Homeಮುಖಪುಟಅಣ್ಣಾಮಲೈ, ಪಳನಿಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ

ಅಣ್ಣಾಮಲೈ, ಪಳನಿಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ವ್ಯಾಪಕವಾಗಿರುವ ಮಾದಕ ದ್ರವ್ಯ ದಂಧೆ ಜೊತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಸಂಬಂಧ ಕಲ್ಪಿಸಿ ಭಾಷಣ ಮಾಡಿದ್ದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧ ತಮಿಳುನಾಡು ಸರ್ಕಾರ ಚೆನ್ನೈನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಎರಡು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳನ್ನು ದಾಖಲಿಸಿದೆ.

ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಕೋರರಿಗೆ ನೆರವು ನೀಡುವ ಮೂಲಕ ಮುಖ್ಯಮಂತ್ರಿ ದಂಧೆಯಲ್ಲಿ ಶಾಮಿಲಾಗಿದ್ದಾರೆ ಎಂದು ಅಣ್ಣಾಮಲೈ ಮತ್ತು ಪಳನಿಸ್ವಾಮಿ ಇಬ್ಬರೂ ಆರೋಪಿಸಿದ್ದರು.

ಸಿಆರ್‌ಪಿಸಿಯ ಸೆಕ್ಷನ್ 199(2) ರ ಅಡಿಯಲ್ಲಿ ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ ಮೂಲಕ ಇಬ್ಬರು ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ. ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಮತ್ತು ಮುಖ್ಯಮಂತ್ರಿಯ ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಮಾದಕ ವ್ಯಸನ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ರಾಜ್ಯದ ಮಾದಕ ದ್ರವ್ಯ ವಿತರಣೆ ಜೊತೆ ಸಿಎಂಗೆ ಸಂಬಂಧ ಕಲ್ಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾಧಕ ದ್ಯವ್ಯ ದಂಧೆ ಮಟ್ಟ ಹಾಕಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ದೂರಿನಲ್ಲಿ ಎತ್ತಿ ತೋರಿಸಲಾಗಿದೆ. ಸರ್ಕಾರ ಗಾಂಜಾ ಶೂನ್ಯ ಕೃಷಿ ಸ್ಥಿತಿ ಕಾಯ್ದುಕೊಂಡಿದೆ. ಅಂತಾರಾಜ್ಯ ಡ್ರಗ್ ಕಾರ್ಟೆಲ್‌ಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತಿದೆ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಯುವ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಲಾಗಿದೆ.

ಡ್ರಗ್ಸ್ ದಂಧೆ-ನಿರ್ಮಾಪಕ, ಮಾಜಿ ಡಿಎಂಕೆ ನಾಯಕನ ಬಂಧನ

ಬರೋಬ್ಬರಿ 2000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಿದೇಶಕ್ಕೆ ಸಾಗಿಸಿದ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸಿನಿಮಾ ನಿರ್ಮಾಪಕ ಮತ್ತು ಮಾಜಿ ಡಿಎಂಕೆ ನಾಯಕ ಜಾಫರ್ ಸಾದಿಕ್ ಅವರನ್ನು ಬಂಧಿಸಿದೆ.

ನಾಲ್ಕು ತಿಂಗಳಿನಿಂದ ಜಾಫರ್‌ಗಾಗಿ ಎನ್‌ಸಿಬಿ ಹುಡುಕಾಟ ನಡೆಸುತ್ತಿತ್ತು. ಭಾರತ-ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಡ್ರಗ್ಸ್ ಕಳ್ಳಸಾಗಣೆ ಜಾಲದ ಕಿಂಗ್‌ಪಿನ್ ಸಾದಿಕ್ ಎಂದು ಎನ್‌ಸಿಬಿ ಬಣ್ಣಿಸಿದೆ. ಇವರು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ 2,000 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಎನ್‌ಸಿಬಿ ಪ್ರಕಾರ, ಜಾಫರ್ ಸಾದಿಕ್ 3,500 ಕೆಜಿ ಸೂಡೊಫೆಡ್ರಿನ್ ಅನ್ನು ವಿದೇಶಕ್ಕೆ 45 ಕ್ಕೂ ಹೆಚ್ಚು ಬಾರಿ ಕಳುಹಿಸಿದ್ದಾರೆ. ಫೆಬ್ರವರಿ 29 ರಂದು ಮಧುರೈನಲ್ಲಿ 36 ಕೆಜಿ ಡ್ರಗ್ಸ್ ಕಳ್ಳಸಾಗಣೆಗಾಗಿ ಒಂದೆರಡು ರೈಲು ಪ್ರಯಾಣಿಕರನ್ನು ಅಧಿಕಾರಿಗಳು ಬಂಧಿಸಿದ್ದರು. ಅವರು ನೀಡಿದ ಮಾಹಿತಿ ಆಧರಿಸಿ ಚೆನ್ನೈನ ಕೊಡುಂಗೈಯೂರ್ ಡಂಪಿಂಗ್ ಯಾರ್ಡ್ ನಿಂದ 180 ಕೋಟಿ ರೂಪಾಯಿ ಮೌಲ್ಯದ ಮೆಥಾಂಫೆಟಮೈನ್ ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ದ್ರವ್ಯಗಳನ್ನು ಶ್ರೀಲಂಕಾಕ್ಕೆ ಕಳ್ಳಸಾಗಣೆ ಮಾಡಲು ಸಿದ್ದತೆ ನಡೆಸಲಾಗಿತ್ತು.

ಸಾದಿಕ್ ಚಿತ್ರರಂಗದ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮಿಯೂ ಆಗಿದ್ದಾರೆ. ಅವರು ಇದುವರೆಗೆ ನಾಲ್ಕು ಸಿನಿಮಾ ಮಾಡಿದ್ದಾರೆ. ಇರೈವನ್ ಮಿಗ ಪೆರಿಯವನ್, ಮಾಯಾವಲೈ ಮತ್ತು ಮಂಗೈ ಈ ಮೂರು ಚಿತ್ರಗಳು ಬಿಡುಗಡೆಯಾಗಿವೆ. ಅವರ ನಾಲ್ಕನೇ ಚಿತ್ರ VR07 ಈ ತಿಂಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ.

ಜಾಫರ್ ಸಾದಿಕ್ ಯಾರು?

ನಿರ್ಮಾಪಕ ಜಾಫರ್ ಸಾದಿಕ್ 2010ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಅವರು ಡಿಎಂಕೆಯ ಎನ್‌ಆರ್‌ಐ ವಿಭಾಗದ ಚೆನ್ನೈ ವೆಸ್ಟ್ ಉಪ ಸಂಘಟಕರಾಗಿದ್ದರು. ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಾದಿಕ್ ಅವರನ್ನು ಕಳೆದ ತಿಂಗಳು ಡಿಎಂಕೆಯಿಂದ ಉಚ್ಛಾಟಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರು ಜಾಫರ್ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ರಾಜ್ಯ ಸಚಿವ ಉದಯನಿಧಿ ಸ್ಟಾಲಿನ್ ಸೇರಿದಂತೆ ಹಲವು ರಾಜಕಾರಣಿಗಳೊಂದಿಗೆ ಜಾಫರ್ ಅವರ ಫೋಟೋಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ : ಶರದ್ ಪವಾರ್ ಹೆಸರು, ಫೋಟೋ ದುರ್ಬಳಕೆ ಆರೋಪ: ಅಜಿತ್‌ ಪವಾರ್‌ ಬಣದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...