Homeಚಳವಳಿಕಾನೂನಿನ ಯೋಧ ಶಮ್ನಾಡ್ ಬಶೀರ್ ಅವರ ಗೌರವಾರ್ಥ ಅವರ ಪರಂಪರೆಯನ್ನು ಮುಂದುವರಿಸೋಣ

ಕಾನೂನಿನ ಯೋಧ ಶಮ್ನಾಡ್ ಬಶೀರ್ ಅವರ ಗೌರವಾರ್ಥ ಅವರ ಪರಂಪರೆಯನ್ನು ಮುಂದುವರಿಸೋಣ

ಶಮ್ನಾಡ್ ಬಶೀರ್ ಅವರು, ಕೇವಲ ಬೌದ್ಧಿಕ ಆಸ್ತಿ ಹಕ್ಕುಗಳ ಪರಿಣತರು ಮಾತ್ರ ಆಗಿರಲಿಲ್ಲ; ಅವರು ವಕೀಲ ವೃತ್ತಿಯಲ್ಲಿ ಕಡೆಗಣಿಸಲ್ಪಟ್ಟ ವರ್ಗಗಳ ವೈವಿಧ್ಯತೆ ಮತ್ತು ಪ್ರಾತಿನಿಧ್ಯಕ್ಕಾಗಿ ದಣಿವಿರದೆ ದುಡಿಯುತ್ತಿದ್ದ ಒಬ್ಬ ಕಾರ್ಯಕರ್ತರೂ ಆಗಿದ್ದರು.

- Advertisement -
- Advertisement -

ಕೃಪೆ: ಮಹ್ತಾಬ್ ಆಲಂ, ದಿ ವೈರ್.ಇನ್

ಕನ್ನಡಕ್ಕೆ: ನಿಖಿಲ್ ಕೋಲ್ಪೆ

ಪ್ರೊಫೆಸರ್ ಶಮ್ನಾಡ್ ಬಶೀರ್ ಅವರ ಅಕಾಲಿಕ ಮತ್ತು ದುರಂತಮಯ ಮರಣವು ನಮ್ಮಲ್ಲಿ ಅನೇಕರಿಗೆ ಸಿಡಿಲೆರಗಿದಂತೆ ಆಘಾತ ತಂದಿದೆ. ನಂಬಲು ಅಸಾಧ್ಯವಾದುದರ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾನು ಓಡಾಡುತ್ತಿರುವಾಗ ನನಗೆ ಮನವರಿಕೆಯದುದೇನೆಂದರೆ, ಗೆಳೆಯನೊಬ್ಬನನ್ನು ಕಳೆದುಕೊಂಡದ್ದು ಮಾತ್ರವಲ್ಲ; ದೇಶವು ಅತ್ಯುತ್ತಮವಾದ ಕಾನೂನು ತಜ್ಞರೊಬ್ಬರನ್ನು ಕಳೆದುಕೊಂಡಿದೆ ಎಂಬುದು. ಬೌದ್ಧಿಕ ಆಸ್ತಿ ಹಕ್ಕು ( Intellectual Property Right-ಐಪಿಆರ್)ಗಳ ವಿಷಯದಲ್ಲಿ ಜಾಗತಿಕವಾಗಿ ಪ್ರಸಿದ್ಧರಾಗಿದ್ದ ಅವರ ಮೃತದೇಹವು ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ಗಿರಿಯಲ್ಲಿ ತನ್ನ ಕಾರಿನ ಬಳಿ ಪತ್ತೆಯಾಯಿತು.

