Homeಮುಖಪುಟಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

ಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

- Advertisement -
- Advertisement -

ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸಲು ಸಹಕಾರ ಸಂಘಗಳಿಗೆ, ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಈ ರಾಜ್ಯಗಳಲ್ಲೇ ಸಾಕಷ್ಟು ಟೊಮೆಟೊ ಲಭ್ಯವಿಲ್ಲ ಹಾಗಾಗಿಯೇ ಇಲ್ಲಿ ಟೊಮೆಟೊ ಬೆಲೆ ಗಗಣಕ್ಕೇರಿದೆ. ಕೇಂದ್ರ ಟೊಮೆಟೊ ಖರೀದಿಸುವುದಾದರೂ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆಲವೆಡೆ ಪ್ರತಿ ಕೆಜಿಗೆ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಕಳೆದ ತಿಂಗಳು ದೇಶದಲ್ಲಿ ಟೊಮೆಟೊ ಸರಾಸರಿ ದರ 23.61 ರೂ.

ಕಳೆದ ಕೆಲವು ತಿಂಗಳುಗಳಲ್ಲಿ ಟೊಮೆಟೊಗಳ ಸಗಟು ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಅನೇಕ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಇದು ಟೊಮೆಟೊ ಹೆಚ್ಚಿನ ದರಕ್ಕೆ ಕಾರಣವಾಗಿದೆ.

ಕೆಲ ದಿನಗಳಿಂದ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಟೊಮೆಟೊ ಖರೀದಿಸಿ ಪ್ರಮುಖ ಸ್ಥಳಗಳಿಗೆ ವಿತರಿಸುವ ಯೋಜನೆ ಹಮ್ಮಿಕೊಂಡಿದೆ. ಜುಲೈ 14ರಿಂದ ದೆಹಲಿ-ಎನ್‌ಸಿಆರ್ ಪ್ರದೇಶದ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಳಿಗೆಗಳ ಮೂಲಕ ಟೊಮೆಟೊವನ್ನು ವಿತರಿಸಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ದೇಶದ ಹಲವೆಡೆ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 200 ರೂ.ವರೆಗೆ ತಲುಪಿದೆ. ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ (ನಾಫೆಡ್‌) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ (ಎನ್‌ಸಿಸಿಎಫ್‌) ಟೊಮೆಟೊಗಳನ್ನು ಸಂಗ್ರಹಿಸುವ ಕೆಲಸವನ್ನು ಮಾಡಲಿವೆ. ನಂತರ ಇವುಗಳನ್ನು ಸಬ್ಸಿಡಿ ದರದಲ್ಲಿ ಸರಕಾರ ಮಾರಾಟ ಮಾಡಲಿದೆ.

ಸಚಿವಾಲಯದ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಯಾವ ಪ್ರದೇಶದಲ್ಲಿ ಚಿಲ್ಲರೆ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆಯೋ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡುವ ಗುರಿಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಈ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಬೆಲೆಗಳು ದೇಶದ ಸರಾಸರಿ ಬೆಲೆಗಿಂತ ಹೆಚ್ಚಿದ್ದಲ್ಲಿ ಕೇಂದ್ರ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡಲಿದೆ.

ಜುಲೈ-ಆಗಸ್ಟ್ ಮತ್ತು ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಟೊಮೆಟೊ ಉತ್ಪಾದನೆ ಕಡಿಮೆಯಾಗಿರುತ್ತದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಮುಂಗಾರು ಮಳೆಯಿಂದಾಗಿ, ವಿತರಣೆಯ ಸವಾಲುಗಳ ಕಾರಣಕ್ಕೆ ಪೂರೈಕೆ ಕಡಿಮೆಯಾಗುತ್ತದೆ ಹಾಗೂ ಬೆಲೆಗಳು ಹೆಚ್ಚಾಗುತ್ತವೆ. ಆದರೆ ಈ ಬಾರಿ ಬಿರು ಬಿಸಿಲಿನಿಂದಾಗಿ ಬೇಸಿಗೆಯಲ್ಲೇ ಉತ್ಪಾದನೆ ಕಡಿಮೆಯಾಗಿತ್ತು. ಇದ್ದ ಅಲ್ಪ ಸ್ವಲ್ಪ ಬೆಳೆಗೂ ಹಲವು ರೋಗಗಳು ಬಾಧಿಸಿದ್ದವು. ಇನ್ನೊಂದೆಡೆ ಮುಂಗಾರೂ ತೀರಾ ತಡವಾಗಿ ಆಗಮಿಸಿತು. ಇದರಿಂದ ಉತ್ಪಾದನೆಗೆ ಹೊಡೆತ ಬಿದ್ದಿದೆ.

ಪ್ರಸ್ತುತ, ಗುಜರಾತ್, ಮಧ್ಯ ಪ್ರದೇಶ ಮತ್ತು ಇತರ ಕೆಲವು ರಾಜ್ಯಗಳ ಮಾರುಕಟ್ಟೆಗಳಿಗೆ ಮಹಾರಾಷ್ಟ್ರದಿಂದ ಅದರಲ್ಲೂ ಪ್ರಮುಖವಾಗಿ ಇಲ್ಲಿನ ಸತಾರಾ, ನಾರಾಯಣಗಾಂವ್ ಹಾಗೂ ನಾಸಿಕ್‌ನಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಆಂಧ್ರ ಪ್ರದೇಶದ ಮದನಪಲ್ಲಿ (ಚಿತ್ತೂರು)ಯಲ್ಲಿಯೂ ಸಾಕಷ್ಟು ಪೂರೈಕೆ ಇದೆ.

ದೆಹಲಿ-ಎನ್‌ಸಿಆರ್‌ಗೆ ಟೊಮೆಟೊಗಳು ಮುಖ್ಯವಾಗಿ ಹಿಮಾಚಲ ಪ್ರದೇಶದಿಂದ ಹಾಗೂ ಕರ್ನಾಟಕದ ಕೋಲಾರದಿಂದ ಬರುತ್ತದೆ. ಹಿಮಾಚಲ ಪ್ರದೇಶ ಪ್ರವಾಹಕ್ಕೆ ತತ್ತರಿಸಿರುವುದರಿಂದ ಪೂರೈಕೆ ಕಡಿಮೆಯಾಗಿದ್ದರೆ, ಕೋಲಾರದಲ್ಲಿ ಅಗತ್ಯಕ್ಕೆ ಬೇಕಾದಷ್ಟು ಟೊಮೆಟೊ ಲಭ್ಯವಾಗುತ್ತಿಲ್ಲ.

ಇದನ್ನೂ ಓದಿ: ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...