Homeಮುಖಪುಟಸಂಸತ್ತಿನ ಭದ್ರತಾ ಲೋಪದ ಬಗ್ಗೆ ಸುಳ್ಳು ಪೋಸ್ಟ್‌: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಸುಳ್ಳು ಪೋಸ್ಟ್‌: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪದ ಘಟನೆಯ ಬಗ್ಗೆ ಸುಳ್ಳು ಪೋಸ್ಟ್‌ ಮಾಡಿದ ಆರೋಪದ ಮೇಲೆ ತಿರುಚ್ಚಿ ಪೊಲೀಸ್ ಸೈಬರ್ ಕ್ರೈಂ ವಿಭಾಗವು ಬಿಜೆಪಿ ಯುವ ಘಟಕದ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲಿಸಿದೆ.

ಬಿಜೆಪಿ ಯುವ ಘಟಕದ ಕಾರ್ಯಕರ್ತ ಪ್ರವೀಣ್‌ರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ‘ಸಂಘಿ ಪ್ರಿನ್ಸ್’ ಎಂಬ ಎಕ್ಸ್‌ ಖಾತೆಯಲ್ಲಿ ಬಿಜೆಪಿ ಯುವ ಘಟಕದ ಕಾರ್ಯಕರ್ತ ಪ್ರವೀಣ್‌ರಾಜ್, ಧರ್ಮಪುರಿ ಕ್ಷೇತ್ರದ ಡಿಎಂಕೆ ಸಂಸದ ಡಾ ಸೆಂಥಿಲ್ ಕುಮಾರ್ ಸಂಸತ್ತಿನ ಒಳಗೆ ಜಿಗಿದ ದುಷ್ಕರ್ಮಿಗಳಿಗೆ ಪಾಸ್ ವಿತರಿಸಿದ್ದರು ಎಂದು ಸುಳ್ಳು ಪೋಸ್ಟ್‌ ಮಾಡಿದ್ದರು. ಆರೋಪಿ ತಮಿಳುನಾಡು ಬಿಜೆಪಿಯ ಯುವ ಘಟಕದ ಸಾಮಾಜಿಕ ಮಾದ್ಯಮ ಉಸ್ತುವಾರಿಯೂ ಕೂಡ ಆಗಿದ್ದಾನೆ.

ವಕೀಲ ಆರೋಕಿಯದಾಸ್ ಅವರ ದೂರಿನ ಮೇರೆಗೆ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಆರೋಪಿ ವಿರುದ್ಧ  ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504, 505(1)(ಬಿ) ಮತ್ತು ಮಾಹಿತಿ ತಂತ್ರಜ್ಞಾನ (IT) ಕಾಯಿದೆಯ ಸೆಕ್ಷನ್ 66ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ನಾಮಕ್ಕಲ್ ಜಿಲ್ಲೆಯ ರಾಶಿಪುರಂ ನಿವಾಸಿಯಾಗಿರುವ ಪ್ರವೀಣ್‌ರಾಜ್ ಅಲ್ಲಿಂದ ತಲೆಮರೆಸಿಕೊಂಡಿದ್ದಾನೆ.

ಪ್ರವೀಣ್‌ರಾಜ್ ಪೋಸ್ಟ್‌ನಲ್ಲಿ ಏನಿತ್ತು?

ಡಿ.13ರಂದು ಸಂಸತ್ತಿನಲ್ಲಿ ಭದ್ರತಾ ಲೋಪ ಘಟನೆ ಸಂಭವಿಸಿದ ದಿನ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪ್ರವೀಣ್‌ರಾಜ್, ಲೋಕಸಭೆಯಲ್ಲಿ ಭದ್ರತಾ ಲೋಪ ಏಕೆ ಸಂಭವಿಸಿದೆ ಎಂದು ನಿಮಗೆ ತಿಳಿದಿದೆಯೇ? ನಿಮ್ಮಂತಹ ಬೇಜವಾಬ್ದಾರಿ ಸಂಸದರು, ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರಕ್ಕಾಗಿ ಹಿನ್ನೆಲೆ ಪರಿಶೀಲನೆ ಇಲ್ಲದೆ ಸಂದರ್ಶಕರಿಗೆ ಪಾಸ್‌ಗಳನ್ನು ಹಂಚುತ್ತಿದ್ದರು. ಸಂಸತ್ತಿನ ದಾಳಿ, ಈ ಆಪಾದನೆಯ ಜವಾಬ್ದಾರಿಯನ್ನು  ನೀವು ತೆಗೆದುಕೊಳ್ಳಿ ಎಂದು ಪೋಸ್ಟ್‌ ಮಾಡಿದ್ದ.

ಪ್ರವೀಣ್‌ರಾಜ್ ವಿರುದ್ಧ ಈ ಹಿಂದೆ ಕೂಡ ಪ್ರಕರಣ ದಾಖಲಾಗಿತ್ತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪ್ರವೀಣ್‌ರಾಜ್ ಅವರನ್ನು ಈ ವರ್ಷದ ಅಕ್ಟೋಬರ್‌ನಲ್ಲಿ ಕರೂರು ಪೊಲೀಸರು ಬಂಧಿಸಿದ್ದರು.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಹರಡಿದ್ದರು. 2001ರ ಸಂಸತ್ ದಾಳಿಯ 22ನೇ ವಾರ್ಷಿಕದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವೇಳೆ ಭದ್ರತೆಯನ್ನು ಉಲ್ಲಂಘಿಸಿದ ಇಬ್ಬರು ವ್ಯಕ್ತಿಗಳಿಗೆ ಸದನದೊಳಗೆ ಪ್ರವೇಶಿಸಲು ಸಂದರ್ಶಕರ ಪಾಸ್‌ಗಳನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದರು ಎನ್ನುವುದು  ಬಯಲಾಗಿದೆ.

ಘಟನೆಗೆ ಸಂಬಂಧಿಸಿ ಲೋಕಸಭೆಯೊಳಗೆ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಲಲಿತ್ ಝಾನನ್ನು ಬಂಧಿಸಲಾಗಿತ್ತು. ಇದಲ್ಲದೆ ಲಲಿತ್‌ ಝಾಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಮಹೇಶ್ ಕುಮ್ವತ್ ಮತ್ತು ಕೈಲಾಶ್ ಅವರ ವಿಚಾರಣೆ ಕೂಡ ನಡೆಯುತ್ತಿದೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...