Homeಮುಖಪುಟರಾಜ್ಯಪಾಲರ ಬಾಲಿಶ ವರ್ತನೆಗೆ ನಾವು ಹೆದರುವುದಿಲ್ಲ: ಎಂಕೆ ಸ್ಟಾಲಿನ್

ರಾಜ್ಯಪಾಲರ ಬಾಲಿಶ ವರ್ತನೆಗೆ ನಾವು ಹೆದರುವುದಿಲ್ಲ: ಎಂಕೆ ಸ್ಟಾಲಿನ್

- Advertisement -
- Advertisement -

ನಮ್ಮ ಸರ್ಕಾರವು ನಿರಂಕುಶ ಆಡಳಿತಕ್ಕೆ ಸವಾಲು ಹಾಕುತ್ತಿದೆ. ರಾಜ್ಯಪಾಲ ಆರ್‌ಎನ್ ರವಿ ಅವರ “ಬಾಲಿಶ ನಡವಳಿಕೆ”ಗಳಿಗೆ ನಾವು ಹೆದರುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಹೇಳಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ರಾಜ್ಯಪಾಲರು ತಮ್ಮ ರಾಜಕೀಯ ಚಟುವಟಿಕೆಗಳಿಗೆ ವಿಧಾನಸಭೆಯನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಡ್ರಾವಿಡ ಮಾದರಿ ಸರ್ಕಾರ ಈ ಹಿಂದೆ ಹಲವು ಸವಾಲುಗಳನ್ನು ಎದುರಿಸಿದೆ. ಮುಂದೆಯೂ ಎಲ್ಲಾ ಅಡೆತಡೆಗಳನ್ನು ಬೇಧಿಸಲಿದ್ದೇವೆ ಎಂದಿದ್ದಾರೆ.

ಸಿದ್ಧಪಡಿಸಿದ ಭಾಷಣ ಓದಲು ರಾಜ್ಯಪಾಲ ಆರ್‌.ಎನ್ ರವಿ ನಿರಾಕರಿಸಿದ್ದನ್ನು ಉಲ್ಲೇಖಿಸಿದ ಸ್ಟಾಲಿನ್, “ಅಡೆತಡೆಗಳನ್ನು ಬೇಧಿಸುವ ಸಾಮರ್ಥ್ಯವಿರುವ ಚಳವಳಿಯ ನಾಯಕನಾಗಿ, ನನ್ನ ಸಾಮರ್ಥ್ಯದಲ್ಲಿ ನಾನು ಮುತ್ತುವೇಲ್ ಕರುಣಾನಿಧಿ ಸ್ಟಾಲಿನ್ ಎಂದು ಹೇಳುತ್ತೇನೆ. ನನ್ನನ್ನು ಸೋಲಿಸಲು ಅಥವಾ ನಿಲ್ಲಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಭಾಷಣ ಮಾಡಬೇಕೆಂದು ಶಿಷ್ಟಾಚಾರದ ಬೇಡಿಕೆಯಾಗಿವೆ. ಆದರೆ, ರಾಜ್ಯಪಾಲರು ವಿಧಾನಸಭೆಯನ್ನು ತಮ್ಮ ರಾಜಕೀಯ ಚಟುವಟಿಕೆಗಳಿಗಾಗಿ ಬಳಸಿಕೊಳ್ಳುತ್ತಿದ್ದಾರೆ. ಇದು ಶತಮಾನದಷ್ಟು ಹಳೆಯದಾದ ವಿಧಾನಸಭೆಯನ್ನು ಅವಹೇಳನ ಮಾಡಿದ ಕೃತ್ಯವಲ್ಲವೇ? ಇದು ತಮಿಳುನಾಡಿನ ಜನತೆಯನ್ನು ಕೆಣಕುವ ಕಾರ್ಯವಾಗಿರಲಿಲ್ಲವೇ? ಅವರು ಪ್ರಮಾಣ ವಚನ ಸ್ವೀಕರಿಸಿದ ಸಂವಿಧಾನವನ್ನು ಉಲ್ಲಂಘಿಸುವುದು ಮತ್ತು ಅವಹೇಳನ ಮಾಡುವುದಲ್ಲವೇ? ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಉತ್ತರ ಭಾರತ ಪ್ರಗತಿಯಲ್ಲಿದೆ, ದಕ್ಷಿಣ ಸೊರಗುತ್ತಿದೆ ಎಂದು ಹೇಳುತ್ತಿದ್ದ ಕಾಲವೊಂದಿತ್ತು. ಈಗ ದಕ್ಷಿಣ ಭಾರತ ಬೆಳವಣಿಗೆ ಸಾಧಿಸಿದ್ದು, ಉತ್ತರದ ಪ್ರಗತಿಗೆ ಕೊಡುಗೆ ನೀಡುತ್ತಿದೆ. ದ್ರಾವಿಡ ಚಳವಳಿಯಿಂದಾಗಿ ಈ ಬೆಳವಣಿಗೆ ಸಾಧ್ಯವಾಯಿತು. ಸರ್ಕಾರ ಕೇವಲ ಅಧಿಕಾರ ಚಲಾಯಿಸುವುದಕ್ಕಲ್ಲ, ನಮ್ಮ ಸಿದ್ಧಾಂತವನ್ನು ಅನುಷ್ಠಾನಗೊಳಿಸುವ ಸಾಧನವಾಗಿದೆ. ನಮ್ಮ ಸರ್ಕಾರದ 33 ತಿಂಗಳು ಅಭಿವೃದ್ಧಿ ಮತ್ತು ಸಾಧನೆಗಳ ತಿಂಗಳು ಎಂದು ಸಾಬೀತುಪಡಿಸಿದೆ. ಭಾರತದ ಆರ್ಥಿಕತೆಯಲ್ಲಿ ತಮಿಳುನಾಡಿನ ಪಾಲು ಶೇ. 90 ಆಗಿದೆ. ಇದು ನಮ್ಮ ಸರ್ಕಾರದ ಮೊದಲ ಸಾಧನೆಯಾಗಿದೆ. ನಮ್ಮ ಸರ್ಕಾರ ದಬ್ಬಾಳಿಕೆ ಮಾಡುವ ಶಕ್ತಿಗಳನ್ನು ತೊಡೆದು ಹಾಕುತ್ತಿರುವುದರಿಂದ ಮತ್ತು ತುಳಿತಕ್ಕೊಳಗಾದವರನ್ನು ಮೇಲಕ್ಕೆತ್ತಿರುವುದರಿಂದ ನಮ್ಮ ವಿರೋಧಿಗಳು ನಿರಾಶೆಗೊಂಡಿದ್ದಾರೆ ಎಂದು ಸ್ಟಾಲಿನ್ ಹೇಳಿದರು.

ಇದನ್ನೂ ಓದಿ : ಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...