Homeಕರೋನಾ ತಲ್ಲಣಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ - ಬಿಎಂಸಿ 92 ಡಾಕ್ಟರ್ಸ್‌ ತಂಡ

ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಬಿಎಂಸಿ 1992ರ ಸಾಲಿನ ವಿದೇಶಗಳಲ್ಲಿರುವ ವೈದ್ಯರೆಲ್ಲರೂ ಸೇರಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಕಳಿಸಿದ್ದು, ಮತ್ತಷ್ಟನ್ನು ಕಳಿಸುವ ತಯಾರಿಯಲ್ಲಿದ್ದಾರೆ...

- Advertisement -
- Advertisement -

“ಕೊರೊನಾ ಬರುವುದನ್ನು ತಪ್ಪಿಸಲು ಆಗದೇ ಇರಬಹುದು. ಆದರೆ ಅದು ಉಲ್ಬಣವಾಗದಂತೆ ನೋಡಿಕೊಳ್ಳಲು ಸಾಧ್ಯ. ಖುದ್ದು ಡಾಕ್ಟರೇ ನಿಮ್ಮೊಂದಿಗೆ ಮಾತಾಡಿ ಚಿಕಿತ್ಸೆ ನೀಡುತ್ತಾರೆ. ಆ ನಂತರ ನೀವು ಗುಣವಾಗುವವರೆಗೆ‌ ಕೋವಿಡ್‌ ಕೌನ್ಸೆಲರ್ ನಿರಂತರ ಫಾಲೋಅಪ್‌ ಮಾಡುತ್ತಾರೆ. ಎಲ್ಲವೂ ಉಚಿತ” ಈ ರೀತಿಯಾಗಿ ವಾಗ್ದಾನ ಮಾಡಿದೆ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ..

ಕಳೆದೊಂದು ತಿಂಗಳಿಂದ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿರುವುದುನ್ನು, ಅಪಾರ ಸಾವು ನೋವುಗಳನ್ನು ನಾವು ಕಂಡಿದ್ದೇವೆ. ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ರಾಜ್ಯ ಈಗ ಕರ್ನಾಟಕ ಆಗಿದೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌) ಯ ಗುರಿಯಾಗಿದೆ.

ಬಹಳಷ್ಟು ಜನಕ್ಕೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಕೆಸಿವಿಟಿ ಮುಂದಾಗಿದೆ.

500 ಕ್ಕೂ ಹೆಚ್ಚು ವಾಲಂಟೀಯರ್‌ಗಳು, ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರು ಸೇರಿದಂತೆ 100 ಕ್ಕೂ ಹೆಚ್ಚು ವೈದ್ಯರು, 25 ಸ್ಪೆಷಲ್ ಕೌನ್ಸೆಲರ್‌ಗಳು, 50 ಫೀಲ್ಡ್‌ ವಾಲಂಟಿಯರ್‌ಗಳು ದಿನದ 24 ಗಂಟೆಗಳೂ ಕೂಡಾ ನೆರವಿನ ಕೇಂದ್ರದ ಹೆಲ್ಪ್ ಲಿಂಕ್ ನಂಬರ್ ಮೂಲಕ ಸೇವೆಗೆ ಸಿದ್ಧರಿದ್ದಾರೆ.

