Homeಕರ್ನಾಟಕಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

ಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜಾತಿ ಅಸಮಾನತೆ ಅಳಿಸಬೇಕಾದರೆ ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ಪ್ರಾಥಮಿಕ ಹಂತದಿಂದಲೇ ವೈಚಾರಿಕತೆ ಬೆಳೆಸುವುದು ನಮ್ಮ ಸರ್ಕಾರದ ಆಧ್ಯತೆಯಾಗಿದೆ. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದ, ಮೌಢ್ಯದ ಆರಾಧಕರಾಗಿರುವುದು ಬೇಸರದ ಸಂಗತಿ. ಮಕ್ಕಳಲ್ಲಿ ವಿಶ್ವಮಾನವ ಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆಧ್ಯತೆಯಾಗಿದೆ ಎಂದು ಹೇಳಿದರು.

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು.

ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು.

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ೆಂದು ತಿಳಿಸಿದರು.

ಶೂದ್ರರಂತೆ ಮಹಿಳೆಯರೂ ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರಾಗಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಡರಾದರೆ ಶೋಷಣೆ, ದೌರ್ಜನ್ಯ ಕಡಿಮೆಯಾಗುತ್ತದೆ ಎಂದರು.

ಸರ್ಕಾರಿ ಭೂಮಿ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಭೂ ಹೀನರಿಗೆ ಭೂಮಿ ಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಕೈಗಾರಿಕೋದ್ಯಮಿಗಳ ಜತೆ ಸಭೆ ಮಾಡಿದ್ದೇನೆ. ಅವರಿಗೆ ಯಾವ ರೀತಿಯ ಕೌಶಲ್ಯದ ವಿದ್ಯಾರ್ಥಿಗಳ ಅಗತ್ಯವಿದೆ ಎನ್ನುವ ಬಗ್ಗೆ ಚರ್ಚಿಸಿದ್ದೇನೆ. ಅದಕ್ಕೆ ತಕ್ಕಂತೆ ಶಿಕ್ಷಣವನ್ನು ರೂಪಿಸುವ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅರ್ಹರನ್ನು ಸೃಷ್ಟಿಸಬೇಕಾಗುತ್ತದೆ ಎಂದರು.

ಇದನ್ನೂ ಓದಿ: 40% ಕಮಿಷನ್, ಕೊರೊನಾ ಸಂದರ್ಭದ ಅವ್ಯವಹಾರಗಳ ತನಿಖೆ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ

ಸಮ ಸಮಾಜ ಬಂದರೆ ಶಾಂತಿಯ ತೋಟ

”ಹಿಂದಿನ ಸರ್ಕಾರದಲ್ಲಿ ಅನೈತಿಕ ಪೊಲೀಸ್ ಗಿರಿ ಅತ್ಯಂತ ನಿರ್ಲಜ್ಜತನದಿಂದ ಆಚರಿಸಲ್ಪಡುತ್ತಿತ್ತು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಅನೈತಿಕ ಪೊಲೀಸ್ ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

ಮುಟ್ಟಿನ ರಜೆ ಪರಿಶೀಲನೆ

ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯೊಂದಕ್ಕೆ ಉತ್ತರಿಸಿದ ಸಿಎಂ ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ

ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭರವಸೆ ನೀಡಿದರು.

ಅಕಾಡೆಮಿಗಳ ನೇಮಕಾತಿಗೆ ಸಮಿತಿ ರಚನೆ

ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ಸ್ಕ್ರೀನಿಂಗ್ ನಡೆಸುತ್ತಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಗತಿಪರ ಚಿಂತಕ ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...