ಅವರ ಸಾವಿನ ಸುದ್ದಿಯು ಹರಡುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪದ ಮಹಾಪೂರವೇ ಆರಂಭವಾಗುತ್ತಿದ್ದಂತೆಯೇ ಅವರ ಹಠಾತ್ ಮರಣವು ಜಾಗತಿಕ ಕಾನೂನು ಸಮುದಾಯಕ್ಕೆ ಮಾತ್ರವಲ್ಲ; ಶೈಕ್ಷಣಿಕ ಸಮುದಾಯಕ್ಕೂ ತುಂಬಲಾರದ ನಷ್ಟವಾಗಿದೆ ಎಂಬ ಬಗ್ಗೆ ಯಾವ ಸಂಶಯವೂ ಉಳಿಯುವುದಿಲ್ಲ. ದಣಿವರಿಯದ ಹೋರಾಟಗಾರರಾಗಿದ್ದ ಅವರು, ದಿನರಾತ್ರಿಯೆನ್ನದೆ, ಕಡೆಗಣಿಸಲ್ಪಟ್ಟ ವರ್ಗಗಳ ವೈವಿಧ್ಯತೆ ಮತ್ತು ಪ್ರಾತಿನಿಧ್ಯಕ್ಕಾಗಿ ದುಡಿಯುತ್ತಿದ್ದರು. ಬೆಂಗಳೂರಿನ ರಾಷ್ಟ್ರೀಯ  ಕಾನೂನು ವಿಶ್ವವಿದ್ಯಾಲಯ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಯಾಗಿದ್ದ ಅವರು, ಇಂಟರ್ನೆಟ್ ಸಮಾನತೆ, ಬೌದ್ಧಿಕ ಆಸ್ತಿ ಹಕ್ಕುಗಳಲ್ಲಿ ನ್ಯಾಯಬದ್ಧತೆ, ಸಾರ್ವಜನಿಕ ಹಿತಾಸಕ್ತಿ, ನ್ಯಾಯಾಂಗದ ಉತ್ತರದಾಯಿತ್ವ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳು, ಅಂಧರು, ಮತ್ತು ವಿಶೇಷಚೇತನರ ಹಕ್ಕುಗಳು ಇತ್ಯಾದಿಯಾಗಿ ಹಲವಾರು ಕ್ಷೇತ್ರಗಳಲ್ಲಿ ಸಮರೋಪಾದಿಯಲ್ಲಿ ದುಡಿಯುತ್ತಿದ್ದ ಮನುಷ್ಯರಾಗಿದ್ದರು.

ನನ್ನ ಮಟ್ಟಿಗೆ ಅವರು ಜಾಗತಿಕ ಖ್ಯಾತಿಯ ಭೌದ್ಧಿಕ ಆಸ್ತಿ ಹಕ್ಕುಗಳ ತಜ್ಞರಷ್ಟೇ ಅಲ್ಲ ಅವರೊಬ್ಬರು ಕಾನೂನಿನ ಯೋಧ. ಅವರು ಇನ್‌ಕ್ರೀಸಿಂಗ್ ಡೈವರ್ಸಟಿ ಬೈ ಇನ್‌ಕ್ರೀಸಿಂಗ್ ಎಕ್ಸೆಸ್ ಟು ಲೀಗಲ್ ಎಜುಕೇಶನ್ (IDIA) ಮತ್ತು ಎಕ್ಸೆಸ್ ಟು ಲೀಗಲ್ ಎಜುಕೇಶನ್ ಫಾರ್ ಮುಸ್ಲಿಮ್ಸ್ ಇನ್ ಇಂಡಿಯಾ (ALEM) ಸಂಸ್ಥೆಗಳ ಹಿಂದಿನ ಶಕ್ತಿ ಮಾತ್ರವೇ ಆಗಿರಲಿಲ್ಲ.

ನಾನು ಅವರ ಬಗ್ಗೆ ಮೊದಲ ಬಾರಿಗೆ ಕೇಳಿದ್ದು 2009ರಲ್ಲಿ. ಅದು ಅವರು ಆಗಿನ ಸುಪ್ರೀಂಕೋರ್ಟ್ ನ್ಯಾಯಾಧೀಶ ನ್ಯಾ. ಮಾರ್ಕಾಂಡೇಯ ಕಟ್ಜು ಅವರು ಆಡಿದ ಮಾತೊಂದರ ಬಗ್ಗೆ ತನ್ನ ಬ್ಲಾಗ್‌ನಲ್ಲಿ ಬರೆದಾಗ. ಕಟ್ಜು ಅವರು ನ್ಯಾಯಾಲಯದಲ್ಲಿ ಎಲ್ಲರ ಎದುರಲ್ಲೇ ಗಡ್ಡಧಾರಿ ಮುಸ್ಲಿಮ್ ಯುವಕನೊಬ್ಬನನ್ನು ತಾಲಿಬಾನ್ ಉಗ್ರಗಾಮಿಗೆ ಹೋಲಿಸಿದ್ದರು. ಆ ವರ್ಷ ತನ್ನ ಕಾನ್ವೆಂಟ್ ಶಾಲೆಯಲ್ಲಿ ಗಡ್ಡ ಬಿಡಲು ಅನುಮತಿ ನೀಡಬೇಕೆಂಬ ಮುಸ್ಲಿಂ ಯುವಕನೊಬ್ಬನ ಅರ್ಜಿಯನ್ನು ತಿರಸ್ಕರಿಸಿದ್ದರು. “ನಮಗೆ ದೇಶದಲ್ಲಿ ತಾಲಿಬಾನ್ ಬೇಕಿಲ್ಲ. ನಾಳೆ ಒಬ್ಬಳು ವಿದ್ಯಾರ್ಥಿನಿ ಬಂದು ನನಗೆ ಬುರ್ಖಾ ಧರಿಸಲು ಅನುಮತಿ ನೀಡಬೇಕೆಂದು ಕೋರಬಹುದು. ನಾವು ಅದಕ್ಕೆ ಅವಕಾಶ ನೀಡಲು ಸಾಧ್ಯವೇ?” ಎಂದು ಖಟ್ಜು ಕೇಳಿದ್ದರು.

