Homeಮುಖಪುಟತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

ತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

- Advertisement -
- Advertisement -

ಸ್ಯಾಮ್‌ಸಂಗ್ ಇಂಡಿಯಾದ ಶ್ರೀಪೆರಂಬದೂರ್ ಘಟಕದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸುತ್ತಿದ್ದ ಮುಷ್ಕರವನ್ನು ಕಾರ್ಮಿಕರು ಹಿಂಪಡೆದಿದ್ದಾರೆ ಎಂದು ತಮಿಳುನಾಡು ಸರ್ಕಾರದ ಕಾರ್ಮಿಕ ಇಲಾಖೆ ಅಕ್ಟೋಬರ್ 15 ಮಂಗಳವಾರ ಪ್ರಕಟಿಸಿದೆ.

ಕೆಲಸದ ಸ್ಥಳದ ವಾತಾವರಣ ಸುಧಾರಿಸಬೇಕು, ವೇತನ ಪರಿಷ್ಕರಣೆ ಮತ್ತು ಕಾರ್ಮಿಕ ಒಕ್ಕೂಟದ ನೋಂದಣಿಗೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಬ್ಯಾನರ್ ಅಡಿಯಲ್ಲಿ ಕಾರ್ಮಿಕರು ಪ್ರತಿಭಟಿಸುತ್ತಿದ್ದರು.

ಕಾರ್ಮಿಕರು ಮುಷ್ಕರವನ್ನು ಹಿಂಪಡೆದು ಕೆಲಸಕ್ಕೆ ಮರಳಲು ಒಪ್ಪಿಗೆ ನೀಡಿದ್ದಾರೆ ಎಂದು ಕಾರ್ಮಿಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. “ಕೆಲಸಕ್ಕೆ ಹಿಂದಿರುಗಿದ ನಂತರ, ಮುಷ್ಕರದಲ್ಲಿ ಭಾಗವಹಿಸಿದ್ದಕ್ಕಾಗಿ ಕಂಪನಿಯು ಕಾರ್ಮಿಕರನ್ನು ಗುರಿಯಾಗಿಸಬಾರದು. ಕಾರ್ಮಿಕರು ಕೂಡ ಕಂಪನಿಯೊಂದಿಗೆ ಸಹಕರಿಸಬೇಕು, ಕಂಪನಿಯ ಹಿತಾಸಕ್ತಿಗೆ ಹಾನಿಯುಂಟುಮಾಡುವ ಯಾವುದೇ ಕೃತ್ಯಗಳನ್ನು ಮಾಡಬಾರದು. ಸಂಧಾನ ಅಧಿಕಾರಿಯ ಮುಂದೆ ಕಾರ್ಮಿಕರು ಸಲ್ಲಿಸಿರುವ ಬೇಡಿಕೆಗಳ ಪಟ್ಟಿಗೆ ಕಂಪನಿಯ ಆಡಳಿತವು ಲಿಖಿತ ರೂಪದಲ್ಲಿ ಉತ್ತರ ಸಲ್ಲಿಸಬೇಕು ಎಂದು ಹೇಳಿದೆ.

“ಮಾತುಕತೆಗಳು ಉತ್ತಮವಾಗಿ ನಡೆದಿವೆ. ನಾವು ಅನುಕೂಲಕರ ಒಪ್ಪಂದಗಳಿಗೆ ಬಂದಿದ್ದೇವೆ. ನಾಳೆ ನಾವು ಕಾರ್ಮಿಕರೊಂದಿಗೆ ಕೌನ್ಸಿಲ್ ಸಭೆ ನಡೆಸಿ ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇಂದಿನ ಸಭೆಯಲ್ಲಿ ಲೋಕಪಯೋಗಿ ಸಚಿವ ಇವಿ ವೇಲು, ಕಾರ್ಮಿಕ ಕಲ್ಯಾಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಿವಿ ಗಣೇಶನ್, ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಮತ್ತು ಎಂಎಸ್‌ಎಂಇ ಸಚಿವ ಟಿಎಂ ಅನ್ಬರಸನ್ ಉಪಸ್ಥಿತರಿದ್ದರು” ಎಂದು ಸಿಐಟಿಯು ಅಧ್ಯಕ್ಷ ಎ ಸೌಂದರರಾಜನ್ ತಿಳಿಸಿದ್ದಾರೆ.

