Homeಮುಖಪುಟಅಣ್ಣಾಮಲೈ, ಪಳನಿಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ

ಅಣ್ಣಾಮಲೈ, ಪಳನಿಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ವ್ಯಾಪಕವಾಗಿರುವ ಮಾದಕ ದ್ರವ್ಯ ದಂಧೆ ಜೊತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಸಂಬಂಧ ಕಲ್ಪಿಸಿ ಭಾಷಣ ಮಾಡಿದ್ದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧ ತಮಿಳುನಾಡು ಸರ್ಕಾರ ಚೆನ್ನೈನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಎರಡು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳನ್ನು ದಾಖಲಿಸಿದೆ.

ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಕೋರರಿಗೆ ನೆರವು ನೀಡುವ ಮೂಲಕ ಮುಖ್ಯಮಂತ್ರಿ ದಂಧೆಯಲ್ಲಿ ಶಾಮಿಲಾಗಿದ್ದಾರೆ ಎಂದು ಅಣ್ಣಾಮಲೈ ಮತ್ತು ಪಳನಿಸ್ವಾಮಿ ಇಬ್ಬರೂ ಆರೋಪಿಸಿದ್ದರು.

ಸಿಆರ್‌ಪಿಸಿಯ ಸೆಕ್ಷನ್ 199(2) ರ ಅಡಿಯಲ್ಲಿ ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ ಮೂಲಕ ಇಬ್ಬರು ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ. ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಮತ್ತು ಮುಖ್ಯಮಂತ್ರಿಯ ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಮಾದಕ ವ್ಯಸನ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ರಾಜ್ಯದ ಮಾದಕ ದ್ರವ್ಯ ವಿತರಣೆ ಜೊತೆ ಸಿಎಂಗೆ ಸಂಬಂಧ ಕಲ್ಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾಧಕ ದ್ಯವ್ಯ ದಂಧೆ ಮಟ್ಟ ಹಾಕಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ದೂರಿನಲ್ಲಿ ಎತ್ತಿ ತೋರಿಸಲಾಗಿದೆ. ಸರ್ಕಾರ ಗಾಂಜಾ ಶೂನ್ಯ ಕೃಷಿ ಸ್ಥಿತಿ ಕಾಯ್ದುಕೊಂಡಿದೆ. ಅಂತಾರಾಜ್ಯ ಡ್ರಗ್ ಕಾರ್ಟೆಲ್‌ಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತಿದೆ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಯುವ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಲಾಗಿದೆ.

ಡ್ರಗ್ಸ್ ದಂಧೆ-ನಿರ್ಮಾಪಕ, ಮಾಜಿ ಡಿಎಂಕೆ ನಾಯಕನ ಬಂಧನ

ಬರೋಬ್ಬರಿ 2000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಿದೇಶಕ್ಕೆ ಸಾಗಿಸಿದ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸಿನಿಮಾ ನಿರ್ಮಾಪಕ ಮತ್ತು ಮಾಜಿ ಡಿಎಂಕೆ ನಾಯಕ ಜಾಫರ್ ಸಾದಿಕ್ ಅವರನ್ನು ಬಂಧಿಸಿದೆ.

ನಾಲ್ಕು ತಿಂಗಳಿನಿಂದ ಜಾಫರ್‌ಗಾಗಿ ಎನ್‌ಸಿಬಿ ಹುಡುಕಾಟ ನಡೆಸುತ್ತಿತ್ತು. ಭಾರತ-ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಡ್ರಗ್ಸ್ ಕಳ್ಳಸಾಗಣೆ ಜಾಲದ ಕಿಂಗ್‌ಪಿನ್ ಸಾದಿಕ್ ಎಂದು ಎನ್‌ಸಿಬಿ ಬಣ್ಣಿಸಿದೆ. ಇವರು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ 2,000 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಎನ್‌ಸಿಬಿ ಪ್ರಕಾರ, ಜಾಫರ್ ಸಾದಿಕ್ 3,500 ಕೆಜಿ ಸೂಡೊಫೆಡ್ರಿನ್ ಅನ್ನು ವಿದೇಶಕ್ಕೆ 45 ಕ್ಕೂ ಹೆಚ್ಚು ಬಾರಿ ಕಳುಹಿಸಿದ್ದಾರೆ. ಫೆಬ್ರವರಿ 29 ರಂದು ಮಧುರೈನಲ್ಲಿ 36 ಕೆಜಿ ಡ್ರಗ್ಸ್ ಕಳ್ಳಸಾಗಣೆಗಾಗಿ ಒಂದೆರಡು ರೈಲು ಪ್ರಯಾಣಿಕರನ್ನು ಅಧಿಕಾರಿಗಳು ಬಂಧಿಸಿದ್ದರು. ಅವರು ನೀಡಿದ ಮಾಹಿತಿ ಆಧರಿಸಿ ಚೆನ್ನೈನ ಕೊಡುಂಗೈಯೂರ್ ಡಂಪಿಂಗ್ ಯಾರ್ಡ್ ನಿಂದ 180 ಕೋಟಿ ರೂಪಾಯಿ ಮೌಲ್ಯದ ಮೆಥಾಂಫೆಟಮೈನ್ ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ದ್ರವ್ಯಗಳನ್ನು ಶ್ರೀಲಂಕಾಕ್ಕೆ ಕಳ್ಳಸಾಗಣೆ ಮಾಡಲು ಸಿದ್ದತೆ ನಡೆಸಲಾಗಿತ್ತು.

ಸಾದಿಕ್ ಚಿತ್ರರಂಗದ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮಿಯೂ ಆಗಿದ್ದಾರೆ. ಅವರು ಇದುವರೆಗೆ ನಾಲ್ಕು ಸಿನಿಮಾ ಮಾಡಿದ್ದಾರೆ. ಇರೈವನ್ ಮಿಗ ಪೆರಿಯವನ್, ಮಾಯಾವಲೈ ಮತ್ತು ಮಂಗೈ ಈ ಮೂರು ಚಿತ್ರಗಳು ಬಿಡುಗಡೆಯಾಗಿವೆ. ಅವರ ನಾಲ್ಕನೇ ಚಿತ್ರ VR07 ಈ ತಿಂಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ.

ಜಾಫರ್ ಸಾದಿಕ್ ಯಾರು?

ನಿರ್ಮಾಪಕ ಜಾಫರ್ ಸಾದಿಕ್ 2010ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಅವರು ಡಿಎಂಕೆಯ ಎನ್‌ಆರ್‌ಐ ವಿಭಾಗದ ಚೆನ್ನೈ ವೆಸ್ಟ್ ಉಪ ಸಂಘಟಕರಾಗಿದ್ದರು. ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಾದಿಕ್ ಅವರನ್ನು ಕಳೆದ ತಿಂಗಳು ಡಿಎಂಕೆಯಿಂದ ಉಚ್ಛಾಟಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರು ಜಾಫರ್ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ರಾಜ್ಯ ಸಚಿವ ಉದಯನಿಧಿ ಸ್ಟಾಲಿನ್ ಸೇರಿದಂತೆ ಹಲವು ರಾಜಕಾರಣಿಗಳೊಂದಿಗೆ ಜಾಫರ್ ಅವರ ಫೋಟೋಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ : ಶರದ್ ಪವಾರ್ ಹೆಸರು, ಫೋಟೋ ದುರ್ಬಳಕೆ ಆರೋಪ: ಅಜಿತ್‌ ಪವಾರ್‌ ಬಣದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...