Homeಮುಖಪುಟತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

ತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

- Advertisement -
- Advertisement -

ತಮಿಳುನಾಡು ಸರ್ಕಾರದ ಅರಣ್ಯ ಸಚಿವ ಕೆ. ಪೊನ್ಮುಡಿ ಮತ್ತು ವಿದ್ಯುತ್ ಹಾಗೂ ಅಬಕಾರಿ ಇಲಾಖೆ ಸಚಿವ ವಿ. ಸೆಂಥಿಲ್‌ ಬಾಲಾಜಿ ಭಾನುವಾರ (ಏಪ್ರಿಲ್ 27, 2025) ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಭವನದ ಪ್ರಕಟಣೆಯ ಪ್ರಕಾರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಇಬ್ಬರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಲು ಮತ್ತು ಮಾಜಿ ಸಚಿವ ಮನೋ ತಂಗರಾಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಶಿಫಾರಸು ಮಾಡಿದ್ದಾರೆ. ಏಪ್ರಿಲ್ 28ರಂದು ರಾಜಭವನದಲ್ಲಿ ನೂತನ ಸಚಿವ ತಂಗರಾಜನ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ರಾಜೀನಾಮೆ ಬಳಿಕ ಪೊನ್ಮುಡಿ ಅವರ ಖಾತೆಯನ್ನು ಹೈನುಗಾರಿಕೆ ಅಭಿವೃದ್ಧಿ ಸಚಿವ ಆರ್.ಎಸ್. ರಾಜಕನ್ನಪ್ಪನ್ ಅವರಿಗೆ ನೀಡಲಾಗಿದೆ. ಸಾರಿಗೆ ಸಚಿವ ಎಸ್.ಎಸ್. ಶಿವಶಂಕರ್ ವಿದ್ಯುತ್ ಖಾತೆಯನ್ನು ವಹಿಸಿಕೊಂಡಿದ್ದಾರೆ. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್. ಮುತ್ತುಸಾಮಿ ಅವರು ಸೆಂಥಿಲ್‌ಬಾಲಾಜಿ ಅವರು ಹೊಂದಿದ್ದ ಅಬಕಾರಿ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಸಚಿವರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ ಅವರು ತಮ್ಮ ಹುದ್ದೆಗಳಲ್ಲಿ ಮುಂದುವರಿಯುವುದು ಸರಿಯಲ್ಲ ಎಂಬ ತೀರ್ಮಾನಕ್ಕೆ ಬಂಧಿದ್ದಾರೆ ಎನ್ನಲಾಗಿದೆ.

ಉದ್ಯೋಗಕ್ಕಾಗಿ ಹಣ ಪಡೆದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಸಂಪುಟಕ್ಕೆ ಮರು ಸೇರ್ಪಡೆಗೊಂಡ ಸೆಂಥಿಲ್ ಬಾಲಾಜಿ ಅವರಿಗೆ ಸುಪ್ರೀಂಕೋರ್ಟ್ ಎರಡು ಆಯ್ಕೆಗಳನ್ನು ನೀಡಿತ್ತು.ಒಂದಾ ತಕ್ಷಣ ಸಚಿವ ಸ್ಥಾನ ತೊರೆದು ಸ್ವಾತಂತ್ರ್ಯ ಅನುಭವಿಸಿ, ಇಲ್ಲ ಮತ್ತೆ ಸಚಿವರಾಗಿ ಜೈಲು ಸೇರಿ ಎಂದು ಖಾರವಾಗಿ ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವ ಸ್ಥಾನದಿಂದ ಕೆಳಗಿಳಿಯುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಜೂನ್ 2023ರಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಅವರು ಖಾತೆ ಇಲ್ಲದ ಸಚಿವರಾಗಿ ಮುಂದುವರಿದಿದ್ದರು. ನಂತರ ಫೆಬ್ರವರಿ 12, 2024ರಂದು ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 26, 2024 ರಂದು ಸುಪ್ರೀಂ ಕೋರ್ಟ್ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ನೀಡಿದ ನಂತರ ಮತ್ತೆ ಸಂಪುಟ ಸೇರಿದ್ದರು.

