Homeಮುಖಪುಟತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

ತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

- Advertisement -
- Advertisement -

ತಮಿಳುನಾಡು ಸರ್ಕಾರದ ಅರಣ್ಯ ಸಚಿವ ಕೆ. ಪೊನ್ಮುಡಿ ಮತ್ತು ವಿದ್ಯುತ್ ಹಾಗೂ ಅಬಕಾರಿ ಇಲಾಖೆ ಸಚಿವ ವಿ. ಸೆಂಥಿಲ್‌ ಬಾಲಾಜಿ ಭಾನುವಾರ (ಏಪ್ರಿಲ್ 27, 2025) ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಭವನದ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಇಬ್ಬರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಲು ಮತ್ತು ಮಾಜಿ ಸಚಿವ ಮನೋ ತಂಗರಾಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಶಿಫಾರಸು ಮಾಡಿದ್ದಾರೆ. ಏಪ್ರಿಲ್ 28ರಂದು ರಾಜಭವನದಲ್ಲಿ ನೂತನ ಸಚಿವ ತಂಗರಾಜನ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ರಾಜೀನಾಮೆ ಬಳಿಕ ಪೊನ್ಮುಡಿ ಅವರ ಖಾತೆಯನ್ನು ಹೈನುಗಾರಿಕೆ ಅಭಿವೃದ್ಧಿ ಸಚಿವ ಆರ್.ಎಸ್. ರಾಜಕನ್ನಪ್ಪನ್ ಅವರಿಗೆ ನೀಡಲಾಗಿದೆ. ಸಾರಿಗೆ ಸಚಿವ ಎಸ್.ಎಸ್. ಶಿವಶಂಕರ್ ವಿದ್ಯುತ್ ಖಾತೆಯನ್ನು ವಹಿಸಿಕೊಂಡಿದ್ದಾರೆ. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್. ಮುತ್ತುಸಾಮಿ ಅವರು ಸೆಂಥಿಲ್‌ಬಾಲಾಜಿ ಅವರು ಹೊಂದಿದ್ದ ಅಬಕಾರಿ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಸಚಿವರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ ಅವರು ತಮ್ಮ ಹುದ್ದೆಗಳಲ್ಲಿ ಮುಂದುವರಿಯುವುದು ಸರಿಯಲ್ಲ ಎಂಬ ತೀರ್ಮಾನಕ್ಕೆ ಬಂಧಿದ್ದಾರೆ ಎನ್ನಲಾಗಿದೆ.

ಉದ್ಯೋಗಕ್ಕಾಗಿ ಹಣ ಪಡೆದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಸಂಪುಟಕ್ಕೆ ಮರು ಸೇರ್ಪಡೆಗೊಂಡ ಸೆಂಥಿಲ್ ಬಾಲಾಜಿ ಅವರಿಗೆ ಸುಪ್ರೀಂಕೋರ್ಟ್ ಎರಡು ಆಯ್ಕೆಗಳನ್ನು ನೀಡಿತ್ತು.ಒಂದಾ ತಕ್ಷಣ ಸಚಿವ ಸ್ಥಾನ ತೊರೆದು ಸ್ವಾತಂತ್ರ್ಯ ಅನುಭವಿಸಿ, ಇಲ್ಲ ಮತ್ತೆ ಸಚಿವರಾಗಿ ಜೈಲು ಸೇರಿ ಎಂದು ಖಾರವಾಗಿ ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವ ಸ್ಥಾನದಿಂದ ಕೆಳಗಿಳಿಯುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಜೂನ್ 2023ರಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಅವರು ಖಾತೆ ಇಲ್ಲದ ಸಚಿವರಾಗಿ ಮುಂದುವರಿದಿದ್ದರು. ನಂತರ ಫೆಬ್ರವರಿ 12, 2024ರಂದು ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 26, 2024 ರಂದು ಸುಪ್ರೀಂ ಕೋರ್ಟ್ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ನೀಡಿದ ನಂತರ ಮತ್ತೆ ಸಂಪುಟ ಸೇರಿದ್ದರು.

