Homeಮುಖಪುಟಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

ಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

- Advertisement -
- Advertisement -

ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸಲು ಸಹಕಾರ ಸಂಘಗಳಿಗೆ, ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಈ ರಾಜ್ಯಗಳಲ್ಲೇ ಸಾಕಷ್ಟು ಟೊಮೆಟೊ ಲಭ್ಯವಿಲ್ಲ ಹಾಗಾಗಿಯೇ ಇಲ್ಲಿ ಟೊಮೆಟೊ ಬೆಲೆ ಗಗಣಕ್ಕೇರಿದೆ. ಕೇಂದ್ರ ಟೊಮೆಟೊ ಖರೀದಿಸುವುದಾದರೂ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆಲವೆಡೆ ಪ್ರತಿ ಕೆಜಿಗೆ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಕಳೆದ ತಿಂಗಳು ದೇಶದಲ್ಲಿ ಟೊಮೆಟೊ ಸರಾಸರಿ ದರ 23.61 ರೂ.

ಕಳೆದ ಕೆಲವು ತಿಂಗಳುಗಳಲ್ಲಿ ಟೊಮೆಟೊಗಳ ಸಗಟು ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಅನೇಕ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಇದು ಟೊಮೆಟೊ ಹೆಚ್ಚಿನ ದರಕ್ಕೆ ಕಾರಣವಾಗಿದೆ.

ಕೆಲ ದಿನಗಳಿಂದ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಟೊಮೆಟೊ ಖರೀದಿಸಿ ಪ್ರಮುಖ ಸ್ಥಳಗಳಿಗೆ ವಿತರಿಸುವ ಯೋಜನೆ ಹಮ್ಮಿಕೊಂಡಿದೆ. ಜುಲೈ 14ರಿಂದ ದೆಹಲಿ-ಎನ್‌ಸಿಆರ್ ಪ್ರದೇಶದ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಳಿಗೆಗಳ ಮೂಲಕ ಟೊಮೆಟೊವನ್ನು ವಿತರಿಸಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ದೇಶದ ಹಲವೆಡೆ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 200 ರೂ.ವರೆಗೆ ತಲುಪಿದೆ. ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ (ನಾಫೆಡ್‌) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ (ಎನ್‌ಸಿಸಿಎಫ್‌) ಟೊಮೆಟೊಗಳನ್ನು ಸಂಗ್ರಹಿಸುವ ಕೆಲಸವನ್ನು ಮಾಡಲಿವೆ. ನಂತರ ಇವುಗಳನ್ನು ಸಬ್ಸಿಡಿ ದರದಲ್ಲಿ ಸರಕಾರ ಮಾರಾಟ ಮಾಡಲಿದೆ.

ಸಚಿವಾಲಯದ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಯಾವ ಪ್ರದೇಶದಲ್ಲಿ ಚಿಲ್ಲರೆ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆಯೋ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡುವ ಗುರಿಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಈ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಬೆಲೆಗಳು ದೇಶದ ಸರಾಸರಿ ಬೆಲೆಗಿಂತ ಹೆಚ್ಚಿದ್ದಲ್ಲಿ ಕೇಂದ್ರ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡಲಿದೆ.

ಜುಲೈ-ಆಗಸ್ಟ್ ಮತ್ತು ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಟೊಮೆಟೊ ಉತ್ಪಾದನೆ ಕಡಿಮೆಯಾಗಿರುತ್ತದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಮುಂಗಾರು ಮಳೆಯಿಂದಾಗಿ, ವಿತರಣೆಯ ಸವಾಲುಗಳ ಕಾರಣಕ್ಕೆ ಪೂರೈಕೆ ಕಡಿಮೆಯಾಗುತ್ತದೆ ಹಾಗೂ ಬೆಲೆಗಳು ಹೆಚ್ಚಾಗುತ್ತವೆ. ಆದರೆ ಈ ಬಾರಿ ಬಿರು ಬಿಸಿಲಿನಿಂದಾಗಿ ಬೇಸಿಗೆಯಲ್ಲೇ ಉತ್ಪಾದನೆ ಕಡಿಮೆಯಾಗಿತ್ತು. ಇದ್ದ ಅಲ್ಪ ಸ್ವಲ್ಪ ಬೆಳೆಗೂ ಹಲವು ರೋಗಗಳು ಬಾಧಿಸಿದ್ದವು. ಇನ್ನೊಂದೆಡೆ ಮುಂಗಾರೂ ತೀರಾ ತಡವಾಗಿ ಆಗಮಿಸಿತು. ಇದರಿಂದ ಉತ್ಪಾದನೆಗೆ ಹೊಡೆತ ಬಿದ್ದಿದೆ.

ಪ್ರಸ್ತುತ, ಗುಜರಾತ್, ಮಧ್ಯ ಪ್ರದೇಶ ಮತ್ತು ಇತರ ಕೆಲವು ರಾಜ್ಯಗಳ ಮಾರುಕಟ್ಟೆಗಳಿಗೆ ಮಹಾರಾಷ್ಟ್ರದಿಂದ ಅದರಲ್ಲೂ ಪ್ರಮುಖವಾಗಿ ಇಲ್ಲಿನ ಸತಾರಾ, ನಾರಾಯಣಗಾಂವ್ ಹಾಗೂ ನಾಸಿಕ್‌ನಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಆಂಧ್ರ ಪ್ರದೇಶದ ಮದನಪಲ್ಲಿ (ಚಿತ್ತೂರು)ಯಲ್ಲಿಯೂ ಸಾಕಷ್ಟು ಪೂರೈಕೆ ಇದೆ.

ದೆಹಲಿ-ಎನ್‌ಸಿಆರ್‌ಗೆ ಟೊಮೆಟೊಗಳು ಮುಖ್ಯವಾಗಿ ಹಿಮಾಚಲ ಪ್ರದೇಶದಿಂದ ಹಾಗೂ ಕರ್ನಾಟಕದ ಕೋಲಾರದಿಂದ ಬರುತ್ತದೆ. ಹಿಮಾಚಲ ಪ್ರದೇಶ ಪ್ರವಾಹಕ್ಕೆ ತತ್ತರಿಸಿರುವುದರಿಂದ ಪೂರೈಕೆ ಕಡಿಮೆಯಾಗಿದ್ದರೆ, ಕೋಲಾರದಲ್ಲಿ ಅಗತ್ಯಕ್ಕೆ ಬೇಕಾದಷ್ಟು ಟೊಮೆಟೊ ಲಭ್ಯವಾಗುತ್ತಿಲ್ಲ.

ಇದನ್ನೂ ಓದಿ: ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...