“ಈ ಪ್ರಕರಣದ ಅರ್ಹತೆ ಏನೇ ಇರಲಿ, ಅದರ ಹೊರತಾಗಿಯೂ ನ್ಯಾ ಕಟ್ಜು ಅವರ ಹೇಳಿಕೆ ನಿರ್ದಯಿ ಮತ್ತು ಅಸೂಕ್ಷ್ಮತೆಯದ್ದಾಗಿದೆ. ಅವರು ಒಬ್ಬ ನಿಷ್ಪಕ್ಷಪಾತಿ ನ್ಯಾಯಾಧೀಶರಾಗಲು ಅನರ್ಹರು” ಎಂದು ಶಮ್ನಾಡ್ ಬರೆದಿದ್ದರು. ಆ ಹೊತ್ತಿಗೆ ಶಮ್ನಾಡ್ ಅವರು ಕೋಲ್ಕತಾರ ರಾಷ್ಟ್ರೀಯ ನ್ಯಾಯಾಂಗ ವಿಜ್ಞಾನ ವಿಶ್ವವಿದ್ಯಾಲಯ (NUJS)ದಲ್ಲಿ ಬೌದ್ದಿಕ ಆಸ್ತಿಗಳ ಹಕ್ಕುಗಳ ಕುರಿತು ಪಾಠ ಮಾಡುತ್ತಿದ್ದ ಮಾನವ ಸಂಪನ್ಮೂಲಾಭಿವೃದ್ಧಿ ಇಲಾಖೆಯ ಪ್ರೊಫೆಸರರಾಗಿದ್ದರು. ತನ್ನ ಬ್ಲಾಗ್‌ನ ಕೊನೆಯಲ್ಲಿ ಅವರು ಹೀಗೆ ಬರೆದಿದ್ದರು:

“ಸಲೀಮನ ಎಸ್‌ಎಲ್‌ಪಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟಿನ ನಿರ್ಧಾರ ಸರಿ ಇದ್ದಿರಬಹುದು. ಎಲ್ಲರ ಮಂದೆ ನ್ಯಾ. ಕಟ್ಜು ಅವರು ಎಲ್ಲಾ ಗಡ್ಡಧಾರಿ ಮುಸ್ಲಿಮರನ್ನು ತಾಲಿಬಾನ್ ಜೊತೆ ಸಮೀಕರಿಸಿದ ಹಿನ್ನೆಲೆಯಲ್ಲಿ ಒಂದು ಸಮುದಾಯದ ವಿರುದ್ಧ ಅವರ ತಾರತಮ್ಯವನ್ನು ನಿರಾಕರಿಸಲಾಗದು. ಮುಖ್ಯ ನ್ಯಾಯಾಧೀಶರ ಈ ಹೇಳಿಕೆಗೆ ವಾಗ್ದಂಡನೆ ವಿಧಿಸಬೇಕು ಮಾತ್ರವಲ್ಲ; ಈ ಪ್ರಕರಣದ ವಿಚಾರಣೆಯನ್ನು ಇನ್ನೊಂದು ಪೀಠದ ಮುಂದೆ ನಡೆಸಬೇಕು. ನ್ಯಾಯ ತೀರ್ಮಾನ ಆಗಬೇಕು ಮಾತ್ರವಲ್ಲ; ನ್ಯಾಯ ತೀರ್ಮಾನ ಆಗಿದೆ ಎಂಬಂತೆ ಕಾಣಲೂಬೇಕು!”

