Homeಕರೋನಾ ತಲ್ಲಣಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ - ಬಿಎಂಸಿ 92 ಡಾಕ್ಟರ್ಸ್‌ ತಂಡ

ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಬಿಎಂಸಿ 1992ರ ಸಾಲಿನ ವಿದೇಶಗಳಲ್ಲಿರುವ ವೈದ್ಯರೆಲ್ಲರೂ ಸೇರಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಕಳಿಸಿದ್ದು, ಮತ್ತಷ್ಟನ್ನು ಕಳಿಸುವ ತಯಾರಿಯಲ್ಲಿದ್ದಾರೆ...

- Advertisement -
- Advertisement -

“ಕೊರೊನಾ ಬರುವುದನ್ನು ತಪ್ಪಿಸಲು ಆಗದೇ ಇರಬಹುದು. ಆದರೆ ಅದು ಉಲ್ಬಣವಾಗದಂತೆ ನೋಡಿಕೊಳ್ಳಲು ಸಾಧ್ಯ. ಖುದ್ದು ಡಾಕ್ಟರೇ ನಿಮ್ಮೊಂದಿಗೆ ಮಾತಾಡಿ ಚಿಕಿತ್ಸೆ ನೀಡುತ್ತಾರೆ. ಆ ನಂತರ ನೀವು ಗುಣವಾಗುವವರೆಗೆ‌ ಕೋವಿಡ್‌ ಕೌನ್ಸೆಲರ್ ನಿರಂತರ ಫಾಲೋಅಪ್‌ ಮಾಡುತ್ತಾರೆ. ಎಲ್ಲವೂ ಉಚಿತ” ಈ ರೀತಿಯಾಗಿ ವಾಗ್ದಾನ ಮಾಡಿದೆ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ..

ಕಳೆದೊಂದು ತಿಂಗಳಿಂದ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿರುವುದುನ್ನು, ಅಪಾರ ಸಾವು ನೋವುಗಳನ್ನು ನಾವು ಕಂಡಿದ್ದೇವೆ. ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ರಾಜ್ಯ ಈಗ ಕರ್ನಾಟಕ ಆಗಿದೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌) ಯ ಗುರಿಯಾಗಿದೆ.

ಬಹಳಷ್ಟು ಜನಕ್ಕೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಕೆಸಿವಿಟಿ ಮುಂದಾಗಿದೆ.

500 ಕ್ಕೂ ಹೆಚ್ಚು ವಾಲಂಟೀಯರ್‌ಗಳು, ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರು ಸೇರಿದಂತೆ 100 ಕ್ಕೂ ಹೆಚ್ಚು ವೈದ್ಯರು, 25 ಸ್ಪೆಷಲ್ ಕೌನ್ಸೆಲರ್‌ಗಳು, 50 ಫೀಲ್ಡ್‌ ವಾಲಂಟಿಯರ್‌ಗಳು ದಿನದ 24 ಗಂಟೆಗಳೂ ಕೂಡಾ ನೆರವಿನ ಕೇಂದ್ರದ ಹೆಲ್ಪ್ ಲಿಂಕ್ ನಂಬರ್ ಮೂಲಕ ಸೇವೆಗೆ ಸಿದ್ಧರಿದ್ದಾರೆ.

