Homeಚಳವಳಿಕಾನೂನಿನ ಯೋಧ ಶಮ್ನಾಡ್ ಬಶೀರ್ ಅವರ ಗೌರವಾರ್ಥ ಅವರ ಪರಂಪರೆಯನ್ನು ಮುಂದುವರಿಸೋಣ

ಕಾನೂನಿನ ಯೋಧ ಶಮ್ನಾಡ್ ಬಶೀರ್ ಅವರ ಗೌರವಾರ್ಥ ಅವರ ಪರಂಪರೆಯನ್ನು ಮುಂದುವರಿಸೋಣ

ಶಮ್ನಾಡ್ ಬಶೀರ್ ಅವರು, ಕೇವಲ ಬೌದ್ಧಿಕ ಆಸ್ತಿ ಹಕ್ಕುಗಳ ಪರಿಣತರು ಮಾತ್ರ ಆಗಿರಲಿಲ್ಲ; ಅವರು ವಕೀಲ ವೃತ್ತಿಯಲ್ಲಿ ಕಡೆಗಣಿಸಲ್ಪಟ್ಟ ವರ್ಗಗಳ ವೈವಿಧ್ಯತೆ ಮತ್ತು ಪ್ರಾತಿನಿಧ್ಯಕ್ಕಾಗಿ ದಣಿವಿರದೆ ದುಡಿಯುತ್ತಿದ್ದ ಒಬ್ಬ ಕಾರ್ಯಕರ್ತರೂ ಆಗಿದ್ದರು.

- Advertisement -
- Advertisement -

ಕೃಪೆ: ಮಹ್ತಾಬ್ ಆಲಂ, ದಿ ವೈರ್.ಇನ್

ಕನ್ನಡಕ್ಕೆ: ನಿಖಿಲ್ ಕೋಲ್ಪೆ

ಪ್ರೊಫೆಸರ್ ಶಮ್ನಾಡ್ ಬಶೀರ್ ಅವರ ಅಕಾಲಿಕ ಮತ್ತು ದುರಂತಮಯ ಮರಣವು ನಮ್ಮಲ್ಲಿ ಅನೇಕರಿಗೆ ಸಿಡಿಲೆರಗಿದಂತೆ ಆಘಾತ ತಂದಿದೆ. ನಂಬಲು ಅಸಾಧ್ಯವಾದುದರ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾನು ಓಡಾಡುತ್ತಿರುವಾಗ ನನಗೆ ಮನವರಿಕೆಯದುದೇನೆಂದರೆ, ಗೆಳೆಯನೊಬ್ಬನನ್ನು ಕಳೆದುಕೊಂಡದ್ದು ಮಾತ್ರವಲ್ಲ; ದೇಶವು ಅತ್ಯುತ್ತಮವಾದ ಕಾನೂನು ತಜ್ಞರೊಬ್ಬರನ್ನು ಕಳೆದುಕೊಂಡಿದೆ ಎಂಬುದು. ಬೌದ್ಧಿಕ ಆಸ್ತಿ ಹಕ್ಕು ( Intellectual Property Right-ಐಪಿಆರ್)ಗಳ ವಿಷಯದಲ್ಲಿ ಜಾಗತಿಕವಾಗಿ ಪ್ರಸಿದ್ಧರಾಗಿದ್ದ ಅವರ ಮೃತದೇಹವು ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ಗಿರಿಯಲ್ಲಿ ತನ್ನ ಕಾರಿನ ಬಳಿ ಪತ್ತೆಯಾಯಿತು.

