Homeಮುಖಪುಟವಿಚ್ಛಿದ್ರಕಾರಿ ಅಜೆಂಡಾ ತಡೆಯಲು ಮುಂದಾಗಿ: ಮೋದಿಗೆ ನೌಕಾಪಡೆ ಮಾಜಿ ಮುಖ್ಯಸ್ಥ ಎಲ್. ರಾಮದಾಸ್ ಪತ್ರ

ವಿಚ್ಛಿದ್ರಕಾರಿ ಅಜೆಂಡಾ ತಡೆಯಲು ಮುಂದಾಗಿ: ಮೋದಿಗೆ ನೌಕಾಪಡೆ ಮಾಜಿ ಮುಖ್ಯಸ್ಥ ಎಲ್. ರಾಮದಾಸ್ ಪತ್ರ

ಅಂತರರಾಷ್ಟ್ರೀಯ ಸಮುದಾಯವು ಕೋವಿಡ್ ವಿರುದ್ಧ ಭಾರತದ ಪ್ರಯತ್ನಗಳನ್ನು ನಿಕಟವಾಗಿ ಗಮನಿಸುತ್ತಿರುವ ಹೊತ್ತಿನಲ್ಲಿ- ಮಾಹಿತಿ ತಂತ್ರಜ್ಞಾನವನ್ನು ಬಳಸುವ ಕೆಲವರು ಹರಡುತ್ತಿರುವ ಸುಳ್ಳು ಸುದ್ದಿಗಳು ಮತ್ತು ಕಿಡಿಗೇಡಿತನದ ಅಪಪ್ರಚಾರಗಳು ಭಾರತಕ್ಕೆ ಶ್ರೇಯವನ್ನು ತರುವುದಿಲ್ಲ.

- Advertisement -
- Advertisement -

ಕೊರೋನಾ ವಿರುದ್ಧದ ಹೋರಾಟದ ಹೊತ್ತಿನಲ್ಲಿ ವಿಚ್ಛಿದ್ರಕಾರಿ ಅಜೆಂಡಾಗಳು ಸುಳ್ಳು ಸುದ್ದಿಗಳಾಗಿ ಮುನ್ನೆಲೆಗೆ ಬರುತ್ತಿದ್ದು ಅವುಗಳನ್ನು ತಡೆಯುವಂತೆ ಭಾರತದ ನೌಕಾಪಡೆ ಮಾಜಿ ಮುಖ್ಯಸ್ಥ ಎಲ್. ರಾಮದಾಸ್‌ರವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಅದರ ಕನ್ನಡ ಅನುವಾದ ಇಲ್ಲಿದೆ.

ನನ್ನ ನೆಚ್ಚಿನ ಪ್ರಧಾನ ಮಂತ್ರಿಯವರೇ,

ಎಪ್ರಿಲ್ 14, 2020ರಂದು ಅಂಬೇಡ್ಕರ್ ಜಯಂತಿಯ ದಿನ ರಾಷ್ಟ್ರೀಯ ಟೆಲಿವಿಷನ್‌ನಲ್ಲಿ ರಾಷ್ಟ್ರವನ್ನುದ್ದೇಶಿಸಿ ನೀವು ಮಾಡಿದ ಭಾಷಣವನ್ನು ನಾನು ಅತ್ಯಾಸಕ್ತಿಯಿಂದ ಕೇಳಿದೆ.

