Homeಕರ್ನಾಟಕಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

ಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜಾತಿ ಅಸಮಾನತೆ ಅಳಿಸಬೇಕಾದರೆ ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ಪ್ರಾಥಮಿಕ ಹಂತದಿಂದಲೇ ವೈಚಾರಿಕತೆ ಬೆಳೆಸುವುದು ನಮ್ಮ ಸರ್ಕಾರದ ಆಧ್ಯತೆಯಾಗಿದೆ. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದ, ಮೌಢ್ಯದ ಆರಾಧಕರಾಗಿರುವುದು ಬೇಸರದ ಸಂಗತಿ. ಮಕ್ಕಳಲ್ಲಿ ವಿಶ್ವಮಾನವ ಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆಧ್ಯತೆಯಾಗಿದೆ ಎಂದು ಹೇಳಿದರು.

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು.

ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು.

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ೆಂದು ತಿಳಿಸಿದರು.

ಶೂದ್ರರಂತೆ ಮಹಿಳೆಯರೂ ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರಾಗಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಡರಾದರೆ ಶೋಷಣೆ, ದೌರ್ಜನ್ಯ ಕಡಿಮೆಯಾಗುತ್ತದೆ ಎಂದರು.

ಸರ್ಕಾರಿ ಭೂಮಿ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಭೂ ಹೀನರಿಗೆ ಭೂಮಿ ಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಕೈಗಾರಿಕೋದ್ಯಮಿಗಳ ಜತೆ ಸಭೆ ಮಾಡಿದ್ದೇನೆ. ಅವರಿಗೆ ಯಾವ ರೀತಿಯ ಕೌಶಲ್ಯದ ವಿದ್ಯಾರ್ಥಿಗಳ ಅಗತ್ಯವಿದೆ ಎನ್ನುವ ಬಗ್ಗೆ ಚರ್ಚಿಸಿದ್ದೇನೆ. ಅದಕ್ಕೆ ತಕ್ಕಂತೆ ಶಿಕ್ಷಣವನ್ನು ರೂಪಿಸುವ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅರ್ಹರನ್ನು ಸೃಷ್ಟಿಸಬೇಕಾಗುತ್ತದೆ ಎಂದರು.

ಇದನ್ನೂ ಓದಿ: 40% ಕಮಿಷನ್, ಕೊರೊನಾ ಸಂದರ್ಭದ ಅವ್ಯವಹಾರಗಳ ತನಿಖೆ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ

ಸಮ ಸಮಾಜ ಬಂದರೆ ಶಾಂತಿಯ ತೋಟ

”ಹಿಂದಿನ ಸರ್ಕಾರದಲ್ಲಿ ಅನೈತಿಕ ಪೊಲೀಸ್ ಗಿರಿ ಅತ್ಯಂತ ನಿರ್ಲಜ್ಜತನದಿಂದ ಆಚರಿಸಲ್ಪಡುತ್ತಿತ್ತು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಅನೈತಿಕ ಪೊಲೀಸ್ ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

ಮುಟ್ಟಿನ ರಜೆ ಪರಿಶೀಲನೆ

ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯೊಂದಕ್ಕೆ ಉತ್ತರಿಸಿದ ಸಿಎಂ ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ

ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭರವಸೆ ನೀಡಿದರು.

ಅಕಾಡೆಮಿಗಳ ನೇಮಕಾತಿಗೆ ಸಮಿತಿ ರಚನೆ

ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ಸ್ಕ್ರೀನಿಂಗ್ ನಡೆಸುತ್ತಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಗತಿಪರ ಚಿಂತಕ ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...