Homeಕರೋನಾ ತಲ್ಲಣಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ - ಬಿಎಂಸಿ 92 ಡಾಕ್ಟರ್ಸ್‌ ತಂಡ

ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಬಿಎಂಸಿ 1992ರ ಸಾಲಿನ ವಿದೇಶಗಳಲ್ಲಿರುವ ವೈದ್ಯರೆಲ್ಲರೂ ಸೇರಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಕಳಿಸಿದ್ದು, ಮತ್ತಷ್ಟನ್ನು ಕಳಿಸುವ ತಯಾರಿಯಲ್ಲಿದ್ದಾರೆ...

- Advertisement -
- Advertisement -

“ಕೊರೊನಾ ಬರುವುದನ್ನು ತಪ್ಪಿಸಲು ಆಗದೇ ಇರಬಹುದು. ಆದರೆ ಅದು ಉಲ್ಬಣವಾಗದಂತೆ ನೋಡಿಕೊಳ್ಳಲು ಸಾಧ್ಯ. ಖುದ್ದು ಡಾಕ್ಟರೇ ನಿಮ್ಮೊಂದಿಗೆ ಮಾತಾಡಿ ಚಿಕಿತ್ಸೆ ನೀಡುತ್ತಾರೆ. ಆ ನಂತರ ನೀವು ಗುಣವಾಗುವವರೆಗೆ‌ ಕೋವಿಡ್‌ ಕೌನ್ಸೆಲರ್ ನಿರಂತರ ಫಾಲೋಅಪ್‌ ಮಾಡುತ್ತಾರೆ. ಎಲ್ಲವೂ ಉಚಿತ” ಈ ರೀತಿಯಾಗಿ ವಾಗ್ದಾನ ಮಾಡಿದೆ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ..

ಕಳೆದೊಂದು ತಿಂಗಳಿಂದ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿರುವುದುನ್ನು, ಅಪಾರ ಸಾವು ನೋವುಗಳನ್ನು ನಾವು ಕಂಡಿದ್ದೇವೆ. ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ರಾಜ್ಯ ಈಗ ಕರ್ನಾಟಕ ಆಗಿದೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌) ಯ ಗುರಿಯಾಗಿದೆ.

ಬಹಳಷ್ಟು ಜನಕ್ಕೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಕೆಸಿವಿಟಿ ಮುಂದಾಗಿದೆ.

500 ಕ್ಕೂ ಹೆಚ್ಚು ವಾಲಂಟೀಯರ್‌ಗಳು, ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರು ಸೇರಿದಂತೆ 100 ಕ್ಕೂ ಹೆಚ್ಚು ವೈದ್ಯರು, 25 ಸ್ಪೆಷಲ್ ಕೌನ್ಸೆಲರ್‌ಗಳು, 50 ಫೀಲ್ಡ್‌ ವಾಲಂಟಿಯರ್‌ಗಳು ದಿನದ 24 ಗಂಟೆಗಳೂ ಕೂಡಾ ನೆರವಿನ ಕೇಂದ್ರದ ಹೆಲ್ಪ್ ಲಿಂಕ್ ನಂಬರ್ ಮೂಲಕ ಸೇವೆಗೆ ಸಿದ್ಧರಿದ್ದಾರೆ.