ಆದರೆ, ಉಳಿದವರಂತೆ ನಾನು ಕೂಡಾ- ತಮ್ಮ ತಮ್ಮ ಕೆಲಸದ ಸ್ಥಳಗಳಿಂದ ಹೊರತಳ್ಳಲ್ಪಪಟ್ಟಿರುವ ಲಕ್ಷಾಂತರ ಕಾರ್ಮಿಕರು –  ಒಂದೋ ಒತ್ತಾಯಪೂರ್ವಕವಾಗಿ  ನಗರಗಳಲ್ಲಿರುವ ತಮ್ಮತಮ್ಮ ಕೆಲಸದ ಸ್ಥಳಗಳಲ್ಲಿಯೇ ಉಳಿದುಕೊಳ್ಳುವ ಅನಿವಾರ್ಯತೆಗೆ ಒಳಗಾಗಿರುವವವರು; ಅಥವಾ ತಮ್ಮ ಕುಟುಂಬದವರನ್ನು ಸೇರಿಕೊಳ್ಳಲು ನೂರಾರು ಕಿ.ಮೀ. ದೂರದಲ್ಲಿರುವ ಮನೆಗಳಿಗೆ ಕಾಲ್ನಡಿಗೆಯಲ್ಲಿ ಪ್ರಯಾಣ ಬೆಳೆಸಿದ ಕಾರ್ಮಿಕರನ್ನು ನೋಡಿಕೊಳ್ಳುವ ಸಲುವಾಗಿ ಸರಕಾರ ಯಾವೆಲ್ಲಾ ಕ್ರಮಗಳನ್ನು ಹಾಗೂ ಯೋಜನೆಗಳನ್ನು ಹಾಕಿಕೊಂಡಿದೆ ಎಂಬ ಕುರಿತು ಇನ್ನಷ್ಟು ನಿರ್ದಿಷ್ಟವಾದ ಮಾಹಿತಿಯನ್ನು ನೀವು ನಮಗೆ ಒದಗಿಸುತ್ತೀರಿ ಎಂದು ಆಶಿಸುತ್ತಿದ್ದೆ, ನಿರೀಕ್ಷಿಸುತ್ತಿದ್ದೆ.

ನಾವು ಮಾಧ್ಯಮದಲ್ಲಿ ನೋಡುತ್ತಿರುವ ವರದಿಗಳು ಮತ್ತು ಪ್ರತ್ಯಕ್ಷ ವರದಿಗಳಿಂದ ಅವರ ಸಂಕಷ್ಟ ಹೃದಯ ಒಡೆಯುವಂತದ್ದಾಗಿದೆ ಮತ್ತು ನಾವು ಊಹಿಸಬಹುದಾದುದಕ್ಕಿಂತಲೂ ತೀರಾ ಕೆಟ್ಟದಾಗಿದೆ ಎಂದು ಗೊತ್ತಾಗುತ್ತಿದೆ.

ನಾನು ಮಾರ್ಚ್ 27ರಂದು ಮಾನನೀಯ ರಕ್ಷಣಾ ಸಚಿವರು, ಮುಖ್ಯ ರಕ್ಷಣಾ ಕಾರ್ಯದರ್ಶಿಯವರು, ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರಿಗೆ ಪ್ರತಿಗಳನ್ನು ಲಗತ್ತಿಸಿ ನಿಮಗೆ ಬರೆದಿದ್ದ ಹಿಂದಿನ ಪತ್ರ ನಿಮಗೆ ನೆನಪಿರಬಹುದು. ಸಶಸ್ತ್ರ ಪಡೆಗಳು ಹೊಂದಿರುವ ಅಗಾಧ ಮಾನವ ಶಕ್ತಿ, ಅದಕ್ಕೂ ಮಿಗಿಲಾಗಿ ಅವರು ಅಖಿಲ ಭಾರತ ಮಟ್ಟದಲ್ಲಿ ಹೊಂದಿರುವ ಅಸ್ತಿತ್ವವನ್ನು- ನಾಗರಿಕ ಆಡಳಿತ ನೆರವಿಗಾಗಿ ಮನವಿ ಸಲ್ಲಿಸುವುದಕ್ಕೆ ಮುನ್ನವೇ- ಸ್ಥಳೀಯ ಆಡಳಿತಕ್ಕೆ ನೆರವಾಗುವ ಸಲುವಾಗಿ ಬಳಸಿಕೊಳ್ಳಬಹುದು ಎಂದು ನಾನು ಸಲಹೆ ಮಾಡಿದ್ದೆ.

