Homeನಾನು ಗೌರಿಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

- Advertisement -
- Advertisement -

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ ಡಾ.ಎಲ್.ಹನುಮಂತಯ್ಯ ತಿಳಿಸಿದ್ದಾರೆ.

ಶನಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಹಮ್ಮಿಕೊಂಡಿದ್ದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವರು ಮತ್ತು ಭಕ್ತರ ನಡುವಿನ ಭಾಷೆಯಲ್ಲಿ ಕಂದಕ ಇರಬಾರದು. ಪ್ರಪಂಚದಲ್ಲಿ ಲಭ್ಯವಿರುವ ಎಲ್ಲ ಧರ್ಮಗಳಿಗೂ ಇರಬೇಕಾದಂತ ಸಾಮಾನ್ಯ ಕಾನೂನುನೆಂದರೆ ದೇವರು ಮತ್ತು ಭಕ್ತರ ನಡುವಿನ ಸಂವಾದ ಅವರಿಬ್ಬರಿಗೂ ತಿಳಿದಿರುವ ಭಾಷೆಯಲ್ಲಿ ನಡೆಯಬೇಕು. ಇದು ಸರಳವಾದ ಸತ್ಯ ಎಂದರು.

ನಾವು ವ್ಯಾಟಿಕನ್ ನಗರದಲ್ಲಿ ಕನ್ನಡದವರನ್ನು ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ಕೇಳುತ್ತಿಲ್ಲ. ಬೆಂಗಳೂರು ಮತ್ತು ರಾಜ್ಯಾದ್ಯಂತ ಇರುವ ಚರ್ಚ್ಗಳಲ್ಲಿ ಕನ್ನಡದವರನ್ನು ಧರ್ಮಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂದು ಕೇಳುತ್ತಿದ್ದೇವೆ. ಇದಕ್ಕೆ ಸುಪ್ರೀಂಕೋರ್ಟ್ ಕೂಡ ವಿರೋಧಿಸಲು ಸಾಧ್ಯವಿಲ್ಲ. ಕನ್ನಡಕ್ಕೆ ಕ್ರೈಸ್ತರ ಕೊಡುಗೆ ದೊಡ್ಡದು. ರೆವರೆಂಡ್ ಕಿಟ್ಟಲ್ ಅವರು ಕನ್ನಡಕ್ಕೆ ದೊಡ್ಡ ನಿಘಂಟನ್ನು ಕೊಟ್ಟವರು ಎಂದು ಹನುಮಂತಯ್ಯ ಸ್ಮರಿಸಿದರು.