ವರ್ಷಗಳು ಕಳೆದಂತೆ ನಾನು ಬೇರೆಬೇರೆ ಪತ್ರಿಕೆಗಳಲ್ಲಿ ಮತ್ತು ವೆಬ್‌ಸೈಟ್‌ಗಳಲ್ಲಿ ಅವರ ಲೇಖನಗಳು ಮತ್ತು ವಿಶ್ಲೇಷಣೆಗಳನ್ನು ಓದುತ್ತಲೇ ಇದ್ದೆ. ಅವರು ನಿಷ್ಣಾತರಾಗಿದ್ದರು ಮತ್ತು ಕಾನೂನು, ಧೋರಣೆಗಳು ಮತ್ತು ಸಾರ್ವಜನಿಕ ಒಳಿತಿನ ಕುರಿತು ವಿವಿಧ ವಿಷಯಗಳ ಬಗ್ಗೆ ಬರೆಯುತ್ತಿದ್ದರು. 2015ರಲ್ಲಿ ಸಮಾನ ಗೆಳೆಯ ತರುಣಬ್ ಖೈತಾನ್ ನಮ್ಮ ನಡುವಿನ ಕೊಂಡಿಯಾದರು. ಮುಸ್ಲಿಂ ಸಮುದಾಯದತ್ತ ಕೈಚಾಚುವಲ್ಲಿ ಐಡಿಐಎಗೆ ಅವರ ತಂಡದೊಂದಿಗೆ ನೆರವಾಗುವಿರಾ ಎಂದು ಕೇಳಿದರು. ಶಮ್ನಾಡ್ ಅವರ ಬರಹಗಳ ಅಭಿಮಾನಿಯಾಗಿದ್ದ ನನಗೆ ಅವರ ಜೊತೆಗೆ ಕೆಲಸ ಮಾಡುವುದು, ಕನಸು ನನಸಾದಂತೆ ಇತ್ತು. ನಾನು ತಕ್ಷಣ ಒಪ್ಪಿಕೊಂಡೆ ಮತ್ತು ನಾವು ಕ್ರಮೇಣ ಉತ್ತಮ ಗೆಳೆಯರಾದೆವು. ಎಲ್ಲಕ್ಕಿಂತ ಹೆಚ್ಚಾಗಿ ಅವರು ದೇಶದ ಮೂಲೆಮೂಲೆಗಳಿಗೆ ಐಡಿಐಎಯನ್ನು ತಲಪಿಸುವ ದಾರಿಯ ಹುಡುಕಾಟದಲ್ಲಿ ಯಾವತ್ತೂ ಇರುತ್ತಿದ್ದರು.‌

ಇಷ್ಟೆಲ್ಲಾ ಹೋರಾಡಲು ಅವರಿಗೆ ಪ್ರೇರಣೆಯಾಗಿದ್ದ ಅಂಶಗಳು ಯಾವುದಾಗಿರಬಹುದು ಎಂಬ ಬಗ್ಗೆ ಬೆಂಗಳೂರಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನಿಟ್ಟುಕೊಂಡು 2016ರಲ್ಲಿ ತಯಾರಿಸಿದ ವರದಿಯ ಕೆಲವು ಮುಖ್ಯಾಂಶಗಳನ್ನಷ್ಟೇ ಇಲ್ಲಿ ನೋಡಬಹುದು.

