Homeನಾನು ಗೌರಿಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

- Advertisement -
- Advertisement -

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ ಡಾ.ಎಲ್.ಹನುಮಂತಯ್ಯ ತಿಳಿಸಿದ್ದಾರೆ.

ಶನಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಹಮ್ಮಿಕೊಂಡಿದ್ದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವರು ಮತ್ತು ಭಕ್ತರ ನಡುವಿನ ಭಾಷೆಯಲ್ಲಿ ಕಂದಕ ಇರಬಾರದು. ಪ್ರಪಂಚದಲ್ಲಿ ಲಭ್ಯವಿರುವ ಎಲ್ಲ ಧರ್ಮಗಳಿಗೂ ಇರಬೇಕಾದಂತ ಸಾಮಾನ್ಯ ಕಾನೂನುನೆಂದರೆ ದೇವರು ಮತ್ತು ಭಕ್ತರ ನಡುವಿನ ಸಂವಾದ ಅವರಿಬ್ಬರಿಗೂ ತಿಳಿದಿರುವ ಭಾಷೆಯಲ್ಲಿ ನಡೆಯಬೇಕು. ಇದು ಸರಳವಾದ ಸತ್ಯ ಎಂದರು.

ನಾವು ವ್ಯಾಟಿಕನ್ ನಗರದಲ್ಲಿ ಕನ್ನಡದವರನ್ನು ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ಕೇಳುತ್ತಿಲ್ಲ. ಬೆಂಗಳೂರು ಮತ್ತು ರಾಜ್ಯಾದ್ಯಂತ ಇರುವ ಚರ್ಚ್ಗಳಲ್ಲಿ ಕನ್ನಡದವರನ್ನು ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ಕೇಳುತ್ತಿದ್ದೇವೆ. ಇದಕ್ಕೆ ಸುಪ್ರೀಂಕೋರ್ಟ್ ಕೂಡ ವಿರೋಧಿಸಲು ಸಾಧ್ಯವಿಲ್ಲ. ಕನ್ನಡಕ್ಕೆ ಕ್ರೈಸ್ತರ ಕೊಡುಗೆ ದೊಡ್ಡದು. ರೆವರೆಂಡ್ ಕಿಟ್ಟಲ್ ಅವರು ಕನ್ನಡಕ್ಕೆ ದೊಡ್ಡ ನಿಘಂಟನ್ನು ಕೊಟ್ಟವರು ಎಂದು ಹನುಮಂತಯ್ಯ ಸ್ಮರಿಸಿದರು.