ಇಂತಹ “ನಾಗರಿಕ ಅಧಿಕಾರಕ್ಕೆ ನೆರವು” ಎಂಬುದನ್ನು “ನಾಗರಿಕ ಪ್ರಾಧಿಕಾರ ವ್ಯವಸ್ಥೆಗೆ ನೆರವು” ಎಂಬುದಾಗಿ ಅರ್ಥ ಮಾಡಿಕೊಳ್ಳಬೇಕು. ಇಂತಹಾ ನೆರವನ್ನು ಹಲವು ರೀತಿಗಳಲ್ಲಿ ನೀಡಲು ಸಾಧ್ಯವಿದೆ. ದೊಡ್ಡ ಸಂಖ್ಯೆಯ ಸಂಚಾರ, ಸಾರಿಗೆಯಲ್ಲಿ ನೆರವಾಗುವುದರಿಂದ ಹಿಡಿದು, ಸಮುದಾಯ ಅಡುಗೆಮನೆ ಮತ್ತು ಆಹಾರ ವಿತರಣೆಯನ್ನು ನಿರ್ವಹಿಸುವುದು, ಅಥವಾ ವಿಸ್ತೃತವಾದ ಆಸ್ಪತ್ರೆಗಳಿಗೆ ಮೂಲಸೌಕರ್ಯ ನಿರ್ಮಾಣ ಮಾಡುವುದು, ಆರೋಗ್ಯ ಸೇವಾ ಸಿಬ್ಬಂದಿಯನ್ನು ಒದಗಿಸುವುದರ ತನಕ- ನಮ್ಮ ನಾಗರಿಕರಿಗೆ ಈಗ ಸಿಗುತ್ತಿರುವ ಸೇವೆಗಳನ್ನು ಬಲಪಡಿಸಲು ಬಳಸಿಕೊಳ್ಳಬಹುದು ಎಂದು ನಾನು ಹೇಳಿದ್ದೆ.

ಆಹಾರ ಧಾನ್ಯಗಳನ್ನು ಜಿಲ್ಲಾ ಆಡಳಿತಗಳು ಪೂರೈಕೆ ಮಾಡಬಹುದು ಮತ್ತು ಭಾರತೀಯ ಆಹಾರ ನಿಗಮ (ಎಫ್‌ಸಿಐ)ದಲ್ಲಿ ಬಿದ್ದುಕೊಂಡಿರುವ ಭಾರೀ ಪ್ರಮಾಣದ ಮಿಗತೆ ಆಹಾರ ಧಾನ್ಯಗಳನ್ನು ಪಡೆದು ಬಳಸಿಕೊಳ್ಳಲು ಅವುಗಳಿಗೆ ಅಧಿಕಾರ ನೀಡಬೇಕು ಎಂದೂ ನಾನು ಸಲಹೆ ಮಾಡಿದ್ದೆ. ಎಲ್ಲಾ ಲಭ್ಯ ಲೆಕ್ಕಾಚಾರಗಳ ಪ್ರಕಾರ ನಮ್ಮ ಆಹಾರದ ಮಿಗತೆ ದಾಸ್ತಾನು ಯಾವುದೇ ತುರ್ತು ಸ್ಥಿತಿಗೆ ಅಗತ್ಯ ಇರುವುದಕ್ಕಿಂತ ಹೆಚ್ಚುಕಡಿಮೆ ಮೂರು ಪಟ್ಟು ಹೆಚ್ಚು ಇದೆ.

ಪ್ರಸ್ತುತ ಸ್ಥಿತಿಯು ಅತ್ಯಂತ ಗಂಭೀರ ಸ್ಥಿತಿಗಿಂತಲೂ ಗಂಭೀರವಾಗಿದೆ ಎಂದು ನೀವು ನನ್ನೊಂದಿಗೆ ಒಪ್ಪಿಕೊಳ್ಳುತ್ತೀರಿ. ಅದೆಂದರೆ, ಹಠಾತ್ತಾಗಿ ಹೇರಿದ ಲಾಕ್‌ಡೌನ್‌ನ ಪರಿಣಾಮವಾಗಿ ಹುಟ್ಟಿಕೊಂಡ ಹಲವಾರು ಸಂಕೀರ್ಣ ಪರಿಸ್ಥಿತಿಗಳು ನಿರ್ಮಿಸಿದ ಸಾಮೂಹಿಕ ಹಸಿವಿನ ಘೋರ ಪರಿಸ್ಥಿತಿ. ಅತ್ಯಂತ ಅಗತ್ಯವಿರುವವರಿಗೆ, ರೇಷನ್ ಕಾರ್ಡು ಇದ್ದರೂ, ಇಲ್ಲದಿದ್ದರೂ ಈ ಆಹಾರ ದಾಸ್ತಾನು ಲಭ್ಯವಾಗುವಂತೆ ಮಾಡದಿದ್ದರೆ ಅದು- ಅತ್ಯಂತ ತೀವ್ರವಾದ ಅಗತ್ಯದ ಸಂದರ್ಭದಲ್ಲಿಯೂ ಅತ್ಯಂತ ಜೀವನಾವಶ್ಯಕ ವಸ್ತುಗಳನ್ನು ಕಳ್ಳದಾಸ್ತಾನು ಮಾಡುವುದಕ್ಕೆ ಸಮನಾಗುತ್ತದೆ.