ಮುಷ್ಕರ ನಿರತ ಕಾರ್ಮಿಕರು ಕೆಲಸಕ್ಕೆ ಮರಳುತ್ತಿರುವ ಬಗ್ಗೆ ಮಾತನಾಡಿರುವ ಸೌಂದರರಾಜನ್, ಅಕ್ಟೋಬರ್ 16ರ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬಂದರೆ, ಕಾರ್ಮಿಕರು ಮರುದಿನ ಕೆಲಸಕ್ಕೆ ಹಾಜರಾಗಲಿದ್ದಾರೆ. ನಮ್ಮೊಂದಿಗೆ ಮಾತನಾಡಲು ನಿರಾಕರಿಸಿದ್ದ ಸ್ಯಾಮ್‌ಸಂಗ್ ಕಂಪನಿ ಇಂದು ನಮ್ಮ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಿದ್ದು, ಸಚಿವರು ಮತ್ತು ರಾಜ್ಯ ಸರ್ಕಾರದ ಪ್ರಯತ್ನಗಳಿಂದಾಗಿ ಈ ಮಹತ್ವದ ಬೆಳವಣಿಗೆಯಾಗಿದೆ” ಎಂದಿದ್ದಾರೆ.

ಸೆಪ್ಟೆಂಬರ್ 9ರಿಂದ ಕೆಲಸ ಸ್ಥಗಿತಗೊಳಿಸಿದ್ದ ಕಾರ್ಮಿಕರು, ತಮ್ಮ ಒಕ್ಕೂಟ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯೂಯು) ಅನ್ನು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಬೇಕು ಎಂಬ ಪ್ರಮುಖ ಬೇಡಿಕೆಯಿಟ್ಟಿದ್ದರು. ಸರ್ಕಾರ ಕಾನೂನಿನ ಪ್ರಕಾರ 45 ದಿನಗಳ ನಂತರವೂ ಒಕ್ಕೂಟವನ್ನು ನೋಂದಣಿ ಮಾಡದ ಕಾರಣ ಸಿಐಟಿಯು ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿದೆ. ಸರ್ಕಾರದ ಮೂಲಗಳ ಪ್ರಕಾರ, ಒಕ್ಕೂಟದ ನೋಂದಣಿ ಶೀಘ್ರದಲ್ಲೇ ನಡೆಯಲಿದೆ.

ಈ ವರ್ಷದ ಜುಲೈನಲ್ಲಿ ಸ್ಯಾಮ್‌ಸಂಗ್‌ ಘಟಕದಲ್ಲಿ ಕೆಲಸ ಮಾಡುವ ಸುಮಾರು 1,700 ಉದ್ಯೋಗಿಗಳಲ್ಲಿ 1,500 ಉದ್ಯೋಗಿಗಳು ‘ಸ್ಯಾಮ್‌ಸಂಗ್ ಇಂಡಿಯಾ ಥೋಝಿಲಾಲರ್ ಸಂಗಮ್‌’ನ ಸದಸ್ಯರಾಗಲು ಸಹಿ ಹಾಕಿದ್ದರು. ಇದನ್ನು ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (SIWU)ಎಂದೂ ಕರೆಯಲಾಗುತ್ತದೆ. ಇದು ಸೆಂಟರ್ ಆಫ್ ಇಂಡಿಯನ್ ಟ್ರೇಡ್‌ ಯೂನಿಯನ್‌ (ಸಿಐಟಿಯು) ಗೆ ಸಂಯೋಜಿತವಾಗಿದೆ. ತಮ್ಮ ಒಕ್ಕೂಟದ ನೋಂದಣಿಗಾಗಿ ಕಾರ್ಮಿಕರು ಜುಲೈ 25 ರಂದು ರಾಜ್ಯ ಕಾರ್ಮಿಕ ಇಲಾಖೆಗೆ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಿದ್ದರು.