ಅವರ ಸಾವಿನ ಸುದ್ದಿಯು ಹರಡುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪದ ಮಹಾಪೂರವೇ ಆರಂಭವಾಗುತ್ತಿದ್ದಂತೆಯೇ ಅವರ ಹಠಾತ್ ಮರಣವು ಜಾಗತಿಕ ಕಾನೂನು ಸಮುದಾಯಕ್ಕೆ ಮಾತ್ರವಲ್ಲ; ಶೈಕ್ಷಣಿಕ ಸಮುದಾಯಕ್ಕೂ ತುಂಬಲಾರದ ನಷ್ಟವಾಗಿದೆ ಎಂಬ ಬಗ್ಗೆ ಯಾವ ಸಂಶಯವೂ ಉಳಿಯುವುದಿಲ್ಲ. ದಣಿವರಿಯದ ಹೋರಾಟಗಾರರಾಗಿದ್ದ ಅವರು, ದಿನರಾತ್ರಿಯೆನ್ನದೆ, ಕಡೆಗಣಿಸಲ್ಪಟ್ಟ ವರ್ಗಗಳ ವೈವಿಧ್ಯತೆ ಮತ್ತು ಪ್ರಾತಿನಿಧ್ಯಕ್ಕಾಗಿ ದುಡಿಯುತ್ತಿದ್ದರು. ಬೆಂಗಳೂರಿನ ರಾಷ್ಟ್ರೀಯ  ಕಾನೂನು ವಿಶ್ವವಿದ್ಯಾಲಯ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಯಾಗಿದ್ದ ಅವರು, ಇಂಟರ್ನೆಟ್ ಸಮಾನತೆ, ಬೌದ್ಧಿಕ ಆಸ್ತಿ ಹಕ್ಕುಗಳಲ್ಲಿ ನ್ಯಾಯಬದ್ಧತೆ, ಸಾರ್ವಜನಿಕ ಹಿತಾಸಕ್ತಿ, ನ್ಯಾಯಾಂಗದ ಉತ್ತರದಾಯಿತ್ವ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳು, ಅಂಧರು, ಮತ್ತು ವಿಶೇಷಚೇತನರ ಹಕ್ಕುಗಳು ಇತ್ಯಾದಿಯಾಗಿ ಹಲವಾರು ಕ್ಷೇತ್ರಗಳಲ್ಲಿ ಸಮರೋಪಾದಿಯಲ್ಲಿ ದುಡಿಯುತ್ತಿದ್ದ ಮನುಷ್ಯರಾಗಿದ್ದರು.

ನನ್ನ ಮಟ್ಟಿಗೆ ಅವರು ಜಾಗತಿಕ ಖ್ಯಾತಿಯ ಭೌದ್ಧಿಕ ಆಸ್ತಿ ಹಕ್ಕುಗಳ ತಜ್ಞರಷ್ಟೇ ಅಲ್ಲ ಅವರೊಬ್ಬರು ಕಾನೂನಿನ ಯೋಧ. ಅವರು ಇನ್‌ಕ್ರೀಸಿಂಗ್ ಡೈವರ್ಸಟಿ ಬೈ ಇನ್‌ಕ್ರೀಸಿಂಗ್ ಎಕ್ಸೆಸ್ ಟು ಲೀಗಲ್ ಎಜುಕೇಶನ್ (IDIA) ಮತ್ತು ಎಕ್ಸೆಸ್ ಟು ಲೀಗಲ್ ಎಜುಕೇಶನ್ ಫಾರ್ ಮುಸ್ಲಿಮ್ಸ್ ಇನ್ ಇಂಡಿಯಾ (ALEM) ಸಂಸ್ಥೆಗಳ ಹಿಂದಿನ ಶಕ್ತಿ ಮಾತ್ರವೇ ಆಗಿರಲಿಲ್ಲ.

ನಾನು ಅವರ ಬಗ್ಗೆ ಮೊದಲ ಬಾರಿಗೆ ಕೇಳಿದ್ದು 2009ರಲ್ಲಿ. ಅದು ಅವರು ಆಗಿನ ಸುಪ್ರೀಂಕೋರ್ಟ್ ನ್ಯಾಯಾಧೀಶ ನ್ಯಾ. ಮಾರ್ಕಾಂಡೇಯ ಕಟ್ಜು ಅವರು ಆಡಿದ ಮಾತೊಂದರ ಬಗ್ಗೆ ತನ್ನ ಬ್ಲಾಗ್‌ನಲ್ಲಿ ಬರೆದಾಗ. ಕಟ್ಜು ಅವರು ನ್ಯಾಯಾಲಯದಲ್ಲಿ ಎಲ್ಲರ ಎದುರಲ್ಲೇ ಗಡ್ಡಧಾರಿ ಮುಸ್ಲಿಮ್ ಯುವಕನೊಬ್ಬನನ್ನು ತಾಲಿಬಾನ್ ಉಗ್ರಗಾಮಿಗೆ ಹೋಲಿಸಿದ್ದರು. ಆ ವರ್ಷ ತನ್ನ ಕಾನ್ವೆಂಟ್ ಶಾಲೆಯಲ್ಲಿ ಗಡ್ಡ ಬಿಡಲು ಅನುಮತಿ ನೀಡಬೇಕೆಂಬ ಮುಸ್ಲಿಂ ಯುವಕನೊಬ್ಬನ ಅರ್ಜಿಯನ್ನು ತಿರಸ್ಕರಿಸಿದ್ದರು. “ನಮಗೆ ದೇಶದಲ್ಲಿ ತಾಲಿಬಾನ್ ಬೇಕಿಲ್ಲ. ನಾಳೆ ಒಬ್ಬಳು ವಿದ್ಯಾರ್ಥಿನಿ ಬಂದು ನನಗೆ ಬುರ್ಖಾ ಧರಿಸಲು ಅನುಮತಿ ನೀಡಬೇಕೆಂದು ಕೋರಬಹುದು. ನಾವು ಅದಕ್ಕೆ ಅವಕಾಶ ನೀಡಲು ಸಾಧ್ಯವೇ?” ಎಂದು ಖಟ್ಜು ಕೇಳಿದ್ದರು.