ಕಾನೂನು ವಿದ್ಯಾರ್ಥಿಗಳು ಲಿಂಗ, ಜಾತಿ, ಧರ್ಮ, ಆದಾಯಗಳ ವಿಷಯದಲ್ಲಿ ಬಹುತೇಕ ಸಮಾನ ಸ್ಥಾನಗಳನ್ನು ಪಡೆದಿದ್ದರೂ, 50 ಶೇಕಡಾ ಜನರು ಮಾತ್ರ ತಮ್ಮ ಕುಟುಂಬದ ಆದಾಯವು ವಾರ್ಷಿಕ 12 ಲಕ್ಷ ರೂ. ಮೀರಿದೆ ಎಂದವರು. ಇವರಲ್ಲಿ 15 ಶೇಕಡಾ ಮಾತ್ರ ತಮ್ಮ ಕುಟುಂಬದ ಆದಾಯ 36 ಲಕ್ಷ ರೂ. ಮೀರಿದೆ ಎಂದವರು. ರಾಷ್ಟ್ರೀಯ ಕಾನೂನ ಶಾಲೆಯಲ್ಲಿ 82% ಶೇಕಡಾ ಹಿಂದೂಗಳಾಗಿದ್ದರೆ, ಶೇ.5% ರಷ್ಟು ಜೈನ ಸಮುದಾಯದವರಾಗಿದ್ದರು.  ಭಾರತದ ಕೇವಲ 0.5 ಶೇಕಡಾ ಜನಸಂಖ್ಯೆ ಹೊಂದಿರುವ ಶ್ರೀಮಂತ ಜೈನರು ಇಲ್ಲಿ ಶೇ.5% ಇದ್ದರು. ಇದಕ್ಕೆ ವ್ಯತಿರಿಕ್ತವಾಗಿ ಭಾರತದಲ್ಲಿ ಶೇ. 14& ಪ್ರಾತಿನಿಧ್ಯ ಹೊಂದಿರುವ ಮುಸ್ಲಿಮರು ಈ ಕಾನೂನು ಶಾಲೆಯಲ್ಲಿ ಕೇವಲ  ಶೇ. 0.5% ಮಾತ್ರ ಇದ್ದರು.  ಇಲ್ಲಿ ಮೇಲ್ಜಾತಿಯವರು 65 ಶೇಕಡಾ ಆಗಿದ್ದು, ಇವರಲ್ಲಿ 27 ಶೇಕಡಾ ಬ್ರಾಹ್ಮಣರಿದ್ದಾರೆ.

ಇಲ್ಲಿ ಇನ್ನೂ ಕೆಲವು ಅಂಶಗಳನ್ನು ಗಮನಿಸಬಹುದಾದರೆ, 2000ದ ಇಸವಿಯಿಂದ ಈಚೆಗೆ, ಸುಪ್ರೀಂಕೋರ್ಟ್ ಕೇವಲ ಒಬ್ಬ ದಲಿತ ವಕೀಲರನ್ನು ಮಾತ್ರ ಹಿರಿಯ ವಕೀಲ ಎಂದು ಘೋಷಿಸಿದೆ. ಮುಸ್ಲಿಂ ಸಮುದಾಯದಿಂದ ಇಬ್ಬರು ಮಾತ್ರ! ಹಿಂದುಳಿದ ರಾಜ್ಯಗಳಾದ ಉತ್ತರ ಪ್ರದೇಶ, ಛತ್ತೀಸ್ ಘಡ, ಜಾರ್ಖಂಡ್ ಅಥವಾ ಬಿಹಾರದ ವಕೀಲರನ್ನು ನೇಮಿಸಲಾಗಿಲ್ಲ. ಗ್ರಾಮೀಣ ಹಿನ್ನೆಲೆಯ ವಕೀಲರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತದೆ. ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಲ್ಲೂ  ಕಳೆದ 25 ವರ್ಷಗಳ ಅವಧಿಯಲ್ಲಿ ಒಬ್ಬರನ್ನು ಮಾತ್ರ ನೇಮಿಸಲಾಗಿದೆ. ಕೊನೆಯ ಸುತ್ತಿನ ಹುದ್ದೆಯಲ್ಲಿ, ಗೊತ್ತುಪಡಿಸಿದ ಐದು ವಕೀಲರಲ್ಲಿ, ಅವರಲ್ಲಿ ನಾಲ್ವರು ಒಂದು ಜಾತಿಗೆ ಸೇರಿದವರು…

ಈ ಹಿನ್ನೆಲೆಯಲ್ಲಿ ಬಹುತ್ವಕ್ಕಾಗಿ ಕೆಲಸ ಮಾಡಿದ ಶಮ್ನಾಡ್ ಅವರಿಗೆ ಶ್ರದ್ಧಾಂಜಲಿ! ಈಗ ಶಮ್ನಾಡ್ ಇಲ್ಲವಾಗಿದ್ದಾರೆ ಮತ್ತು ನಾವು ಅವರ ಸ್ಮರಣೆಯನ್ನು ಗೌರವಿಸುತ್ತೇವೆ. ಅವರು ಪ್ರಾರಂಭಿಸಿದ ಕೆಲಸವನ್ನು ಅದೇ ಸ್ಫೂರ್ತಿಯೊಂದಿಗೆ ನಾವು ಯಾವಾಗಲೂ ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ. ಮತ್ತು ಅದು ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ನಾನು ನಂಬುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...