ಪ್ರತಿಭಟನೆಯ ಒಂದು ತಿಂಗಳ ನಂತರ, ಸ್ಯಾಮ್‌ಸಂಗ್ ಕೆಲವು ಉದ್ಯೋಗಿಗಳೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿತ್ತು. ಆದರೆ, ಅದನ್ನು ಸಿಐಟಿಯು ತಿರಸ್ಕರಿಸಿತ್ತು. “ಮುಷ್ಕರಕ್ಕೆ ಹಾಜರಾಗದ ಸುಮಾರು 200 ಮಂದಿಯನ್ನು ಆಯ್ಕೆ ಮಾಡಿ ಸೆಕ್ರೆಟರಿಯೇಟ್‌ಗೆ ಕರೆದೊಯ್ದು ಮೂವರು ಮಂತ್ರಿಗಳ ಮುಂದೆ ಕುಳಿತುಕೊಳ್ಳಲು ಹೇಳಿದ್ದಾರೆ. ಕಂಪನಿಯು ಕೆಲವು ನಿಯಮಗಳನ್ನು ನಿರ್ದೇಶಿಸಿದೆ. ಅದನ್ನೇ ಎಂಒಯು ಎಂದು ಕರೆಯುತ್ತಿದ್ದಾರೆ. ಆದ್ದರಿಂದ ಮುಷ್ಕರ ನಿರತ ಕಾರ್ಮಿಕರಿಗೂ ಆ ಎಂಒಯುಗೂ ಯಾವುದೇ ಸಂಬಂಧವಿಲ್ಲ. ಪ್ರತಿಭಟನೆ ಮುಂದುವರಿಯಲಿದೆ” ಎಂದು ಸಿಐಟಿಯು ತಿಳಿಸಿತ್ತು.

ಈ ಬೆಳವಣಿಗೆಯ ನಂತರ, ನೌಕರರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದರಿಂದಾಗಿ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಯಿತು. ಮಧ್ಯರಾತ್ರಿಯ ಸಮಯದಲ್ಲಿ ಹಲವಾರು ಯೂನಿಯನ್ ಮುಖಂಡರನ್ನು ಬಂಧಿಸಲಾಯಿತು ಮತ್ತು ಪ್ರತಿಭಟನಾ ಸ್ಥಳದಲ್ಲಿದ್ದ ಪೆಂಡಾಲ್‌ ಅನ್ನು ತೆಗೆದುಹಾಕಲಾಯಿತು. ಕಾರ್ಮಿಕರಿಗೆ ಶಾಂತಿಯುತ ಪ್ರತಿಭಟನೆಗೆ ಹಕ್ಕಿದೆ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ ನಂತರವೂ ಪೊಲೀಸ್ ಸಿಬ್ಬಂದಿ ಕಾರ್ಮಿಕರನ್ನು ಬಂಧಿಸಿದ್ದರು. ಇದರ ವಿರುದ್ದ ಸಿಐಟಿಯು ಈಗಾಗಲೇ ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಒಟ್ಟಿನಲ್ಲಿ ಒಂದು ತಿಂಗಳ ಬಳಿಕ ಸರ್ಕಾರ ಮತ್ತು ಕಂಪನಿ ಕನಿಷ್ಠ ಪಕ್ಷ ಕಾರ್ಮಿಕರ ಬೇಡಿಕೆ ಅಳಿಸಲು ಮುಂದಾಗಿದೆ. ಕಾರ್ಮಿಕರ ಬೇಡಿಕೆಗೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದರೆ ಪ್ರತಿಭಟನೆ ಅಂತ್ಯಗೊಳ್ಳಬಹುದು. ಪ್ರಸ್ತುತ ಸರ್ಕಾರ ಮುಷ್ಕರ ಕೈ ಬಿಟ್ಟಿದ್ದಾರೆ ಎಂದು ಘೋಷಣೆ ಮಾಡಿದೆ. ಆದರೆ, ಕಾರ್ಮಿಕರು ಇಂದು ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ.

ಇದನ್ನೂ ಓದಿ : ವಯನಾಡ್ ಕ್ಷೇತ್ರದ ಉಪಚುನಾವಣೆ ಘೋಷಣೆ | ಪ್ರಿಯಾಂಕಾ ಸ್ಪರ್ಧೆಗೆ ಅಖಾಡ ರೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...