ಕ್ರೈಸ್ತರು ತಮ್ಮ ಮಿಷನರಿಗಳ ಮೂಲಕ ಅಂಚಿನಲ್ಲಿರುವ ಜನರಿಗೆ ಶಿಕ್ಷಣ ಕೊಡಿಸುವ ಕೆಲಸ ಮಾಡಿದ್ದಾರೆ ಮತ್ತು ಸ್ಥಳೀಯ ಭಾಷೆಯಲ್ಲಿಯೇ ಶಿಕ್ಷಣ ಕೊಡಬೇಕೆನ್ನುವುದನ್ನು ಹೇಳಿಕೊಟ್ಟಿದ್ದಾರೆ. ಇದು ಯಾಕೆ ಈಗಿನ ಧರ್ಮದ ಅತ್ಯುನ್ನತ ಸ್ಥಾನದಲ್ಲಿರುವ ಧರ್ಮಾಧ್ಯಕ್ಷರಿಗೆ ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ. ಇದರಿಂದ ನಿಮಗಾಗುವ ಸಮಸ್ಯೆ ಏನು? ಕನ್ನಡ ಭಾಷೆಯಲ್ಲಿ ತೊಡಕುಗಳಿದ್ದರೆ ನಿವಾರಿಸುವ ಕೆಲಸ ಮಾಡೋಣ. ಅದಕ್ಕೆ ಸಾಹಿತ್ಯ ಪರಿಷತ್ತು ಒಳಗೊಂಡಂತೆ ಅನೇಕ ಸಂಸ್ಥೆಗಳು, ಸರಕಾರಿ ಇಲಾಖೆಗಳು ತಯಾರಾಗಿವೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಅನ್ಯ ಭಾಷಿಗರು ಕನ್ನಡ ಜಾಗವನ್ನು ಆಕ್ರಮಿಸಿಕೊಳ್ಳಲು ಪ್ರಯತ್ತಿಸುತ್ತಿದ್ದಾರೆ. ಹಿಂದಿ ವಲಸಿಗರು ಅತಿಹೆಚ್ಚು ಕೆಲಸಕ್ಕಾಗಿ, ಅನ್ನಕ್ಕಾಗಿ ನಗರಕ್ಕೆ ಬರುತ್ತಿದ್ದಾರೆ. ಇಲ್ಲಿಗೆ ಬಂದಿರುವ ಹಲವರು ಕನ್ನಡವನ್ನು ಕಲಿತು ಮಾತನಾಡುವವರು ಇದ್ದಾರೆ. ಆದರೆ ಇನ್ನು ಕೆಲವರು ಕನ್ನಡವನ್ನು ಕಲಿಯದೇ ಹಿಂದಿಯಲ್ಲಿಯೇ ವ್ಯವಹರಿಸುತ್ತಿದ್ದಾರೆ. ಹಿಂದಿ ಹೇರಿಕೆಯನ್ನು ಪ್ರಭುತ್ವವು ಮಾಡುತ್ತಿದೆ, ಬೇರೆ ರಾಜ್ಯಗಳು ಮಾಡುತ್ತಿವೆ. ಈ ಹಿಂದಿ ಏರಿಕೆಯನ್ನು ತೀವ್ರವಾಗಿ ವಿರೋಧಿಸಬೇಕು ಎಂದು ಹನುಮಂತಯ್ಯ ಕರೆ ನೀಡಿದರು.

ಸಂಘದ ಅಧ್ಯಕ್ಷ ಎ.ಐಸಾಕ್ ಮಾತನಾಡಿ, ದ್ವಿತೀಯ ವಾಟಿಕನ್ ಕೌನ್ಸಿಲ್ ನೀಡಿದ ಮಾರ್ಗದರ್ಶನದ ಪ್ರಕಾರ ಕರ್ನಾಟಕ ಚರ್ಚ್ಗಳಲ್ಲಿ ಕನ್ನಡವನ್ನು ಸಾಮಾನ್ಯ ವರ್ಣಾಕ್ಯುಲರ್ ಪ್ರಾಂತೀಯ ಭಾಷೆಯಾಗಿ ಪರಿಗಣಿಸಿ, ನಿಯಮಿತವಾಗಿ ಕನ್ನಡ ಪೂಜೆಗಳನನ್ನು ನಡೆಸಬೇಕು. ಪ್ರಾದೇಶಿಕ ಗುರುಮಠ ಸ್ಥಾಪನೆ, ಸಂತ ಪೇತ್ರರ ಗುರುಮಂದಿರದ ಸಂಪೂರ್ಣ ಆಡಳಿತ ಕರ್ನಾಟಕ ಧರ್ಮಾಧ್ಯಕ್ಷರುಗಳಿಗೇ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಡಾ.ರಾಜ್ ಕುಮಾರ್ ಆಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಸಾಹಿತಿಗಳಾದ ಡಾ.ಮನು ಬಳಿಗಾರ್, ಡಾ.ರೀಟಾ, ಕನ್ನಡಪರ ಹೋರಾಟಗಾರರಾದ ರಾ.ನಂ.ಚಂದ್ರಶೇಖರ್, ಡಾ.ಆರ್.ಎ.ಪ್ರಸಾಧ್, ವ.ಚ.ಚನ್ನೇಗೌಡ, ಪದ್ಮಿನಿ ನಾಗರಾಜ್, ಸಂಘದ ಪದಾಧಿಕಾರಿಗಳಾದ ಅಂತೋಣಿ ರಾಜ್, ಜಾನ್ ಬ್ರಿಟ್ಟೋ, ಬರ್ತಲೋಮಿಯೋ, ಜಾರ್ಜ್ ಕುಮಾರ್, ದೇವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

#Church #Karnataka #Kannada #ChurchFather #KarnatakaNews #LocalNews #BreakingNews

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...