ಆದರೆ, ಸುಪ್ರೀಂ ಕೋರ್ಟ್ ಸೆಂಥಿಲ್ ಬಾಲಾಜಿ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿತ್ತು. ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸೆಂಥಿಲ್‌ಬಾಲಾಜಿ ಸಚಿವರಾಗಿ ಮುಂದುವರಿಯುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಮತ್ತು ಅವರು ವಿಚಾರಣೆಯ ಹಳಿ ತಪ್ಪಿಸಬಹುದು ಎಂದು ಏಪ್ರಿಲ್ 23 ರಂದು ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವರಾಗಿ ಮುಂದುವರಿದಲ್ಲಿ ಜಾಮೀನು ಆದೇಶವನ್ನು ಹಿಂಪಡೆಯುತ್ತೇವೆ. ಅವರಿಗೆ ಜಾಮೀನು ನೀಡಿದ ಕ್ರಮ ನಮ್ಮ ಪ್ರಮಾದ ಎಂದು ಒಪ್ಪಿಕೊಳ್ಳಬೇಕಾಗುತ್ತದೆ. ಅವರಿಗೆ ಅರ್ಹತೆಯ ಮೇಲೆ ಜಾಮೀನು ನೀಡಿಲ್ಲ. ಸಂವಿಧಾನದ 21ನೇ ವಿಧಿಯ ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಪರವಾಗಿ ನ್ಯಾಯಾಲಯ ನಿಂತಿದ್ದರಿಂದ ಜಾಮೀನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಎ ಎಸ್‌.ಓಕಾ ಹೇಳಿದ್ದರು.

ಆಕ್ಷೇಪಾರ್ಹ ಹೇಳಿಕೆ

ಶೈವರು, ವೈಷ್ಣವರು ಮತ್ತು ಮಹಿಳೆಯರ ವಿರುದ್ಧ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತನ್ನ ರಿಜಿಸ್ಟ್ರಿಗೆ ಸೂಚಿಸಿದ ನಂತರ ಪೊನ್ಮುಡಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಪೊನ್ಮುಡಿ ಅವರ ಅಪರಾಧ ಮತ್ತು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದ ಸ್ವಾತಂತ್ರ್ಯವನ್ನು ಅವರು ಪ್ರಾಥಮಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್. ಆನಂದ್ ವೆಂಕಟೇಶ್ ಅವರು, ಪೊನ್ಮುಡಿ ವಿರುದ್ಧ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿದ್ದರು.

ಆಕ್ಷೇಪಾರ್ಹ ಹೇಳಿಕೆ ನೀಡಿದ ಪೊನ್ಮುಡಿ ಅವರನ್ನು ಎಲ್ಲಾ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸುವಂತೆ ಕೋರಿ ವಕೀಲರು ಸಲ್ಲಿಸಿದ್ದ ಪಿಐಎಲ್‌ ಸಂಬಂಧ ಪ್ರತಿಕ್ರಿಯಿಸಲು ತಮಿಳುನಾಡು ಸರ್ಕಾರ ಮತ್ತು ಪೊನ್ಮುಡಿ ಅವರಿಗೆ ಜೂನ್ 5ರವರೆಗೆ ನ್ಯಾಯಾಲಯ ಸಮಯ ನೀಡಿತ್ತು.

ಮುಖ್ಯ ನ್ಯಾಯಮೂರ್ತಿ ಕೆ.ಆರ್. ಶ್ರೀರಾಮ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಫೀಕ್ ಅವರು ರಾಜ್ಯ ಸರ್ಕಾರಿ ವಕೀಲರಿಗೆ ಗೃಹ ಕಾರ್ಯದರ್ಶಿ ಪರವಾಗಿ ನೋಟಿಸ್ ನೀಡುವಂತೆ ನಿರ್ದೇಶಿಸಿದ್ದರು. ಜೂನ್ 5ರೊಳಗೆ ನೋಟಿಸ್‌ಗೆ ಪ್ರತಿಕ್ರಿಯೆ ನೀಡುವಂತೆ ಪೊನ್ಮುಡಿ ಅವರಿಗೂ ಆದೇಶಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಜೂನ್ 19 ರಂದು ಮತ್ತೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದ್ದರು. ಈ ನಡುವೆ ಪೊನ್ಮುಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...