Homeಕರ್ನಾಟಕಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

ಮಕ್ಕಳಲ್ಲಿ ಜಾತಿ ಅಸಮಾನತೆ ಅಳಿಸಲು ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ವಿಶ್ವಮಾನವ ಪ್ರಜ್ಞೆ ಬೆಳೆಸಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜಾತಿ ಅಸಮಾನತೆ ಅಳಿಸಬೇಕಾದರೆ ಶಿಕ್ಷಣದಲ್ಲಿ ವೈಚಾರಿಕತೆ ಅಗತ್ಯ, ಪ್ರಾಥಮಿಕ ಹಂತದಿಂದಲೇ ವೈಚಾರಿಕತೆ ಬೆಳೆಸುವುದು ನಮ್ಮ ಸರ್ಕಾರದ ಆಧ್ಯತೆಯಾಗಿದೆ. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದ, ಮೌಢ್ಯದ ಆರಾಧಕರಾಗಿರುವುದು ಬೇಸರದ ಸಂಗತಿ. ಮಕ್ಕಳಲ್ಲಿ ವಿಶ್ವಮಾನವ ಪ್ರಜ್ಞೆ-ವೈಚಾರಿಕತೆ ಬೆಳೆಸುವುದು ಸರ್ಕಾರದ ಆಧ್ಯತೆಯಾಗಿದೆ ಎಂದು ಹೇಳಿದರು.

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದರು.

ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು.

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ೆಂದು ತಿಳಿಸಿದರು.

ಶೂದ್ರರಂತೆ ಮಹಿಳೆಯರೂ ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರಾಗಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಡರಾದರೆ ಶೋಷಣೆ, ದೌರ್ಜನ್ಯ ಕಡಿಮೆಯಾಗುತ್ತದೆ ಎಂದರು.

ಸರ್ಕಾರಿ ಭೂಮಿ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಭೂ ಹೀನರಿಗೆ ಭೂಮಿ ಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಕೈಗಾರಿಕೋದ್ಯಮಿಗಳ ಜತೆ ಸಭೆ ಮಾಡಿದ್ದೇನೆ. ಅವರಿಗೆ ಯಾವ ರೀತಿಯ ಕೌಶಲ್ಯದ ವಿದ್ಯಾರ್ಥಿಗಳ ಅಗತ್ಯವಿದೆ ಎನ್ನುವ ಬಗ್ಗೆ ಚರ್ಚಿಸಿದ್ದೇನೆ. ಅದಕ್ಕೆ ತಕ್ಕಂತೆ ಶಿಕ್ಷಣವನ್ನು ರೂಪಿಸುವ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅರ್ಹರನ್ನು ಸೃಷ್ಟಿಸಬೇಕಾಗುತ್ತದೆ ಎಂದರು.

ಇದನ್ನೂ ಓದಿ: 40% ಕಮಿಷನ್, ಕೊರೊನಾ ಸಂದರ್ಭದ ಅವ್ಯವಹಾರಗಳ ತನಿಖೆ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ

ಸಮ ಸಮಾಜ ಬಂದರೆ ಶಾಂತಿಯ ತೋಟ

”ಹಿಂದಿನ ಸರ್ಕಾರದಲ್ಲಿ ಅನೈತಿಕ ಪೊಲೀಸ್ ಗಿರಿ ಅತ್ಯಂತ ನಿರ್ಲಜ್ಜತನದಿಂದ ಆಚರಿಸಲ್ಪಡುತ್ತಿತ್ತು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಅನೈತಿಕ ಪೊಲೀಸ್ ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

ಮುಟ್ಟಿನ ರಜೆ ಪರಿಶೀಲನೆ

ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯೊಂದಕ್ಕೆ ಉತ್ತರಿಸಿದ ಸಿಎಂ ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ

ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭರವಸೆ ನೀಡಿದರು.

ಅಕಾಡೆಮಿಗಳ ನೇಮಕಾತಿಗೆ ಸಮಿತಿ ರಚನೆ

ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ಸ್ಕ್ರೀನಿಂಗ್ ನಡೆಸುತ್ತಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಗತಿಪರ ಚಿಂತಕ ಜಿ.ರಾಮಕೃಷ್ಣ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...