Homeಮುಖಪುಟಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

- Advertisement -
- Advertisement -

ಶಾಲಾ ಶಿಕ್ಷಣಕ್ಕಾಗಿ ರೂಪಿಸಿರುವ ಸಮಗ್ರ ಶಿಕ್ಷಣ (ಎಸ್‌ಎಸ್‌) ಯೋಜನೆಗೆ ನೀಡಬೇಕಾದ ತನ್ನ ಪಾಲಿನ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ತ್ರಿಭಾಷಾ ಸೂತ್ರ ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ನಿಬಂಧನೆಗಳು ಒಳಗೊಂಡಿರುವ ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ತಮಿಳುನಾಡು ನಿರಾಕರಿಸಿದ ಹಿನ್ನೆಲೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಮಿಳುನಾಡು ಸರ್ಕಾರ, ಮೇ 1,2025 ರಿಂದ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥಗೊಳ್ಳುವವರಗೆ 2,151.59 ಕೋಟಿ ರೂಪಾಯಿ ಮೂಲ ಮೊತ್ತದ ಮೇಲೆ ವಾರ್ಷಿಕ ಶೇ. 6 ದರದಲ್ಲಿ ಭವಿಷ್ಯದ ಬಡ್ಡಿಯೊಂದಿಗೆ 2,291.30 ಕೋಟಿ ರೂಪಾಯಿಯನ್ನು ನ್ಯಾಯಾಲಯ ನಿಗದಿಪಡಿಸುವ ಸಮಯದೊಳಗೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದೆ.

ಶನಿವಾರ ಚೆನ್ನೈನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ಅನುದಾನ ತಡೆ ಹಿಡಿದ ಬಗ್ಗೆ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಘೋಷಿಸಿದ್ದರು. ಕಳೆದ ಏಪ್ರಿಲ್‌ನಲ್ಲಿ ರಾಜ್ಯಪಾಲ ಆರ್.ಎನ್. ರವಿ ವಿರುದ್ಧದ ಪ್ರಕರಣದಲ್ಲಿ ಬಂದಂತೆ ಅನುಕೂಲಕರ ತೀರ್ಪು ಬರುವ ಭರವಸೆ ವ್ಯಕ್ತಪಡಿಸಿದ್ದರು.

ಕೇಂದ್ರ ಸರ್ಕಾರವು ಶಿಕ್ಷಣ ಯೋಜನೆಗಳಿಗೆ ಬಿಡುಗಡೆ ಮಾಡಬೇಕಾದ ಅನುದಾನಗಳನ್ನು ಪ್ರತ್ಯೇಕ ಕೇಂದ್ರ ಪ್ರಾಯೋಜಿತ ಯೋಜನೆಯಾದ ಪಿಎಂಶ್ರಿ ಜೊತೆ ಲಿಂಕ್ ಮಾಡಲು ಉದ್ದೇಶಿಸಿದೆ. ಈ ಮೂಲಕ ತ್ರಿಭಾಷಾ ಸೂತ್ರ ಸೇರಿದಂತೆ ಎನ್‌ಇಪಿಯ ನಿಬಂಧನೆಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ ಎಂದು ವರದಿಯಾಗಿದೆ.

ಸಮಗ್ರ ಶಿಕ್ಷಣ ಯೋಜನೆಗಳ ಅನುದಾನ ನೀಡದೆ ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ. ಇದು ಪಟ್ಟಿ IIIರ ನಮೂದು 25 ಅಡಿಯಲ್ಲಿ ಕಾನೂನು ರೂಪಿಸಲು ರಾಜ್ಯ ಸರ್ಕಾರ ಹೊಂದಿರುವ ಅಧಿಕಾರವನ್ನು ಕಸಿದು ಕಸಿದುಕೊಳ್ಳುವ ಪ್ರಯತ್ನವಾಗಿದೆ. ಕೇಂದ್ರ ಸರ್ಕಾರ ಎನ್‌ಇಪಿಯನ್ನು ಹೇರುವ ಮೂಲಕ ಪ್ರಸ್ತುತ ಇರುವ ಶಿಕ್ಷಣ ನೀತಿಯನ್ನು ಕೈಬಿಡಲು ಒತ್ತಾಯಿಸುತ್ತಿದೆ ದೂರಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಔಪಚಾರಿಕ ಒಪ್ಪಂದ ಮಾಡಿಕೊಳ್ಳುವವರೆಗೆ ಎನ್‌ಇಪಿ- 2020 ಮತ್ತು ಪಿಎಂಶ್ರಿ ಯೋಜನೆಯು ತಮಿಳುನಾಡಿಗೆ ಅನ್ವಯಿಸುವುದಿಲ್ಲ ಎಂದು ಘೋಷಿಸಲು ನ್ಯಾಯಾಲಯವನ್ನು ಕೋರಿದೆ.

ಸಮಗ್ರ ಶಿಕ್ಷಣ ಯೋಜನೆಯ ಅನುದಾನವನ್ನು ಪಿಎಂಶ್ರಿ ಯೋಜನೆಯ ಜೊತೆಗೆ ಲಿಂಕ್ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ‘ಅಸಂವಿಧಾನಿಕ, ಕಾನೂನುಬಾಹಿರ, ಅನಿಯಂತ್ರಿತ ಮತ್ತು ಅಸಮಂಜಸ’ ಎಂದು ಘೋಷಿಸಲು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಫೆಬ್ರವರಿ 23 ಮತ್ತು ಮಾರ್ಚ್ 7, 2024 ರಂದು ಕೇಂದ್ರ ಶಿಕ್ಷಣ ಸಚಿವಾಲಯ ಬರೆದ ಪತ್ರಗಳು ‘ಕಾನೂನುಬಾಹಿರ, ಅನೂರ್ಜಿತ’ ಮತ್ತು ರಾಜ್ಯಕ್ಕೆ ಅನ್ವಯ ಆಗುವುದಿಲ್ಲ’ ಎಂದು ಘೋಷಿಸಲು ಸಹ ಕೋರಿದೆ.

ಈಗಾಗಲೇ ಕೋರಿರುವ ಹಣವನ್ನು ಬಡ್ಡಿಯೊಂದಿಗೆ ಬಿಡುಗಡೆ ಮಾಡುವುದರ ಜೊತೆಗೆ, ಪ್ರತಿ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಮತ್ತು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ಮಿತಿಯೊಳಗೆ 2009ರ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಅನುಷ್ಠಾನಕ್ಕೆ ಅಗತ್ಯವಾದ ಅನುದಾನವನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ತನ್ನ ಶಾಸನಬದ್ಧ ಬಾಧ್ಯತೆಗಳನ್ನು ಅನುಸರಿಸಲು ಮತ್ತು ನಿರ್ವಹಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...