“ಈ ಪ್ರಕರಣದ ಅರ್ಹತೆ ಏನೇ ಇರಲಿ, ಅದರ ಹೊರತಾಗಿಯೂ ನ್ಯಾ ಕಟ್ಜು ಅವರ ಹೇಳಿಕೆ ನಿರ್ದಯಿ ಮತ್ತು ಅಸೂಕ್ಷ್ಮತೆಯದ್ದಾಗಿದೆ. ಅವರು ಒಬ್ಬ ನಿಷ್ಪಕ್ಷಪಾತಿ ನ್ಯಾಯಾಧೀಶರಾಗಲು ಅನರ್ಹರು” ಎಂದು ಶಮ್ನಾಡ್ ಬರೆದಿದ್ದರು. ಆ ಹೊತ್ತಿಗೆ ಶಮ್ನಾಡ್ ಅವರು ಕೋಲ್ಕತಾರ ರಾಷ್ಟ್ರೀಯ ನ್ಯಾಯಾಂಗ ವಿಜ್ಞಾನ ವಿಶ್ವವಿದ್ಯಾಲಯ (NUJS)ದಲ್ಲಿ ಬೌದ್ದಿಕ ಆಸ್ತಿಗಳ ಹಕ್ಕುಗಳ ಕುರಿತು ಪಾಠ ಮಾಡುತ್ತಿದ್ದ ಮಾನವ ಸಂಪನ್ಮೂಲಾಭಿವೃದ್ಧಿ ಇಲಾಖೆಯ ಪ್ರೊಫೆಸರರಾಗಿದ್ದರು. ತನ್ನ ಬ್ಲಾಗ್‌ನ ಕೊನೆಯಲ್ಲಿ ಅವರು ಹೀಗೆ ಬರೆದಿದ್ದರು:

“ಸಲೀಮನ ಎಸ್‌ಎಲ್‌ಪಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟಿನ ನಿರ್ಧಾರ ಸರಿ ಇದ್ದಿರಬಹುದು. ಎಲ್ಲರ ಮಂದೆ ನ್ಯಾ. ಕಟ್ಜು ಅವರು ಎಲ್ಲಾ ಗಡ್ಡಧಾರಿ ಮುಸ್ಲಿಮರನ್ನು ತಾಲಿಬಾನ್ ಜೊತೆ ಸಮೀಕರಿಸಿದ ಹಿನ್ನೆಲೆಯಲ್ಲಿ ಒಂದು ಸಮುದಾಯದ ವಿರುದ್ಧ ಅವರ ತಾರತಮ್ಯವನ್ನು ನಿರಾಕರಿಸಲಾಗದು. ಮುಖ್ಯ ನ್ಯಾಯಾಧೀಶರ ಈ ಹೇಳಿಕೆಗೆ ವಾಗ್ದಂಡನೆ ವಿಧಿಸಬೇಕು ಮಾತ್ರವಲ್ಲ; ಈ ಪ್ರಕರಣದ ವಿಚಾರಣೆಯನ್ನು ಇನ್ನೊಂದು ಪೀಠದ ಮುಂದೆ ನಡೆಸಬೇಕು. ನ್ಯಾಯ ತೀರ್ಮಾನ ಆಗಬೇಕು ಮಾತ್ರವಲ್ಲ; ನ್ಯಾಯ ತೀರ್ಮಾನ ಆಗಿದೆ ಎಂಬಂತೆ ಕಾಣಲೂಬೇಕು!”