08047166155 ಹೆಲ್ಫ್‌ಲೈನ್‌ಗೆ ಸೋಂಕಿತರು ಕರೆ ಮಾಡಿದರೆ ರೋಗಿಯ ಗುಣಲಕ್ಷಣಗಳು, ಪರಿಸ್ಥಿತಿಗನುಗುಣವಾಗಿ ವೈದ್ಯರು ಚಿಕಿತ್ಸೆ ನೀಡುತ್ತಾರೆ. ನಂತರ ಒಬ್ಬ ನುರಿತ ವಾಲಂಟೀಯರ್ಸ್ ಆ ಸೋಂಕಿತರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಮೇಲ್ವೀಚಾರಣೆ ನಡೆಸುತ್ತಾರೆ. ಅಗತ್ಯಬಿದ್ದಲ್ಲಿ ರೋಗಿಯ ಮನೆಗೆ ಆಕ್ಸಿಜನ್, ಔ‍ಷಧಿಗಳನ್ನು ಒದಗಿಸಲಾಗುತ್ತದೆ. ಒಂದು ವೇಳೆ ರೋಗ ಉಲ್ಭಣಗೊಂಡಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಈ ರೀತಿಯಾಗಿ ಗುಣಮುಖರಾಗುವವರೆಗೂ ವ್ಯವಸ್ಥಿತವಾಗಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲು ಕೆಸಿವಿಟಿ ಬದ್ಧವಾಗಿದೆ.

ಕೆಸಿವಿಟಿ ವತಿಯಿಂದ ಇದುವರೆಗೂ 180 ಕೊರೊನಾ ಸೋಂಕಿತರಿಗೆ ಬಿಬಿಎಂಪಿ ಸಹಾಯವಾಣಿ ಮೂಲಕವೇ ಬೆಡ್ ಬುಕ್ ಮಾಡಿಕೊಡಲಾಗಿದೆ. ಅಲ್ಲದೇ ಕೆಸಿವಿಟಿ ಸಹಯೋಗದ ಬೆಂಗಳೂರಿನ ಎಚ್‌ಬಿಎಸ್ ಆಸ್ಪತ್ರೆಗೆ ಹಲವಾರು ಜನರನ್ನು ದಾಖಲಿಸಲಾಗಿದೆ. ಎಚ್‌ಬಿಎಸ್‌ ಆಸ್ಪತ್ರೆಯು ಕೊರೊನಾ ರೋಗಿಗಳಿಗೆ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸುತ್ತಿದೆ. ಇದೇ ರೀತಿಯಾಗಿ ರಾಜ್ಯದ ಹಲವು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹಲವು ಆಸ್ಪತ್ರೆಗಳೊಂದಿಗೆ ಸಹಯೋಗಕ್ಕಾಗಿ ಕೆಸಿವಿಟಿ ಪ್ರಯತ್ನಿಸುತ್ತಿದೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ 4 ಕೋಟಿ ರೂ ವೆಚ್ಚದಲ್ಲಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದು ಇನ್ನೆರೆಡು ದಿನಗಳಲ್ಲಿ ಬಂದು ತಲುಪಲಿವೆ. 5ಲೀ ಮತ್ತು 10 ಲೀ ಸಾಮರ್ಥ್ಯದ ಮತ್ತಷ್ಟು ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ. ಇವು ಮನೆಯಲ್ಲಿಯೇ ಆಕ್ಸಿಜನ್ ಅಗತ್ಯವಿದ್ದವರಿಗೆ ನೀಡಲು ಸಹಕಾರಿಯಾಗಿವೆ.

ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾಗಿರುವ ಈ ಸಂದರ್ಭದಲ್ಲಿ ಕೆಸಿವಿಟಿಯ ಈ ವ್ಯವಸ್ಥಿತ ಮಾನವೀಯ ಕೆಲಸ ಮಾದರಿಯುತವಾಗಿದೆ. ಅಗತ್ಯವಿದ್ದವರು ಇದರ ಸಹಾಯ ಪಡೆದುಕೊಳ್ಳುವುದರ ಜೊತೆಗೆ ಆಸಕ್ತರು ವಾಲಂಟಿಯರ್‌ಗಳಾಗಿ ಸಹ ತೊಡಗಿಸಿಕೊಳ್ಳಬಹುದಾಗಿದೆ. ದಿನಕ್ಕೆ 3 ಗಂಟೆಗಳ ಸಮಯ ನೀಡುವವರು 9731440021 ಸಂಖ್ಯೆಯನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...