08047166155 ಹೆಲ್ಫ್‌ಲೈನ್‌ಗೆ ಸೋಂಕಿತರು ಕರೆ ಮಾಡಿದರೆ ರೋಗಿಯ ಗುಣಲಕ್ಷಣಗಳು, ಪರಿಸ್ಥಿತಿಗನುಗುಣವಾಗಿ ವೈದ್ಯರು ಚಿಕಿತ್ಸೆ ನೀಡುತ್ತಾರೆ. ನಂತರ ಒಬ್ಬ ನುರಿತ ವಾಲಂಟೀಯರ್ಸ್ ಆ ಸೋಂಕಿತರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಮೇಲ್ವೀಚಾರಣೆ ನಡೆಸುತ್ತಾರೆ. ಅಗತ್ಯಬಿದ್ದಲ್ಲಿ ರೋಗಿಯ ಮನೆಗೆ ಆಕ್ಸಿಜನ್, ಔ‍ಷಧಿಗಳನ್ನು ಒದಗಿಸಲಾಗುತ್ತದೆ. ಒಂದು ವೇಳೆ ರೋಗ ಉಲ್ಭಣಗೊಂಡಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಈ ರೀತಿಯಾಗಿ ಗುಣಮುಖರಾಗುವವರೆಗೂ ವ್ಯವಸ್ಥಿತವಾಗಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲು ಕೆಸಿವಿಟಿ ಬದ್ಧವಾಗಿದೆ.

ಕೆಸಿವಿಟಿ ವತಿಯಿಂದ ಇದುವರೆಗೂ 180 ಕೊರೊನಾ ಸೋಂಕಿತರಿಗೆ ಬಿಬಿಎಂಪಿ ಸಹಾಯವಾಣಿ ಮೂಲಕವೇ ಬೆಡ್ ಬುಕ್ ಮಾಡಿಕೊಡಲಾಗಿದೆ. ಅಲ್ಲದೇ ಕೆಸಿವಿಟಿ ಸಹಯೋಗದ ಬೆಂಗಳೂರಿನ ಎಚ್‌ಬಿಎಸ್ ಆಸ್ಪತ್ರೆಗೆ ಹಲವಾರು ಜನರನ್ನು ದಾಖಲಿಸಲಾಗಿದೆ. ಎಚ್‌ಬಿಎಸ್‌ ಆಸ್ಪತ್ರೆಯು ಕೊರೊನಾ ರೋಗಿಗಳಿಗೆ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸುತ್ತಿದೆ. ಇದೇ ರೀತಿಯಾಗಿ ರಾಜ್ಯದ ಹಲವು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹಲವು ಆಸ್ಪತ್ರೆಗಳೊಂದಿಗೆ ಸಹಯೋಗಕ್ಕಾಗಿ ಕೆಸಿವಿಟಿ ಪ್ರಯತ್ನಿಸುತ್ತಿದೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ 4 ಕೋಟಿ ರೂ ವೆಚ್ಚದಲ್ಲಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದು ಇನ್ನೆರೆಡು ದಿನಗಳಲ್ಲಿ ಬಂದು ತಲುಪಲಿವೆ. 5ಲೀ ಮತ್ತು 10 ಲೀ ಸಾಮರ್ಥ್ಯದ ಮತ್ತಷ್ಟು ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ. ಇವು ಮನೆಯಲ್ಲಿಯೇ ಆಕ್ಸಿಜನ್ ಅಗತ್ಯವಿದ್ದವರಿಗೆ ನೀಡಲು ಸಹಕಾರಿಯಾಗಿವೆ.

ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾಗಿರುವ ಈ ಸಂದರ್ಭದಲ್ಲಿ ಕೆಸಿವಿಟಿಯ ಈ ವ್ಯವಸ್ಥಿತ ಮಾನವೀಯ ಕೆಲಸ ಮಾದರಿಯುತವಾಗಿದೆ. ಅಗತ್ಯವಿದ್ದವರು ಇದರ ಸಹಾಯ ಪಡೆದುಕೊಳ್ಳುವುದರ ಜೊತೆಗೆ ಆಸಕ್ತರು ವಾಲಂಟಿಯರ್‌ಗಳಾಗಿ ಸಹ ತೊಡಗಿಸಿಕೊಳ್ಳಬಹುದಾಗಿದೆ. ದಿನಕ್ಕೆ 3 ಗಂಟೆಗಳ ಸಮಯ ನೀಡುವವರು 9731440021 ಸಂಖ್ಯೆಯನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...