ವರ್ಷಗಳು ಕಳೆದಂತೆ ನಾನು ಬೇರೆಬೇರೆ ಪತ್ರಿಕೆಗಳಲ್ಲಿ ಮತ್ತು ವೆಬ್‌ಸೈಟ್‌ಗಳಲ್ಲಿ ಅವರ ಲೇಖನಗಳು ಮತ್ತು ವಿಶ್ಲೇಷಣೆಗಳನ್ನು ಓದುತ್ತಲೇ ಇದ್ದೆ. ಅವರು ನಿಷ್ಣಾತರಾಗಿದ್ದರು ಮತ್ತು ಕಾನೂನು, ಧೋರಣೆಗಳು ಮತ್ತು ಸಾರ್ವಜನಿಕ ಒಳಿತಿನ ಕುರಿತು ವಿವಿಧ ವಿಷಯಗಳ ಬಗ್ಗೆ ಬರೆಯುತ್ತಿದ್ದರು. 2015ರಲ್ಲಿ ಸಮಾನ ಗೆಳೆಯ ತರುಣಬ್ ಖೈತಾನ್ ನಮ್ಮ ನಡುವಿನ ಕೊಂಡಿಯಾದರು. ಮುಸ್ಲಿಂ ಸಮುದಾಯದತ್ತ ಕೈಚಾಚುವಲ್ಲಿ ಐಡಿಐಎಗೆ ಅವರ ತಂಡದೊಂದಿಗೆ ನೆರವಾಗುವಿರಾ ಎಂದು ಕೇಳಿದರು. ಶಮ್ನಾಡ್ ಅವರ ಬರಹಗಳ ಅಭಿಮಾನಿಯಾಗಿದ್ದ ನನಗೆ ಅವರ ಜೊತೆಗೆ ಕೆಲಸ ಮಾಡುವುದು, ಕನಸು ನನಸಾದಂತೆ ಇತ್ತು. ನಾನು ತಕ್ಷಣ ಒಪ್ಪಿಕೊಂಡೆ ಮತ್ತು ನಾವು ಕ್ರಮೇಣ ಉತ್ತಮ ಗೆಳೆಯರಾದೆವು. ಎಲ್ಲಕ್ಕಿಂತ ಹೆಚ್ಚಾಗಿ ಅವರು ದೇಶದ ಮೂಲೆಮೂಲೆಗಳಿಗೆ ಐಡಿಐಎಯನ್ನು ತಲಪಿಸುವ ದಾರಿಯ ಹುಡುಕಾಟದಲ್ಲಿ ಯಾವತ್ತೂ ಇರುತ್ತಿದ್ದರು.‌

ಇಷ್ಟೆಲ್ಲಾ ಹೋರಾಡಲು ಅವರಿಗೆ ಪ್ರೇರಣೆಯಾಗಿದ್ದ ಅಂಶಗಳು ಯಾವುದಾಗಿರಬಹುದು ಎಂಬ ಬಗ್ಗೆ ಬೆಂಗಳೂರಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನಿಟ್ಟುಕೊಂಡು 2016ರಲ್ಲಿ ತಯಾರಿಸಿದ ವರದಿಯ ಕೆಲವು ಮುಖ್ಯಾಂಶಗಳನ್ನಷ್ಟೇ ಇಲ್ಲಿ ನೋಡಬಹುದು.

