Homeಕರೋನಾ ತಲ್ಲಣಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ - ಬಿಎಂಸಿ 92 ಡಾಕ್ಟರ್ಸ್‌ ತಂಡ

ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ಬಿಎಂಸಿ 1992ರ ಸಾಲಿನ ವಿದೇಶಗಳಲ್ಲಿರುವ ವೈದ್ಯರೆಲ್ಲರೂ ಸೇರಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಕಳಿಸಿದ್ದು, ಮತ್ತಷ್ಟನ್ನು ಕಳಿಸುವ ತಯಾರಿಯಲ್ಲಿದ್ದಾರೆ...

- Advertisement -
- Advertisement -

“ಕೊರೊನಾ ಬರುವುದನ್ನು ತಪ್ಪಿಸಲು ಆಗದೇ ಇರಬಹುದು. ಆದರೆ ಅದು ಉಲ್ಬಣವಾಗದಂತೆ ನೋಡಿಕೊಳ್ಳಲು ಸಾಧ್ಯ. ಖುದ್ದು ಡಾಕ್ಟರೇ ನಿಮ್ಮೊಂದಿಗೆ ಮಾತಾಡಿ ಚಿಕಿತ್ಸೆ ನೀಡುತ್ತಾರೆ. ಆ ನಂತರ ನೀವು ಗುಣವಾಗುವವರೆಗೆ‌ ಕೋವಿಡ್‌ ಕೌನ್ಸೆಲರ್ ನಿರಂತರ ಫಾಲೋಅಪ್‌ ಮಾಡುತ್ತಾರೆ. ಎಲ್ಲವೂ ಉಚಿತ” ಈ ರೀತಿಯಾಗಿ ವಾಗ್ದಾನ ಮಾಡಿದೆ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ..

ಕಳೆದೊಂದು ತಿಂಗಳಿಂದ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿರುವುದುನ್ನು, ಅಪಾರ ಸಾವು ನೋವುಗಳನ್ನು ನಾವು ಕಂಡಿದ್ದೇವೆ. ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ರಾಜ್ಯ ಈಗ ಕರ್ನಾಟಕ ಆಗಿದೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಕೆಸಿವಿಟಿ (ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌) ಯ ಗುರಿಯಾಗಿದೆ.

ಬಹಳಷ್ಟು ಜನಕ್ಕೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಕೆಸಿವಿಟಿ ಮುಂದಾಗಿದೆ.

500 ಕ್ಕೂ ಹೆಚ್ಚು ವಾಲಂಟೀಯರ್‌ಗಳು, ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರು ಸೇರಿದಂತೆ 100 ಕ್ಕೂ ಹೆಚ್ಚು ವೈದ್ಯರು, 25 ಸ್ಪೆಷಲ್ ಕೌನ್ಸೆಲರ್‌ಗಳು, 50 ಫೀಲ್ಡ್‌ ವಾಲಂಟಿಯರ್‌ಗಳು ದಿನದ 24 ಗಂಟೆಗಳೂ ಕೂಡಾ ನೆರವಿನ ಕೇಂದ್ರದ ಹೆಲ್ಪ್ ಲಿಂಕ್ ನಂಬರ್ ಮೂಲಕ ಸೇವೆಗೆ ಸಿದ್ಧರಿದ್ದಾರೆ.

