HomeಮುಖಪುಟLGBTQIA+ ಕರಡು ನೀತಿ: ಜ.20ರಂದು ಸಾರ್ವಜನಿಕ ಸಮಾಲೋಚನೆ

LGBTQIA+ ಕರಡು ನೀತಿ: ಜ.20ರಂದು ಸಾರ್ವಜನಿಕ ಸಮಾಲೋಚನೆ

- Advertisement -
- Advertisement -

ತಮಿಳುನಾಡು LGBTQIA+ ಕರಡು ನೀತಿಯ ಕುರಿತು ಜನವರಿ 20ರಂದು ಚೆನ್ನೈನಲ್ಲಿ ಸಾರ್ವಜನಿಕ ಸಮಾಲೋಚನೆ ಸಭೆಯು ನಡೆಯಲಿದ್ದು,  ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ತೃತೀಯಲಿಂಗಿ ಕಲ್ಯಾಣ ಮಂಡಳಿಯು ಸಮಾಲೋಚನಾ ಸಭೆಗೆ ನೋಂದಾಯಿಸಲು ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಆಗ್ರಹಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರ ನೇತೃತ್ವದ 11 ಸದಸ್ಯರ ಸಮಿತಿಯು ಈ ನೀತಿಯನ್ನು ರೂಪಿಸಿದ್ದು, ಸಮಾಲೋಚನೆಯ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಕಳೆದ ವರ್ಷ ಜುಲೈನಲ್ಲಿ LGBTQIA+ ಸಮುದಾಯಕ್ಕೆ ನೀತಿಯನ್ನು ಸಿದ್ಧಪಡಿಸಲು ರಾಜ್ಯ ಸರ್ಕಾರವು ಕರಡು ಸಮಿತಿಯನ್ನು ರಚಿಸಿತ್ತು. ಜನವರಿ 20ರಂದು ಬೆಳಿಗ್ಗೆ 10.30ಕ್ಕೆ ಕಾಮರಾಜರ ಸಾಲಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಕರಡು ಕುರಿತು ಸಾರ್ವಜನಿಕ ಚರ್ಚೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸಲು ಆಸಕ್ತರು ಭಾಗವಹಿಸುವಿಕೆ ಬಗ್ಗೆ ನೋಂದಾಯಿಸಿಕೊಳ್ಳುವಂತೆ ಸರ್ಕಾರ ವಿನಂತಿಸಿದೆ. ನೋಂದಾಯಿಸಿದವರಿಗೆ ಮಾತ್ರ ಸಭೆಗೆ ಹಾಜರಾಗಲು ಅವಕಾಶವಿರುತ್ತದೆ.

ನೋಂದಾವಣೆಗೆ ಕ್ಲಿಕ್ ಮಾಡಿ:https://tg.tnsw.in/webapp/pmreg.aspx

ಅಕ್ಟೋಬರ್ 2022ರಲ್ಲಿ ರಾಜ್ಯ ಯೋಜನಾ ಆಯೋಗವು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಕರಡು ನೀತಿಯನ್ನು ಸಲ್ಲಿಸಿತ್ತು. ನಂತರ ಅದನ್ನು ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣ ಇಲಾಖೆಗೆ ರವಾನಿಸಲಾಯಿತು. ಸಮಾಜ ಕಲ್ಯಾಣ ನಿರ್ದೇಶಕರು ನಂತರ LGBTQIA + ಸಮುದಾಯದ ವ್ಯಕ್ತಿಗಳನ್ನು ಒಳಗೊಂಡಂತೆ ಕರಡು ಸಮಿತಿಯ ರಚನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದ್ದರು. ಅದರ ಆಧಾರದ ಮೇಲೆ ಅಂತಿಮ ನೀತಿಯನ್ನು ರೂಪಿಸಲು ಸರ್ಕಾರ ಜೂನ್ 2023ರಲ್ಲಿ ಸಮಿತಿಯನ್ನು ರಚಿಸಿತ್ತು.

ಸಮಿತಿಯಲ್ಲಿ ಟ್ರಾನ್ಸ್‌ಜೆಂಡರ್ ಕಾರ್ಯಕರ್ತೆ ಕಲೈಮಾಮಣಿ ಸುಧಾ, ತಮಿಳುನಾಡು ಟ್ರಾನ್ಸ್ಜೆಂಡರ್ ಕಲ್ಯಾಣ ಮಂಡಳಿಯ ಅರುಣ್ ಕಾರ್ತಿಕ್ ಮತ್ತು ಮನಶ್ಶಾಸ್ತ್ರಜ್ಞ ಡಾ ವಿದ್ಯಾ ದಿನಕರನ್, ಎಲ್ ರಾಮಕೃಷ್ಣನ್, ದಲಿತ ಕಾರ್ಯಕರ್ತ ವಿನೋದನ್, LGBTQIA+ ಕಾರ್ಯಕರ್ತ ಬುಸೈನಾ ಅಹಮದ್ ಶಾ, ಮದ್ರಾಸ್ ಹೈಕೋರ್ಟ್ ವಕೀಲ ಅಜೀತ ಬಿಎಸ್, ಐಐಟಿ ಮದ್ರಾಸ್ ಅಸೋಸಿಯೇಟ್ ಪ್ರೊಫೆಸರ್ ಟಿಜು ಥಾಮಸ್ ಸಮಿತಿಯಲ್ಲಿದ್ದಾರೆ.

ಇದನ್ನು ಓದಿ: ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...