ಕಾನೂನು ವಿದ್ಯಾರ್ಥಿಗಳು ಲಿಂಗ, ಜಾತಿ, ಧರ್ಮ, ಆದಾಯಗಳ ವಿಷಯದಲ್ಲಿ ಬಹುತೇಕ ಸಮಾನ ಸ್ಥಾನಗಳನ್ನು ಪಡೆದಿದ್ದರೂ, 50 ಶೇಕಡಾ ಜನರು ಮಾತ್ರ ತಮ್ಮ ಕುಟುಂಬದ ಆದಾಯವು ವಾರ್ಷಿಕ 12 ಲಕ್ಷ ರೂ. ಮೀರಿದೆ ಎಂದವರು. ಇವರಲ್ಲಿ 15 ಶೇಕಡಾ ಮಾತ್ರ ತಮ್ಮ ಕುಟುಂಬದ ಆದಾಯ 36 ಲಕ್ಷ ರೂ. ಮೀರಿದೆ ಎಂದವರು. ರಾಷ್ಟ್ರೀಯ ಕಾನೂನ ಶಾಲೆಯಲ್ಲಿ 82% ಶೇಕಡಾ ಹಿಂದೂಗಳಾಗಿದ್ದರೆ, ಶೇ.5% ರಷ್ಟು ಜೈನ ಸಮುದಾಯದವರಾಗಿದ್ದರು.  ಭಾರತದ ಕೇವಲ 0.5 ಶೇಕಡಾ ಜನಸಂಖ್ಯೆ ಹೊಂದಿರುವ ಶ್ರೀಮಂತ ಜೈನರು ಇಲ್ಲಿ ಶೇ.5% ಇದ್ದರು. ಇದಕ್ಕೆ ವ್ಯತಿರಿಕ್ತವಾಗಿ ಭಾರತದಲ್ಲಿ ಶೇ. 14& ಪ್ರಾತಿನಿಧ್ಯ ಹೊಂದಿರುವ ಮುಸ್ಲಿಮರು ಈ ಕಾನೂನು ಶಾಲೆಯಲ್ಲಿ ಕೇವಲ  ಶೇ. 0.5% ಮಾತ್ರ ಇದ್ದರು.  ಇಲ್ಲಿ ಮೇಲ್ಜಾತಿಯವರು 65 ಶೇಕಡಾ ಆಗಿದ್ದು, ಇವರಲ್ಲಿ 27 ಶೇಕಡಾ ಬ್ರಾಹ್ಮಣರಿದ್ದಾರೆ.

ಇಲ್ಲಿ ಇನ್ನೂ ಕೆಲವು ಅಂಶಗಳನ್ನು ಗಮನಿಸಬಹುದಾದರೆ, 2000ದ ಇಸವಿಯಿಂದ ಈಚೆಗೆ, ಸುಪ್ರೀಂಕೋರ್ಟ್ ಕೇವಲ ಒಬ್ಬ ದಲಿತ ವಕೀಲರನ್ನು ಮಾತ್ರ ಹಿರಿಯ ವಕೀಲ ಎಂದು ಘೋಷಿಸಿದೆ. ಮುಸ್ಲಿಂ ಸಮುದಾಯದಿಂದ ಇಬ್ಬರು ಮಾತ್ರ! ಹಿಂದುಳಿದ ರಾಜ್ಯಗಳಾದ ಉತ್ತರ ಪ್ರದೇಶ, ಛತ್ತೀಸ್ ಘಡ, ಜಾರ್ಖಂಡ್ ಅಥವಾ ಬಿಹಾರದ ವಕೀಲರನ್ನು ನೇಮಿಸಲಾಗಿಲ್ಲ. ಗ್ರಾಮೀಣ ಹಿನ್ನೆಲೆಯ ವಕೀಲರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತದೆ. ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಲ್ಲೂ  ಕಳೆದ 25 ವರ್ಷಗಳ ಅವಧಿಯಲ್ಲಿ ಒಬ್ಬರನ್ನು ಮಾತ್ರ ನೇಮಿಸಲಾಗಿದೆ. ಕೊನೆಯ ಸುತ್ತಿನ ಹುದ್ದೆಯಲ್ಲಿ, ಗೊತ್ತುಪಡಿಸಿದ ಐದು ವಕೀಲರಲ್ಲಿ, ಅವರಲ್ಲಿ ನಾಲ್ವರು ಒಂದು ಜಾತಿಗೆ ಸೇರಿದವರು…

ಈ ಹಿನ್ನೆಲೆಯಲ್ಲಿ ಬಹುತ್ವಕ್ಕಾಗಿ ಕೆಲಸ ಮಾಡಿದ ಶಮ್ನಾಡ್ ಅವರಿಗೆ ಶ್ರದ್ಧಾಂಜಲಿ! ಈಗ ಶಮ್ನಾಡ್ ಇಲ್ಲವಾಗಿದ್ದಾರೆ ಮತ್ತು ನಾವು ಅವರ ಸ್ಮರಣೆಯನ್ನು ಗೌರವಿಸುತ್ತೇವೆ. ಅವರು ಪ್ರಾರಂಭಿಸಿದ ಕೆಲಸವನ್ನು ಅದೇ ಸ್ಫೂರ್ತಿಯೊಂದಿಗೆ ನಾವು ಯಾವಾಗಲೂ ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ. ಮತ್ತು ಅದು ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ನಾನು ನಂಬುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...