Homeಮುಖಪುಟಕಾಂಗ್ರೆಸ್ ಸೇರಲು ಡ್ರಗ್ಸ್, ಮದ್ಯಪಾನ, ಸಾರ್ವಜನಿಕ ವೇದಿಕೆಯಲ್ಲಿ ಪಕ್ಷವನ್ನು ಟೀಕಿಸುವುದು ನಿಷೇಧ

ಕಾಂಗ್ರೆಸ್ ಸೇರಲು ಡ್ರಗ್ಸ್, ಮದ್ಯಪಾನ, ಸಾರ್ವಜನಿಕ ವೇದಿಕೆಯಲ್ಲಿ ಪಕ್ಷವನ್ನು ಟೀಕಿಸುವುದು ನಿಷೇಧ

- Advertisement -
- Advertisement -

ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಪಡೆಯಲು ಬಯಸುವವರಿಗೆ ಕಾಂಗ್ರೆಸ್ ಹೊಸ ಷರತ್ತುಗಳನ್ನು ಘೋಷಿಸಿದೆ. ಸದಸ್ಯತ್ವ ಪಡೆಯಲು ಬಯಸುವವರು ಮದ್ಯ ಮತ್ತು ಮಾದಕ ವಸ್ತುಗಳಿಂದ ದೂರವಿರುವುದನ್ನು ಘೋಷಿಸಬೇಕು ಎಂದಿದೆ.

ಸಾರ್ವಜನಿಕ ವೇದಿಕೆಗಳಲ್ಲಿ ಪಕ್ಷದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಎಂದಿಗೂ ಟೀಕಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು ಎಂದು ಘೋಷಿಸಿದೆ.

ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ನೋಂದಣಿ ಪತ್ರದಲ್ಲಿರುವ ಪ್ರಕಾರ, ಹೊಸದಾಗಿ ಸೇರ್ಪಡೆಯಾಗುವವರು ಕಾನೂನು ವ್ಯಾಪ್ತಿ ಮೀರಿ ಆಸ್ತಿ ಹೊಂದಿರುವುದಿಲ್ಲವೆಂದು ತಿಳಿಸಬೇಕು. ಪಕ್ಷದ ನೀತಿಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ದೈಹಿಕ ಶ್ರಮದ ಕೆಲಸಗಳನ್ನು ಮಾಡಲೂ ಹಿಂಜರಿಯುವುದಿಲ್ಲ ಎಂದು ಘೋಷಿಸಬೇಕು.

ಇದನ್ನೂ ಓದಿ: ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

“ಇದು ನಮ್ಮ ಪಕ್ಷದ ಸಂವಿಧಾನದ ಭಾಗವಾಗಿದೆ. ಹೊಸ ಸದಸ್ಯರು ಸೇರಿದಂತೆ ಎಲ್ಲಾ ಕಾಂಗ್ರೆಸ್ ಸದಸ್ಯರು ಈ ಮಾನದಂಡಗಳನ್ನು ಅನುಸರಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ” ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದ್ದಾರೆ.

ಕಾಂಗ್ರೆಸ್ ನವೆಂಬರ್ 1 ರಂದು ಸದಸ್ಯತ್ವ ಅಭಿಯಾನವನ್ನು ಆರಂಭಿಸಲಿದೆ. ಈ ಅಭಿಯಾನ ಮುಂದಿನ ವರ್ಷ ಮಾರ್ಚ್ 31 ರವರೆಗೆ ಮುಂದುವರಿಯುತ್ತದೆ. ಸದಸ್ಯತ್ವ ಅಭಿಯಾನದ ವಿಧಾನಗಳು ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಲು ಅಕ್ಟೋಬರ್ 26 ರಂದು ಸಭೆ ಕರೆಯಲಾಗಿದೆ.

ಕಾಂಗ್ರೆಸ್ ಸದಸ್ಯರಾಗಲು ಬಯಸುವವರಿಗೆ 10 ಅಂಶಗಳ ಪಟ್ಟಿ ಘೋಷಣೆ ಮಾಡಿದೆ.

“ನಾನು ಸರ್ಟಿಫೈಡ್ ಖಾದಿಯನ್ನು ಧರಿಸುವವನು. ನಾನು ಆಲ್ಕೊಹಾಲ್ಯುಕ್ತ ಪಾನೀಯಗಳು ಮತ್ತು ಮಾದಕವಸ್ತುಗಳಿಂದ ದೂರವಿರುತ್ತೇನೆ. ನಾನು ಯಾವುದೇ ರೂಪದಲ್ಲಿ ಸಾಮಾಜಿಕ ತಾರತಮ್ಯವನ್ನು ನಂಬುವುದಿಲ್ಲ, ಅದನ್ನು ತೊಡೆದು ಹಾಕಲು ಕೆಲಸ ಮಾಡುತ್ತೇನೆ. ನಾನು ಧರ್ಮ, ಜಾತಿಯ ಭೇದವಿಲ್ಲದ ಸಮಾಜವನ್ನು ನಂಬುತ್ತೇನೆ. ವರ್ಕಿಂಗ್ ಕಮಿಟಿಯಿಂದ ಸೂಚಿಸುವ ದೈಹಿಕ ಶ್ರಮ ಸೇರಿದಂತೆ ಕನಿಷ್ಠ ಕಾರ್ಯಗಳನ್ನು ನಿರ್ವಹಿಸುತ್ತೇನೆ. ಕಾನೂನು ವ್ಯಾಪ್ತಿ ಮೀರಿ ಆಸ್ತಿ ಹೊಂದಿರುವುದಿಲ್ಲವೆಂದು ಘೋಷಿಸುತ್ತೇನೆ” ಎಂಬ ಹಲವು ಅಂಶಗಳು ಪಟ್ಟಿಯಲ್ಲಿ ಇವೆ.


ಇದನ್ನೂ ಓದಿ: ಸಿಎಂ ‘ಬುರುಡೆ ಬೊಮ್ಮಾಯಿ’ ಬಿಜೆಪಿ ‘ಬಂಡಲ್’: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...