Homeಮುಖಪುಟಮೋದಿಯ ಧ್ಯಾನಕ್ಕೆ ತಗುಲಿದ ವೆಚ್ಚ ಮರುವಸೂಲಿ ಕೋರಿ ಹೈಕೋರ್ಟ್‌ ಮೊರೆ

ಮೋದಿಯ ಧ್ಯಾನಕ್ಕೆ ತಗುಲಿದ ವೆಚ್ಚ ಮರುವಸೂಲಿ ಕೋರಿ ಹೈಕೋರ್ಟ್‌ ಮೊರೆ

- Advertisement -
- Advertisement -

ಕನ್ಯಾಕುಮಾರಿಯಲ್ಲಿ ಮೋದಿಯ ಧ್ಯಾನಕ್ಕಾಗಿ ತಗಲಿದ ವೆಚ್ಚದ ಮರುವಸೂಲಿಯನ್ನು ಕೋರಿ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ)ಯು ಮದ್ರಾಸ್ ಹೈಕೋರ್ಟ್‌ ಮೆಟ್ಟಿಲೇರಿದೆ.

ತಮಿಳುನಾಡು ಕಾಂಗ್ರೆಸ್ ಸಮಿತಿ ಸದಸ್ಯ ಮತ್ತು ವಕೀಲರಾದ ಎಪಿ ಸೂರ್ಯಪ್ರಕಾಶಂ ಈ ಕುರಿತು ಮಾತನಾಡಿದ್ದು, ಪ್ರಧಾನಿಯವರು ಕನ್ಯಾಕುಮಾರಿಗೆ ಖಾಸಗಿ ಭೇಟಿಯನ್ನು ನೀಡಿದ್ದಾರೆ. ಭದ್ರತಾ ಅಂಶಗಳನ್ನು ಬಿಡಿ, ರಾಜ್ಯ ಸರಕಾರವು ಈ ಭೇಟಿಗೆ ಸಂಬಂಧಿಸಿದಂತೆ ಭಾರೀ ಮೊತ್ತವನ್ನು ವ್ಯಯಿಸಿದೆ. ಈ ವೆಚ್ಚವನ್ನು ಬಿಜೆಪಿಯಿಂದ ಮರುವಸೂಲು ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಕಾಂಗ್ರೆಸ್ ಸಮಿತಿ ಸದಸ್ಯ ಮತ್ತು ವಕೀಲರಾದ ಎಪಿ ಸೂರ್ಯಪ್ರಕಾಶಂ ಮತ್ತುಇತರ ಆರು ವಕೀಲರು ಸಲ್ಲಿಸಿದ ಅರ್ಜಿಯು, ಪ್ರಧಾನಿ ಮೋದಿ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನಗಳನ್ನು ನೀಡಬೇಕೆಂದು ಹೈಕೋರ್ಟ್‌ಗೆ ಆಗ್ರಹಿಸಿದೆ.

ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಧ್ಯಾನವು ಬಿಜೆಪಿಗೆ ಮತಗಳನ್ನು ಸೆಳೆಯುವ ಪ್ರಯತ್ನವಾಗಿದೆ. ಮೇ 30ರಂದು ಮೋದಿಯ ಧ್ಯಾನವನ್ನು ದೂರದರ್ಶನದಲ್ಲಿ ಮತ್ತು ಖಾಸಗಿ ವಾಹಿನಿಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗಿದೆ, ಇದು ವಿರೋಧಪಕ್ಷಗಳಿಗೆ ಅನಾನುಕೂಲ ಉಂಟು ಮಾಡಿದೆ ಮತ್ತು ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಮದ್ರಾಸ್ ಹೈಕೋರ್ಟ್‌ ಗಮನಕ್ಕೆ ತಂದಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಿತಾಸಕ್ತಿಯಿಂದ ಅಧಿಕೃತ ಸ್ಥಾನಗಳ ದುರ್ಬಳಕೆಯನ್ನು ತಡೆಯಲು ತಕ್ಷಣವೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಧಾನಿ ಭೇಟಿಯ ಸಂದರ್ಭದಲ್ಲಿ ವಿವೇಕಾನಂದ ರಾಕ್ ಸ್ಮಾರಕಕ್ಕೆ ಪ್ರವಾಸಿಗರು ಮತ್ತು ಹಿಂದೂ ಭಕ್ತರು ಭೇಟಿ ನೀಡುವುದನ್ನು ತಡೆಯದಂತೆ ತಮಿಳುನಾಡಿನ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಮಧ್ಯಂತರ ನಿರ್ದೇಶನವನ್ನು ಕೂಡ ನೀಡುವಂತೆ ಅರ್ಜಿಯಲ್ಲಿ ಅಗ್ರಹಿಸಲಾಗಿತ್ತು.

ಲೋಕಸಭಾ ಚುನಾವಣೆ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕದಲ್ಲಿ 45 ಗಂಟೆಗಳ ಧ್ಯಾನವನ್ನು ನಡೆಸಿದ್ದರು.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ; ಇಲ್ಲಿದೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ವಿವರಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...