08047166155 ಹೆಲ್ಫ್‌ಲೈನ್‌ಗೆ ಸೋಂಕಿತರು ಕರೆ ಮಾಡಿದರೆ ರೋಗಿಯ ಗುಣಲಕ್ಷಣಗಳು, ಪರಿಸ್ಥಿತಿಗನುಗುಣವಾಗಿ ವೈದ್ಯರು ಚಿಕಿತ್ಸೆ ನೀಡುತ್ತಾರೆ. ನಂತರ ಒಬ್ಬ ನುರಿತ ವಾಲಂಟೀಯರ್ಸ್ ಆ ಸೋಂಕಿತರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಮೇಲ್ವೀಚಾರಣೆ ನಡೆಸುತ್ತಾರೆ. ಅಗತ್ಯಬಿದ್ದಲ್ಲಿ ರೋಗಿಯ ಮನೆಗೆ ಆಕ್ಸಿಜನ್, ಔ‍ಷಧಿಗಳನ್ನು ಒದಗಿಸಲಾಗುತ್ತದೆ. ಒಂದು ವೇಳೆ ರೋಗ ಉಲ್ಭಣಗೊಂಡಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಈ ರೀತಿಯಾಗಿ ಗುಣಮುಖರಾಗುವವರೆಗೂ ವ್ಯವಸ್ಥಿತವಾಗಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲು ಕೆಸಿವಿಟಿ ಬದ್ಧವಾಗಿದೆ.

ಕೆಸಿವಿಟಿ ವತಿಯಿಂದ ಇದುವರೆಗೂ 180 ಕೊರೊನಾ ಸೋಂಕಿತರಿಗೆ ಬಿಬಿಎಂಪಿ ಸಹಾಯವಾಣಿ ಮೂಲಕವೇ ಬೆಡ್ ಬುಕ್ ಮಾಡಿಕೊಡಲಾಗಿದೆ. ಅಲ್ಲದೇ ಕೆಸಿವಿಟಿ ಸಹಯೋಗದ ಬೆಂಗಳೂರಿನ ಎಚ್‌ಬಿಎಸ್ ಆಸ್ಪತ್ರೆಗೆ ಹಲವಾರು ಜನರನ್ನು ದಾಖಲಿಸಲಾಗಿದೆ. ಎಚ್‌ಬಿಎಸ್‌ ಆಸ್ಪತ್ರೆಯು ಕೊರೊನಾ ರೋಗಿಗಳಿಗೆ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸುತ್ತಿದೆ. ಇದೇ ರೀತಿಯಾಗಿ ರಾಜ್ಯದ ಹಲವು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹಲವು ಆಸ್ಪತ್ರೆಗಳೊಂದಿಗೆ ಸಹಯೋಗಕ್ಕಾಗಿ ಕೆಸಿವಿಟಿ ಪ್ರಯತ್ನಿಸುತ್ತಿದೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ 4 ಕೋಟಿ ರೂ ವೆಚ್ಚದಲ್ಲಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದು ಇನ್ನೆರೆಡು ದಿನಗಳಲ್ಲಿ ಬಂದು ತಲುಪಲಿವೆ. 5ಲೀ ಮತ್ತು 10 ಲೀ ಸಾಮರ್ಥ್ಯದ ಮತ್ತಷ್ಟು ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ. ಇವು ಮನೆಯಲ್ಲಿಯೇ ಆಕ್ಸಿಜನ್ ಅಗತ್ಯವಿದ್ದವರಿಗೆ ನೀಡಲು ಸಹಕಾರಿಯಾಗಿವೆ.

ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾಗಿರುವ ಈ ಸಂದರ್ಭದಲ್ಲಿ ಕೆಸಿವಿಟಿಯ ಈ ವ್ಯವಸ್ಥಿತ ಮಾನವೀಯ ಕೆಲಸ ಮಾದರಿಯುತವಾಗಿದೆ. ಅಗತ್ಯವಿದ್ದವರು ಇದರ ಸಹಾಯ ಪಡೆದುಕೊಳ್ಳುವುದರ ಜೊತೆಗೆ ಆಸಕ್ತರು ವಾಲಂಟಿಯರ್‌ಗಳಾಗಿ ಸಹ ತೊಡಗಿಸಿಕೊಳ್ಳಬಹುದಾಗಿದೆ. ದಿನಕ್ಕೆ 3 ಗಂಟೆಗಳ ಸಮಯ ನೀಡುವವರು 9731440021 ಸಂಖ್ಯೆಯನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...