ಇದನ್ನೂ ಓದಿ: ಪಾದರಾಯನಪುರದಲ್ಲಿ ನಡೆದದ್ದೇನು? ಏನು ಕಾರಣ? ಸಂಪೂರ್ಣ ವಿವರಗಳು


ಸಶಸ್ತ್ರ ಪಡೆಗಳು ಈಗಾಗಲೇ ಆರೋಗ್ಯ ಸೇವೆ, ಔಷಧಿ, ಕ್ವಾರಂಟೈನ್ ಕೇಂದ್ರಗಳು, ಹೆಚ್ಚುವರಿ ಹಾಸಿಗೆ ಇತ್ಯಾದಿ ಕ್ಷೇತ್ರಗಳಲ್ಲಿ ತಳಮಟ್ಟದ ಸೇವೆಯನ್ನು ನೀಡುತ್ತಿವೆ ಎಂದು ನನಗೆ ತಿಳಿದಿದೆ. ಇದು ಅತ್ಯುತ್ತಮ ಸೇವಾ ಸಂಪ್ರದಾಯಕ್ಕೆ ಅನುಗುಣವಾಗಿದೆ. ಎಲ್ಲಾ ಸಮಯಗಳಲ್ಲಿ ಕಾರ್ಯಾಚರಣೆಯ ಸಿದ್ಧತೆಯನ್ನು ಕಾಯ್ದುಕೊಳ್ಳುವುದರ ಜೊತೆಗೆ, ಈ ಪಿಡುಗನ್ನು ಎದುರಿಸುವುದರಲ್ಲಿ ರಕ್ಷಣಾ ಸಚಿವಾಲಯದಲ್ಲಿರುವ ನಿಮ್ಮ ತಂಡ ತೀವ್ರವಾದ ಒತ್ತಡದಲ್ಲಿದೆ ಎಂದೂ ನಾನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿದ್ದೇನೆ.

ಹಲವಾರು ರಾಜ್ಯ ಮತ್ತು ಜಿಲ್ಲಾಡಳಿತಗಳು ಮತ್ತು ಸರಕಾರೇತರ ಸಂಘಟನೆಗಳು, ಹಲವಾರು ನಾಗರಿಕ ಸಂಘಟನೆಗಳು, ಧಾರ್ಮಿಕ ಸಂಸ್ಥೆಗಳು ಕೂಡಾ ಮಾಡುತ್ತಿರುವ ಅತ್ಯುತ್ಕೃಷ್ಟ ಸೇವೆಯನ್ನು ನಾನು ಶ್ಲಾಘಿಸುತ್ತೇನೆ. ಈಗ ನಾವು ಎದುರಿಸುತ್ತಿರುವ ಸಮಸ್ಯೆಯ ಪ್ರಮಾಣ ಹಿಂದೆಂದೂ ಎದುರಾಗದಿರುವಂತದ್ದು ಎಂದು ಕೂಡಾ ನಾನು ಹಿಂದೆ ಉಲ್ಲೇಖಿಸಿದ್ದೆ. ಆದುದರಿಂದ, ನಮ್ಮ ಪ್ರತಿಕ್ರಿಯೆ ಕೂಡಾ ಅದೇ ರೀತಿಯಲ್ಲಿ ಇರಬೇಕು.

