಿಸಿದ್ದ ಪಿಐಎಲ್‌ ಸಂಬಂಧ ಪ್ರತಿಕ್ರಿಯಿಸಲು ತಮಿಳುನಾಡು ಸರ್ಕಾರ ಮತ್ತು ಪೊನ್ಮುಡಿ ಅವರಿಗೆ ಜೂನ್ 5ರವರೆಗೆ ನ್ಯಾಯಾಲಯ ಸಮಯ ನೀಡಿತ್ತು.

ಮುಖ್ಯ ನ್ಯಾಯಮೂರ್ತಿ ಕೆ.ಆರ್. ಶ್ರೀರಾಮ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಫೀಕ್ ಅವರು ರಾಜ್ಯ ಸರ್ಕಾರಿ ವಕೀಲರಿಗೆ ಗೃಹ ಕಾರ್ಯದರ್ಶಿ ಪರವಾಗಿ ನೋಟಿಸ್ ನೀಡುವಂತೆ ನಿರ್ದೇಶಿಸಿದ್ದರು. ಜೂನ್ 5ರೊಳಗೆ ನೋಟಿಸ್‌ಗೆ ಪ್ರತಿಕ್ರಿಯೆ ನೀಡುವಂತೆ ಪೊನ್ಮುಡಿ ಅವರಿಗೂ ಆದೇಶಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಜೂನ್ 19 ರಂದು ಮತ್ತೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದ್ದರು. ಈ ನಡುವೆ ಪೊನ್ಮುಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...