ಆದರೆ, ಸುಪ್ರೀಂ ಕೋರ್ಟ್ ಸೆಂಥಿಲ್ ಬಾಲಾಜಿ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿತ್ತು. ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸೆಂಥಿಲ್‌ಬಾಲಾಜಿ ಸಚಿವರಾಗಿ ಮುಂದುವರಿಯುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಮತ್ತು ಅವರು ವಿಚಾರಣೆಯ ಹಳಿ ತಪ್ಪಿಸಬಹುದು ಎಂದು ಏಪ್ರಿಲ್ 23 ರಂದು ಹೇಳಿತ್ತು.

ಸೆಂಥಿಲ್ ಬಾಲಾಜಿ ಸಚಿವರಾಗಿ ಮುಂದುವರಿದಲ್ಲಿ ಜಾಮೀನು ಆದೇಶವನ್ನು ಹಿಂಪಡೆಯುತ್ತೇವೆ. ಅವರಿಗೆ ಜಾಮೀನು ನೀಡಿದ ಕ್ರಮ ನಮ್ಮ ಪ್ರಮಾದ ಎಂದು ಒಪ್ಪಿಕೊಳ್ಳಬೇಕಾಗುತ್ತದೆ. ಅವರಿಗೆ ಅರ್ಹತೆಯ ಮೇಲೆ ಜಾಮೀನು ನೀಡಿಲ್ಲ. ಸಂವಿಧಾನದ 21ನೇ ವಿಧಿಯ ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಪರವಾಗಿ ನ್ಯಾಯಾಲಯ ನಿಂತಿದ್ದರಿಂದ ಜಾಮೀನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಎ ಎಸ್‌.ಓಕಾ ಹೇಳಿದ್ದರು.

ಆಕ್ಷೇಪಾರ್ಹ ಹೇಳಿಕೆ

ಶೈವರು, ವೈಷ್ಣವರು ಮತ್ತು ಮಹಿಳೆಯರ ವಿರುದ್ಧ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತನ್ನ ರಿಜಿಸ್ಟ್ರಿಗೆ ಸೂಚಿಸಿದ ನಂತರ ಪೊನ್ಮುಡಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಪೊನ್ಮುಡಿ ಅವರ ಅಪರಾಧ ಮತ್ತು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದ ಸ್ವಾತಂತ್ರ್ಯವನ್ನು ಅವರು ಪ್ರಾಥಮಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್. ಆನಂದ್ ವೆಂಕಟೇಶ್ ಅವರು, ಪೊನ್ಮುಡಿ ವಿರುದ್ಧ ಸ್ವಯಂಪ್ರೇರಿತ ರಿಟ್ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿದ್ದರು.

ಆಕ್ಷೇಪಾರ್ಹ ಹೇಳಿಕೆ ನೀಡಿದ ಪೊನ್ಮುಡಿ ಅವರನ್ನು ಎಲ್ಲಾ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸುವಂತೆ ಕೋರಿ ವಕೀಲರು ಸಲ್ಲಿಸಿದ್ದ ಪಿಐಎಲ್‌ ಸಂಬಂಧ ಪ್ರತಿಕ್ರಿಯಿಸಲು ತಮಿಳುನಾಡು ಸರ್ಕಾರ ಮತ್ತು ಪೊನ್ಮುಡಿ ಅವರಿಗೆ ಜೂನ್ 5ರವರೆಗೆ ನ್ಯಾಯಾಲಯ ಸಮಯ ನೀಡಿತ್ತು.

ಮುಖ್ಯ ನ್ಯಾಯಮೂರ್ತಿ ಕೆ.ಆರ್. ಶ್ರೀರಾಮ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಫೀಕ್ ಅವರು ರಾಜ್ಯ ಸರ್ಕಾರಿ ವಕೀಲರಿಗೆ ಗೃಹ ಕಾರ್ಯದರ್ಶಿ ಪರವಾಗಿ ನೋಟಿಸ್ ನೀಡುವಂತೆ ನಿರ್ದೇಶಿಸಿದ್ದರು. ಜೂನ್ 5ರೊಳಗೆ ನೋಟಿಸ್‌ಗೆ ಪ್ರತಿಕ್ರಿಯೆ ನೀಡುವಂತೆ ಪೊನ್ಮುಡಿ ಅವರಿಗೂ ಆದೇಶಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಜೂನ್ 19 ರಂದು ಮತ್ತೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಧೀಶರು ಹೈಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದ್ದರು. ಈ ನಡುವೆ ಪೊನ್ಮುಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಳೆ ರಾಜಕಾರಣ ಸತ್ತುಹೋಗಿದೆ, ಹೊಸದನ್ನು ನಿರ್ಮಿಸಬೇಕು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...