ನಾನೊಬ್ಬ ನೌಕಾಪಡೆಯ ಮಾಜಿ ಮುಖ್ಯಸ್ಥನಾಗಿದ್ದು, ಭಾರತವು ಸ್ವತಂತ್ರವಾದ ಸ್ವಲ್ಪ ಸಮಯದ ಬಳಿಕ 1949ರಲ್ಲಿ ಭಾರತೀಯ ಸಶಸ್ತ್ರ ಪಡೆ (ನೌಕಾಪಡೆ) ಸೇರಿದ್ದೆ. ರಾಷ್ಟ್ರಪಿತನ ಹತ್ಯೆಯ ಬಳಿಕ ಅಷ್ಟೊಂದು ಜನರು ಅನುಭವಿಸಿದ ಆಘಾತ ನನಗೆ ಇಂದಿಗೂ ನೆನಪಿದೆ. ಇಂತಹ ಒಂದು ಆಘಾತಕಾರಿ ಘಟನೆಯ ಬಳಿಕವೂ- ನಾವು, ಭಾರತೀಯ ಜನರು, ಬಾಬಾ ಸಾಹೇಬ್ ಅಂಬೇಡ್ಕರರ ನಾಯಕತ್ವದಲ್ಲಿ ನಮ್ಮ ಸಂವಿಧಾನವನ್ನು ಅಂಗೀಕರಿಸಿ ಆನಂದತುಂದಿಲರಾಗಿದ್ದೆವು. ಭಾರತದ ಎಲ್ಲಾ ಜನರ ನಡುವಿನ ಸಮಾನತೆಯ ಈ ದರ್ಶನವೇ ಭಾರತೀಯ ಸಶಸ್ತ್ರ ಪಡೆಗಳಲ್ಲಿದ್ದ ನಮ್ಮೆಲ್ಲರಿಗೂ ದಾರಿತೋರುವ ಬೆಳಕಾಗಿದ್ದುದು.

ನಮ್ಮ ಸಮಾಜದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ, ಧರ್ಮದ ಬಳಕೆ ಮತ್ತು ದುರ್ಬಳಕೆ, ದ್ವೇಷಕಾರುವ ಮಾತುಗಳು, ಅಲ್ಪಸಂಖ್ಯಾತರನ್ನು, ಅದರಲ್ಲೂ ಮುಸ್ಲಿಮರನ್ನು ಗುರಿಮಾಡುತ್ತಿರುವುದು, ನಮ್ಮ ಸಶಸ್ತ್ರ ಪಡೆಗಳಲ್ಲಿರುವ ಅನೇಕರು ಕೂಡಾ ಮುಸ್ಲಿಮರು ಎಂಬುದನ್ನು ಮರೆಯುತ್ತಿರುವುದು- ಮುಂತಾದವುಗಳನ್ನು ಆಳವಾದ ಆತಂಕ ಮತ್ತು ದುಃಖದಿಂದ ನಾನು ನೋಡುತ್ತಿದ್ದೇನೆ. ಕೊರೋನ ವೈರಸ್/ ಕೋವಿಡ್-19 ಉಂಟುಮಾಡಿರುವ ಈ ದುರಂತಕಾರಿ ಪಿಡುಗನ್ನು ಸಾಮೂಹಿಕವಾಗಿ, ನಮ್ಮ ಅಧೀನದಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿ, ಎಲ್ಲಾ ಜನವಿಭಾಗ, ಧರ್ಮ ಮತ್ತು ಸಮುದಾಯಗಳನ್ನು ಜೊತೆಗೆ ಕೊಂಡೊಯ್ಯುವುದರ ಮೂಲಕ ಎದುರಿಸಬೇಕಾಗಿದೆ.

ಅಂತರರಾಷ್ಟ್ರೀಯ ಸಮುದಾಯವು ಕೋವಿಡ್ ವಿರುದ್ಧ ಭಾರತದ ಪ್ರಯತ್ನಗಳನ್ನು ನಿಕಟವಾಗಿ ಗಮನಿಸುತ್ತಿರುವ ಹೊತ್ತಿನಲ್ಲಿ- ಮಾಹಿತಿ ತಂತ್ರಜ್ಞಾನವನ್ನು ಬಳಸುವ ಕೆಲವರು ಹರಡುತ್ತಿರುವ ಸುಳ್ಳು ಸುದ್ದಿಗಳು ಮತ್ತು ಕಿಡಿಗೇಡಿತನದ ಅಪಪ್ರಚಾರಗಳು ಭಾರತಕ್ಕೆ ಶ್ರೇಯವನ್ನು ತರುವುದಿಲ್ಲ.