08047166155 ಹೆಲ್ಫ್‌ಲೈನ್‌ಗೆ ಸೋಂಕಿತರು ಕರೆ ಮಾಡಿದರೆ ರೋಗಿಯ ಗುಣಲಕ್ಷಣಗಳು, ಪರಿಸ್ಥಿತಿಗನುಗುಣವಾಗಿ ವೈದ್ಯರು ಚಿಕಿತ್ಸೆ ನೀಡುತ್ತಾರೆ. ನಂತರ ಒಬ್ಬ ನುರಿತ ವಾಲಂಟೀಯರ್ಸ್ ಆ ಸೋಂಕಿತರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಮೇಲ್ವೀಚಾರಣೆ ನಡೆಸುತ್ತಾರೆ. ಅಗತ್ಯಬಿದ್ದಲ್ಲಿ ರೋಗಿಯ ಮನೆಗೆ ಆಕ್ಸಿಜನ್, ಔ‍ಷಧಿಗಳನ್ನು ಒದಗಿಸಲಾಗುತ್ತದೆ. ಒಂದು ವೇಳೆ ರೋಗ ಉಲ್ಭಣಗೊಂಡಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಈ ರೀತಿಯಾಗಿ ಗುಣಮುಖರಾಗುವವರೆಗೂ ವ್ಯವಸ್ಥಿತವಾಗಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲು ಕೆಸಿವಿಟಿ ಬದ್ಧವಾಗಿದೆ.

ಕೆಸಿವಿಟಿ ವತಿಯಿಂದ ಇದುವರೆಗೂ 180 ಕೊರೊನಾ ಸೋಂಕಿತರಿಗೆ ಬಿಬಿಎಂಪಿ ಸಹಾಯವಾಣಿ ಮೂಲಕವೇ ಬೆಡ್ ಬುಕ್ ಮಾಡಿಕೊಡಲಾಗಿದೆ. ಅಲ್ಲದೇ ಕೆಸಿವಿಟಿ ಸಹಯೋಗದ ಬೆಂಗಳೂರಿನ ಎಚ್‌ಬಿಎಸ್ ಆಸ್ಪತ್ರೆಗೆ ಹಲವಾರು ಜನರನ್ನು ದಾಖಲಿಸಲಾಗಿದೆ. ಎಚ್‌ಬಿಎಸ್‌ ಆಸ್ಪತ್ರೆಯು ಕೊರೊನಾ ರೋಗಿಗಳಿಗೆ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸುತ್ತಿದೆ. ಇದೇ ರೀತಿಯಾಗಿ ರಾಜ್ಯದ ಹಲವು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹಲವು ಆಸ್ಪತ್ರೆಗಳೊಂದಿಗೆ ಸಹಯೋಗಕ್ಕಾಗಿ ಕೆಸಿವಿಟಿ ಪ್ರಯತ್ನಿಸುತ್ತಿದೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ 4 ಕೋಟಿ ರೂ ವೆಚ್ಚದಲ್ಲಿ 250 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದು ಇನ್ನೆರೆಡು ದಿನಗಳಲ್ಲಿ ಬಂದು ತಲುಪಲಿವೆ. 5ಲೀ ಮತ್ತು 10 ಲೀ ಸಾಮರ್ಥ್ಯದ ಮತ್ತಷ್ಟು ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ. ಇವು ಮನೆಯಲ್ಲಿಯೇ ಆಕ್ಸಿಜನ್ ಅಗತ್ಯವಿದ್ದವರಿಗೆ ನೀಡಲು ಸಹಕಾರಿಯಾಗಿವೆ.

ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾಗಿರುವ ಈ ಸಂದರ್ಭದಲ್ಲಿ ಕೆಸಿವಿಟಿಯ ಈ ವ್ಯವಸ್ಥಿತ ಮಾನವೀಯ ಕೆಲಸ ಮಾದರಿಯುತವಾಗಿದೆ. ಅಗತ್ಯವಿದ್ದವರು ಇದರ ಸಹಾಯ ಪಡೆದುಕೊಳ್ಳುವುದರ ಜೊತೆಗೆ ಆಸಕ್ತರು ವಾಲಂಟಿಯರ್‌ಗಳಾಗಿ ಸಹ ತೊಡಗಿಸಿಕೊಳ್ಳಬಹುದಾಗಿದೆ. ದಿನಕ್ಕೆ 3 ಗಂಟೆಗಳ ಸಮಯ ನೀಡುವವರು 9731440021 ಸಂಖ್ಯೆಯನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಈಗ ಸರ್ಕಾರವೇನು ಮಾಡಬೇಕು?: ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡಫ್ಲೊ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...