ಕ್ರೈಸ್ತರು ತಮ್ಮ ಮಿಷನರಿಗಳ ಮೂಲಕ ಅಂಚಿನಲ್ಲಿರುವ ಜನರಿಗೆ ಶಿಕ್ಷಣ ಕೊಡಿಸುವ ಕೆಲಸ ಮಾಡಿದ್ದಾರೆ ಮತ್ತು ಸ್ಥಳೀಯ ಭಾಷೆಯಲ್ಲಿಯೇ ಶಿಕ್ಷಣ ಕೊಡಬೇಕೆನ್ನುವುದನ್ನು ಹೇಳಿಕೊಟ್ಟಿದ್ದಾರೆ. ಇದು ಯಾಕೆ ಈಗಿನ ಧರ್ಮದ ಅತ್ಯುನ್ನತ ಸ್ಥಾನದಲ್ಲಿರುವ ಧರ್ಮಾಧ್ಯಕ್ಷರಿಗೆ ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ. ಇದರಿಂದ ನಿಮಗಾಗುವ ಸಮಸ್ಯೆ ಏನು? ಕನ್ನಡ ಭಾಷೆಯಲ್ಲಿ ತೊಡಕುಗಳಿದ್ದರೆ ನಿವಾರಿಸುವ ಕೆಲಸ ಮಾಡೋಣ. ಅದಕ್ಕೆ ಸಾಹಿತ್ಯ ಪರಿಷತ್ತು ಒಳಗೊಂಡಂತೆ ಅನೇಕ ಸಂಸ್ಥೆಗಳು, ಸರಕಾರಿ ಇಲಾಖೆಗಳು ತಯಾರಾಗಿವೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಅನ್ಯ ಭಾಷಿಗರು ಕನ್ನಡ ಜಾಗವನ್ನು ಆಕ್ರಮಿಸಿಕೊಳ್ಳಲು ಪ್ರಯತ್ತಿಸುತ್ತಿದ್ದಾರೆ. ಹಿಂದಿ ವಲಸಿಗರು ಅತಿಹೆಚ್ಚು ಕೆಲಸಕ್ಕಾಗಿ, ಅನ್ನಕ್ಕಾಗಿ ನಗರಕ್ಕೆ ಬರುತ್ತಿದ್ದಾರೆ. ಇಲ್ಲಿಗೆ ಬಂದಿರುವ ಹಲವರು ಕನ್ನಡವನ್ನು ಕಲಿತು ಮಾತನಾಡುವವರು ಇದ್ದಾರೆ. ಆದರೆ ಇನ್ನು ಕೆಲವರು ಕನ್ನಡವನ್ನು ಕಲಿಯದೇ ಹಿಂದಿಯಲ್ಲಿಯೇ ವ್ಯವಹರಿಸುತ್ತಿದ್ದಾರೆ. ಹಿಂದಿ ಹೇರಿಕೆಯನ್ನು ಪ್ರಭುತ್ವವು ಮಾಡುತ್ತಿದೆ, ಬೇರೆ ರಾಜ್ಯಗಳು ಮಾಡುತ್ತಿವೆ. ಈ ಹಿಂದಿ ಏರಿಕೆಯನ್ನು ತೀವ್ರವಾಗಿ ವಿರೋಧಿಸಬೇಕು ಎಂದು ಹನುಮಂತಯ್ಯ ಕರೆ ನೀಡಿದರು.

ಸಂಘದ ಅಧ್ಯಕ್ಷ ಎ.ಐಸಾಕ್ ಮಾತನಾಡಿ, ದ್ವಿತೀಯ ವಾಟಿಕನ್ ಕೌನ್ಸಿಲ್ ನೀಡಿದ ಮಾರ್ಗದರ್ಶನದ ಪ್ರಕಾರ ಕರ್ನಾಟಕ ಚರ್ಚ್ಗಳಲ್ಲಿ ಕನ್ನಡವನ್ನು ಸಾಮಾನ್ಯ ವರ್ಣಾಕ್ಯುಲರ್ ಪ್ರಾಂತೀಯ ಭಾಷೆಯಾಗಿ ಪರಿಗಣಿಸಿ, ನಿಯಮಿತವಾಗಿ ಕನ್ನಡ ಪೂಜೆಗಳನನ್ನು ನಡೆಸಬೇಕು. ಪ್ರಾದೇಶಿಕ ಗುರುಮಠ ಸ್ಥಾಪನೆ, ಸಂತ ಪೇತ್ರರ ಗುರುಮಂದಿರದ ಸಂಪೂರ್ಣ ಆಡಳಿತ ಕರ್ನಾಟಕ ಧರ್ಮಾಧ್ಯಕ್ಷರುಗಳಿಗೇ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಡಾ.ರಾಜ್ ಕುಮಾರ್ ಆಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಸಾಹಿತಿಗಳಾದ ಡಾ.ಮನು ಬಳಿಗಾರ್, ಡಾ.ರೀಟಾ, ಕನ್ನಡಪರ ಹೋರಾಟಗಾರರಾದ ರಾ.ನಂ.ಚಂದ್ರಶೇಖರ್, ಡಾ.ಆರ್.ಎ.ಪ್ರಸಾಧ್, ವ.ಚ.ಚನ್ನೇಗೌಡ, ಪದ್ಮಿನಿ ನಾಗರಾಜ್, ಸಂಘದ ಪದಾಧಿಕಾರಿಗಳಾದ ಅಂತೋಣಿ ರಾಜ್, ಜಾನ್ ಬ್ರಿಟ್ಟೋ, ಬರ್ತಲೋಮಿಯೋ, ಜಾರ್ಜ್ ಕುಮಾರ್, ದೇವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

#Church #Karnataka #Kannada #ChurchFather #KarnatakaNews #LocalNews #BreakingNews

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...