ಪ್ರಧಾನ ಮಂತ್ರಿ ‘ಜೀ’, ನೀವು ಮತ್ತೆಮತ್ತೆ ಭಾರತದ ಸಂವಿಧಾನ ಮತ್ತು ಅದರಲ್ಲಿ ಅಡಕವಾಗಿರುವ ನ್ಯಾಯ, ಸಮಾನತೆ, ಸ್ವಾತಂತ್ರ್ಯಗಳ- ಚುಟುಕಾಗಿ “ವಸುಧೈವ ಕುಟುಂಬಕಂ” ಎಂಬ ಮೌಲ್ಯದ ಮೇಲೆ ನಂಬಿಕೆ ವ್ಯಕ್ತಪಡಿಸಿದ್ದೀರಿ. ಧರ್ಮ, ಜಾತಿ, ಜನಾಂಗ, ವರ್ಗ ಅಥವಾ ಉದ್ಯೋಗದ ಆಧಾರದಲ್ಲಿ, ಯಾವುದೇ ವ್ಯಕ್ತಿ, ಸಮುದಾಯ ಅಥವಾ ಧರ್ಮದ ಕುರಿತು ಯಾವುದೇ ರೀತಿಯ ಪೂರ್ವಗ್ರಹದಿಂದ ಕೂಡಿರುವ ಎಲ್ಲಾ ಕೃತ್ಯಗಳಿಗೆ ನಿಮ್ಮ ಸರಕಾರ ಮತ್ತು ಪಕ್ಷ ಶೂನ್ಯ ಸಹನೆ ತೋರುವುದು ಎಂಬ ವಿಶ್ವಾಸ ನನಗಿದೆ.

ಹಲವಾರು ಹಂತಗಳಲ್ಲಿ ಸ್ಪಷ್ಟವಾಗಿಯೇ- ಈ ಪರಿಸ್ಥಿತಿಯ ಲಾಭಪಡೆದು ತಮ್ಮ ವಿಚ್ಛಿದ್ರಕಾರಿ ಅಜೆಂಡಾವನ್ನು ಹರಡುತ್ತಾ ದಾರಿತಪ್ಪಿಸುತ್ತಿರುವ ಕೆಲವು ಮೂಲಗಳಿವೆ. ಅದೇ ಹೊತ್ತಿನಲ್ಲಿ, ನಿಸ್ಪಕ್ಷಪಾತದ, ತನಿಖಾ ವರದಿಗಾರಿಕೆಯ ನೀತಿಯನ್ನು ಅನುಸರಿಸುವಂತೆ ಸಾಮಾಜಿಕ ಮಾಧ್ಯಮ ಸೇರಿದಂತೆ ಎಲ್ಲಾ ಮಾಧ್ಯಮಗಳಿಗೆ ನಿರ್ದೇಶಿಸಬೇಕು.

ಪ್ರಸ್ತುತ ನೌಕಾಪಡೆ ಅತ್ಯಂತ ಹಿರಿಯ ಮಾಜಿ ಮುಖ್ಯಸ್ಥನಾಗಿ, ಈ ಮೇಲಿನ ಅಂಶಗಳನ್ನು ನಿಮ್ಮ ಗಂಭೀರ ಪರಿಗಣನೆಗಾಗಿ ಮತ್ತು ದೋಷನಿವಾರಕ ಕ್ರಮಗಳಿಗಾಗಿ ನಿಮ್ಮ ಮುಂದಿಡುವುದು  ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ.

ಅಂಚೆ, ಸ್ಪೀಡ್‌ಪೋಸ್ಟ್, ಕೊರಿಯರ್ ಇತ್ಯಾದಿ ಸೇವೆಗಳೆಲ್ಲವೂ ಪ್ರಸ್ತುತ ಲಭ್ಯವಿಲ್ಲದೇ ಇರುವುದರಿಂದ, ಇದನ್ನು ಒಂದು ಬಹಿರಂಗ ಪತ್ರವನ್ನಾಗಿ ಮಾಡುವ ಸ್ವಾತಂತ್ರ್ಯವನ್ನು ತೆಗೆದುಕೊಳ್ಳುತ್ತಿದ್ದೇನೆ.

ಅತ್ಯುನ್ನತ ಗೌರವಗಳೊಂದಿಗೆ,

ನಿಮ್ಮ ವಿಶ್ವಾಸಿ,

ಎಲ್. ರಾಮದಾಸ್

(ಅಡ್ಮಿರಲ್ (ನಿವೃತ್ತ) ಎಲ್. ರಾಮದಾಸ್ ಅವರು ಭಾರತೀಯ ನೌಕಾಪಡೆ ಮಾಜಿ ಮುಖ್ಯಸ್ಥರು.)

ಅನುವಾದ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...